Author: kannadanewsnow09

ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್ ಕುರಿತು 4 ತಿಂಗಳ ತರಬೇತಿ ನೀಡಲಾಗುತ್ತಿದ್ದು, ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 03/04/2025 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಗುರುದತ್ತ ಹೆಗಡೆರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-251444 ನ್ನು ಸಂಪರ್ಕಿಸುವುದು. https://kannadanewsnow.com/kannada/bjp-is-an-uncultured-party-i-have-never-seen-such-behaviour-dk-shivakumar/ https://kannadanewsnow.com/kannada/good-news-for-those-going-home-for-ugadi-festival-special-express-train-service-between-bengaluru-and-kalaburagi/

Read More

ಬೆಂಗಳೂರು : “ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?” ಎಂದು ತಿರುಗೇಟು ನೀಡಿದರು. ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, “ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು” ಎಂದು ವ್ಯಂಗವಾಡಿದರು. https://kannadanewsnow.com/kannada/shivamogga-a-state-level-workshop-was-successfully-held-at-anavatti-government-first-grade-college/ https://kannadanewsnow.com/kannada/good-news-for-those-going-home-for-ugadi-festival-special-express-train-service-between-bengaluru-and-kalaburagi/

Read More

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 28 ರಂದು ರಾತ್ರಿ 9:15ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 07:40ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06520 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 29 ರಂದು ಬೆಳಿಗ್ಗೆ 9:35ಕ್ಕೆ ಕಲಬುರಗಿಯಿಂದ ಹೊರಟು, ಅದೇ ದಿನ ರಾತ್ರಿ 8:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲು 1-ಎಸಿ ಟು ಟೈರ್, 1-ಎಸಿ ತ್ರಿ ಟೈರ್, 11- ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ…

Read More

ಶಿವಮೊಗ್ಗ: ಜಿಲ್ಲೆಯ ಆನವಟ್ಟಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಾನಗಳು ಮತ್ತು ಸಂಶೋಧನೆಯಲ್ಲಿ ನೂತನ ತಂತ್ರಗಳ ಕುರಿತಂತೆ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಾನಗಳು ಮತ್ತು ಸಂಶೋಧನೆಯಲ್ಲಿ ನೂತನ ತಂತ್ರಗಳ ಕುರಿತಂತೆ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದಂತ ಡಾ.ಶೇಖರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದಂತ ಅವರು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಂತಹ ಗ್ರಾಮೀಣ ಕಾಲೇಜಿನಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸುವಂತ ರಾಷ್ಟ್ರಮಟ್ಟದ ಕಾರ್ಯಾಗಾರ ಏರ್ಪಡಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಂತ ಅರುಣಾಚಲ ಪ್ರದೇಶದ ಹಿಮಾಚಲ್ ವಿವಿಯ ಉಪ ಕುಲಪತಿ ಡಾ.ವೇಣುಗೋಪಾಲ್ ರಾವ್ ಅವರು, ಪ್ರಸ್ತುತ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆ ಅತ್ಯಗತ್ಯವಿದೆ. ಸಂಶೋಧನಾ ವಿದ್ಯಾರ್ಥಿಗಳಿಗೆ, ಸಂಶೋಧನೆಯಲ್ಲಿ ತೊಡಗೋರಿಗೆ ಸಂಶೋಧನೆಯ ಹಂತ, ಮಹತ್ವ, ಜವಾಬ್ದಾರಿ,…

Read More

ನವದೆಹಲಿ:  ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ವಂಚನೆಗಳು ಮತ್ತು ವಂಚನೆಯ ಚಟುವಟಿಕೆಗಳನ್ನು ತಡೆಗಟ್ಟಲು ವಾಟ್ಸಾಪ್ ಬಲವಾದ ನೀತಿಗಳನ್ನು ಹೊಂದಿದೆ. ಇತ್ತೀಚಿನ ಮಾಸಿಕ ವರದಿಯಲ್ಲಿ, ಮೆಟಾ-ಮಾಲೀಕತ್ವದ ತ್ವರಿತ ಸಂದೇಶ ವೇದಿಕೆಯು ಜನವರಿ 1 ರಿಂದ ಜನವರಿ 30 ರ ನಡುವೆ ಭಾರತದಲ್ಲಿ 99 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಎಲ್ಲಾ ನಿಷೇಧಿತ ಖಾತೆಗಳಲ್ಲಿ, ಯಾವುದೇ ಬಳಕೆದಾರರ ವರದಿಗಳನ್ನು ಸ್ವೀಕರಿಸುವ ಮೊದಲು 13.27 ಲಕ್ಷ ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ವರದಿ ಉಲ್ಲೇಖಿಸುತ್ತದೆ. ಪೂರ್ವಭಾವಿ ನಿಷೇಧಗಳ ಜೊತೆಗೆ, ವಾಟ್ಸಾಪ್ ತನ್ನ ಅಧಿಕೃತ ಕುಂದುಕೊರತೆ ಮಾರ್ಗಗಳ ಮೂಲಕ ಭಾರತದಲ್ಲಿ ಬಳಕೆದಾರರಿಂದ 9,474 ಕುಂದುಕೊರತೆ ವರದಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಈ ದೂರುಗಳ ಆಧಾರದ ಮೇಲೆ ಕೇವಲ 239 ಖಾತೆಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಬ್ಯಾನ್ ಮೇಲ್ಮನವಿಗಳು ಅತಿ ಹೆಚ್ಚು ವರದಿಗಳನ್ನು (4,212) ಹೊಂದಿದ್ದು, ಪರಿಶೀಲನೆಯ ನಂತರ 111 ಖಾತೆಗಳನ್ನು ಮರುಸ್ಥಾಪಿಸಲಾಗಿದೆ. ವಾಟ್ಸಾಪ್ ಖಾತೆಗಳನ್ನು ಏಕೆ ನಿಷೇಧಿಸಿದೆ ವರದಿಯ ಪ್ರಕಾರ, ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ…

