Author: kannadanewsnow09

ಶಿವಮೊಗ್ಗ: ಸಾಗರ ಇತಿಹಾಸ ಪ್ರಸಿದ್ದವಾದ ಕೆಳದಿ ಮಠದಲ್ಲಿ ಅ. 2ರಂದು ಇತಿಹಾಸ ಪ್ರಸಿದ್ದ ಪಚ್ಚೆಲಿಂಗು ದರ್ಶನ ಏರ್ಪಡಿಸಿದ್ದು, ಪ್ರಾತಃಕಾಲದಲ್ಲಿ ಪಚ್ಚೆಲಿಂಗಕ್ಕೆ ಅಭಿಷೇಕಾದಿ ವಿಶೇಷ ಪೂಜೆ ನಂತರ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಕೆಳದಿ ರಾಜಗುರು ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಂದಗದ್ದೆ-ಕೆಳದಿ ರಾಜಗುರು ಹಿರೇಮಠದಲ್ಲಿ ಶುಕ್ರವಾರ ವಿಜಯದಶಮಿ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, 2019ರಿಂದ ಶ್ರೀಮಠದಲ್ಲಿ ಪಚ್ಚೆಲಿಂಗು ದರ್ಶನಕ್ಕೆ ಅವಕಾಶ ಕಲ್ಪಿಸುತ್ತಾ ಬರಲಾಗುತ್ತಿದೆ. ಈ ವರ್ಷ ಅ. 2ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ದರ್ಶನ ಇರುತ್ತದೆ. ಪಚ್ಚೆಲಿಂಗು ದರ್ಶನದಿಂದ ಭಕ್ತರ ಅಭಿಷ್ಟೆಗಳು ಈಡೇರುತ್ತದೆ. ಕೆಳದಿ ಅರಸರು ಶ್ರೀಮಠಕ್ಕೆ ಪಚ್ಚೆಲಿಂಗು ಉಡುಗೊರೆಯಾಗಿ ನೀಡಿ ಪ್ರತಿವರ್ಷ ವಿಜಯ ದಶಮಿಯಂದು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡುವಂತೆ ಸಂಕಲ್ಪಿಸಿದ್ದರ ಮೇರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು. ನವರಾತ್ರಿ ಅಂಗವಾಗಿ ಶ್ರೀಮಠದಲ್ಲಿ ಪ್ರತಿದಿನ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಅ. 1ರಂದು ಡಾ. ಗುರುಸಿದ್ದದೇವ…

Read More

ಶಿವಮೊಗ್ಗ : ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ. ಅವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದಾಗ ಗುರುತಿಸಿ ಗೌರವಿಸುವುದರಿಂದ ಇನ್ನೊಬ್ಬರಿಗೆ ಉತ್ತೇಜನ ಸಿಕ್ಕಂತೆ ಆಗುತ್ತದೆ ಇಂತಹ ಪ್ರಯತ್ನಗಳು ಹೆಚ್ಚಾಗಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಭಾಭವನದಲ್ಲಿ ಶನಿವಾರ ಪ್ರಾಂತ್ಯ ಆರ್ಯ ಈಡಿಗರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಅಂತಿಮ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಅವರು ಮಾತನಾಡುತ್ತಿದ ಅವರು, ಪ್ರತಿಭೆ ಯಾರ ಸ್ವತ್ತು ಅಲ್ಲ. ಒಂದು ಕಾಲದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿದ್ದ ನಮ್ಮ ಸಮಾಜದ ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಉತ್ತಮ ನೌಕರಿ ಮಾಡುತ್ತಿದ್ದಾರೆ. ಪ್ರತಿಭೆ ಇದ್ದವರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಸರ್ವರೂ ಸಮುದಾಯದ ಆಭಿವೃದ್ದಿಗೆ ತಮ್ಮ ಸಹಕಾರ ನೀಡಬೇಕು ಎಂದು ತಿಳಿಸಿದರು. ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ ಮಾತನಾಡಿ, ಪೋಷಕರು ಮಕ್ಕಳ ಶೈಕ್ಷಣಿಕ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ…

