Author: kannadanewsnow09

ರಾಯಚೂರು: ಒಂದೆಡೆ ಎಸ್ಐಟಿ ಅಧಿಕಾರಿಗಳು ಅತ್ಯಾಚಾರ ಆರೋಪ ಸಂತ್ರಸ್ತೆಯರನ್ನು ಹೊಳೆನರಸೀಪುರದಲ್ಲಿನ ಹೆಚ್.ಡಿ ರೇವಣ್ಣ ಮನೆಗೆ ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಮತ್ತೊಂದೆಡೆ ಹೆಚ್.ಡಿ ರೇವಣ್ಣ ಬಂಧನದ ಸುಳಿವನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ನೀಡಿದ್ದಾರೆ. ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸೋ ಪ್ರಮೇಯವೇ ಇಲ್ಲವೆಂದರು. ಹೆಚ್.ಡಿ ರೇವಣ್ಣ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂಜೆ 5.30ರ ಒಳಗಾಗಿ ಎಸ್ಐಟಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು. ಇಲ್ಲದಿದ್ದರೇ ತನಿಖಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ವಿಚಾರಣೆಗೆ ಹಾಜರಾಗದಿದ್ರೇ ಖಡಾಖಂಡಿತ ಕ್ರಮವಾಗುತ್ತದೆ ಎಂಬುದಾಗಿ ಹೇಳಿದರು. ಈ ಮೂಲಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಇಂದು ಎಸ್ಐಟಿ ಅಧಿಕಾರಿಗಳು ಬಂಧಿಸೋ ಸುಳಿವು ನೀಡಿದರು. https://kannadanewsnow.com/kannada/our-government-is-committed-to-protecting-victims-of-rape-by-prajwal-revanna-cm-to-rahul-gandhis-letter/ https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/

Read More

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಲಿರುವಂತ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಮತದಾನಕ್ಕಾಗಿ ಅರ್ಹ ಶಿಕ್ಷಕರು, ಪದವೀಧರರು ನೋಂದಾಯಿಸಿಕೊಳ್ಳೋದಕ್ಕೆ ಮೇ.6ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2024ಕ್ಕೆ  ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಮತದಾರರಾಗಿ ನೋಂದಾಯಿಸಿಕೊಳ್ಳಲು ಮೇ.6, 2024 ಕೊನೆಯ ದಿನವಾಗಿದೆ ಎಂದಿದೆ. ಅರ್ಹ ಶಿಕ್ಷಕರು ಹಾಗೂ ಪದವೀಧರರು 2 ಸೆಟ್ ಅಗತ್ಯ ದಾಖಲೆಗಳನ್ನು ಸಮೀಪದ ಚುನಾವಣಾ ನೋಂದಣಾಧಿಕಾರಿಗಳಿಗೆ ಮೇ.6ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ. ಆದ್ದರಿಂದ ಎಲ್ಲಾ ಶಿಕ್ಷಕರು ಮತ್ತು ಪದವೀಧರರ ಗಮನಿಸಬೇಕಾದದ್ದು, ಮತದಾರರ ನೋಂದಣಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವು ಮೇ 6, 2024 ಆಗಿದೆ. ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. https://twitter.com/ceo_karnataka/status/1786603845013098695 https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/ https://kannadanewsnow.com/kannada/our-government-is-committed-to-protecting-victims-of-rape-by-prajwal-revanna-cm-to-rahul-gandhis-letter/

Read More

ಬೆಂಗಳೂರು: ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈಗ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಮೇ.15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, VAO Date Extended ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಲಾಗಿದೆ. https://twitter.com/KEA_karnataka/status/1786628872035000759 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.…

Read More

ಬೆಂಗಳೂರು: ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ. ಹಾಸನ ವೀಡಿಯೋ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಬಹಳ ನೋವಾಗಿದೆ. ಅವರು ಆರೋಗ್ಯದ ಮೇಲೂ ಪರಿಣಾಮ ಬೀರಿದೆ ಎಂದರು. ಈ ಘಟನೆ ದೇವೇಗೌಡ ಮೇಲೆ ಬಹಳ ಪರಿಣಾಮ ಬೀರಿದೆ. ಇದರಿಂದ ದೇವೇಗೌಡರು ಬಹಳ ನೋಂದಿದ್ದಾರೆ. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ. ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/rise-in-communicable-diseases-due-to-heat-wave-in-the-state-instructions-to-take-necessary-action/ https://kannadanewsnow.com/kannada/our-government-is-committed-to-protecting-victims-of-rape-by-prajwal-revanna-cm-to-rahul-gandhis-letter/