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ NHM ಸಿಬ್ಬಂದಿಗಳಿಗೆ 15% ವೇತನ ಹೆಚ್ಚಳದ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳ ವೇತನ ಕಡಿಮೆ ಇರುವ ಬಗ್ಗೆ ಪರಿಶೀಲಿಸಿ ವೇತನ ಹೆಚ್ಚಳ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಚಾರಿ ಅವರ ಅಧ್ಯಕ್ಷತೆಯ ಸಮಿತಿಯು 15% ವೇತನ ಹೆಚ್ಚಳ ಮಾಡಲು ಶಿಫಾರಸ್ಸು ಮಾಡಿತ್ತು ಎಂದಿದ್ದಾರೆ. ಅದರಂತೆ ಏಪ್ರಿಲ್ 2023 ರಿಂದ ಅನ್ವಯ ಆಗುವಂತೆ ವೇತನ ಹೆಚ್ಚಿಸಿ ಆದೇಶ ಹೊರಡಿಸಲಾಗಿರುತ್ತದೆ ಅದರಂತೆ 2023-24 ರಲ್ಲಿ ತಮ್ಮ ಸರಕಾರ ಬಂದ ನಂತರ 17055 ಸಿಬ್ಬಂದಿಗಳಿಗೆ ಅನ್ವಯ ಆಗುವಂತೆ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಿದ್ದೂ ಸ್ವಾಗತಾರ್ಹ ಎಂಬುದಾಗಿ ಹೇಳಿದ್ದಾರೆ. 2024-25 ನೆಯ ಸಾಲಿಗೆ ಈಗಾಗಲೇ ಹೆಚ್ಚಳವಾದ ಅನುದಾನವನ್ನು ಜಿಲ್ಲೆಗಳಿಗೆ…

Read More

ಬೆಂಗಳೂರು: ಮಾರ್ಚ್.22ರ ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಮಾಡುವುದು ಖಚಿತ. ಇದರಲ್ಲಿ ಬದಲಾವಣೆಯೇ ಇಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂಇಎಸ್ ನಿಷೇಧ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಖಚಿತವೆಂಬುದಾಗಿ ತಿಳಿಸಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಮಾಡಲಾಗುತ್ತಿದೆ. ನಾಳೆ ಬೆಳಗ್ಗೆ 11.30 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಭಾರೀ ಮೆರವಣಿಗೆಯಿಂದ ಫ್ರೀಡಂ ಪಾರ್ಕ್ ಗೆ ತೆರಳಲಾಗುತ್ತದೆ ಎಂದಿದ್ದಾರೆ. ನಾಳಿನ ಮೆರವಣಿಗೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ ಗೋವಿಂದು, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕನ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್,…

Read More

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ತೀವ್ರ ವಿರೋಧ, ಗದ್ದಲದ ನಡುವೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯ ಮಸೂಧೆಯನ್ನು ಅಂಗೀಕಾರ ನೀಡಲಾಯಿತು. ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿತ್ತು. ಈ ಮಸೂದೆಯಲ್ಲಿ ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿತ್ತು. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಂಪುಟ ಅನುಮೋದನೆ ನೀಡಿತ್ತು. ಇಂದು ವಿಧಾನಸಭೆಯಲ್ಲಿ ಮಂಡಿಸಿ, ಸರ್ಕಾರಿ ಕಾಮಗಾರಿಗಳ…

