Author: kannadanewsnow09

ಶಿವಮೊಗ್ಗ: ಗಂಡ ಸತ್ತ ಒಂದೇ ವಾರಕ್ಕೆ ಆತನ ಪತಿಯ ಹಿಂದೆ ಕಾನ್ಸ್ ಟೇಬಲ್ ಬಿದ್ದಿದ್ದಾನೆ. ಫೇಸ್ ಬುಕ್ ಮೂಲಕ ಅದು ಇದು ಅಂತ ಪುಲ್ ಮೆಸೇಜ್ ಮಾಡಿದ್ದಾನೆ. ಇಂತಹ ಪೊಲೀಸ್ ಪೇದೆಯ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಭದ್ರಾವತಿ ನಗರದ ಸಿದ್ದಾಪುರದಲ್ಲಿ ನಡೆದಿದೆ. ಫೆಬ್ರವರಿ.14ರಂದು ಕೆ ಎಸ್ ಐ ಎಸ್ ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಜಗದೀಶ್, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆ ಬಳಿಕ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದಂತ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್ ಎಂಬುವರು ಸ್ವಾತಿಗೆ ಮೆಸೇಜ್ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೊಂಡ ಸ್ವಾತಿ, ಆತನ ಫೇಸ್ ಬುಕ್ ಪ್ರೊಫೈಲ್ ಬ್ಲಾಕ್ ಮಾಡಿದ್ದರು. ಇದಾದ ಬಳಿಕ ಸ್ವಾತಿಗೆ ಮತ್ತೊಂದು ಖಾತೆಯಿಂದ ಪೇದೆ ಮೋಹನ್ ಮೆಸೇಜ್ ಮಾಡುತ್ತಿದರಂತೆ. ಹೀಗಾಗಿಯೇ ಇಂದು ಭದ್ರಾವತಿಯ ಹೊಸ ಸಿದ್ದಾಪುರದ ತಮ್ಮ ಮನೆಯಲ್ಲಿ ಸ್ವಾತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೂ ಮುನ್ನಾ ಸ್ವಾತಿ ತನ್ನ ತಾಯಿಗೆ ವಾಟ್ಸ್…

Read More

ಬೆಂಗಳೂರು: ನಗರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಯಿಂದ 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರಿಂದ ವಿದ್ಯಾರಣ್ಯಪುರದ ಸ್ಮಾಶನದ ಹತ್ತಿರ ಮಾದಕ ವಸ್ತು ಮಾರಾಟ ಮಾಡುತ್ತಿದ್ದಂತ ಆರೋಪಿ ಬಂಡೆ ಸಲ್ಮಾನ್ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 3.80 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಇದಲ್ಲದೇ ಆರೋಪಿ ಬಂಡೆ ಸಲ್ಮಾನ್ ಬಳಿಯಲ್ಲಿದ್ದಂತ 1 ಕಾರು, 1 ಮೊಬೈಲ್ ಕೂಡ ಜಪ್ತಿ ಮಾಡಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/announce-special-allowance-and-status-for-girls-who-marry-farming-boys-mlas-letter-to-cm/ https://kannadanewsnow.com/kannada/delegation-of-ias-officers-in-training-visits-kea-bengaluru-system-praised/

Read More

ಬೆಂಗಳೂರು: ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಎಲ್ ಬಿ ಎಸ್ ಎನ್ ಎ ಎ) ವತಿಯಿಂದ ತರಬೇತಿ ನಿರತ 10 ಐಎಎಸ್ ಅಧಿಕಾರಿಗಳ ತಂಡವು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಭೇಟಿ ನೀಡಿ, ಕಾರ್ಯಾಚರಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯಿತು. ಅಧಿಕಾರಿಗಳನ್ನು ಸ್ವಾಗತಿಸಿದ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ ಬಗ್ಗೆ ಅವರಿಗೆ ಪೂರ್ಣ ಮಾಹಿತಿ ನೀಡಿದರು. ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳಿಗೆ ಅನುಸರಿಸುವ ಕ್ರಮಗಳ ಕುರಿತು ತಂಡದ ಸದಸ್ಯರಿಗೆ ಗದ್ಯಾಳ ಅವರು ಮಾಹಿತಿ ನೀಡಿದರು. ಇದೇ ವೇಳೆ, ಸಿಇಟಿ ಅಳವಡಿಸಿಕೊಂಡಿರುವ ಆಧುನಿಕ ಭದ್ರತಾ ಕ್ರಮಗಳಾದ ಮುಖಚಹರೆ ಪತ್ತೆ ತಂತ್ರಜ್ಞಾನ (ಫೇಷಿಯಲ್ ರೆಕಗ್ನಿಷನ್), ಪರೀಕ್ಷೆ ಮುಗಿದ ತಕ್ಷಣವೇ ಓಎಂಆರ್ ಶೀಟ್ ಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್…

