Subscribe to Updates
Get the latest creative news from FooBar about art, design and business.
Author: kannadanewsnow09
● ನೀವು ಮಾಡುವ ದೋಸೆ ಗರಿ ಗರಿಯಾಗಿ ಬರಬೇಕು ಎಂದರೆ ಹೆಚ್ಚು ಟೇಸ್ಟಿಯಾಗಿರಬೇಕು ಎಂದರೆ ದೋಸೆಗೆ ಅಕ್ಕಿ ಹಾಗೂ ಉದ್ದಿನಬೇಳೆ ನೆನಸುವಾಗ ಅದರ ಜೊತೆಗೆ ಒಂದು ಹಿಡಿಯಷ್ಟು ಅವಲಕ್ಕಿ ಕೂಡ ನೆನಸಿ ರುಬ್ಬಿ. ● ನಿಮ್ಮ ಮನೆಯಲ್ಲಿ ನೀವು ರುಬ್ಬಿಡುತ್ತಿರುವ ದೋಸೆ ಹಿಟ್ಟು ಬೇಗ ಹುಳಿ ಬರುತ್ತಿದೆ ಎಂದರೆ ನೀವು ದೋಸೆಗೆ ಹಿಟ್ಟು ರುಬ್ಬಿದ ತಕ್ಷಣವೇ ಅದಕ್ಕೆ ಒಂದು ಚಮಚದಷ್ಟು ಸಕ್ಕರೆಯನ್ನು ಹಾಕಿಡಿ, ದೋಸೆ ಹಿಟ್ಟು ಹೆಚ್ಚು ಹುಳಿಯಾಗುವುದಿಲ್ಲ ದೋಸೆ ಟೇಸ್ಟ್ ಕೂಡ ಚೆನ್ನಾಗಿರುತ್ತೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…
ಬೆಂಗಳೂರು: ಎರೆಹುಳುಗಳನ್ನು ರೈತ ಮಿತ್ರ ಎಂಬುದಾಗಿಯೇ ಕರೆಯಲಾಗುತ್ತದೆ. ಮಣ್ಣಿನಲ್ಲಿ ಫಲವತ್ತತೆ ಹೆಚ್ಚಿಸಿ, ಫಸಲು ಉತ್ತಮ ಇಳುವರಿಯೊಂದಿಗೆ ಬರೋದಕ್ಕೆ ಸಹಾಯ ಮಾಡುತ್ತಾರೆ. ಹಾಗಾದ್ರೇ ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳನ್ನು ಮುಂದೆ ಓದಿ. ಎರೆಹುಳುವನ್ನು ರೈತರ ಮಿತ್ರ, ರೈತ ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ ನಿರಂತರವಾಗಿ ಕೆಲಸ ಮಾಡುವ ಹುಳುಗಳು ನೈಸರ್ಗಿವಾಗಿ ಪೋಷಕಾಂಶಯುಕ್ತ ಗೊಬ್ಬರವನ್ನು ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ. ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ…
ಬೆಂಗಳೂರು: ಬಿಬಿಎಂಪಿ, ಪೂರ್ವ ವಲಯ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಆರ್. ಅವರ ನಿರ್ದೇಶನದಂತೆ ಪೂರ್ವ ವಲಯದಲ್ಲಿ ದಿನಾಂಕ:04.01.2025 ರಿಂದ ಈವರೆಗೆ ಕಟ್ಟಡ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಾಣ ಮಾಡಿರುವ 16 ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿರುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ 6 ವಿಭಾಗಗಳಲ್ಲಿ ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಪವಿಭಾಗಗಳ ಅಭಿಯಂತರರು ಹಾಗೂ ವಲಯದ ನಗರ ಯೋಜನೆ ಅಭಿಯಂತರರು ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದನ್ನು ಗಮನಿಸಿ, ನಗರ ಯೋಜನೆ ಶಾಖೆಯಿಂದ ಹಾಗೂ ಉಪವಿಭಾಗದ ವತಿಯಿಂದ ಬಿಬಿಎಂಪಿ ಕಾಯ್ದೆ 2020ರ ಅಡಿ ನೋಟೀಸ್ಗಳನ್ನು ಜಾರಿ ಮಾಡಲಾಗಿರುತ್ತದೆ. ತದನಂತರ ಮಾನ್ಯ ಮುಖ್ಯ ಆಯುಕ್ತರು, ಹಾಗೂ ಅಫೀಲು ಮೇಲ್ಮನವಿ ಪ್ರಾಧಿಕಾರ ಬಿಬಿಎಂಪಿ ರವರು ಮೇಲ್ಮನವಿಗಳನ್ನು ವಜಾಗೊಳಿರುವುದರಿಂದ ಮಾನ್ಯ ಮುಖ್ಯ ಆಯುಕ್ತರು, ಬಿ.