Author: kannadanewsnow09

ನವದೆಹಲಿ: ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಜ್ವರ ಹರಡುತ್ತಿದೆ ಎಂಬ ವರದಿಗಳನ್ನು ಚೀನಾ ಶುಕ್ರವಾರ ತಳ್ಳಿಹಾಕಿದ್ದು, ಚಳಿಗಾಲದಲ್ಲಿ ಸಂಭವಿಸುವ ಉಸಿರಾಟದ ಕಾಯಿಲೆಗಳ ಪ್ರಕರಣಗಳು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ ತೀವ್ರವಾಗಿವೆ ಎಂದು ಹೇಳಿದೆ. ವಿದೇಶಿಯರು ಚೀನಾಕ್ಕೆ ಪ್ರಯಾಣಿಸುವುದು ಸುರಕ್ಷಿತವಾಗಿದೆ ಎಂದು ಇಲ್ಲಿನ ವಿದೇಶಾಂಗ ಸಚಿವಾಲಯ ತಿಳಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊಗಳು ಆಸ್ಪತ್ರೆಗಳು ಕಿಕ್ಕಿರಿದಿರುವುದನ್ನು ತೋರಿಸುತ್ತವೆ. “ಹಿಂದಿನ ವರ್ಷಕ್ಕೆ ಹೋಲಿಸಿದರೆ ರೋಗಗಳು ಕಡಿಮೆ ತೀವ್ರತೆಯನ್ನು ಹೊಂದಿವೆ ಮತ್ತು ಸಣ್ಣ ಪ್ರಮಾಣದಲ್ಲಿ ಹರಡುತ್ತವೆ” ಎಂದು ಅವರು ಹೇಳಿದರು. “ಚೀನಾದಲ್ಲಿರುವ ಚೀನೀ ನಾಗರಿಕರು ಮತ್ತು ವಿದೇಶಿಯರ ಆರೋಗ್ಯದ ಬಗ್ಗೆ ಚೀನಾ ಸರ್ಕಾರ ಕಾಳಜಿ ವಹಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ. ಚೀನಾದಲ್ಲಿ ಪ್ರಯಾಣಿಸುವುದು ಸುರಕ್ಷಿತವಾಗಿದೆ” ಎಂದು ಅವರು ಹೇಳಿದರು. ಚಳಿಗಾಲದಲ್ಲಿ ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚೀನಾದ ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಡಳಿತ ಹೊರಡಿಸಿದ ಮಾರ್ಗಸೂಚಿಗಳನ್ನು ಅವರು ಉಲ್ಲೇಖಿಸಿದರು. ಕಳೆದ ಕೆಲವು ದಿನಗಳಿಂದ, ಚೀನಾದಲ್ಲಿ ಭಾರಿ…

