Author: kannadanewsnow09

ಚೀನಾ : ಚೀನಾದ ಹುಲುನ್ಬುಯಿರ್ನ ಮೊಕಿ ತರಬೇತಿ ನೆಲೆಯಲ್ಲಿ ಸೋಮವಾರ (ಸೆಪ್ಟೆಂಬರ್ 9) ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ 5-1 ಗೋಲುಗಳಿಂದ ಜಪಾನ್ ತಂಡವನ್ನು ಮಣಿಸಿ ಸತತ ಎರಡನೇ ಗೆಲುವು ದಾಖಲಿಸಿದೆ. ಚೀನಾ ವಿರುದ್ಧದ ಪಂದ್ಯದಂತೆಯೇ, ರೆಫರಿ ಶಿಳ್ಳೆ ಬೀಸಿದ ಕೂಡಲೇ ಸುಖ್ಜೀತ್ ಸಿಂಗ್ ಅವರು ಗೋಲ್ನೊಂದಿಗೆ ಭಾರತದ ಖಾತೆಯನ್ನು ತೆರೆದರು. ಜಪಾನಿನ ಡಿಫೆನ್ಸ್ ನಿಟ್ಟುಸಿರು ಬಿಡುವ ಮೊದಲೇ ಭಾರತ ಅಭಿಷೇಕ್ ರೂಪದಲ್ಲಿ ಮತ್ತೆ ದಾಳಿ ನಡೆಸಿತು. ಅಭಿಷೇಕ್ ಜಪಾನಿನ ಅರ್ಧಭಾಗಕ್ಕೆ ಧಾವಿಸಿ ಮತ್ತೊಂದು ಫೀಲ್ಡ್ ಗೋಲ್ ಗಳಿಸಲು ಅವರ ಡಿಫೆನ್ಸ್ ಅನ್ನು ಛಿದ್ರಗೊಳಿಸಿದರು. ಕೆಲವು ಸೆಕೆಂಡುಗಳ ಅಂತರದಲ್ಲಿ ಸತತ ಎರಡು ಗೋಲುಗಳು ಜಪಾನಿನ ತಂಡವನ್ನು ಹಿಂದಕ್ಕೆ ಕುಳಿತುಕೊಳ್ಳುವಂತೆ ಮಾಡಿತು ಮತ್ತು ತಮ್ಮ ಡಿಫೆನ್ಸ್ ಅನ್ನು ಪ್ಲಗ್ ಮಾಡುವತ್ತ ಸಂಪೂರ್ಣವಾಗಿ ಗಮನ ಹರಿಸಿತು. ಮೊದಲಾರ್ಧದಲ್ಲಿ ಮೆನ್ ಇನ್ ಬ್ಲೂ ತಂಡದ ಪ್ರಾಬಲ್ಯ ಹೊರತಾಗಿಯೂ ಜಪಾನ್ ಭಾರತಕ್ಕೆ ಗೋಲು ಗಳಿಸಲು ಹೆಚ್ಚಿನ ಅವಕಾಶಗಳನ್ನು ನಿರಾಕರಿಸಿತು. ಎರಡನೇ ಕ್ವಾರ್ಟರ್ ಅದೇ ಹರಿವಿನೊಂದಿಗೆ ಪ್ರಾರಂಭವಾಯಿತು…

