Author: kannadanewsnow09

ಬೆಂಗಳೂರು: ಪಕ್ಷದ ನಿಯಮ ಉಲ್ಲಂಘಿಸಿ ಸಚಿವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿತನದ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದು, ಇಂಥ ಚರ್ಚೆಗೆ ತಡೆ ಹಾಕುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಸಕರಾದಂತ ಮಂಜುನಾಥ್ ಬಂಡಾರಿ ಹಾಗೂ ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿರುವಂತ ಅವರು, ಕಾಂಗ್ರೆಸ್‌ ಪಕ್ಷವು ರಾಜ್ಯದ ಕಳೆದ 34 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳನ್ನು ಗಳಿಸಿ, 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಬರೆದಿತ್ತು. ಶೇ. 42.88 ರಷ್ಟು ಮತ ಗಳಿಸಿ, 135 ಸ್ಥಾನಗಳನ್ನು ಗಳಿಸಿ, ಸರ್ಕಾರ ರಚಿಸಿದೆ. 1989 ರ ನಂತರ ಕರ್ನಾಟಕದಲ್ಲಿ ಯಾವುದೇ ಪಕ್ಷಕ್ಕೆ ಲಭಿಸದ ಅತಿ ದೊಡ್ಡ ಗೆಲುವು ಕಾಂಗ್ರೆಸ್‌ಗೆ ಲಭಿಸಿತ್ತು. ಮಾತ್ರವಲ್ಲ, ಸರ್ಕಾರ ಚುಕ್ಕಾಣಿ ಹಿಡಿದ ಆರೇ ತಿಂಗಳಲ್ಲಿ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡುವ ಮೂಲಕ ದೇಶದಲ್ಲೇ ವಿಶಿಷ್ಟ ಹಾಗೂ ಗಮನ ಸೆಳೆಯುವ ಸಾಧನೆ ಮಾಡಿದೆ ಎಂದಿದ್ದಾರೆ. ಕಾಂಗ್ರೆಸ್‌ ಸರ್ಕಾರ ಜಾರಿಗೆ…

Read More

ನವದೆಹಲಿ: ನಿನ್ನೆಯಷ್ಟೇ ಭಾರತದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿರುವುದಾಗಿ ತಿಳಿದು ಬಂದಿತ್ತು. ಇಂದು ಭಾರತದಲ್ಲಿ ಮೊದಲ ಎಂಪೋಕ್ಸ್ ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಖಚಿತ ಪಡಿಸಿದೆ. ಎಂಪೋಕ್ಸ್ (ಮಂಕಿಪಾಕ್ಸ್) ಪ್ರಸರಣ ಹೊಂದಿರುವ ದೇಶದಿಂದ ಇತ್ತೀಚೆಗೆ ಹಿಂದಿರುಗಿದ ಯುವ ಪುರುಷ ರೋಗಿಯನ್ನು ವೈರಸ್ನ ಶಂಕಿತ ಪ್ರಕರಣವೆಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿತ್ತು. ರೋಗಿಯನ್ನು ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿತ್ತು. ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ರೋಗಿಯು ಎಂಪಾಕ್ಸ್ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಪರಿಶೀಲಿಸಲು ಪರೀಕ್ಷೆಗೆ ಒಳಗಾಗುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಈ ಬೆಳವಣಿಗೆಯು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ನಡೆಸಿದ ಹಿಂದಿನ ಅಪಾಯದ ಮೌಲ್ಯಮಾಪನಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಇಂದು ಪರೀಕ್ಷೆಗೆ ಕಳುಹಿಸಲಾಗಿದ್ದಂತ ವರದಿ ಬಂದಿದ್ದು, ಅದರಲ್ಲಿ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ…

Read More

ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ ಪ್ರವಾಸೋದ್ಯಮದ ಅವಶ್ಯಕತೆಗಳಿಗೆ ಪೂರಕವಾದ ನೀತಿಗಳನ್ನು ಸರ್ಕಾರಗಳು ರೂಪಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದಿಲ್ಲಿ ಬಲವಾಗಿ ಪ್ರತಿಪಾದಿಸಿದರು. ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ದಕ್ಷಿಣದ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಸಚಿವರುಗಳ ಸಮ್ಮೇಳನದಲ್ಲಿ ಅವರು ಕರ್ನಾಟಕದ ನಿಲುವನ್ನು ಪ್ರತಿಪಾದಿಸಿದರು. ಕರ್ನಾಟಕ ಪ್ರವಾಸೋದ್ಯಮ ಅತ್ಯಂತ ಉಚ್ಚಾಯ ಸ್ಥಿತಿಯಲ್ಲಿದ್ದು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಈ ಪ್ರಯತ್ನಿಗಳಿಗೆ ಬೆಂಬಲಿಸಬೇಕಾದ ಕೇಂದ್ರ ಸರ್ಕಾರವು ಮೈಸೂರಿನ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ಪ್ರಸಾದ್‌ ಯೋಜನೆಯಡಿ ಬಿಡುಗಡೆಯಾಗಬೇಕಾದ 45.17 ಕೋಟಿ ರೂಪಾಯಿಗಳ ಮೊದಲ ಕಂತು ಇನ್ನು…