Read More

ಶಿವಮೊಗ್ಗ : ಸೆಪ್ಟೆಂಬರ್.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಧ್ಯಾಹ್ನ 12ಕ್ಕೆ ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ ಎಂದು ಸಾಗರದ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರ್ಷ ಹೆಸರಾಂತ ಅರ್ಥಧಾರಿ ಎಂ.ಆರ್.ಲಕ್ಷ್ಮೀನಾರಾಯಣ ಅಮಚಿ ಮತ್ತು ಗಣಪತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ಮೇಸ್ತಿç ಅವರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಲಾಗುತಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು. ಶೃಂಗೇರಿ ಶಂಕರಮಠ ಕರ‍್ಯಾರಂಭ ಮಾಡಿ 25 ವರ್ಷ ಪೂರೈಸಿದ್ದು ಈತನಕ 50ಕ್ಕೂ ಹೆಚ್ಚು ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಿಕೊಂಡು ಬರಲಾಗುತ್ತಿದೆ. ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಶೃಂಗೇರಿ ಶಂಕರಮಠದ ಮಾರ್ಗದರ್ಶನದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ನವರಾತ್ರಿ ಅಂಗವಾಗಿ ಶ್ರೀಮಠದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮ, ಹೋಮಗಳು ನಡೆಯುತ್ತಿದ್ದು, ಪ್ರತಿದಿನ…

Read More

ಶಿವಮೊಗ್ಗ : ಕೆಎಂಎಫ್ ನಂದಿನಿ ಹಾಲು ಮಾರಾಟಗಾರರಿಗೆ ಸ್ಪಂದಿಸುತ್ತಿಲ್ಲ. ಹಲವು ವರ್ಷಗಳಿಂದ ಕೆ.ಎಂ.ಎಫ್. ಮೂಲಕ ಶಿಮೂಲ್ ಅಭಿವೃದ್ದಿಗೆ ಶ್ರಮಿಸುತ್ತಿರುವ ಹಾಲು ಮಾರಾಟಗಾರರನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ತಾಲ್ಲೂಕು ಹಾಲು ಮಾರಾಟಗಾರರ ಸಂಘದ ಅಧ್ಯಕ್ಷ ನಾಗರಾಜ್ ದೂರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ಮೂರು ದಶಕಗಳಿಂದ ನಂದಿನಿ ಉತ್ಪನ್ನಗಳನ್ನು ಕಮೀಷನ್ ಆಧಾರದಲ್ಲಿ ಮಾರಾಟ ಮಾಡುವ ಏಜೆಂಟರ ಬಗ್ಗೆ ತೀವೃ ನಿರ್ಲಕ್ಷ್ಯ ವಹಿಸಲಾಗಿದೆ ಎಂದರು. ಹಿಂದೆ ಏಜೆಂಟರಿಂದ ಹಾಲಿನ ಹಣವನ್ನು ತೆಗೆದುಕೊಂಡು ಹೋಗಲಾಗುತಿತ್ತು. ಕೆಲವು ವರ್ಷಗಳ ಹಿಂದೆ ಅದನ್ನು ಎಚ್.ಡಿ.ಎಫ್.ಸಿ. ಬ್ಯಾಂಕ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿ ಮಾಡಲು ತಿಳಿಸಲಾಗಿತ್ತು. ಆದರೆ ಆನ್‌ಲೈನ್‌ನಲ್ಲಿ ಪಾವತಿ ಮಾಡುವ ಏಜೆಂಟರ ಲಕ್ಷಾಂತರ ರೂಪಾಯಿ ಹಣ ಕಡಿತವಾಗುತ್ತಿದೆ. ಒಂದೆರಡು ರೂಪಾಯಿ ಕಮೀಷನ್‌ಗಾಗಿ ಕೆಲಸ ಮಾಡುವ ನಮಗೆ ಬ್ಯಾಂಕ್‌ನಿಂದ ಆನ್‌ಲೈನ್ ವಂಚನೆಯಾಗುತ್ತಿದೆ. ಈ ಬಗ್ಗೆ ಶಿಮುಲ್ ಅಧ್ಯಕ್ಷರು, ನಿರ್ದೇಶಕರಿಗೆ ತಿಳಿಸಿದರೆ ಸ್ಪಂದಿಸದೇ ಅವರಿವರ ಮೇಲೆ ಆರೋಪ ಹೊರಿಸಿ…

Read More

ತಮಿಳುನಾಡು:ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ಬೃಹತ್ ರಾಜಕೀಯ ರ್ಯಾಲಿ ನಡೆಯಿತು. ಆದಾಗ್ಯೂ, 33 ಜನರು ಸಾವನ್ನಪ್ಪಿದಾಗ ಮತ್ತು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಪ್ರಜ್ಞಾಹೀನರಾದಾಗಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು, ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1971968033771127290

