Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಹೆಚ್ಚಾಗಿದ್ದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಮತ್ತೊಂದೆಡೆ ಐಟಿ-ಬಿಟಿ ಕಂಪನಿಗಳು ಬೆಂಗಳೂರು ಬಿಟ್ಟು ಒಲಸೆ ಹೋಗುತ್ತಿರೋ ಆರೋಪ ಕೇಳಿ ಬಂದಿತ್ತು. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಲ್ಲಿ ರಸ್ತೆ ಗುಂಡಿ ಹೆಚ್ಚಾಗೋದಕ್ಕೆ ಕಾರಣ ಕೊಟ್ಟಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನ ಚಲನಶೀಲತೆಯ ಕಥೆ ನಮ್ಮ ಯಶಸ್ಸು ಮತ್ತು ನಮ್ಮ ಸವಾಲುಗಳನ್ನು ಪ್ರತಿಬಿಂಬಿಸುತ್ತದೆ. ನಾವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಮುಂದಿನ ದಶಕದಲ್ಲಿ ನಮ್ಮ GDP ವಾರ್ಷಿಕವಾಗಿ 8.5% ಕ್ಕಿಂತ ಹೆಚ್ಚು ಬೆಳೆಯುವ ನಿರೀಕ್ಷೆಯಿದೆ ಎಂದಿದ್ದಾರೆ. ಇಂದು, ಬೆಂಗಳೂರಿನಲ್ಲಿ 1.2 ಕೋಟಿಗೂ ಹೆಚ್ಚು ನೋಂದಾಯಿತ ವಾಹನಗಳಿವೆ – ಸುಮಾರು 82 ಲಕ್ಷ ದ್ವಿಚಕ್ರ ವಾಹನಗಳು ಮತ್ತು 25 ಲಕ್ಷ ಕಾರುಗಳು. ಕಳೆದ ವರ್ಷವಷ್ಟೇ, ನಾವು ನಮ್ಮ ರಸ್ತೆಗಳಿಗೆ 7 ಲಕ್ಷಕ್ಕೂ ಹೆಚ್ಚು ಹೊಸ ವಾಹನಗಳನ್ನು ಸೇರಿಸಿದ್ದೇವೆ. ಆಗಸ್ಟ್ 2025 ರಲ್ಲಿ ಮಾತ್ರ 58,913 ಹೊಸ ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ.…
ಬೆಂಗಳೂರು : ಕೊಲೆ ಆರೋಪಿ ದರ್ಶನಕ್ಕೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಅಂಗೀಕರಿಸಿರುವಂತ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ ಆದೇಶಿಸಿದೆ. ಹೌದು ಆರೋಪಿ ದರ್ಶನಕ್ಕೆ ಜಲಿನಲಿ ಕನಿಷ್ಠ ಸವಲತ್ತು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜರಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಅಂಗೀಕರಿಸಿತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸುವಂತೆ ಸೂಚಿಸಿದೆ. ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಪರಿಶೀಲಿಸಬೇಕು ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಜಡ್ಜ್ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದೆ. https://kannadanewsnow.com/kannada/government-orders-formation-of-committee-to-select-kannada-rajyotsava-awardees-for-2025/ https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/