Read More

ಬೆಂಗಳೂರು: ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ದಿನಾಂಕ: 10-09-2024ರ ನಾಳೆಯಿಂದ ಸ್ವಚ್ಚತಾ ಕಾರ್ಯ ಕೈಗೊಂಡಿರುವ ಹಿನ್ನಲೆ ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ಹೇರಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ನೀಡಲಾಗಿದ್ದು, ಯಡಿಯೂರು ಕೆರೆಯ ವಿಸರ್ಜನಾ ಕೊಳ(ಕಲ್ಯಾಣಿ)ಯಲ್ಲಿ ದಿನಾಂಕ: 10-09-2024 ರಂದು ಸ್ವಚ್ಚತಾ ಕಾರ್ಯ ಕೈಗೊಂಡಿರುವ ಹಿನ್ನಲೆ ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ಇರುತ್ತದೆ ಎಂದು ತಿಳಿಸಿದೆ. ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 188 ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆಯೊಂದಿಗೆ ವಾರ್ಡ್ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುತ್ತದೆ ಎಂದು ಹೇಳಿದೆ. ಗಣೇಶ ಚತುರ್ಥಿ ದಿನಾವಾದ ದಿನಾಂಕ: 07-09-2024 ರಿಂದ 17-09-2024 ರವರೆಗೆ ಸಾರ್ವಜನಿಕರು ಗಣೇಶ ವಿಸರ್ಜನೆಯನ್ನು ಕೆರೆಯ ವಿಸರ್ಜನಾ ಕೊಳದಲ್ಲ್ಲಿ ಮಾಡಲಾಗುತ್ತಿದ್ದು, ಕಲ್ಯಾಣಿಯ ವಿಸರ್ಜನಾ ಕೊಳದ ಬಹುಪಾಲು ಭಾಗವು ತುಂಬಿದ್ದು, ನಂತರದ ಗಣೇಶ ಮೂರ್ತಿ ವಿಸರ್ಜನೆಗೆ ಸ್ಥಳಾವಕಾಶ ಇಲ್ಲದಿರುವುದಿಲ್ಲ. ಈ ಪೈಕಿ ವಿಸರ್ಜನಾ ಕೊಳದಲ್ಲಿ ತುಂಬಿರುವ ಮಣ್ಣು ಮತ್ತು ಇತರೆ ಗಣೇಶ ಮೂರ್ತಿಗಳ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಹೊಸದಾಗಿ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆ ಮಾಡಲಾಗಿದೆ. ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (ಎಸ್ಎಸ್ ಪಿಏನ್) ನಿಲ್ದಾಣಗಳ ನಡುವೆ ವಾರಕ್ಕೊಮ್ಮೆ ಸಂಚರಿಸುತ್ತಿದ್ದ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 22831/22832)  ರೈಲುಗಳ ಸೇವೆಯನ್ನು ಯಶವಂತಪುರದವರೆಗೆ ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗ  (ಸಂಖ್ಯೆ 22831/22832) ಹೌರಾ-ಯಶವಂತಪುರ ನಿಲ್ದಾಣಗಳ ನಡುವೆ ಈಗಿರುವ ಬೋಗಿಗಳ ಸಂಯೋಜನೆ, ಆವರ್ತನ ಮತ್ತು ಸೇವೆಯ ದಿನಗಳೊಂದಿಗೆ  ಕಾರ್ಯನಿರ್ವಹಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ರೈಲು ಸಂಖ್ಯೆ 22831, ಈಗ ಹೌರಾ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 25, 2024 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಹಿಸಲಿದೆ. ಈ ರೈಲು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (ಎಸ್ಎಸ್ ಪಿಏನ್) ನಲ್ಲಿ ಕೊನೆಗೊಳ್ಳುವ ಬದಲು ಯಶವಂತಪುರದವರೆಗೆ ತನ್ನ ಪ್ರಯಾಣವನ್ನು…