Read More

ಬೆಂಗಳೂರು: ಗ್ರಾಮಗಳಲ್ಲ ವಾಸವಿದ್ದು, ವ್ಯವಸಾಯ ಮಾಡುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕುಣಿಗಲ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಹೆಚ್.ಡಿ ರಂಗನಾಥ್ ಅವರು, ನನ್ನ ಮತಕ್ಷೇತ್ರ ಕುಣಿಗಲ್‌ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿರುತ್ತದೆ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದು, ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟದರೂ ಮದುವೆ ಆಗದೆ, ತೊಂದರೆಯಲ್ಲಿರುತ್ತಾರೆ ಎಂಬುದಾಗಿ ಅಲವತ್ತುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ತಾವುಗಳು ಹಳ್ಳಗಳಲ್ಲಿ ವಾಸವಿದ್ದು, ವ್ಯವಸಾಯ ಮಾಡಿಕೊಂಡಿರುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಅವರಿಗೆ ವಿಶೇಷ ಸ್ಥಾನಮಾನವನ್ನು ಘೋಷಿಸಬೇಕಾಗಿ ಕೋರಿದ್ದಾರೆ. ಆ ಮೂಲಕ ವ್ಯವಸಾಯ…

Read More

ಶಿವಮೊಗ್ಗ : ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದಲ್ಲಿ ತೀರ್ಥಹಳ್ಳಿ ಠಾಣೆಯ ಕಾನ್ಸ್ ಟೇಬಲ್ ಮೋಹನ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಸೂಸೈಡ್ ಮಾಡಿಕೊಂಡಿದ್ದಾರೆ. ಸಿದ್ಧಾಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಸ್ವಾತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೀರ್ಥಹಳ್ಳಿ ಠಾಣೆ ಕಾನ್ಸ್ ಟೇಬಲ್ ಮೋಹನ್ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. 1 ವಾರದ ಹಿಂದೆ ಸ್ವಾತಿ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ಜಗದೀಶ್ ಶಿವಮೊಗ್ಗ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಫೇಸ್ ಬುಕ್ ನಲ್ಲಿ ಸ್ವಾತಿಗೆ ತೀರ್ಥಹಳ್ಳಿ ಠಾಣೆಯ ಕಾನ್ಸ್ ಸ್ಟೇಬಲ್ ಮೋಹನ್ ಮೆಸೇಜ್ ಮಾಡುತ್ತಿದ್ದರಂತೆ. ಈ ಕಾರಣಕ್ಕಾಗಿಯೇ ಕಾನ್ಸ್ ಟೇಬಲ್ ಮೋಹನ್ ಅಕೌಂಟ್ ಅನ್ನು ಸ್ವಾತಿ ಬ್ಲಾಕ್ ಮಾಡಿದ್ದರಂತೆ. ಇದರಿಂದ ಕೋಪಗೊಂಡು ಮೋಹನ್ ಬೇರೆ ಅಕೌಂಟ್ ನಿಂದ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ರಂತೆ. ಇದಷ್ಟೇ ಅಲ್ಲದೇ ಸ್ವಾತಿ ಬಗ್ಗೆ ಅಪಪ್ರಚಾರ ಕೂಡ ಆರೋಪಿ ಮೋಹನ್ ಮಾಡುತ್ತಿದ್ದರಂತೆ.…

Read More

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು. ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ರಲ್ಲಿ ಫೆ.28 ರೊಳಗಾಗಿ ಸಲ್ಲಿಸುವುದು. ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ,…