Read More

ತುಮಕೂರು: ದೂರು ಕೊಡಲು ಬಂದಿದ್ದಂತ ಮಹಿಳೆಯನ್ನು ಪರಿಚಯಿಸಿಕೊಂಡು ಆಕೆಯೊಂದಿಗೆ ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿದ್ದಂತ ಮಧುಗಿರಿ ಡಿವೈಎಸ್ಪಿಯನ್ನು ಅಮಾನತುಗೊಳಿಸಲಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದಂತ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿಯಾಗಿದ್ದಂತ ರಾಮಚಂದ್ರಪ್ಪ ಸಮಸ್ಯೆ ಹೇಳಿಕೊಂಡು ಬಂದಿದ್ದಂತ ಮಹಿಳೆಯೊಬ್ಬರನ್ನು ಪುಸಲಾಯಿಸಿದ್ದರು. ಆ ಬಳಿಕ ಕಚೇರಿಯ ಶೌಚಾಲಯಕ್ಕೆ ಕರೆದೊಯ್ದು ರಾಸಲೀಲೆಯಲ್ಲಿ ತೊಡಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕಚೇರಿಯಲ್ಲೇ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತುಗೊಳಿಸಿ ಡಿಜಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದರು. ಇನ್ನೂ ಪ್ರಕರಣ ಬೆಳಕಿಗೆ ಬಂದ ನಂತ್ರ ಡಿವೈಎಸ್ಪಿ ರಾಮಚಂದ್ರಪ್ಪ ನಾಪತ್ತೆಯಾಗಿದ್ದರು. ಅವರನ್ನು ಈಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/bbmp-employees-co-operative-society-celebrates-its-foundation-day-pays-pratibha-puraskar/ https://kannadanewsnow.com/kannada/breaking-ramanagara-man-killed-thrown-into-well-during-new-year-party/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ನಿಯಮಿತದ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಹ ಕಾರ್ಯಕ್ರಮ. ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸ್ನೇಹಲ್ ಆರ್ ಮತ್ತು ಹಿರಿಯ ಚಲನಚಿತ್ರ ನಟ ಶ್ರೀನಾಥ್, ಹಿರಿಯ ಚಲನಚಿತ್ರ ನಟಿ  ವಿನಯ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷರಾದ ಎ. ಅಮೃತ್‌ರಾಜ್ ರವರು, ಉಪಾಧ್ಯಕ್ಷರಾದ ರವಿ ಕೆ.ಜಿ ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಪ್ರಣಯರಾಜ ನಟ ಶ್ರೀನಾಥ್ ರವರು ಮಾತನಾಡಿ ನಮ್ಮ ನೀತಿ ಬದುಕು ಆದರ್ಶವಾಗಿರಬೇಕು. ವಿಶ್ವಾಸ ಪ್ರೀತಿ ಬೆಳಸಿಕೊಳ್ಳಬೇಕು. ಯುವ ಸಮುದಾಯ ಒಂದೇ ಗುರಿ ಇಟ್ಟುಕೊಳ್ಳಿ, ಏನಾಗಬೇಕು ಎಂದು ನಿರ್ಧಾರ ಮಾಡಿದರೆ ಯಶ್ವಸಿಯಾಗಲು ಸಾಧ್ಯ. ನಾನು ಶಾಲೆಯಲ್ಲಿ ಶೇಕಡ 90ರಷ್ಟು ಗೈರುಹಾಜರಿಯಾಗಿದ್ದೆ, ನಾನು ಶಿಕ್ಷಣ ಪಡೆದಿದ್ದರೆ ಉನ್ನತ ಅಧಿಕಾರಿಯಾಗಬಹುದಿತ್ತು. ಮಕ್ಕಳು ಗಮನಿಸಬೇಕು ತಂದೆ, ತಾಯಿ ನಿಮ್ಮ ಮೇಲೆ ಬಹಳ ಆಸೆಯಿಟ್ಟುಕೊಂಡಿರುತ್ತಾರೆ ಅದನ್ನ ಪೂರ್ಣಗೊಳಿಸಿ, ಜೀವನದಲ್ಲಿ ಮುಂದೆ ಬನ್ನಿ ಎಂದು ಹೇಳಿದರು. ನಟಿ…

Read More

ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು…

Read More

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಗೆ ಆಂಧ್ರ ಪ್ರದೇಶ ಸರ್ಕಾರದ ಸಚಿವರ ದಂಡೇ ಭೇಟಿ ನೀಡಿದೆ. ಕಚೇರಿಯಲ್ಲಿ ಸಭೆ ನಡೆಸಿ, ಕರ್ನಾಟಕದಲ್ಲಿ ಜಾರಿಯಲ್ಲಿರುವಂತ ಶಕ್ತಿ ಯೋಜನೆಯ ಬಗ್ಗೆ ಚರ್ಚಿಸಿ, ಮಾಹಿತಿಯನ್ನು ಪಡೆದಿದೆ. ಇಂದು ಆಂಧ್ರಪ್ರದೇಶ ಸರ್ಕಾರದ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಸಾರಿಗೆ, ಯುವಜನ & ಕ್ರೀಡಾ ಸಚಿವರು, ಅನಿತಾ ವಂಗಲಪುಡಿ, ಗೃಹ ಹಾಗೂ ವಿಪತ್ತು ನಿರ್ವಹಣೆ ಸಚಿವರು, ಗುಮ್ಮಿಡಿ ಸಂಧ್ಯಾರಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ, ರಸ್ತೆ ಮತ್ತು ಕಟ್ಟಡ, ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಹಾಗೂ ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕರಾರಸಾ ನಿಗಮದ, ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಕೆ ಎಸ್ ಆರ್ ಟಿಸಿ ನಿಗಮದಲ್ಲಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರು, ಸರ್ಕಾರದ ಕಾರ್ಯದರ್ಶಿಗಳು,…

Read More

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್‌ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್‌ ಮಾಡಿ karnatakamediaacademy@gmail.com ಗೆ ಇ-ಮೇಲ್‌ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ. https://kannadanewsnow.com/kannada/good-news-for-the-people-of-the-state-adequate-power-supply-this-summer/ https://kannadanewsnow.com/kannada/higher-education-in-state-universities-completely-neglected-due-to-lack-of-proper-recruitment-cm-chandru/