Read More

ಬೆಂಗಳೂರು: ಮಂಕಿಪಾಕ್ಸ್ ವಿಶ್ವದಾದ್ಯಂತ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಮಂಕಿಪಾಕ್ಸ್ ಬಗ್ಗೆ ಜನರಲ್ಲಿ ಆತಂಕ, ಭಯ ಕೂಡ ಮನೆ ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರವು ಮಂಕಿಪಾಕ್ಸ್ ಬಗ್ಗೆ ಆತಂಕ ಬೇಡ, ಈ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಲಾಗಿದ್ದು, ಎಂ ಪಾಕ್ಸ್‌ ಎಂಬುದು ಮಂಕಿಪಾಕ್ಸ್‌ ವೈರಸ್‌ನಿಂದ ಉಂಟಾಗುವ ವೈರಲ್‌ ಝೂನೋಟಿಕ್‌ ಕಾಯಿಲೆಯಾಗಿದೆ. ಈ ರೋಗವು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ/ದೈಹಿಕ/ಲೈಂಗಿಕ ಸಂಪರ್ಕ ಮತ್ತು ಸೋಂಕಿತ ವ್ಯಕ್ತಿಯ ದೈಹಿಕ ದ್ರವಗಳು, ಶರೀರದ ಮೇಲಿನ ದದ್ದುಗಳ ಸ್ರಾವಗಳ ಮೂಲಕ ಹರಡಬಹುದು ಎಂದಿದೆ. ಮಂಕಿಪಾಕ್ಸ್‌ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲು ವೈಯಕ್ತಿಕ ಸ್ವಚ್ಛತೆಯನ್ನು ಅಭ್ಯಾಸ ಮಾಡಿ ಮತ್ತು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ/ಲೈಂಗಿಕ ಸಂಪರ್ಕವನ್ನು ತಪ್ಪಿಸಿ ಎಂದು ತಿಳಿಸಿದೆ. https://twitter.com/KarnatakaVarthe/status/1833097634745122958 ಹೀಗಿವೆ ಮಂಕಿಪಾಕ್ಸ್ ರೋಗದ ಲಕ್ಷಣಗಳು ಮಂಕಿಪಾಕ್ಸ್ ರೋಗದ ಲಕ್ಷಣಗಳೆಂದರೇ 2-4 ವಾರಗಳವರೆಗೆ ದದ್ದುಗಳು, ಊದಿಕೊಂಡ ದುಗ್ದರಸ ಗ್ರಂಥಿಗಳು, ಜ್ವರ ಇರಲಿದೆ ಅಂತ ಹೇಳಿದೆ. ತಲೆನೋವು, ಸ್ನಾಯುನೋವು, ಬೆನ್ನುನೋವು, ನಿಶಕ್ತಿ, ಚಳಿಯಂತ…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ಸಂಬಂಧ ಎನ್ಐಎ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಆ ಚಾರ್ಜ್ ಶೀಟ್ ನಲ್ಲಿ ರಾಮೇಶ್ವರಂ ಕೆಫೆ ದಿನವೇ ಕರ್ನಾಟಕ ಬಿಜೆಪಿ ಕಚೇರಿಯನ್ನು ಸ್ಪೋಟಿಸಲು ಪ್ಲಾನ್ ಮಾಡಿದ್ರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಸ್ಪೋಟಕ ಪ್ರಕರಣ ಸಂಬಂಧ ಎನ್ಐಎಯಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಾದಂತ ಅಬ್ದುಲ್ ಮಿತನ್ ತಾಹಾ, ಮುಸಾವೀರ್ ಹುಸೇನ್, ಮಾಜ್ ಮುನೀರ್ ಅಹ್ಮದ್ ಹಾಗೂ ಮುಜಾಮಿಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎನ್ಐಎ ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ಕರ್ನಾಟಕ ಬಿಜೆಪಿ ಕಚೇರಿಯನ್ನೂ ಸ್ಪೋಟಿಸಲು ಪ್ಲಾನ್ ಮಾಡಿದ್ದರು. ಆದರೇ ಅದು ವಿಫಲಗೊಂಡಿತ್ತು. ಹೀಗಾಗಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಈ ಕೆಳಗಿದೆ ಎನ್ಐಎ ಸಲ್ಲಿಸಿದಂತ ಚಾರ್ಜ್ ಶೀಟ್ ಓದಿ https://kannadanewsnow.com/kannada/bbmp-issues-alert-after-deputy-cm-dk-shivakumars-warning-pothole-filling-work-in-bengaluru-intensifies/ https://kannadanewsnow.com/kannada/bengaluru-belongs-to-kannadigas-post-sparks-debate-on-social-media-war-of-words/