Read More

ಹಾಸನ: ಇನ್ನೂ ಅನಾಹುತ ಕಡಿಮೆಯಾಗಿಲ್ಲ. ಮಳೆ ಹೆಚ್ಚಾಗಲಿದೆ. ಐದು ಕಡೆಯಲ್ಲಿ ತೊಂದರೆ ಎದುರಾಗಲಿದೆ. ಆಕಾಶದಲ್ಲಿ ದೊಡ್ಡ ಆಘಾತವೇ ಉಂಟಾಗಲಿದೆ. ಭೂಮಿ, ಆಕಾಶ, ಅಗ್ನಿ, ವಾಯು, ಜಲಗಳಿಂದ ಕಂಟಕ ಎದುರಾಗಲಿದೆ ಎಂಬುದಾಗಿ ಕೋಡಿಮಠದ ಶಿವಾನಂದ ಶಿವಾಚಾರ್ಯ ಶ್ರೀಗಳು ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಳೆ ಇನ್ನೂ ಜಾಸ್ತಿ ಆಗಲಿದೆ. ಪ್ರಾಕೃತಿಕ ದೋಷವಿದೆ. ಐದು ಕಡೆ ತೊಂದರೆಯಿದೆ. ಭೂಮಿ, ಆಕಾಶ, ಅಗ್ನಿ, ವಾಯು ಎಲ್ಲಾ ಕಡೆಗೂ ತೊಂದರೆ ಆಗ್ತಿದೆ. ಯುದ್ಧದಲ್ಲಿ ಸಾಯುತ್ತಾರೆ ಅಂದಿದ್ದೆ, ಗುಡ್ಡ ಹೋಗುತ್ತದೆ ಎಂದಿದ್ದೆ, ಭೂಮಿ ಬಿರಿಯುತ್ತೆ ಅಂತ ಹೇಳಿದೆ ಅದರಂತೆ ಆಗಿದೆ ಎಂದರು. ಇನ್ನೂ ಆಕಾಶದಲ್ಲಿ ದೊಡ್ಡ ಆಘಾತ ಉಂಟಾಗುವಂತ ಘಟನೆ ನಡೆಯಲಿದೆ. ಇನ್ನೂ ಅನಾಹುತವಿದೆ. ಇನ್ನೂ ಮಳೆಯಿದೆ, ಅನಾಹುತವಿದೆ. ಒಂದು ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೂ ತೊಂದರೆ ಆಗಬಹುದು ಎಂದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗಧಾಯುದ್ಧದಲ್ಲಿ ಭೀಮ ಗೆದ್ದ. ಈಗ ಕೃಷ್ಣ ಇಲ್ಲ ದುರ್ಯೋಧನ ಗೆಲ್ಲುತ್ತಾನೆ. ಸೆಂಟ್ರಲ್ಲೂ ಇದೆ, ಸ್ಟೇಟಲ್ಲೂ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಕಲಿ ರೇಷನ್ ಕಾರ್ಡ್ ದಾರರ ವಿರುದ್ಧ ಸಮರವನ್ನೇ ಸಾರಿದೆ. ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು ಮಾಡಲಾಗಿದೆ. ಈ ಸಂಬಂಧ ಅನರ್ಹ ಬಿಪಿಎಲ್ ಕಾರ್ಡ್ ದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಾಗಿ ಹೇಳಿತ್ತು. ಅದರಂತೆ ಅಧಿಕಾರಿಗಳಿಗೆ ಅನರ್ಹರಲ್ಲದವರು ಯಾರು ಯಾರು ರೇಷನ್ ಕಾರ್ಡ್ ಪಡೆದಿದ್ದಾರೆ ಎನ್ನುವಂತ ಪಟ್ಟಿಯನ್ನು ತಯಾರಿಸುವಂತೆಯೂ ಸೂಚಿಸಿತ್ತು. ಆಹಾರ ಇಲಾಖೆಯ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಪಡೆಯುವ ಮಾನದಂಡದಂತೆ ಯಾರು ಅರ್ಹರು, ಯಾರು ಅನರ್ಹರು ಎಂಬುದಾಗಿ ಮಾಹಿತಿ ಕಲೆಹಾಕಿ, ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವಂತ ಪಟ್ಟಿಯನ್ನು ತಯಾರಿಸಿತ್ತು. ಚಿಕ್ಕಮಗಳೂರು ಜಿಲ್ಲೆಯಲ್ಲಿ 50126 ರೇಷನ್ ಕಾರ್ಡ್ ಗಳನ್ನು ಪರಿಶೀಲನೆ ಮಾಡಲಾಗಿದೆ. ಆಹಾರ ಇಲಾಖೆಯಿಂದ 1.20 ಲಕ್ಷ ಆದಾಯದ ಮಿತಿ ಮೀರಿದವರು. 10 ಚದರ ಅಡಿಗಳಿಗಿಂತ ಹೆಚ್ಚು ಮನೆ ಹೊಂದಿರುವವರು ಸೇರಿದಂತೆ ಇತರೆ ಮಾನದಂಡಗಳನ್ನು ಆಧರಿಸಿ ಅನರ್ಹರಾದಂತ ಬಿಪಿಎಲ್ ಕಾರ್ಡ್ ದಾರರ ಪಟ್ಟಿಯನ್ನು ಜಿಲ್ಲಾಡಳಿತದಿಂದ ಬಿಡುಗಡೆ ಮಾಡಲಾಗಿದೆ. ಈ ಅನರ್ಹರು…

