Author: kannadanewsnow09

ಬೆಂಗಳೂರು: ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಪ್ರಕರಣ ಪತ್ತೆಯಾಗಿದ್ದು, ಆಸ್ಪತ್ರೆಯು ಶಂಕಿತ ಸೋಂಕನ್ನು ಆರೋಗ್ಯ ಅಧಿಕಾರಿಗಳಿಗೆ ವರದಿ ಮಾಡಿದೆ. ಹಾಗಾದ್ರೆ HMPV ವೈರಸ್ ಸೋಂಕು ಅಂದರೇನು? ಅದರ ಲಕ್ಷಣಗಳು ಏನು ಅಂತ ಮುಂದೆ ಓದಿ. ಎಚ್ಎಂಪಿವಿ ವೈರಸ್ ಎಂದರೇನು? ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಉಸಿರಾಟದ ವೈರಸ್ ಆಗಿದ್ದು, ಇದು ಸಾಮಾನ್ಯವಾಗಿ ಸೌಮ್ಯ ಮತ್ತು ಮಧ್ಯಮ ಫ್ಲೂ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ಈ ವೈರಸ್ ಚಳಿಗಾಲ ಮತ್ತು ವಸಂತಕಾಲದ ಆರಂಭದಲ್ಲಿ ಹೆಚ್ಚು ಪ್ರಚಲಿತದಲ್ಲಿದೆ ಮತ್ತು ಪ್ರಾಥಮಿಕವಾಗಿ ಸೋಂಕಿತ ವ್ಯಕ್ತಿಗಳೊಂದಿಗೆ ನೇರ ಸಂಪರ್ಕದಿಂದ ಅಥವಾ ಕಲುಷಿತ ಮೇಲ್ಮೈಗಳಿಂದ ಹರಡುತ್ತದೆ. ಸಾಮಾನ್ಯ ರೋಗಲಕ್ಷಣಗಳಲ್ಲಿ ಕೆಮ್ಮು, ಜ್ವರ, ಗಂಟಲು ನೋವು, ಮೂಗು ಸೋರುವಿಕೆ ಅಥವಾ ಕಟ್ಟುವಿಕೆ, ಮತ್ತು ಕೆಲವು ಸಂದರ್ಭಗಳಲ್ಲಿ, ಉಬ್ಬಸ ಅಥವಾ ಉಸಿರಾಟದ ತೊಂದರೆ ಸೇರಿವೆ. ಕೆಲವು ವ್ಯಕ್ತಿಗಳು, ವಿಶೇಷವಾಗಿ ತುಂಬಾ ಚಿಕ್ಕವರು, ವಯಸ್ಸಾದವರು, ಅಥವಾ…

Read More

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ. ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಆರೋಗ್ಯ…

Read More

ಶಿವಮೊಗ್ಗ: ಕನ್ನಡ ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು ನಾ.ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಎರಡೂ ಒಂದೇ. ಬರೆದಂತೆ ಬದುಕಿದವರು. ಬದುಕಿದಂತೆ ಬರೆದವರು ಎಂದಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಸ್ತರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.

Read More

ಧಾರವಾಡ: ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ದಿ. ಶ್ರೀ ಚನ್ನವೀರೌಡ ಅಣ್ಣಾ ಶಿದ್ರಾಮಗೌಡ ಪಾಟೀಲ್ ಸಂಸ್ಕರಣೆ ದತ್ತಿ ಕಾರ್ಯಕ್ರಮದಲ್ಲಿ ಪ್ರೊ. ಮಲ್ಲಿಕಾರ್ಜುನ ಪಾಟೀಲ್ ಬರೆದಿರುವ ಸೈದಾಪುರ ಸಿ.ಎಸ್.ಪಾಟೀಲ ಜೀವನ ಮತ್ತು ಸಾಧನೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ನೂರಾರು ವರ್ಷಗಳಿಂದ ಜಗತ್ತಿಗೆ ಮಹಾಪುರುಷರನ್ನು ಕೊಟ್ಟ ಈ ಮಣ್ಣಿನ ಗುಣ, ಕೇವಲ ಧಾರವಾಡದಲ್ಲಿ ಹುಟ್ಟಿದವರಷ್ಟೇ ಅಲ್ಲ, ಮಹಾರಾಷ್ಟ್ರ, ಗೋವಾದಿಂದ ಬಂದು ಇಲ್ಲಿ ವಿದ್ಯಾರ್ಜನೆ ಪಡೆದು ಉನ್ನತ ಹುದ್ದೆ ಪಡೆದವರು ಅನೇಕರು ಇದ್ದಾರೆ. ನನಗೆ ಧಾರವಾಡದಲ್ಲಿ ಸ್ನೇಹಿತರು ಅತಿ ಹೆಚ್ಚಿದ್ದಾರೆ ಎಂದರು. ನಮ್ಮೆಲ್ಲರ ಹಿರಿಯರು ಸಿ.ಎಸ್. ಪಾಟೀಲರು ಆ ಕಾಲದಲ್ಲಿ ಅದ್ಭುತ ಸಾಧನೆ ಮಾಡಿದರು. ನಾವೆಲ್ಲ 21 ನೇ ಶತಮಾನ ಜ್ಞಾನದ…