Read More

ಮೈಸೂರು: ನಕಲಿ ದಾಖಲಿ ಸೃಷ್ಠಿ ಆರೋಪದ ಮೇಲೆ ಮುಡಾ ಹಗರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೀಗೆ ಬಂಧನಕ್ಕೆ ಒಳಗಾಗಿರುವಂತ ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ ಅದಕ್ಕೆ ಸರ್ಕಾರವೇ ನೇರಹೊಣೆ ಎಂಬುದಾಗಿ ಅವರ ಪುತ್ರ ಎಚ್ಚರಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ನಮ್ಮ ತಂದೆ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೆ ಸರ್ಕಾರವೇ ನೇರಹೊಣೆ ಎಂಬುದಾಗಿ ಸ್ನೇಹಮಯಿ ಕೃಷ್ಣ ಅವರ ಹಿರಿಯ ಪುತ್ರ ವಿವೇಕ್ ಹೇಳಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಇಂದು ಕೇಸ್ ಇತ್ತು, ಬಂದಿದ್ದೆವು. ಕೋರ್ಟ್ ಆವರಣದಲ್ಲೇ ಸಿಸಿಬಿ ಎಂದು ಹೇಳಿ ಕರೆದೊಯ್ದಿದ್ದಾರೆ. ಮೈಸೂರಿನ ಮನೆಯಲ್ಲಿ ಪೊಲೀಸರಿಂದ ಪರಿಶೀಲನೆ ನಡೆದಿದೆ. ಸರ್ಚ್ ವಾರೆಂಟ್ ಪಡೆದು 10 ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿಬಿ ಕಚೇರಿಯಲ್ಲಿ ತಂದೆ ಬಗ್ಗೆ ವಿಚಾರಿಸಿದರೇ ಗೊತ್ತಿಲ್ಲ ಅಂತಾರೆ. ಸಿಸಿಬಿ ಕಚೇರಿ ಅಧಿಕಾರಿಗಳು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದರು. ಡಿ.ಬಿ…

Read More

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿಂದು ಮೈಸೂರು, ಕೊಡಗು ಮತ್ತು ಚಾಮರಾಜನಗರ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಹುತೇಕ ನಾಳೆ (ಶನಿವಾರ)ಯಿಂದ ಸಫಾರಿ ಆರಂಭಿಸಲು ಅಧಿಕೃತ ಆದೇಶ ಹೊರಡಿಸಲಾಗುವುದು. ಈ ಆದೇಶದಲ್ಲಿರುವ ಷರತ್ತುಗಳ ಉಲ್ಲಂಘನೆ ಆದರೆ, ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದರು. ನ.7ಕ್ಕೆ ಮೊದಲು ಬಳಕೆಯಾಗುತ್ತಿದ್ದ ಸಫಾರಿ ವಾಹನಗಳ ಶೇ.50ರಷ್ಟು ವಾಹನ ಮತ್ತು ಸಿಬ್ಬಂದಿಯನ್ನು ಮಾತ್ರವೇ ಬಳಕೆ ಮಾಡಬೇಕು. ಹೆಚ್ಚಾಗಿ ಬಸ್ ಗಳ ಮೂಲಕ ಸಫಾರಿ ನಡೆಸಬೇಕು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಕ್ಯಾಂಪರ್ ಮತ್ತು ಜೀಪ್ ಬಳಕೆ ಮಾಡಬೇಕು ಈ ಬಗ್ಗೆ ಸ್ಪಷ್ಟ ಆದೇಶ ಹೊರಡಿಸಲಾಗುವುದು ಎಂದರು. ವನ್ಯಜೀವಿಗಳು ಕಾಡಿನಿಂದ ಹೊರಬರದಂತೆ ಕ್ರಮಕ್ಕೆ ಸೂಚನೆ: ಬಂಡಿಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶದಲ್ಲಿ…

