Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (International Space Station- ISS) ಪ್ರಯಾಣಿಸಿದ ಮೊದಲ ಭಾರತೀಯ ಮೂಲದ ಮಹಿಳೆಯನ್ನು ಹೊತ್ತ ಬಹು ನಿರೀಕ್ಷಿತ ಆಕ್ಸಿಯಮ್ -4 ಮಿಷನ್ನ ಉಡಾವಣೆಯು ಪ್ರತಿಕೂಲ ಹವಾಮಾನದಿಂದಾಗಿ ಒಂದು ದಿನ ವಿಳಂಬವಾಗಿದೆ. ಉಡಾವಣೆಯನ್ನು ಈಗ ಜೂನ್ 11 ರ ಬುಧವಾರಕ್ಕೆ ಮರು ನಿಗದಿಪಡಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (Indian Space Research Organisation – ISRO) ಅಧ್ಯಕ್ಷ ಡಾ. ವಿ. ನಾರಾಯಣನ್ ಅವರ ಅಧಿಕೃತ ಹೇಳಿಕೆಯ ಪ್ರಕಾರ, ಮೂಲತಃ ಜೂನ್ 10 ರಂದು ಯೋಜಿಸಲಾಗಿದ್ದ ಈ ಮಿಷನ್ ಈಗ ಜೂನ್ 11, 2025 ರಂದು ಭಾರತೀಯ ಕಾಲಮಾನ ಸಂಜೆ 5:30 ಕ್ಕೆ ಉಡಾವಣೆಯಾಗಲಿದೆ. ಹವಾಮಾನ ವೈಪರಿತ್ಯದ ಕಾರಣದಿಂದ ಜೂನ್.10ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಬೇಕಿದ್ದಂತ ಪ್ರವಾಸವನ್ನು ಜೂನ್.11ಕ್ಕೆ ಮುಂದೂಡಿಕೆ ಮಾಡಿರುವುದಾಗಿ ಅಧಿಕೃತ ಮಾಹಿತಿ ಹೊರ ಬಿದ್ದಿದೆ. https://kannadanewsnow.com/kannada/bcci-likely-to-sack-rohit-sharma-as-odi-captain-reports/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡವು ಪರಿವರ್ತನೆಯ ಅವಧಿಯನ್ನು ಪ್ರವೇಶಿಸಿದೆ. ಮುಂದಿನ ದಿನಗಳಲ್ಲಿ ಕೆಲವು ದಿಟ್ಟ ನಿರ್ಧಾರಗಳೊಂದಿಗೆ ತಂಡವು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ನಿವೃತ್ತಿಯ ನಂತರ, ಆಯ್ಕೆಯಲ್ಲಿ ದೊಡ್ಡ ನಿರ್ವಾತ ಉಂಟಾಗಲಿದ್ದು, ಅದನ್ನು ಅತ್ಯಂತ ಎಚ್ಚರಿಕೆಯಿಂದ ಪರಿಹರಿಸಬೇಕಾಗಿದೆ. 2027 ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸುತ್ತಾರೆಯೇ? ಮೊದಲ ಬಾರಿಗೆ, ಮೂರು ಸ್ವರೂಪಗಳು ಟೀಮ್ ಇಂಡಿಯಾಕ್ಕೆ ವಿಭಿನ್ನ ನಾಯಕರನ್ನು ಹೊಂದಿವೆ. ಶುಭಮನ್ ಗಿಲ್ ಅವರಿಗೆ ಕೆಂಪು ಚೆಂಡಿನ ಸ್ವರೂಪದ ಜವಾಬ್ದಾರಿಯನ್ನು ವಹಿಸಲಾಗಿದೆ. ಆದರೆ ಸೂರ್ಯಕುಮಾರ್ ಯಾದವ್ ಟಿ 20 ಐ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ಪ್ರಸ್ತುತ ಏಕದಿನ ತಂಡದ ಚುಕ್ಕಾಣಿ ಹಿಡಿದಿದ್ದಾರೆ. 2027 ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ. ಆದರೆ ಬಿಸಿಸಿಐ ಏಕದಿನ ನಾಯಕನಾಗಿ ತಮ್ಮ ಸ್ಥಾನವನ್ನು ಮರುಪರಿಶೀಲಿಸಬಹುದು ಎಂಬ ವರದಿಗಳಿವೆ. 38 ವರ್ಷದ ಅವರು ಭಾರತವನ್ನು ತವರು ನೆಲದಲ್ಲಿ 2023 ರ ವಿಶ್ವಕಪ್…
ಮೈಸೂರು: ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಂಜೂರಾತಿ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ನಡೆಸದೇ ಹಿರಿಯ ಅಧಿಕಾರಿಗಳು ವರದಿ ನೀಡುತ್ತಿರುವುದಾಗಿ ಆರೋಪಿಸಿ ಸ್ನೇಹಮಯಿ ಕೃಷ್ಣ ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ಜಾಗೃತಿ ಆಯೋಗವು ಸ್ವೀಕರಿಸಿದೆ. ಈ ಮಾಹಿತಿಯನ್ನು ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಹಂಚಿಕೊಂಡಿದ್ದು, ಮುಡಾ ಪ್ರಕರಣದಲ್ಲಿ 1ನೇ ಆರೋಪಿ ಸಿದ್ದರಾಮಯ್ಯ ಸೇರಿದಂತೆ ಆರೋಪಿಗಳನ್ನು ರಕ್ಷಣೆ ಮಾಡುವ ಸಲುವಾಗಿ ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡು ಸುಳ್ಳು ವರದಿ ಸಲ್ಲಿಸಿರುವ ತನಿಖಾಧಿಕಾರಿ ಮತ್ತು ಹಿರಿಯ ಅಧಿಕಾರಿಯ ವಿರುದ್ದ ಕ್ರಮ ತೆಗೆದುಕೊಳ್ಳಲು ನಾನು ನೀಡಿದ ದೂರರ್ಜಿಯನ್ನು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗದವರು, ನನ್ನ ದೂರನ್ನು ನೊಂದಾಯಿಸಿಕೊಂಡು ಪರಿಶೀಲನೆ ನಡೆಸುತ್ತಿರುವುದಾಗಿ ಸಂದೇಶ ಕಳುಹಿಸಿರುವುದಾಗಿ ಹೇಳಿದ್ದಾರೆ. ಐ.ಪಿ.ಎಸ್ ಅಧಿಕಾರಿಗಳು ಅಂದ ಮಾತ್ರಕ್ಕೆ ಸರ್ವಾಧಿಕಾರಿಗಳಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡರೆ, ಅಪರಾಧ ಕೃತ್ಯಗಳನ್ನು ಎಸಗಿದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/covid-19-outbreak-in-the-state-265-people-tested-positive-in-a-single-day/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ ಬರೋಬ್ಬರಿ 265 ಜನರಿಗೆ ಕೊರೋನಾ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 650 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 265 ಜನರಿಗೆ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ ಎಂದಿದೆ. ಕಳೆದ 24 ಗಂಟೆಯಲ್ಲಿ 265 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದರೇ, 126 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 559 ಸಕ್ರೀಯ ಸೋಂಕಿತರು ರಾಜ್ಯದಲ್ಲಿದ್ದಾರೆ. ಇವರಲ್ಲಿ 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 552 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/explosion-reported-aboard-singapore-flagged-container-ship-off-kerala-coast/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/
ಇದನ್ನು ಯಾರೂ ಕೇಳಿರದ ವಿಚಿತ್ರ ಪರಿಹಾರ ಎಂದು ಕರೆಯಬಹುದು. ಮುರುಗ ದೇವರನ್ನು ಯೋಚಿಸಿ ಈ ಪ್ರಾಯಶ್ಚಿತ್ತವನ್ನು ಮಾಡಲೇಬೇಕೆಂಬ ಯಾವುದೇ ಬಾಧ್ಯತೆಯಿಲ್ಲ. ನಿಮ್ಮ ನೆಚ್ಚಿನ ದೇವತೆ ಯಾವುದು? ನೀವು ಪ್ರತಿದಿನ ಯಾವ ದೇವರನ್ನು ನೆನೆದು ಮನೆಯಲ್ಲಿ ದೀಪ ಹಚ್ಚಿ ಪೂಜಿಸುತ್ತೀರಿ? ಆ ದೇವತೆಯನ್ನು ಸ್ಮರಿಸುತ್ತಾ ನೀವು ಈ ಪರಿಹಾರವನ್ನು ಸಹ ಮಾಡಬಹುದು. ಮುರುಗನ್ ವಿಜಯದ ದೇವರು. ನೀವು ಯಾವುದಾದರೂ ವಿಷಯದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ, ಮುರುಗನ್ ದೇವರನ್ನು ಯೋಚಿಸಿ ಪರಿಹಾರ ಮಾಡಿದರೆ ನಿಮಗೆ ಹೆಚ್ಚುವರಿ ಪ್ರಯೋಜನಗಳು ಸಿಗುತ್ತವೆ. ಜೀವನದಲ್ಲಿ ಎಷ್ಟೇ ದೊಡ್ಡ ಕಷ್ಟ ಬಂದರೂ, ಆ ಕಷ್ಟ ಕೇವಲ ಮೂರು ದಿನಗಳಲ್ಲಿ ನಿಮ್ಮನ್ನು ಬಿಟ್ಟು ಹೋಗುವ ಪವಾಡ ಸಂಭವಿಸುತ್ತದೆ. ಇದು ಸತ್ಯ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.…