Read More

ಮಹಾರಾಷ್ಟ್ರ: ಸಾಂಗ್ಲಿ ಜಿಲ್ಲೆಯ ಎರಂಡೋಲಿ ಗ್ರಾಮದಲ್ಲಿರುವ ಮೈದಾನದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ. ತುರ್ತು ಭೂಸ್ಪರ್ಶದ ಹಿಂದಿನ ಕಾರಣವನ್ನು ಇನ್ನೂ ಸ್ಪಷ್ಟಪಡಿಸಲಾಗಿಲ್ಲ, ಆದರೆ ತಾಂತ್ರಿಕ ವೈಫಲ್ಯದಿಂದಾಗಿ ಇದು ಸಂಭವಿಸಿದೆ ಎಂದು ವರದಿಯಾಗಿದೆ. ಬೆಳಿಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದೆ. ಸಾಂಗ್ಲಿ ಜಿಲ್ಲೆಯ ಎರಂಡೋಲಿ ಗ್ರಾಮದ ಸಮೀಪದ ಜಮೀನಿನಲ್ಲಿ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಇಳಿದಿದ್ದನ್ನು ಕಂಡಂತ ಗ್ರಾಮಸ್ಥರು, ಸಹಾಯಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/indian-navy-provides-medical-assistance-to-20-pakistani-personnel-stranded-in-arabian-sea/ https://kannadanewsnow.com/kannada/our-government-is-committed-to-protecting-victims-of-rape-by-prajwal-revanna-cm-to-rahul-gandhis-letter/