Read More

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಬಗ್ಗೆ ನಕಲಿ ದಾಖಲೆ, ಧ್ವನಿ ಕ್ಲಿಪ್ ಅಪ್ ಲೋಡ್ ಮಾಡಿ ಅಪಪ್ರಚಾರ ಮಾಡಿದ್ದರ ಹಿನ್ನಲೆಯಲ್ಲಿ ಮುಡಾ ಪ್ರಕರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸಿಸಿಬಿಯಿಂದ ಮಾಹಿತಿ ಹಂಚಿಕೊಂಡಿದ್ದು, ದೂರದಾರರಾದ ಡಿ.ಬಿ ನಟೇಶ್ ಕೆಎಎಸ್ ಹಿರಿಯ ಅಧಿಕಾರಿ ಹಾಗೂ ಈ ಹಿಂದೆ MUDA ಆಯುಕ್ತರು ನೀಡಿದ ದೂರಿನ ಮೇರೆಗೆ, ಮೈಸೂರು ನಿವಾಸಿ ಸ್ನೇಹಮಯಿ ಕೃಷ್ಣ ಎಂಬವರು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ದೂರದಾರರ ಫೋಟೋ ಹಾಗೂ ನಕಲಿ ದಾಖಲೆಗಳನ್ನು ಹಾಗೂ ಧ್ವನಿ ಕ್ಲಿಪ್ ಅನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿ ದೂರದಾರರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿರುವ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಿನಾಂಕ:18.02.2026 ರಂದು ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದೆ ಎಂದಿದೆ. ತನಿಖೆ ವೇಳೆ ತನಿಖಾಧಿಕಾರಿಗಳು ದೂರದಾರರಿಂದ ಹಾಗೂ ಸಾಮಾಜಿಕ ಜಾಲತಾಣದಿಂದ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದ…

Read More

ನವದೆಹಲಿ: ನೀವು ಫೇಸ್‌ಬುಕ್ ಮೆಸೆಂಜರ್ ಸೇವೆಯ ವೆಬ್ ಆವೃತ್ತಿಯನ್ನು ಪದೇ ಪದೇ ಬಳಸುತ್ತಿದ್ದರೆ, ನಿಮಗೆ ಬೇಸರದ ಸುದ್ದಿ ಇದೆ. ಫೇಸ್‌ಬುಕ್‌ನ ಮೂಲ ಸಂಸ್ಥೆಯಾದ ಮೆಟಾ ಪ್ಲಾಟ್‌ಫಾರ್ಮ್ಸ್, ಏಪ್ರಿಲ್ 2026 ರಿಂದ ಸ್ವತಂತ್ರ ಮೆಸೆಂಜರ್ ವೆಬ್‌ಸೈಟ್ (messenger.com) ಅನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಸೈಟ್ ಅನ್ನು ಪ್ರವೇಶಿಸಲು ಪ್ರಯತ್ನಿಸುವ ಬಳಕೆದಾರರನ್ನು ವೆಬ್ ಆಧಾರಿತ ಚಾಟ್‌ಗಾಗಿ facebook.com/messages ನಲ್ಲಿ ಫೇಸ್‌ಬುಕ್‌ನ ಸಂದೇಶ ಇಂಟರ್ಫೇಸ್‌ಗೆ ಸ್ವಯಂಚಾಲಿತವಾಗಿ ಮರುನಿರ್ದೇಶಿಸಲಾಗುತ್ತದೆ. ಈ ಬದಲಾವಣೆಯು ತನ್ನ ಸಂದೇಶ ಸೇವೆಗಳನ್ನು ಸುಗಮಗೊಳಿಸಲು ಮತ್ತು ವೇದಿಕೆಗಳನ್ನು ಕ್ರೋಢೀಕರಿಸಲು ಕಂಪನಿಯ ನಿರಂತರ ಪ್ರಯತ್ನಗಳ ಭಾಗವಾಗಿದೆ ಎಂದು ಮೆಟಾ ತಿಳಿಸಿದೆ. ಆದಾಗ್ಯೂ, ಮೊಬೈಲ್‌ನಲ್ಲಿ ಇನ್ನೂ ಫೇಸ್‌ಬುಕ್ ಮೆಸೆಂಜರ್ ಬಳಸುತ್ತಿರುವ ಎಲ್ಲರಿಗೂ, ಒಳ್ಳೆಯ ಸುದ್ದಿ ಇದೆ. iOS ಮತ್ತು Android ಗಾಗಿ ಮೆಸೆಂಜರ್ ಮೊಬೈಲ್ ಅಪ್ಲಿಕೇಶನ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ಪರಿಣಾಮ ಬೀರುವುದಿಲ್ಲ, ಬಳಕೆದಾರರು ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳಲ್ಲಿ ಎಂದಿನಂತೆ ಸಂಭಾಷಣೆಗಳನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಸುರಕ್ಷಿತ ಬ್ಯಾಕಪ್ ಪಿನ್‌ಗಳನ್ನು ಬಳಸಿಕೊಂಡು ಸಂಭಾಷಣೆಗಳನ್ನು ಮರುಸ್ಥಾಪಿಸುವ ಆಯ್ಕೆಗಳೊಂದಿಗೆ ಚಾಟ್…

Read More