ಬಿ.ಎಂ.ಪಿ ಮತ್ತು ಮಾನ್ಯ ವಲಯ ಆಯುಕ್ತರು (ಪೂರ್ವ) ವಲಯ ಅವರ ಆದೇಶದ ರೀತ್ಯಾ ದಿನಾಂಕ:04/01/2025 ರಿಂದ ಈವರೆಗೂ 16 ಕಟ್ಟಡಗಳು ಹಾಗೂ ಅವುಗಳ ಹೆಚ್ಚುವರಿ ಅಂತಸ್ತುಗಳಿಗೆ…
ದೆಹಲಿ : “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು. ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು. ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ…
ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಫೆಬ್ರವರಿ 10 ರಿಂದ 14ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ ‘ಕೋಟಿ ಅವಕಾಶಗಳ ಪಥ’ ಎನ್ನುವ ಧ್ಯೇಯವನ್ನು ಹೊಂದಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಏರೋ ಇಂಡಿಯಾ ಮಾಹಿತಿ ಹಂಚಿಕೊಂಡಿದ್ದು, ಏರೋ ಇಂಡಿಯಾ 2025 – ವಾಯು ಶಕ್ತಿಯ ಮಹಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಲ್ಲಿ ಮುಂಬರುವ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದೆ ಎಂದಿದೆ. ಭಾರತದ ಅತ್ಯಾಧುನಿಕ ತಂತ್ರಜ್ಞಾನ, ವಾಯುಪಡೆಯ ಶಕ್ತಿ ಮತ್ತು ನಮ್ಮ ರಾಷ್ಟ್ರದ ಭದ್ರತೆಗೆ ಸಮರ್ಪಿತವಾದ ಶಕ್ತಿಯನ್ನು ಪ್ರದರ್ಶಿಸುವ ವಿಸ್ಮಯಕಾರಿ ಮತ್ತು ಜಾಗತಿಕವಾಗಿ ಆಕರ್ಷಿಸುವ ಏರ್ ಶೋಗೆ ಸಾಕ್ಷಿಯಾಗಿ! ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ರಕ್ಷಣೆಯಲ್ಲಿ ಭಾರತ ಎಷ್ಟು ಮುಂದುವರಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ವಿಜ್ಞಾನ ಮತ್ತು ಶಾಂತಿಯ ಈ ಭವ್ಯ ಪ್ರದರ್ಶನವನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಮನವಿ ಮಾಡಿದೆ. ಇನ್ನೂ ಈ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರು https://www.aeroindia.gov.in/visitor-registration ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು…