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಜನವರಿ.7ರಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಾಯ ಉಂಟಾಗದಂತೆ ಕ್ರಮ ವಹಿಸಲು ಮಹತ್ವದ ಸೂಚನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿ.07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಕರೆ ನೀಡಿರುತ್ತಾರೆ. ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪಮುಖ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.…

Read More

ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ ಡಿಸೋಜ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೋ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ಸ್ಪಷ್ಟ ಪಡಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜನವರಿ.7ರಂದು ಮೃತ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ಸಾಗರದಲ್ಲಿ ನೆರವೇರಿಸುವುದಾಗಿ ತಿಳಿಸಿದ್ದಾರೆ. ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. https://kannadanewsnow.com/kannada/good-news-for-the-workers-of-the-state-you-will-get-all-these-facilities-from-the-government/ https://kannadanewsnow.com/kannada/important-information-to-the-public-do-you-know-what-is-the-punishment-and-penalty-for-these-offences-related-to-government-property-heres-the-information/

Read More

ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿಯಿ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ ಡಿಸೋಜ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೋ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ಸ್ಪಷ್ಟ ಪಡಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜನವರಿ.7ರಂದು ಮೃತ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ಸಾಗರದಲ್ಲಿ ನೆರವೇರಿಸುವುದಾಗಿ ತಿಳಿಸಿದ್ದಾರೆ. ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ನಾ ಡಿಸೋಜ ಬಗ್ಗೆ ಮಾಹಿತಿ ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ…

Read More

ಬೆಂಗಳೂರು: ನಾನು ಜಾತಿ ಜನಗಣತಿ ಪರವಾಗಿ ಇದ್ದೇನೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ. ನನಗೆ ನನ್ನ ಮುಂದಿನ ದಾರಿಯ ಬಗ್ಗೆ ಸ್ಪಷ್ಟತೆ ಇದೆ. ಬಸವಣ್ಣ-ಅಂಬೇಡ್ಕರ್-ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂಬುದಾಗಿ ಜಾತಿ ಗಣತಿ ವರದಿ ಜಾರಿಯ ಬಗ್ಗೆ ಮಹತ್ವದ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ಆಯೋಜಿಸಿದ್ದ 537ನೇ ಕನಕ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದಂತ ಅವರು, ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಹಾಗೂ ಮಹಾನ್ ಸಂತ. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿದ ಅವರು ದಾಸ ಶ್ರೇಷ್ಠರಾದರು ಎಂದರು. ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ಧನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ…