Read More

ನವದೆಹಲಿ: ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪುರುಷ ಬ್ಯಾಂಕ್ ಉದ್ಯೋಗಿಯ ವಿರುದ್ಧದ ಆಂತರಿಕ ದೂರು ಸಮಿತಿ (ಐಸಿಸಿ) ವರದಿ ಮತ್ತು ಪುಣೆ ಕೈಗಾರಿಕಾ ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿ, ಸಂಶೋಧನೆಗಳು ಅಸ್ಪಷ್ಟ ಮತ್ತು ಆಧಾರರಹಿತವೆಂದು ಹೇಳಿದೆ. ನ್ಯಾಯಮೂರ್ತಿ ಸಂದೀಪ್ ಮಾರ್ನೆ, ಐಸಿಸಿಯ ಸೆಪ್ಟೆಂಬರ್ 30, 2022 ರ ವರದಿಯನ್ನು ವಕೀಲ ಸನಾ ರಯೀಸ್ ಖಾನ್ ಮೂಲಕ ಪ್ರಶ್ನಿಸಿದ್ದ ಉದ್ಯೋಗಿಯ ಪರವಾಗಿ ತೀರ್ಪು ನೀಡಿದರು. ಸಮಿತಿಯು ಅವರನ್ನು ಕೆಲಸದ ಸ್ಥಳದಲ್ಲಿನ ದುಷ್ಕೃತ್ಯದ ಆರೋಪದಲ್ಲಿ ತಪ್ಪಿತಸ್ಥರೆಂದು ಕಂಡುಕೊಂಡಿತ್ತು, ಜುಲೈ 2024 ರಲ್ಲಿ ಕೈಗಾರಿಕಾ ನ್ಯಾಯಾಲಯವು ಈ ನಿರ್ಧಾರವನ್ನು ಎತ್ತಿಹಿಡಿದಿದೆ. ಒಂದು ಪ್ರಮುಖ ಆರೋಪವೆಂದರೆ, ಸಭೆಯ ಸಮಯದಲ್ಲಿ ಉದ್ಯೋಗಿ ಮಹಿಳಾ ಸಹೋದ್ಯೋಗಿಯ ಉದ್ದನೆಯ ಕೂದಲಿನ ಬಗ್ಗೆ ತಮಾಷೆ ಮಾಡಿ, ಅದನ್ನು ಕಟ್ಟಲು ಜೆಸಿಬಿ ಬೇಕೇ ಎಂದು ಕೇಳಿದ್ದರು. ‘ಯೇ ರೇಷ್ಮಿ ಜುಲ್ಫೀನ್’ ಹಾಡಿನ ಸಾಲನ್ನು ಹಾಡಿದರು. ದೂರುದಾರರು ಆರಂಭದಲ್ಲಿ ಈ ಲೈಂಗಿಕ ಕಿರುಕುಳವನ್ನು ಪರಿಗಣಿಸಿರಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಮಹಿಳೆಯರ ಸಮ್ಮುಖದಲ್ಲಿ ಪುರುಷ…

Read More

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ 6 ತಿಂಗಳುಗಳ ಕಾಲ ಸ್ಪೀಕರ್ ಅಮಾನತುಗೊಳಿಸಿ ಆದೇಶಿಸಿದ್ದರಿಂದ ಸದನದ ಭಾವಿಗೆ ಇಳಿದು ಬಿಜೆಪಿ-ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಹಿನ್ನಲೆಯಲ್ಲಿ ಕರ್ನಾಟಕ ವಿಧಾನಸಭೆಯ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿ ಸ್ಪೀಕರ್ ಆದೇಶಿಸಿದರು. ಬಿಜೆಪಿಯ ಸದಸ್ಯರ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮಧ್ಯಾಹ್ನದ ಕಲಾಪದ ನಂತ್ರ ಕೆಲ ವಿಧೇಯಕಗಳನ್ನು ಮಂಡಿಸೋದಕ್ಕೆ ಮುಂದಾಗಲಾಗಿತ್ತು. ಆದರೇ ಸಚಿವರಿಗೆ ಹನಿಟ್ರ್ಯಾಪ್ ವಿಚಾರ ಪ್ರತಿಧ್ವನಿಸಿತು. ಬಿಜೆಪಿ, ಜೆಡಿಎಸ್ ಸದಸ್ಯರು ತನಿಖೆಗೆ ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಹೀಗಾಗಿ ಸದನದ ಗೌರವಕ್ಕೆ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದಂತ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತುಗೊಳಿಸಿ ಆದೇಶಿಸಿದರು. ಈ ಬೆನ್ನಲ್ಲೇ ಸಚಿವ ಹೆಚ್.ಕೆ ಪಾಟೀಲ್ ಅವರು ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಸ್ಪೀಕರ್ ಈ ವಿಧೇಯಕವನ್ನು ಸದನದ ಮತಕ್ಕೆ ಹಾಕಿದರು. ಆದರೇ ಬಿಜೆಪಿ ತೀವ್ರ ವಿರೋಧ, ಗದ್ದಲವನ್ನು ಏಳಿಸಲಾಯಿತು. ಈ ವಿರೋಧ, ಗದ್ದಲದ ನಡುವೆ ಅಂಗೀಕಾರ ನೀಡಲಾಯಿತು. ಸದನದ ಬಾವಿಗೆ…

Read More