ಬೆಂಗಳೂರು: ರಾಜ್ಯದ ಕೆ ಎಸ್ ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇಂದು ಅಧಿಕೃತವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು, (06.01.2025) ವಿಧಾನಸೌಧದ, ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಈ ಯೋಜನೆಯು ಉತ್ತಮವಾಗಿದ್ದು, ನೌಕರರು ಮತ್ತು ಅವರ ಅವಲಂಬಿತ ಕುಟಂಬದ ಸದಸ್ಯರುಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ನಮ್ಮ ಸರ್ಕಾರವು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಒಳ್ಳೆಯ ಕಾರ್ಯ ಮಾಡುತ್ತಿದೆ. ಶಕ್ತಿ ಯೋಜನೆಯು ಜಾರಿಯಾದ ನಂತರ ಲಿಂಗ ತಾರತಮ್ಮ ಹೋಗಲಾಡಿಸಿ, ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣಗೊಳಿಸಿದೆ. ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯರು, ಈ ಯೋಜನೆಯ ಫಲನಾಭವಿಗಳನ್ನು ಯಾವುದೇ ಕಾರಣಕ್ಕೂ ತಿರಸ್ಕಾರ ಮನೋಭಾವದಿಂದ ನೋಡಬಾರದು, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಂತೆ ಪರಿಗಣಿಸುವಂತೆ ಸೂಚಿಸಿದರು.…
ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಫಿಜಿಷಿಯನ್-02, ಶಸ್ತ್ರಚಿಕಿತ್ಸ ತಜ್ಞರು-01, ಸ್ತ್ರೀರೋಗ ತಜ್ಞ-03, ಅರಿವಳಿಕೆ-09, ಇಎನ್ಟಿ-02, ನೇತ್ರ ತಜ್ಞರು-02, ಮಕ್ಕಳ ತಜ್ಞರು-2, ಕೀಲು ಮತ್ತು ಮೂಳೆ ತಜ್ಞರು-01, ರೇಡಿಯಾಲಜಿಸ್ಟ್ -01, ನೆಫ್ರೊಲಜಿಸ್ಟ್-01 ಒಟ್ಟು 24 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು . ಆಸಕ್ತ ಅಭ್ಯರ್ಥಿಗಳು ದಿ: 15-01-2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು…
ಬೆಂಗಳೂರು: ಚಿನ್ನಾಭರಣ ಪಡೆದು ಹಣ ನೀಡದೇ ವಂಚಿಸಿದಂತ ಆರೋಪದಲ್ಲಿ ಈಗಾಗಲೇ ಐಶ್ವರ್ಯಾಗೌಡ ಹಾಗೂ ಅವರ ಪತಿಯನ್ನು ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಶಿಲ್ವಾಗೌಡ ಎಂಬುವರಿಗೆ ವಂಚಿಸಿದಂತ ಸಂಬಂಧ ದಾಖಲಾಗಿದ್ದಂತ ದೂರು ಹಿನ್ನಲೆಯಲ್ಲಿ ಮತ್ತೆ ಬಂಧಿಸಲಾಗಿದೆ. ಬೆಂಗಳೂರಿನ ಶಿಲ್ಪಾಗೌಡ ಎಂಬುವರಿಂದ 430 ಗ್ರಾಂ ಚಿನ್ನ ಪಡೆದಿದ್ದಂತ ಐಶ್ವರ್ಯಾಗೌಡ ಅದರ ಹಣವನ್ನು ನೀಡದೇ ವಂಚಿಸಿದ್ದರು. 430 ಗ್ರಾಂ ಚಿನ್ನದ ಬೆಲೆ 3.50 ಕೋಟಿಯಾಗಿತ್ತು. ಈ ಸಂಬಂಧ ಶಿಲ್ಪಾಗೌಡ ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಐಶ್ವರ್ಯಾಗೌಡ ಅವರು ಚಿನ್ನಪಡೆದು ಹಣ ವಂಚಿಸಿದ ಸಂಬಂಧ ಶಿಲ್ಪಾಗೌಡ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಆರ್ ಆರ್ ನಗರ ಠಾಣೆಯ ಪೊಲೀಸರು ಐಶ್ವರ್ಯಾಗೌಡ ಹಾಗೂ ಪತಿಯನ್ನು ಮತ್ತೆ ಬಂಧಿಸಿದ್ದಾರೆ. https://kannadanewsnow.com/kannada/actor-darshan-moves-sc-seeking-cancellation-of-bail/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/
ನವದೆಹಲಿ: ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಜಾಗತಿಕವಾಗಿ ಗುರುತಿಸಲ್ಪಟ್ಟ ಉಸಿರಾಟದ ವೈರಸ್ ಆಗಿದ್ದು, ಚೀನಾದಲ್ಲಿ ಏಕಾಏಕಿ ವರದಿಯಾದ ನಂತರ ಇತ್ತೀಚೆಗೆ ಗಮನ ಸೆಳೆಯಿತು. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ವಾಡಿಕೆಯ ಕಣ್ಗಾವಲಿನ ಭಾಗವಾಗಿ ಕರ್ನಾಟಕದಲ್ಲಿ ಇತ್ತೀಚೆಗೆ ಎರಡು ಎಚ್ಎಂಪಿವಿ ಪ್ರಕರಣಗಳು ವರದಿಯಾಗಿವೆ. HMPV ಎಂದರೇನು? ಎಚ್ಎಂಪಿವಿ ಒಂದು ವೈರಲ್ ರೋಗಕಾರಕವಾಗಿದ್ದು, ಇದು ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಸೋಂಕುಗಳನ್ನು ಉಂಟುಮಾಡುತ್ತದೆ. 2001 ರಲ್ಲಿ ಮೊದಲ ಬಾರಿಗೆ ಕಂಡುಹಿಡಿಯಲಾದ ಇದು ಪ್ಯಾರಾಮೈಕ್ಸೊವಿರಿಡೇ ಕುಟುಂಬಕ್ಕೆ ಸೇರಿದೆ ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್ಎಸ್ವಿ) ಗೆ ನಿಕಟ ಸಂಬಂಧ ಹೊಂದಿದೆ. ಕೆಮ್ಮು ಅಥವಾ ಸೀನುವಿಕೆಯಿಂದ ಉಸಿರಾಟದ ಹನಿಗಳ ಮೂಲಕ ಎಚ್ಎಂಪಿವಿ ಹರಡುತ್ತದೆ, ಜೊತೆಗೆ ಕಲುಷಿತ ಮೇಲ್ಮೈಗಳನ್ನು ಸ್ಪರ್ಶಿಸುವ ಮೂಲಕ ಅಥವಾ ಸೋಂಕಿತ ವ್ಯಕ್ತಿಗಳೊಂದಿಗೆ ನೇರ ಸಂಪರ್ಕಕ್ಕೆ ಬರುವ ಮೂಲಕವಾಗಿದೆ. ಈ ವೈರಸ್ ಸೌಮ್ಯ ಉಸಿರಾಟದ ಅಸ್ವಸ್ಥತೆಯಿಂದ ಹಿಡಿದು ತೀವ್ರವಾದ ತೊಡಕುಗಳವರೆಗೆ ಕಾಯಿಲೆಗಳನ್ನು ಉಂಟುಮಾಡುತ್ತದೆ, ವಿಶೇಷವಾಗಿ ಶಿಶುಗಳು, ವಯಸ್ಸಾದ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುವ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. ಇದೀಗ ಅದರಂತೆ ಸುಪ್ರೀಂ ಕೋರ್ಟ್ ಗೆ ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ. ಇಂದು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹೈಕೋರ್ಟ್ ನೀಡಿರುವಂತ ಜಾಮೀನು ರದ್ದು ಕೋರಿಗೆ ರಾಜ್ಯ ಸರ್ಕಾರದ ಪರವಾಗಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯನ್ನು ಮುಂದಿನ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಂದಹಾಗೇ ಪೊಲೀಸ್ ಇಲಾಖೆಯಿಂದ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಿರುವುದಾಗಿ ತಿಳಿದು ಬಂದಿದೆ. ಮುಂದಿನ ವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದು, ಯಾವ ತೀರ್ಪು…