Read More

ನವದೆಹಲಿ: ಭಾರತೀಯ ನೌಕಾಪಡೆಯು ಅರೇಬಿಯನ್ ಸಮುದ್ರದ ಇತರ ದೇಶಗಳಿಗೆ ನಿರಂತರವಾಗಿ ಸಹಾಯ ಮಾಡುತ್ತಿದೆ. ಕೆಲವೊಮ್ಮೆ ಕಡಲ್ಗಳ್ಳರಿಂದ, ಕೆಲವೊಮ್ಮೆ ವೈದ್ಯಕೀಯ ತುರ್ತುಸ್ಥಿತಿಯಲ್ಲಿ, ಯಾವುದೇ ಪರಿಸ್ಥಿತಿಯಲ್ಲಿ ಮಾಹಿತಿ ಬಂದ ಕೂಡಲೇ ತಂಡವು ಅಗತ್ಯ ಸಹಾಯವನ್ನು ಒದಗಿಸುತ್ತಿದೆ. ಈ ಮೂಲಕ ಭಾರತೀಯ ನೌಕಾಪಡೆಯು ತನ್ನ ಶಕ್ತಿಯನ್ನು ಪ್ರದರ್ಶಿಸುತ್ತಿದೆ. ಹೌದು. ಅಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ತುರ್ತು ಕರೆಗೆ ಸ್ಪಂದಿಸಿದ ಭಾರತೀಯ ನೌಕಾಪಡೆಯು ತಕ್ಷಣ 20 ಪಾಕಿಸ್ತಾನಿ ಸಿಬ್ಬಂದಿಯನ್ನು ಹೊತ್ತ ಇರಾನಿನ ಮೀನುಗಾರಿಕಾ ಹಡಗಿಗೆ ವೈದ್ಯಕೀಯ ನೆರವು ನೀಡಿತು. ಅರೇಬಿಯನ್ ಸಮುದ್ರದಲ್ಲಿ ಕಡಲ್ಗಳ್ಳತನವನ್ನು ತಡೆಗಟ್ಟಲು ನಿಯೋಜಿಸಲಾದ ಐಎನ್ಎಸ್ ಸುಮೇಧಾ ಮಿಷನ್ ತುರ್ತು ಕರೆಗೆ ತಕ್ಷಣದ ಪ್ರತಿಕ್ರಿಯೆಯಾಗಿ, ಇರಾನಿನ ಹಡಗಿಗೆ ನಿರ್ಣಾಯಕ ವೈದ್ಯಕೀಯ ಸಹಾಯವನ್ನು ಒದಗಿಸಿದೆ ಎಂದು ನೌಕಾಪಡೆ ಶನಿವಾರ (4 ಮೇ 2024) ಹೇಳಿಕೆ ನೀಡಿದೆ. ವಿಮಾನದಲ್ಲಿ 20 ಪಾಕಿಸ್ತಾನಿ ಸಿಬ್ಬಂದಿ ಇದ್ದರು. ಏಪ್ರಿಲ್ 30 ರಂದು ಸಹಾಯವನ್ನು ತಲುಪಿಸಲಾಯಿತು ಏಪ್ರಿಲ್ 30 ರಂದು ಗಸ್ತು ಹಡಗು ಐಎನ್ಎಸ್ ಸುಮೇಧಾ ಈ ಸಹಾಯವನ್ನು ತಲುಪಿಸಿದೆ ಎಂದು ನೌಕಾಪಡೆ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿ ಅಧಿಕಾರಿಗಳ ಬೆನ್ನಲ್ಲೇ, ಸಿಬಿಐ ಕೂಡ ತನಿಖೆಗೆ ಇಳಿಯೋ ಸಾಧ್ಯತೆ ಇದೆ. ಅಲ್ಲದೇ ಸಿಬಿಐನಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮ್ಯಯ ಎಸ್ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಿದರು. ಇಂದಿನ ಸಿಎಂ ನೇತೃತ್ವದ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದೆ ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ದರಾಮಯ್ಯ ಅವರಿಗೆ ತಿಳಿಸಿದೆ. ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್.ಡಿ.ರೇವಣ್ಣ ವಿರುದ್ಧ ಎಸ್ಐಟಿ ಎರಡನೇ ಲುಕ್ಔಟ್ ನೋಟಿಸ್ ಹೊರಡಿಸಿದೆ. ಪ್ರಜ್ವಲ್ ಮತ್ತು ಅವರ ತಂದೆಯ ವಿರುದ್ಧ ಇನ್ನೂ ಎರಡು ಎಫ್ಐಆರ್ಗಳು ದಾಖಲಾದ ನಂತರ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾದಂತೆ ಆಗಿದೆ. ಏತನ್ಮಧ್ಯೆ, ಕಾಂಗ್ರೆಸ್ ಹಿರಿಯ ಮುಖಂಡ…

Read More

ನವದೆಹಲಿ: ಈಗಾಗಲೇ ಸನಾತನ ಧರ್ಮ, ಆಚರಣೆಯನ್ನು ಪ್ರಶ್ನಿಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತ್ತೆ ಅದೇ ವಿಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸನಾತನ ಆಚರಣೆಗಳನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ, ‘ಪ್ರಧಾನಿಯ ದ್ವಾರಕಾ ಪೂಜೆ ನಾಟಕ’ ಎಂದಿದ್ದಾರೆ. ಪುಣೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಕೆಲವೊಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಕೆಲವೊಮ್ಮೆ ಅವರು ‘ನಾಟಕ’ವನ್ನು ರಚಿಸಲು ನೀರಿನೊಳಗೆ ಹೋಗುತ್ತಾರೆ ಎಂದಿದ್ದಾರೆ. ಕಾಂಗ್ರೆಸ್ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಸನಾತನ ಧರ್ಮವನ್ನು ಗುರಿಯಾಗಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದ್ವಾರಕಾ ಪೂಜೆಯನ್ನು ಅವರು ನಾಟಕ ಎಂದು ಬಣ್ಣಿಸಿದ್ದಾರೆ. ಪುಣೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಕೆಲವೊಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ ಮತ್ತು ಕೆಲವೊಮ್ಮೆ ಸಮುದ್ರದ ಕೆಳಗೆ ಹೋಗಿ ನಾಟಕ ಮಾಡುತ್ತಾರೆ. ಅವನು ನೀರಿನ ಕೆಳಗೆ ಹೋಗಿ ನಟಿಸಲು ಪ್ರಾರಂಭಿಸುತ್ತಾನೆ ಎಂದಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಮಾತನಾಡಿರುವಂತ ವೀಡಿಯೋ…