Read More

ತುಮಕೂರು: ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಕೆರೆಪಾಳ್ಯದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮಾರುತಿ ನೆಕ್ಸಾ ಹಾಗೂ ಟಿಯಾಗೋ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಎರಡು ಕಾರುಗಳ ಚಾಲಕರು, ಓರ್ವ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಮೀಪದ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಮಧುಗಿರಿ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದಂತ ಟಿಯಾಗೋ ಹಾಗೂ ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದಂತ ಮಾರುತಿ ನೆಕ್ಸಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/dy-cm-dk-shivakumar-clarifies-that-us-tour-is-private-not-meeting-any-leaders/ https://kannadanewsnow.com/kannada/number-of-people-stitching-suits-for-cms-post-has-increased-bjp-to-congress/ https://kannadanewsnow.com/kannada/if-potholes-are-not-closed-in-bengaluru-within-15-days-strict-action-will-be-taken-dk-shivakumar-shivakumar-warns/

Read More

ಬೆಂಗಳೂರು : ತಾವು ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದ್ದು, ತಾವು ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಡಿಸಿಎಂ ಅವರು ಇಂದಿನಿಂದ ಸೆ. 15 ರವರೆಗೆ ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸ ಸಂದರ್ಭದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರು ಮಾಧ್ಯಮ ಹೇಳಿಕೆ ಮೂಲಕ ಈ ಸ್ಪಷ್ಟನೆ ನೀಡಿದ್ದಾರೆ. ಅವರು ಅಮೆರಿಕ ಪ್ರವಾಸ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವನ್ನು ಸಹ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. https://kannadanewsnow.com/kannada/three-killed-as-two-cars-collide-in-tumkur/ https://kannadanewsnow.com/kannada/number-of-people-stitching-suits-for-cms-post-has-increased-bjp-to-congress/

Read More

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸೂಚ್ ಹೊಲಿಸಿಕೊಳ್ಳೋರ ಸಂಖ್ಯೆ ಹೆಚ್ಚಾಗಿದೆ ಎಂಬುದಾಗಿ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮುಡಾ ಹಗರಣದ ರೂವಾರಿ ಸಿದ್ಧರಾಮಯ್ಯನವರು ರಾಜೀನಾಮೆ ನೀಡುವ ಒಳ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೇರಲು ಸೂಟ್ ಹೊಲೆಸಿಕೊಳ್ಳುವವರ ಸಂಖ್ಯೆ ಹೆಚ್ಚಾಗ ತೊಡಗಿದೆ ಎಂದು ವ್ಯಂಗ್ಯವಾಡಿದೆ. ನಾವೆಲ್ಲರೂ ಸಿದ್ದರಾಯ್ಯನವರ ಬೆಂಬಲಕ್ಕೆ ಬಂಡೆಯಂತೆ ನಿಲ್ಲುತ್ತೇವೆ ಎಂದು ಹೇಳುತ್ತಿದ್ದವರೇ ಈಗ ತಾವು ಸಿಎಂ ಹುದ್ದೆಯ ಆಕಾಂಕ್ಷಿಗಳು ಎನ್ನತೊಡಗಿದ್ದಾರೆ. ಹೀಗಾಗಿ, ಸಿದ್ದರಾಮಯ್ಯನವರ ಕುರ್ಚಿಗೆ ಬಂದಿರುವ ಕಂಟಕವನ್ನ ಸ್ವತಃ ಆ ವಿಘ್ನ ವಿನಾಯಕನೂ ತಪ್ಪಿಸಲಾರ ಎಂದು ಭವಿಷ್ಯ ನುಡಿದಿದೆ. ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ಎಪಿಸೋಡ್ ಮುಗಿಯುತ್ತಿದ್ದಂತೆ ಸಚಿವ ಎಂ.ಬಿ ಪಾಟೀಲ್ ತಾವು ಸಿಎಂ ಆಕಾಂಕ್ಷಿಯೆಂದು ಡಂಗೂರ ಸಾರುತ್ತಿದ್ದಾರೆ. ಹೊರಗೆ ಬೆಂಬಲ, ಒಳಗೆ ಹಂಬಲ ವಿಟ್ಟುಕೊಂಡಿರುವ ಕೆಲ ಕಾಂಗ್ರೆಸ್ಸಿಗರೆಲ್ಲಾ ಸಿದ್ದರಾಮಯ್ಯನವರು ಯಾವಾಗ.? ಕುರ್ಚಿ ಖಾಲಿ ಮಾಡುತ್ತಾರೆ ಎಂಬುವುದನ್ನೇ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದೆ.…