Read More

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಅವರು ತಿಳಿಸಿದರು. ಈ ಮೂಲಕ ಡಿಸಿಎಂ ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್ ಆಗಿ, ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಚುರುಕಾಗಿ ನಡೆಸುತ್ತಿದೆ. ಮಾನ್ಯ ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದಾದ್ಯಂತ ರಸ್ತೆ ಗುಂಡಿಗಳನ್ನು ಯುದ್ದೋಪಾದಿಯಲ್ಲಿ ಮುಚ್ಚಲಾಗುತ್ತಿದೆ. ಈ ಸಂಬಂಧ ಪೂರ್ವ ವಲಯ ಶಿವಾಜಿನಗರ ವ್ಯಾಪ್ತಿಯಲ್ಲಿ ಬರುವ ತಿಮ್ಮಯ್ಯ ರಸ್ತೆಯಲ್ಲಿ ಇಂದು ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಲಿಕೆ ವತಿಯಿಂದ ನಿರಂತರವಾಗಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆ. ಆದರೆ, ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ನಾಗರೀಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ರಸ್ತೆಗಳು ರಸ್ತೆಗಿಳಿದು ಪರಿಶೀಲಿಸಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಪೂರ್ವ ವಲಯ ವ್ಯಾಪ್ತಿಯಲ್ಲಿ 258.59 ಕಿ.ಮೀ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಅಡ್ಪೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ಸಿಎಂ ಸಿದ್ಧರಾಮಯ್ಯ ತಮ್ಮ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ಎಜಿ ಶಶಿಕಿರಣ್ ಶೆಟ್ಟಿ ಅವರು ವಾದಿಸಿದರು. ಸಿಎಂ ಸಿದ್ಧರಾಮಯ್ಯ ಕೈಗೊಂಡ ನಿರ್ಧಾರ, ಶಿಫಾರಸ್ಸಿನಲ್ಲಿ ಅಪರಾಧದ ಅಂಶವಿರಬೇಕು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಢಿನೋಟಿಫಿಕೇಷನ್ ಕೇಸನ್ನು ಉಲ್ಲೇಖಿಸಿದಂತ ಅವರು, ಆ ಪ್ರಕರಣದಲ್ಲಿ ಅವರು ತೀರ್ಮಾನ ಕೈಗೊಂಡಿದ್ದರು. ಆದರೇ ಈ ಕೇಸಲ್ಲಿ ಸಿದ್ಧರಾಮಯ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸಿಎಂ ಕರ್ತವ್ಯದ ಭಾಗವಾಗಿ ಈ ಕೃತ್ಯ ನಡೆದಿಲ್ಲ…

Read More

ಬೆಂಗಳೂರು: ನಗರದಲ್ಲಿ ಮೊದಲ ದಿನವೇ 2.17 ಲಕ್ಷ ಗಣೇಶ ಮೂರ್ತಿಯನ್ನು ವಿವಿಧೆಡೆ ವಿಸರ್ಜಿಸಲಾಗಿತ್ತು. ನಿನ್ನೆ ಮತ್ತೆ ಮುಂದುವರೆದಿದ್ದು, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 83,404 ಗಣೇಶ ಮೂರ್ತಿಯನ್ನು ವಿಸರ್ಜಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 08/09/2024 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 83404 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ ಎಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 12652 ಪಶ್ಚಿಮ ವಲಯ: 10828 ದಕ್ಷಿಣ ವಲಯ: 47055 ಬೊಮ್ಮನಹಳ್ಳಿ ವಲಯ: 2276 ದಾಸರಹಳ್ಳಿ ವಲಯ: 424 ಮಹದೇವಪುರ ವಲಯ: 2224 ಆರ್.ಆರ್.ನಗರ ವಲಯ: 3859 ಯಲಹಂಕ ವಲಯ: 4096 ಒಟ್ಟು: 83404 ಗಣೇಶ ಮೂರ್ತಿಯನ್ನು ಸೆ.8ರ ನಿನ್ನೆಯ ದಿನ ಬೆಂಗಳೂರಿನ ವಿವಿಧೆಡೆ ವಿಸರ್ಜಿಸಲಾಗಿದೆ ಎಂಬುದಾಗಿ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. https://kannadanewsnow.com/kannada/shivamogga-power-outages-in-these-areas-of-the-district-on-september-11/ https://kannadanewsnow.com/kannada/breaking-no-relief-for-actor-darshan-at-the-moment-court-order-extending-the-period-of-judicial-custody-for-3-days/ https://kannadanewsnow.com/kannada/bengaluru-belongs-to-kannadigas-post-sparks-debate-on-social-media-war-of-words/

Read More