ಬೆಳಗಾವಿ: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತೆರಳುತ್ತಿದ್ದಂತ ಕಾರು ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಲಕ್ಷ್ಮಣ್ ಸವದಿಯವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಬೆಳಗಾವಿಯ ದರೂರ್ ಬಳಿಯಲ್ಲಿ ಗೂಡ್ಸ್ ವಾಹನಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಲಕ್ಷ್ಮಣ್ ಸವದಿಯವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಹೇಳಲಾಗುತ್ತಿದೆ. ಲಕ್ಷ್ಮಣ್ ಸವದಿಯವರು ಗೋಕಾಕ್ ನಿಂದ ಬೆಂಗಳೂರಿಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಾವಿಯ ದರೂರ್ ಬಳಿಯಲ್ಲಿ ಅವರ ಕಾರಿಗ ಗೂಡ್ಸ್ ವಾಹನ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅಪಘಾತದ ಬಳಿಕ ಅವರ ಕಾರು ಜಖಂಗೊಂಡಿದ್ದು, ಅಲ್ಲಿಂದ ಬೇರೆ ವಾಹನದಲ್ಲಿ ತೆರಳಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/important-information-for-the-people-of-bangalore-from-july-1-electronic-account-approval-for-building-plans-is-mandatory/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/
ಮಂಡ್ಯ : ಭೂಮಿ ಮೇಲೆ ಮನುಷ್ಯನಾಗಲಿ ಅಥವಾ ಯಾವುದೇ ಜೀವಿಯೂ ಶಾಶ್ವತವಲ್ಲ. ಇರುವಷ್ಟು ದಿನ ಎಲ್ಲರಲ್ಲೂ ಸಂತೋಷದಿಂದ ಸಾರ್ಥಕ ಬದುಕು ನಡೆಸುವುದೇ ಪರಮೋಚ್ಚ ಕೆಲಸ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ಭಾನುವಾರ ಹೇಳಿದರು. ಮದ್ದೂರು ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಶ್ರೀ ಸಿದ್ದರಾಮೇಶ್ವರಸ್ವಾಮಿ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಳಶೋತ್ಸವದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. ಮನುಷ್ಯನಿಗೆ ಮೊದಲು ತನ್ನ ಮೇಲೆ ತನಗೆ ನಂಬಿಕೆ ಇರಬೇಕು. ನಾವು ಮಾಡುವ ಕೆಲಸದಲ್ಲಿ ನಂಬಿಕೆ ನಿಷ್ಠೆ ಇಲ್ಲದೆ ಹಾಗೂ ಪ್ರಾಮಾಣಿಕತೆ ಇಲ್ಲದಿದ್ದರೆ ಎಷ್ಟು ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥವಾಗುತ್ತದೆ. ಸಂಪನ್ಮೂಲಗಳನ್ನು ಕ್ರೋಡೀಕರಿಸಿ ದೇವಾಲಯ ಕಟ್ಟುವುದು ದೊಡ್ಡ ವಿಚಾರವಲ್ಲ. ಸಂಸ್ಕಾರದಿಂದ ಬದುಕುವುದು ಮುಖ್ಯ ಎಂದರು. ಜನತೆ ಸನ್ಮಾರ್ಗಗಳಲ್ಲಿ ನಡೆಯಬೇಕು ತನ್ನ ಸುತ್ತಮುತ್ತಲಿನ ಜನ ಹಾಗೂ ಪರಿಸರವನ್ನು ಸಂತೋಷವಾಗಿಡಲು ಸಕಲರೂ ಪ್ರಯತ್ನಿಸಬೇಕು. ಅದು ಬಿಟ್ಟು ದ್ವೇಷ, ಅಸೂಯೆ ಅಥವಾ ಸ್ವಾರ್ಥ ಬದುಕು ಸಲ್ಲದು ಆಗ ಮಾತ್ರ ಸಮಾಜದಲ್ಲಿ ಸುಭಿಕ್ಷೆಯಿಂದ ಇರಲು ಸಾಧ್ಯವಾಗುತ್ತದೆ, ಸದ್ವಿಚಾರಗಳು…
ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮಹತ್ವದ ಮಾಹಿತಿ ಎನ್ನುವಂತೆ ಜುಲೈ.1, 2025ರಿಂದ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ ನಲ್ಲಿ ನೀಡಲಾಗುತ್ತಿರುತ್ತದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿರುತ್ತದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಪಾಲಿಕೆಯ ನಗರ ಯೋಜನಾ ವಿಭಾಗದಿಂದ ನಕ್ಷೆ ಮಂಜೂರಾತಿ ನೀಡುತ್ತಿರುವ ಇಒಡಿಬಿ-ಒಬಿಪಿಎಸ್ ಆನ್ ಲೈನ್ ತಂತ್ರಾಂಶವನ್ನು ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ನೀಡುತ್ತಿರುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಣಗೊಳಿಸಲು ಕ್ರಮ ಜರುಗಿಸಲಾಗಿದೆ. ನಿವೇಶನ /ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಕೈಗೊಳ್ಳಲು ದಿನಾಂಕ: 01-07-2025 ರಿಂದ ಸ್ವತ್ತಿನ ಇ-ಖಾತಾ/ಇಪಿಐಡಿ ಸಂಖ್ಯೆಯನ್ನು ಆನ್ಲೈನ್ ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ-ಖಾತಾ ಸಲ್ಲಿಸುವುದು ಅವಶ್ಯವಿರುತ್ತದೆ. ಇದರಿಂದಾಗಿ ಪಾಲಿಕೆಯ ಕಂದಾಯ ವಿಭಾಗಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದ್ದಂತ ಹಣ ಅವ್ಯವಹಾರ ಸಂಬಂಧ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಹಾಗೂ ಪತ್ನಿಗೆ ಸೇರಿದಂತ 13 ಕೋಟಿ ಮೊತ್ತದ ಆಸ್ತಿಪಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಈ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲದಯ ಅಧಿಕಾರಿಗಳು ಪ್ರಾಸಿಕ್ಯೂಷನ್ ದೂರು ಸಲ್ಲಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಡಿ, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಇಡಿ, SDCC ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರ ವಿರುದ್ಧ 06.06.2025 ರಂದು ಗೌರವಾನ್ವಿತ ವಿಶೇಷ ನ್ಯಾಯಾಲಯದಲ್ಲಿ (PMLA) PMLA, 2002 ರ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (Prosecution Complaint-PC) ಸಲ್ಲಿಸಿದೆ ಎಂದಿದೆ. https://TWITTER.com/dir_ed/status/1932047755721269441 https://kannadanewsnow.com/kannada/invitation-to-apply-for-various-schemes-from-nija-sharana-ambigar-choudappa-development-corporation/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/
ಬೆಂಗಳೂರು:ಪ್ರಸಕ್ತ (2025-26) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನೀವಲ್), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ(ಸೇವಾಸಿಂಧೂ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ನಿರುದ್ಯೋಗಿ ಆಗಿರಬೇಕು. ಸ್ವಯಂ ಟ್ಯಾಕ್ಸಿ ಚಾಲನೆ ಉದ್ದೇಶಕ್ಕೆ ವಾಹನವನ್ನು ನೋಂದಾಯಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 04 ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://ambigaradevelopment.karnataka.gov.in ಅಥವಾ ನಿಗಮದ ದೂ.ಸಂ.080-22864099 ನ್ನು ಸಂಪರ್ಕಿಸಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ದೂ.ಸಂ.08272-221656 ನ್ನು…