Read More

ಬೆಂಗಳೂರು: ರಾಜ್ಯದಲ್ಲಿ 32 ಸಾರ್ವಜನಿಕ ವಿಶ್ವವಿದ್ಯಾನಿಲಯಗಳು ಈಗಾಗಲೇ ಸ್ಥಾಪಿತವಾಗಿದೆ. ಉನ್ನತ ಶಿಕ್ಷಣಕ್ಕಾಗಿ ಈ ವಿವಿಗಳಲ್ಲಿ ವ್ಯಾಸಂಗಕ್ಕಾಗಿ ಪ್ರವೇಶ ಪಡೆದುಕೊಂಡ ನಮ್ಮ ರಾಜ್ಯದ ಮಕ್ಕಳು ಈಗ ಪರದಾಡುವಂತಹ ದು ಸ್ಥಿತಿಗೆ ತಲುಪಿರುವುದು ನಿಜಕ್ಕೂ ಕಳವಳಕಾರಿಯಾದಂತಹ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಪತ್ರದಲ್ಲಿ ” ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ಈಗಾಗಲೇ ಮಂಜೂರಾಗಿರುವ 4,709 ಬೋಧಕ ಹುದ್ದೆಗಳು, 9317 ಬೋದಕೇತರ ಹುದ್ದೆಗಳು ಇವೆ. ಆದರೆ ಇದುವರೆಗೂ ಕೇವಲ 1986 ಬೋಧಕ ಹಾಗೂ 2989 ಬೋಧಕೇತರ ಹುದ್ದೆಗಳು ಮಾತ್ರ ಭರ್ತಿಯಾಗಿದೆ. 9051 ಹುದ್ದೆಗಳನ್ನು ಅನೇಕ ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೆ ಇರುವುದು ಸರ್ಕಾರದ ಅಂಕಿ ಅಂಶಗಳು ತೋರಿಸುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲಿಯೂ ಸಾರ್ವಜನಿಕವಾಗಿ ಸಹ ವರದಿಯಾಗಿದೆ. ರಾಜ್ಯದಲ್ಲಿನ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಣಾರ್ಥಿಗಳ ಪರಿಸ್ಥಿತಿ ತೀರ ಹದೆಗೆಟ್ಟು , ಸರ್ಕಾರಕ್ಕೆ ಇಡಿಶಾಪ ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ” ಎಂದು ಮುಖ್ಯಮಂತ್ರಿ ಚಂದ್ರು ಆತಂಕ ವ್ಯಕ್ತಪಡಿಸಿದ್ದಾರೆ.…

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು. ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ…

Read More

ಬೆಂಗಳೂರು: ನಗರದಲ್ಲಿ ಹಸಿರು ಹಾಗೂ ಪಿಂಕ್ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಗೊಂಡಿದೆ. ಈ ಬಳಿಕ ಹಳದಿ ಮಾರ್ಗದಲ್ಲೂ ಸಂಚಾರ ಆರಂಭಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಇದರ ನಡುವೆ ಜನವರಿ.6ರಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ ಅನ್ನೋ ಮಾಹಿತಿ ವೈರಲ್ ಆಗಿತ್ತು. ಈ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇದೊಂದು ಸುಳ್ಳು ಸುದ್ದಿ ಅಂತ ಸ್ಪಷ್ಟ ಪಡಿಸಿದೆ. ಅಲ್ಲದೇ ಜನವರಿ.6ರಿಂದ ಹಳದಿ ಮಾರ್ಗದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಚಾರ ಆರಂಭಗೊಳ್ಳೋದಿಲ್ಲ ಅಂತ ತಿಳಿಸಿದೆ. ಬಿಎಂಆರ್ ಸಿಎಲ್ ಹೇಳಿದ್ದೇನು.? ಜನವರಿ 6, 2025 ರಂದು ಹಳದಿ ಮಾರ್ಗವಾದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾರ್ವಜನಿಕರ ಸೇವೆಗೆ ಮೆಟ್ರೋ ರೈಲು ಆರಂಭಗೊಳ್ಳಲಿದೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ. ನಿಜವಾದ ಸಂಗತಿಯೇನೆಂದರೆ, ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಕೋಲ್ಕತ್ತಾದ ಟಿಟಗಾರ್ ರೆೈಲು ಸಂಸ್ಥೆಯ…

Read More

ಬೆಂಗಳೂರು: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ ಎಂದು ಸೂಚಿಸಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಮಾಡಿರುವ ಭಾಷಣವನ್ನು ನೀವೆಲ್ಲಾ ಓದಬೇಕು. ಐತಿಹಾಸಿಕ ಕಾರಣಗಳಿಂದಾಗಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀವಿ.…

Read More