Read More

ತಮಿಳುನಾಡ: ಇಲ್ಲಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ಬೃಹತ್ ರಾಜಕೀಯ ರ್ಯಾಲಿ ನಡೆಯಿತು. ಆದಾಗ್ಯೂ, 33 ಜನರು ಸಾವನ್ನಪ್ಪಿದಾಗ ಮತ್ತು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಪ್ರಜ್ಞಾಹೀನರಾದಾಗ, ರ್ಯಾಲಿ ಹಠಾತ್ತನೆ ಅಂತ್ಯಗೊಂಡಾಗ ಘಟನೆ ದುರಂತ ತಿರುವು ಪಡೆದುಕೊಂಡಿತು. ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾದ ದೃಶ್ಯಗಳು ರಾಜಕೀಯ ರ್ಯಾಲಿಗಾಗಿ ರಾತ್ರಿಯಲ್ಲಿ ಭಾರಿ ಜನಸಮೂಹ ಜಮಾಯಿಸಿರುವುದನ್ನು ತೋರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿ ಸಾವಿರಾರು ಜನರು ಕಿಕ್ಕಿರಿದು ತುಂಬಿ, ಹರ್ಷೋದ್ಗಾರ ಮಾಡುತ್ತಾ ಮತ್ತು ಕೈ ಬೀಸುತ್ತಾ ಇದ್ದರು, ಆದರೆ ಒಂದು ದೊಡ್ಡ ಪ್ರಚಾರ ವಾಹನವು ಕೇಂದ್ರದ ಮೂಲಕ ಸಾಗಿತು. ವಿಜಯ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗಲೂ ಜನಸಮೂಹವು ಉಬ್ಬಿಕೊಂಡು ನಿಯಂತ್ರಿಸಲಾಗದೆ ಜನರು ಮೂರ್ಛೆ ಹೋದರು. ಮೂರ್ಛೆ ಹೋದ ಜನರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಅವರಲ್ಲಿ ಕೆಲವರು ತಮ್ಮ ಜೀವಕ್ಕಾಗಿ ಹೋರಾಡುತ್ತಿದ್ದಾರೆ ಎಂದು ವರದಿಯಾಗಿದೆ. ನಾಳೆ ಕರೂರಿಗೆ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ ತಮಿಳುನಾಡು ಮುಖ್ಯಮಂತ್ರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು,  ಕರೂರಿನಿಂದ ಬರುತ್ತಿರುವ…

Read More

ಬೆಂಗಳೂರು: ಸಾರಿಗೆ ಬಸ್ಸುಗಳಿಗೆ ಆಯುಧ ಪೂಜೆಗೆ ಈ ಹಿಂದೆಯಿಂದ ನೀಡಲಾಗುತ್ತಿದ್ದ ರೂ.100 ಅನ್ನು 2024 ರಿಂದಲೇ ರೂ.250 ಕ್ಕೆ ಹೆಚ್ಚಿಸಲಾಗಿದೆ. ಆದರೆ ಈ‌ ಬಗ್ಗೆ ಕೆಲವೊಂದು ಮಾಧ್ಯಮಗಳಲ್ಲಿ ಆಯುಧಪೂಜೆಗೆ ಪ್ರತಿ ಬಸ್ಸಿಗೆ ರೂ.150 ಎಂದು ತಪ್ಪಾಗಿ‌ ವರದಿಯಾಗಿದೆ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಆಯುಧಪೂಜೆಗೆ 2008 ರವರೆಗೂ ಪ್ರತಿ‌ ಬಸ್ಸಿಗೆ ರೂ.10 ನೀಡಲಾಗುತ್ತಿತ್ತು,‌ ಇದನ್ನು 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಯಿತು. 2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ ಮಾಡಲಾಯಿತು ತದನಂತರ 2017 ರಲ್ಲಿ ಪ್ರತಿ‌ ಬಸ್ಸಿಗೆ ರೂ.100 ಕ್ಕೆ ಏರಿಕೆ ‌ಮಾಡಲಾಗಿತ್ತು ಎಂದು ನಿಗಮ ತಿಳಿಸಿದೆ. ಮುಂದುವರೆದು, 2023 ರವರೆಗೂ ಪ್ರತಿ‌ ಬಸ್ಸಿಗೆ ನೀಡುತ್ತಿದ್ದ ರೂ100 ಅನ್ನು 2024 ರಿಂದ ರೂ.250 ಕ್ಕೆ ಹೆಚ್ಚಿಸಲಾಗಿದೆ. ಘಟಕಗಳಲ್ಲಿನ ಬಸ್ಸುಗಳನ್ನು ಒಟ್ಟಾರೆಯಾಗಿ ಪರಿಗಣಿಸಿ ಪ್ರತಿಯೊಂದು…