Read More

ನವದೆಹಲಿ: “ನಾವು ಜಾಗತಿಕ ಭವಿಷ್ಯದ ಬಗ್ಗೆ ಮಾತನಾಡುವಾಗ, ಮಾನವ-ಕೇಂದ್ರಿತ ಕಾರ್ಯವಿಧಾನಗಳು ಅಗ್ರಗಣ್ಯವಾಗಿರಬೇಕು.” ಇತ್ತೀಚೆಗೆ ಜರುಗಿದ ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯಲ್ಲಿ ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಈ ಮಾತುಗಳು ಜನರಿಗೆ ಮೊದಲ ಸ್ಥಾನ ನೀಡುವ ಭಾರತದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಈ ತತ್ವಶಾಸ್ತ್ರವು 2025ರ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ರಕ್ಷಣೆ(ಡಿಪಿಡಿಪಿ) ನಿಯಮಗಳನ್ನು ರೂಪಿಸುವ ನಮ್ಮ ಪ್ರಯತ್ನಗಳಿಗೆ ಸ್ಪಷ್ಟ ಮಾರ್ಗದರ್ಶನ ನೀಡಿದೆ. ಈ ನಿಯಮಗಳನ್ನು ಅಂತಿಮಗೊಳಿಸಿದ ನಂತರ, ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯಿದೆ-2023 ಅನ್ನು ಕಾರ್ಯಗತಗೊಳಿಸಲಾಗುತ್ತದೆ. ಈ ವೈಯಕ್ತಿಕ ಡೇಟಾ ರಕ್ಷಣೆಯು ನಾಗರಿಕರ ಹಕ್ಕುಗಳನ್ನು ರಕ್ಷಿಸುವ ನಮ್ಮ ಬದ್ಧತೆಯನ್ನು ಜೀವಂತಗೊಳಿಸುತ್ತದೆ. ಸಬಲೀಕರಣದ ನವಯುಗ ಭಾರತೀಯ ಪ್ರಜೆಯು 2025ರ ಡಿಪಿಡಿಪಿ ನಿಯಮಗಳ ಹೃದಯಭಾಗದಲ್ಲಿರುತ್ತಾನೆ. ಡೇಟಾದಿಂದ ಹೆಚ್ಚು ಪ್ರಾಬಲ್ಯ ಹೊಂದಿರುವ ಜಗತ್ತಿನಲ್ಲಿ ಆಡಳಿತ ಮಾರ್ಗಸೂಚಿಯ ಹೃದಯ ಭಾಗದಲ್ಲಿ ಜನರನ್ನು ಇರಿಸುವುದು ಅತ್ಯಗತ್ಯ ಎಂಬುದನ್ನು ನಾವು ನಂಬುತ್ತೇವೆ. ಈ ನಿಯಮಗಳು ತಿಳಿವಳಿಕೆಯುಳ್ಳ ಸಮ್ಮತಿ, ಡೇಟಾ ಅಳಿಸುವಿಕೆ ಮತ್ತು ಡಿಜಿಟಲ್ ನಾಮಿನಿಗಳನ್ನು ನೇಮಿಸುವ…

Read More

ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾರುಗಳ ಮೇವಿಗಾಗಿ ಗೋಮಾಳ ಮೀಸಲಿಡುವುದು ಕಡ್ಡಾಯ. ಹಾಗಾದ್ರೇ ರಾಜ್ಯ ಸರ್ಕಾರದ ನಿಯಮಗಳಂತೆ ಉಚಿತ ಗೋಮಾಳವನ್ನು ಒದಗಿಸುವ ರೀತಿ ಹೇಗೆ ಎನ್ನುವ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಭೂ ಕಂದಾಯ ನಿಯಮಗಳು 19666, 1974ರ ಮಾರ್ಚ್ 7ರ ವರೆಗೆ ತಿದ್ದುಪಾಟಾದ ರೀತ್ಯಾ ನಿಯಮಗಳ ಅಳವಡಿಕೆ ಅನುಸಾರ ಪ್ರತಿ ನೂರು ಜಾನುವಾರಗಳಿಗೆ ಹನ್ನೆರಡು ಹೆಕ್ಟೇರುಗಳಂತೆ ಪ್ರತಿಯೊಂದು ಗ್ರಾಮದ ಜಾನುವಾರಿಗೂ ಸರ್ಕಾರಿ ಭೂಮಿಯನ್ನು ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇಡತಕ್ಕದ್ದು ಎಂದಿದೆ. ಜಾನುವಾರುಗಳನ್ನು ಲೆಕ್ಕ ಹಾಕುವಾಗ ಆಡು, ಕುರಿ ಅಥವಾ ಕರು ಅಥವಾ ಹಸು ಅಥವಾ ಎಮ್ಮೆ ಇವುಗಳೊಂದನ್ನೂ ಒಂದೊಂದು ಜಾನುವಾರೆಂದು ಪರಿಗಣಿಸಬೇಕು ಎಂಬುದಾಗಿ ತಿಳಿಸಿದೆ. ಸಂಬಂಧ ಪಟ್ಟ ಗ್ರಾಮದಲ್ಲಿ ಅಥವಾ ಪಕ್ಷದ ಗ್ರಾಮದಲ್ಲಿ ಗ್ರಾಮದ ಜಾನುವಾರು ಮೇಯುವುದಕ್ಕೆ ಅನುಕೂಲವಾಗುವಂತೆ ಸಾಕಷ್ಟು ಅರಣ್ಯ ಪ್ರದೇಶವಿದ್ದರೇ, ಅದರ ವಿಸ್ತೀರ್ಣಕ್ಕನುಗುಣವಾಗಿ ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇದೆಯೆಂದು ಪ್ರದೇಶದ ವಿಸ್ತೀರಣವನ್ನು ಕಡಿಮೆ ಮಾಡಬಹುದಾಗಿದೆ. ಗ್ರಾಮದಲ್ಲಿ ಯಾವ ಗೋಮಾಳವೂ ಇಲ್ಲದಿದ್ದರೇ ಅಥವಾ ಇರುವ ಭೂಮಿಯನ್ನು (1)ನೇ…

Read More