Read More

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವಂತ ಘಟನೆ ತುಮಕೂರಿನ ಕೆರೆಗಳಪಾಳ್ಯದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದು ಕಾರಿನಲ್ಲಿದ್ದ ಇಬ್ಬರು, ಮತ್ತೊಂದು ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಮಹಿಳೆ ಮತ್ತು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಚಿಂತಾಜನಕ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತಿನ ಬಗ್ಗೆ ಪರಿಶೀಲನೆ ನಡೆಸಿದರು. ಸಾವನ್ನಪ್ಪಿದವರ ಗುರುತು ತಿಳಿಯಬೇಕಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/humanitarian-ideals-of-great-men-should-not-fall-prey-to-conspiracy-of-hate-by-hypocrites-siddaramaiah/ https://kannadanewsnow.com/kannada/how-to-pay-gram-panchayat-property-tax-on-your-smartphone-watch-this-video/ https://kannadanewsnow.com/kannada/alert-beware-of-those-who-use-mobile-phones-excessively-this-dangerous-disease-can-haunt-you/

Read More

ಬೆಂಗಳೂರು : ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು. ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು. ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ…

Read More

ಬೆಂಗಳೂರು: ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಈಗ ಸುಲಭ. ನಿಮ್ಮ ಸ್ಮಾರ್ಟ್ ಪೋನ್ ನಲ್ಲೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸ್ಮಾರ್ಟ್ ಪೋನ್ ಯುಗದಲ್ಲಿ ಸ್ಮಾರ್ಟ್ ಆಗೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸುವಂತ ವಿಧಾನವನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಜನರು ಗ್ರಾಮ ಪಂಚಾಯ್ತಿ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳದೇ ಕುಳಿತಲ್ಲೇ ಮೊಬೈಲ್ ನಲ್ಲಿ ಆಸ್ತಿ ತೆರಿಗೆ ಪಾವತಿಸೋದಕ್ಕೆ ಅವಕಾಶ ನೀಡಿದೆ. ಅದು ಹೇಗೆ ಅಂತ ಈ ಕೆಳಗಿನ ವೀಡಿಯೋ ನೋಡಿ. https://twitter.com/CommrPR/status/1828044457641476535 ನೋಡಿದ್ರಲ್ಲ ಗೂಗಲ್ ಪೇ, ಪೋನ್ ಪೇ, ಪೇಟಿಎಂ ಮೂಲಕ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಸ್ಮಾರ್ಟ್ ಪೋನ್ ಇದ್ರೆ ಸಾಕು, ಕುಳಿತಲ್ಲೇ ಪೇ ಮಾಡಬಹುದು. ನಿಮಗೆ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಸ್ಮಾರ್ಟ್ ಪೋನ್ ನಲ್ಲಿ ಪಾವತಿ ಬಗ್ಗೆ ಅನುಮಾನಗಳಿದ್ದರೇ, ಸಮಸ್ಯೆ ಆಗುತ್ತಿದ್ದರೇ ಏಕೀಕೃತ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ ಪಡೆಯುವಂತೆ…

Read More

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಫೆಲೋಶಿಪ್ ಗೆ ಆಯ್ಕೆಯಾದಂತವರಿಗೆ ರೂ.60,000 ವೇತನ ಪ್ರತಿ ತಿಂಗಳು ಸಿಗಲಿದೆ. ಇಂತಹ ಫೆಲೋಶಿಫ್ ಗಾಗಿ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್ ಆಗಿದೆ. ಈ ಕುರಿತಂತೆ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರವು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ 07 ಹುದ್ದೆಗಳಿಗೆ ಅರ್ಹ ಮತ್ತು ಅನುಭವ ಹೊಂದಿರುವ ಯುವ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಫೆಲೋರವರನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಖಾಲಿ ಇರುವ ತಾಲ್ಲೂಕುಗಳಿಗೆ ನಿಯುಕ್ತಿಗೊಳಿಸಲಾಗುವುದು ಎಂದಿದೆ. ಫೆಲೋಶಿಪ್ ಅಭ್ಯರ್ಥಿಗಳ ಅರ್ಹತೆಗಳು 1) ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 32 ವರ್ಷದೊಳಗಿರಬೇಕು. 2) ಅಭ್ಯರ್ಥಿಗಳು ಸಾಮಾಜಿಕ ವಿಜ್ಞಾನಗಳಾದ ಸಮಾಜಶಾಸ್ತ್ರ ಅಥವಾ ಅರ್ಥಶಾಸ್ತ್ರ ಅಥವಾ ಗ್ರಾಮೀಣಾಭಿವೃದ್ಧಿ ಅಥವಾ ಸಮಾಜ…

Read More