Read More

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ನಡೆದ ಬೃಹತ್ ರಾಜಕೀಯ ರ್ಯಾಲಿಯಲ್ಲಿ ಹತ್ತಾರು ಸಾವಿರ ಜನರು ಭಾಗವಹಿಸಿದ್ದ ದುರಂತ ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದರು. ಈ ರ್ಯಾಲಿಯಲ್ಲಿ ಅಪಾರ ಜನಸಂದಣಿ ಕಂಡುಬಂದಿದ್ದು, ಹಲವಾರು ಜನರು ಮೂರ್ಛೆ ಹೋದರು ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿತ್ತು. ಕಿಕ್ಕಿರಿದ ರ್ಯಾಲಿಯಲ್ಲಿ ಮಕ್ಕಳು ಸೇರಿದಂತೆ 20 ಕ್ಕೂ ಹೆಚ್ಚು ಜನರು ಮೂರ್ಛೆ ಹೋದಾಗ, ನಟ-ರಾಜಕಾರಣಿ ತಮ್ಮ ಭಾಷಣವನ್ನು ಹಠಾತ್ತನೆ ಮುಗಿಸಿದರು. ಕರೂರಿನಲ್ಲಿ ನಡೆದ ಅವರ ರ್ಯಾಲಿಯಲ್ಲಿ ಜನರು ಪ್ರಜ್ಞೆ ತಪ್ಪಿದಾಗ “ಪೊಲೀಸರೇ, ದಯವಿಟ್ಟು ಸಹಾಯ ಮಾಡಿ” ಎಂದು ಅವರು ಹೇಳಿದ್ದು ಕೇಳಿಬಂತು. ಅವರು ಜನರಿಗೆ ನೀರು ವಿತರಿಸಿದರು ಮತ್ತು ರ್ಯಾಲಿಯಲ್ಲಿ ಉಸಿರುಗಟ್ಟಿದ ಜನರಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದರು. https://twitter.com/PTI_News/status/1971950922164326589 ವಿಜಯ್ ಭಾಷಣ ಮಾಡುತ್ತಿದ್ದಾಗ ಜನಸಂದಣಿ ನಿಯಂತ್ರಿಸಲಾಗದೆ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ರ್ಯಾಲಿಯಲ್ಲಿ ಪ್ರಜ್ಞಾಹೀನರಾದವರಲ್ಲಿ ಕೆಲವು ಮಕ್ಕಳೂ ಸೇರಿದ್ದಾರೆ. ಹಲವಾರು ಕಾರ್ಮಿಕರು ಪರಿಸ್ಥಿತಿಯನ್ನು ಗಮನಿಸಿ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಯಾವಾಗಲೂ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿಕೊಳ್ಳುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವೇ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಯುವ ನಿಧಿ ಯೋಜನೆ ಹಾಗೂ ನೇಮಕಾತಿಯ ಮೂಲಕ ಯುವಕರ ಮಧ್ಯದಲ್ಲಿ ದೊಡ್ಡ ಭರವಸೆಯನ್ನು ಮೂಡಿಸಿತ್ತು. ತಮ್ಮ ಚುನಾವಣಾ ಪ್ರಣಾಳಿಕೆಯ ಪುಟ ಸಂಖ್ಯೆ 47 ರಲ್ಲಿ ಯುವಕರಿಗೆ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿಯನ್ನು ಕೇವಲ 1 ವರ್ಷದಲ್ಲಿ ಮಾಡುತ್ತೇವೆ ಎಂದು ತಿಳಿಸಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷಗಳಾಗಿದೆ ಸಿಎಂ ಮತ್ತು ಡಿಸಿಎಂ ಅವರೇ ಎಂದು ಕೇಳಿದರು. 2.5 ಲಕ್ಷ ಹುದ್ದೆಗಳನ್ನು 1 ವರ್ಷದಲ್ಲಿ ತುಂಬುತ್ತೇವೆ ಎಂದು ಹೇಳಿದ್ದು, ನೀವು ಅದನ್ನು ಏಕೆ…

Read More

ಬೆಂಗಳೂರು: ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷವು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ವಿರುದ್ಧ ಹರಿಹಾಯ್ದಿದೆ. ಉತ್ತರ ಕರ್ನಾಟಕ ಭಾಗದ ಉಸ್ತುವಾರಿ ಸಚಿವರೇ ಎಲ್ಲಿದ್ದೀರಿ? ಎಲ್ಲಿ ಮಾಯಾವಾಗಿದ್ದೀರಿ? ಭೀಮಾ ನದಿಯ ಪ್ರವಾಹಕ್ಕೆ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್‌, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಹಲವು ಜಿಲ್ಲೆಯಲ್ಲಿ ಸಾವು ನೋವುಗಳಾಗಿವೆ. ನೆರೆಯಿಂದ ಗ್ರಾಮಗಳಿಗೆ ಗ್ರಾಮಗಳೇ ಮುಳುಗಡೆ ಆಗಿವೆ. ರಸ್ತೆ, ಸೇತುವೆಗಳು ಮುಳುಗಿವೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ ಎಂದು ಜೆಡಿಎಸ್ ಕಳವಳ ವ್ಯಕ್ತಪಡಿಸಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಉಸ್ತುವಾರಿ ಮಂತ್ರಿಗಳ ಪತ್ತೆಯೇ…

Read More