Read More

ಹುಬ್ಬಳ್ಳಿ: ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ಲವ್ ಜಿಹಾದ್ ಶುರವಾಗಿ. ರಾಜ್ಯದಲ್ಲಿ ನಿರಾತಂಕವಾಗಿ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿವೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆರೋಪಿ ಸದ್ದಾಂ ಹುಸೇನ್ ಕಬ್ಬಿಣದ ರಾಡ್ ತೆಗೆದುಕೊಂಡು ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದು ರಾಜ್ಯ ಸರ್ಕಾರ ತಲೆ ತಗ್ಗಿಸುವಂತ ಕೆಲಸವಾಗಿದೆ ಎಂದು ಹೇಳಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ನಾವು ಯಾರೂ ಪ್ರಜ್ವಲ್ ರೇವಣ್ಣ ಪ್ರಕರಣ ಬೆಂಬಲಿಸುತ್ತಿಲ್ಲ. ತಪ್ಪು ಮಾಡಿರೋರಿಗೆ ಶಿಕ್ಷೆ ಆಗಬೇಕು. ನನಗೆ ಪೆನ್ ಡ್ರೈವ್ ಬಗ್ಗೆ ಮೊದಲೇ ಪತ್ರ ಬರೆದಿದ್ದರು ಅಂತಿದ್ದಾರೆ. ಆದ್ರೇ ನನಗಂತೂ ಯಾವುದೇ ಪತ್ರ ಬಂದಿಲ್ಲ. ರಾಜ್ಯ ಸರ್ಕಾರ ಮಾತ್ರ ಈಗ ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದರು. https://kannadanewsnow.com/kannada/prajwal-revanna-pornography-video-case-cm-siddaramaiah-holds-crucial-meeting-with-sit-officials-2/ https://kannadanewsnow.com/kannada/rise-in-communicable-diseases-due-to-heat-wave-in-the-state-instructions-to-take-necessary-action/

Read More

ಗದಗ : ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ ಮಾಡಲಾಗುವುದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಮುಂಡಗರಿಯಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಮುಂಡರಗಿ ತಾಲೂಕಿನ ಮಣ್ಣು ಫಲವತ್ತಾದ ಮಣ್ಣು, ಮುಂಡರಗಿ ತಾಲೂಕಿನ ಮಣ್ಣಿಗೆ ತುಂಗಭದ್ರಾ ನೀರು ಹರಿಸಿದರೆ ಭೂಮಿತಾಯಿ ಬಂಗಾರದ ಬೆಳೆ ಕೊಡುತ್ತಾಳೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಿದ್ದು ನಾನು. ಒಂದು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ, ನಾಲ್ಕು ಹಳ್ಳಿಗಳನ್ನು ಸ್ಥಳಾಂತರ ಮಾಡಿ ಕೆನಾಲ್ ಗಳನ್ನು ಮಾಡಿದ್ದೇವೆ. ಹನಿ ನೀರಾವರಿ ಮಾಡುವ ಗುರಿ‌ ಇದೆ. ಆದರೆ, ಈ ಸರ್ಕಾರ ಯೋಜನೆಯನ್ನು ಸಂಪೂರ್ಣ ಸ್ಥಗಿತಗೊಳಿಸಿದೆ. ರಾಜ್ಯ ಸರ್ಕಾರ ಈ ಭಾಗಕ್ಕೆ ನೀರು ಕೊಡದಿದ್ದರೆ ದೊಡ್ಡ ಹೋರಾಟ ಮಾಡಲಾಗುವುದು. ಕೇವಲ ಮುಂಡರಗಿ ಅಷ್ಟೇ ಅಲ್ಲ, ಗದಗ, ರೋಣ, ಕೊಪ್ಪಳ ಭಾಗದವರೆಗೂ ಭೂಮಿ ತಾಯಿ ಹಸಿರು ಸೀರೆ ಉಟ್ಟು ಕಂಗೊಳಿಸಬೇಕು ಎಂದು ಹೇಳಿದರು. ಜಾಲವಾಡಗಿ ಏತ ನೀರಾವರಿ ಈ…

Read More