ಬೆಂಗಳೂರು: ನಗರದ ರೆಸ್ಟೋರೆಂಟ್ ಒಂದರಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರು. ಇದೀಗ ಲಾಡ್ಜ್ ನಲ್ಲಿ ಯುವಕ-ಯುವತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಕೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಈ ಅಗ್ನಿ ಅವಘಡ ಸಂಬಂಧ ಸಾವನ್ನಪ್ಪಿದಂತ ಯುವಕ-ಯುವತಿಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ಮೃತ ಕಾವೇರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತ್ನಿ, ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಅಂತ ಕಾವೇರಿ ಬೆಂಗಳೂರಿಗೆ ಬಂದಿದ್ದರು. ಕೆಲಸ ಮಾಡಲು ಅಂತ ಬೆಂಗಳೂರಿಗೆ ಬಂದಿದ್ದಂತ ಕಾವೇರಿ ಗದಗ ಮೂಲದ ರಮೇಶ್ ಜೊತೆಗೆ ಲಾಡ್ಜ್ ನಲ್ಲಿ ಇದ್ದಾಗಲೇ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಹುನಗುಂದ ಮೂಲದ ಕಾವೇರಿ ಬಡಿಗೇರ್ ಹಾಗೂ ರಮೇಶ್ ನಿನ್ನೆ ನಡೆದಂತ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದರು. https://kannadanewsnow.com/kannada/time-fixed-for-karnataka-working-journalists-association-elections/ https://kannadanewsnow.com/kannada/this-is-the-end-of-the-congress-term-it-will-not-come-to-power-even-in-the-next-life-brahmanda-gurujis-explosive-prediction/
ಹಾಸನ: ಕಾಂಗ್ರೆಸ್ ಸರ್ಕಾರದ ಅವಧಿ ಇದೇ ಕೊನೆಯಾಗಿದೆ. ಇದಾದ ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ಕೊನೆಯ ಹಂತವಾಗಿದೆ. ಮುಂದಿನ ದಿನಗಳಲ್ಲಿ ಪ್ರಳಯ ಆಗುತ್ತದೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗ ಮುಳುಗಡೆಯಾಗಲಿದೆ ಎಂದರು. ಕರ್ನಾಟಕ ಮೂರು ಭಾಗವಾಗಲಿದೆ. ಭಾರತ ದೇಶವು ಎರಡು ಭಾಗವಾಗುತ್ತದೆ. ಇದಕ್ಕೆಲ್ಲ ಮುನ್ಸೂಚನೆಯಾಗಿದೆ. ಇದೊಂದು ಕೊನೆಯ ವಿಶೇಷವಾದಂತ ಸಂದರ್ಭವಾಗಿದೆ. ಮುಂದೆ ಆಗುವುದನ್ನು ಆ ತಾಯಿ ಸೂಚನೆ ಕೊಟ್ಟಿದ್ದಾಳೆ ಎಂಬುದಾಗಿ ಭವಿಷ್ಯ ನುಡಿದರು. ರಾಜ್ಯ ರಾಜಕೀಯದಲ್ಲಿ ಸ್ಥಾನ ಪಲ್ಲಟವಾಗಲಿದೆ. ಇಡೀ ಜಗತ್ತಿನ ಇತಿಹಾಸದ ಪುಟದಲ್ಲಿ ಕರ್ನಾಟಕ ರಾಜ್ಯ ಕುರ್ಚಿಗಾಗಿ ಒಡೆದಾಡಿಕೊಳ್ಳುವುದರಲ್ಲಿ ಹೆಸರುವಾಸಿಯಾಗುತ್ತದೆ. ಸಂಕ್ರಾಂತಿ ಒಳಗಡೆ ಕೇತು ಮತ್ತು ಸೂರ್ಯ ರಾಹು ಜೊತೆಯಾಗಲಿದ್ದು, ಬಹಳ ದೊಡ್ಡ ಗಲಾಟೆಗಳು ನಡೆಯಲಿವೆ ಎಂದರು. ಸಿದ್ಧರಾಮಯ್ಯ ಅವರು ಆರೋಗ್ಯ ಕ್ಷೀಣಿಸದಂತೆ ನೋಡಿಕೊಳ್ಳಬೇಕು. ಅಲ್ಲದೇ ಕಾಂಗ್ರೆಸ್ ಅಧಿಕಾರ ಅವಧಿ ಇದೇ ಕೊನೆಯಾಗಿದೆ. ಮುಂದೆ…
ಶಿವಮೊಗ್ಗ: ಆರ್ ಬಿ ಡಿ ಮೋಟಾರ್ಸ್ ನ ರಾಯಲ್ ಎನ್ ಫೀಲ್ಡ್ ಶೋ ರೂಂ ಮಾರಾಟ ಮಳಿಗೆಯನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉದ್ಘಾಟಿಸಿದರು. ಈ ಮೂಲಕ ಸಾಗರದಲ್ಲಿ ಆರ್ ಬಿ ಡಿ ಮೋಟಾರ್ಸ್ ನ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರಾಂಡ್ ಓಪನ್ ಆದಂತೆ ಆಗಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಜೋಗ ರಸ್ತೆಯಲ್ಲಿ ಆರ್ ಬಿ ಡಿ ಮೋಟಾರ್ಸ್ ನೂತನ ರಾಯಲ್ ಎನ್ ಫೀಲ್ಡ್ ಶೋ ರೂಂ ಅನ್ನು ನಟ ಮಾಸ್ಟರ್ ಆನಂದ್ ಜೊತೆಗೂಡಿ ಶಾಸಕ ಗೋಪಾಲಕೃಷ್ಣ ಬೇಳೂರು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿ, ಮಾರಾಟಕ್ಕೆ ಚಾಲನೆ ನೀಡಿದರು. ಈ ಬಳಿಕ ಮಾತನಾಡಿದಂತ ಅವರು ಸಾಗರದಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಓಪನ್ ಆಗಿದೆ. ಇಂದಿನ ಯುವಕರ ಬೈಕ್ ಕ್ರೇಜ್ ತಣಿಸೋದಕ್ಕೆ ಬುಲೆಟ್ ಗಳು ಇಲ್ಲಿಯೇ ಲಭ್ಯವಾಗಲಿದೆ. ಯುವಕರ ಅಚ್ಚು ಮೆಚ್ಚಿನ ಮಾರಾಟ ಮಳಿಗೆ ಸಾಗರದಲ್ಲಿ ತೆರೆದಿದ್ದು ಸಂತೋಷದ ವಿಷಯವಾಗಿದೆ. ಸಾಗರದ ಶಾಸಕನಾದಂತ…
ಬೆಂಗಳೂರು: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union Of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ. ಈ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಎನ್.ರವಿ ಕುಮಾರ್ ಟೆಲೆಕ್ಸ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಹೀಗಿದೆ KUWJ ಸಂಘದ ಚುನಾವಣಾ ವೇಳಾಪಟ್ಟಿ ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟ ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟ ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅ.28 ನಾಮಪತ್ರಗಳ ಪರಿಶೀಲನೆ ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ…
ನವದೆಹಲಿ: 2025 ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೀಡಲಾಯಿತು. ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯು ಈ ಪ್ರಶಸ್ತಿಯನ್ನು 09:00 GMT (2:30 PM) IST ಕ್ಕೆ ಘೋಷಿಸಿತು. ವಿವಿಧ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳ ಘೋಷಣೆಗಳು ಅಕ್ಟೋಬರ್ 6 ರಂದು ಪ್ರಾರಂಭವಾದವು ಮತ್ತು ಅಕ್ಟೋಬರ್ 13 ರವರೆಗೆ ಮುಂದುವರಿಯಲಿವೆ. ಆದಾಗ್ಯೂ, ಈ ಬಾರಿ ಶಾಂತಿ ನೊಬೆಲ್ ವಿಶೇಷ ಗಮನದಲ್ಲಿದೆ, ಏಕೆಂದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಪಂಚದಾದ್ಯಂತ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ಪ್ರಶಸ್ತಿಯನ್ನು ತಮಗೆ ನೀಡಬೇಕು ಎಂದು ಪದೇ ಪದೇ ಹೇಳಿಕೊಂಡಿದ್ದಾರೆ. https://twitter.com/NobelPrize/status/1976573830337327267 ಈ ವರ್ಷ 338 ನಾಮನಿರ್ದೇಶನಗಳನ್ನು ಸಲ್ಲಿಸಲಾಗಿದೆ ವರದಿಗಳ ಪ್ರಕಾರ, ಈ ವರ್ಷ ಶಾಂತಿ ಪ್ರಶಸ್ತಿಗಾಗಿ ನೊಬೆಲ್ ಸಮಿತಿಯು ಒಟ್ಟು 338 ನಾಮನಿರ್ದೇಶನಗಳನ್ನು ಸ್ವೀಕರಿಸಿದೆ. ನಾಮನಿರ್ದೇಶನಗಳಲ್ಲಿ 244 ವ್ಯಕ್ತಿಗಳು ಮತ್ತು 94 ಸಂಸ್ಥೆಗಳು ಸೇರಿವೆ. ಈ ಹಿಂದೆ 19 ಸಂದರ್ಭಗಳಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿಲ್ಲ ಎಂಬುದನ್ನು ಗಮನಿಸಬೇಕು. ಇವುಗಳಲ್ಲಿ 1914…
ನವದೆಹಲಿ: 2025 ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೀಡಲಾಯಿತು. ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯು ಈ ಪ್ರಶಸ್ತಿಯನ್ನು 09:00 GMT (2:30 PM) IST ಕ್ಕೆ ಘೋಷಿಸಿತು. ವಿವಿಧ ವಿಭಾಗಗಳಲ್ಲಿ ನೊಬೆಲ್ ಪ್ರಶಸ್ತಿಗಳ ಘೋಷಣೆಗಳು ಅಕ್ಟೋಬರ್ 6 ರಂದು ಪ್ರಾರಂಭವಾದವು ಮತ್ತು ಅಕ್ಟೋಬರ್ 13 ರವರೆಗೆ ಮುಂದುವರಿಯಲಿವೆ. ಆದಾಗ್ಯೂ, ಈ ಬಾರಿ ಶಾಂತಿ ನೊಬೆಲ್ ವಿಶೇಷ ಗಮನದಲ್ಲಿದೆ, ಏಕೆಂದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಪಂಚದಾದ್ಯಂತ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ಪ್ರಶಸ್ತಿಯನ್ನು ತಮಗೆ ನೀಡಬೇಕು ಎಂದು ಪದೇ ಪದೇ ಹೇಳಿಕೊಂಡಿದ್ದಾರೆ. ಈ ವರ್ಷ 338 ನಾಮನಿರ್ದೇಶನಗಳನ್ನು ಸಲ್ಲಿಸಲಾಗಿದೆ ವರದಿಗಳ ಪ್ರಕಾರ, ಈ ವರ್ಷ ಶಾಂತಿ ಪ್ರಶಸ್ತಿಗಾಗಿ ನೊಬೆಲ್ ಸಮಿತಿಯು ಒಟ್ಟು 338 ನಾಮನಿರ್ದೇಶನಗಳನ್ನು ಸ್ವೀಕರಿಸಿದೆ. ನಾಮನಿರ್ದೇಶನಗಳಲ್ಲಿ 244 ವ್ಯಕ್ತಿಗಳು ಮತ್ತು 94 ಸಂಸ್ಥೆಗಳು ಸೇರಿವೆ. ಈ ಹಿಂದೆ 19 ಸಂದರ್ಭಗಳಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿಲ್ಲ ಎಂಬುದನ್ನು ಗಮನಿಸಬೇಕು. ಇವುಗಳಲ್ಲಿ 1914 ರಿಂದ…
ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಅವರು ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/2025-nobel-peace-prize-for-wangari-maathai-kenyas-first-female-professor/ https://kannadanewsnow.com/kannada/the-gramadani-podcast-has-come-to-deliver-government-information-to-rural-people-what-is-its-specialty-and-benefits/
ಓಸ್ಲೋ: 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲಾಗಿದೆ. ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈ ಅವರು 2025ರ ‘ನೋಬೆಲ್ ಶಾಂತಿ ಪ್ರಶಸ್ತಿ‘ಗೆ ಭಾಜನರಾಗಿದ್ದಾರೆ. ‘ಗ್ರೀನ್ ಬೆಲ್ಟ್‘ ಚಳುವಳಿ ಮೂಲಕ ಲಕ್ಷಾಂತರ ಮರಗಳನ್ನು ನೆಟ್ಟು ಹಸಿರು ಪರಿಸರಕ್ಕೆ ಇವರು ಕಾರಣವಾಗಿದ್ದರು. ಆ ಮೂಲಕ ವ್ಯಾಪಕ ಜನಮನ್ನಣೆ ಪಡೆದಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಅಕ್ಟೋಬರ್ 10 ರಂದು ಓಸ್ಲೋದಲ್ಲಿರುವ ನಾರ್ವೇಜಿಯನ್ ನೊಬೆಲ್ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗುವುದು. ಈ ವರ್ಷ ಈ ಪ್ರಶಸ್ತಿಯು ಹೆಚ್ಚಿನ ಸಂಚಲನ ಮೂಡಿಸಿದ್ದು, ಜಗತ್ತಿನಾದ್ಯಂತ “ಯುದ್ಧಗಳನ್ನು ಕೊನೆಗೊಳಿಸಿದ್ದಕ್ಕಾಗಿ” ಪ್ರತಿಷ್ಠಿತ ಗೌರವವನ್ನು ನೀಡಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶಾಂತಿಯನ್ನು ಉತ್ತೇಜಿಸಲು, ಸಂಘರ್ಷಗಳನ್ನು ಪರಿಹರಿಸಲು ಮತ್ತು ಮಾನವ ಹಕ್ಕುಗಳನ್ನು ಮುನ್ನಡೆಸಲು ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ನಾರ್ವೇಜಿಯನ್ ನೊಬೆಲ್ ಸಮಿತಿಯು ನಡೆಸುತ್ತದೆ ಮತ್ತು ಪ್ರತಿ ವರ್ಷ ಅಕ್ಟೋಬರ್ನಲ್ಲಿ…













