Author: kannadanewsnow09

ನಮಸ್ಕಾರ ಬಂಧುಗಳೇ ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಸಹ ಹಲವಾರು ತೊಂದರೆಗಳನ್ನು ಅನುಭವಿಸುತ್ತಾ ಇರುತ್ತಾರೆ ದಿನೇ ದಿನೇ ಎಷ್ಟು ಸಹಿಸಿಕೊಂಡರು ಸಮಸ್ಯೆಗಳು ಕಡಿಮೆ ಆಗುತ್ತಿರುವುದಿಲ್ಲ ಅಂತಹ ಸಂದರ್ಭದಲ್ಲಿ ಪೂಜೆಗಳನ್ನು ಮಾಡಿಸುತ್ತಾರೆ ಅದರ ಜೊತೆಗೆ ಹಲವಾರು ದೇವರಿಗೆ ಹಲವಾರು ಹರಕೆಗಳನ್ನು ಕಟ್ಟಿಕೊಂಡಿರುತ್ತಾರೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ…

Read More

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸರ್ಕಾರ ವಿದ್ಯುತ್‌ ದರವನ್ನು ಏರಿಸಿಲ್ಲ. ಯೂನಿಟ್‌ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್‌ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆಯನ್ನು ಏರಿಸಿದೆ. ಎಂದು‌ ಸ್ಪಷ್ಟಪಡಿಸಿದರು. “ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ‌ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‌ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು…

Read More

ಬೆಂಗಳೂರು: ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನಿಸಲಾಗಿತ್ತು. ಹನಿಟ್ರ್ಯಾಪ್ ಆಗಿರೋದು ನಿಜ. ಆದರೇ ನಾನು ಒಳಗಾಗಿಲ್ಲ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನ ನಡೆದಿದೆ. ಆದರೇ ನಾನು ಒಳಗಾಗಿಲ್ಲ. ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಷಯ ಪ್ರಸ್ತಾಪಿಸಿದರು ಎಂದರು. ಈ ರೀತಿಯ ತೇಜೋವಧೆ ಮಾಡುವುದು ಯಾರಿಗೂ ಶೋಭೆ ತರಲ್ಲ. ಇದು ಅಂತ್ಯವಾಗಲು ಉನ್ನತ ಮಟ್ಟದ ತನಿಖೆ ಆಗಬೇಕು. ಹನಿಟ್ರ್ಯಾಪ್ ನಲ್ಲಿ ಎಲ್ಲಾ ಪಕ್ಷದವರೂ ಸಿಲುಕಿದ್ದಾರೆ ಎಂಬುದಾಗಿ ತಿಳಿಸಿದರು. ನಾನೇನೂ ಶ್ರೀರಾಮ ಚಂದ್ರನೂ ಅಲ್ಲ. ಸತ್ಯ ಹರಿಶ್ಚಂದ್ರನೂ ಅಲ್ಲ. ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಆಗಲೇ ಸತ್ಯಾಸತ್ಯತೆ ಹೊರಬರಲಿದೆ ಎಂದರು. https://kannadanewsnow.com/kannada/48-people-at-state-and-national-level-have-honeytrap-cds-pen-drives-minister-rajanna/ https://kannadanewsnow.com/kannada/breaking-encounter-between-security-forces-in-bijapur-chhattisgarh-22-naxals-killed-naxal-encounter/

Read More

ಬೆಂಗಳೂರು: ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದ 48 ಮಂದಿ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್ ಗಳು ಇದ್ದಾವೆ. ಇವುಗಳಲ್ಲಿ ನ್ಯಾಯಾಧೀಶರದ್ದೂ ಇದೆ. ಹೀಗಾಗಿ ತನಿಖೆಗೆ ಕೊಡಿ ಎಂಬುದಾಗಿ ಸದನದಲ್ಲಿ ಸಚಿವ ಕೆ.ಎನ್ ರಾಜಣ್ಣ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುವುದು ಕೆಟ್ಟ ಸಂಸ್ಕೃತಿಯಾಗಿದೆ. ಕೆಲ ರಾಜಕೀಯ ಪಕ್ಷದಲ್ಲಿ ಇರುವವರು ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯಕ್ಕಾಗಿಯೋ, ಸಿಎಂ ಆಗಬೇಕೆಂಬ ಕಾರಣಕ್ಕೂ ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ನಾನು ಹನಿಟ್ರ್ಯಾಪ್ ವಿಚಾರದಲ್ಲಿ ಲಿಖಿತ ದೂರು ಕೊಡುತ್ತೇನೆ. ಅದನ್ನು ತನಿಖೆ ಮಾಡಿ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಇದಲ್ಲದೇ ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲದೇ ರಾಷ್ಟ್ರ ಮಟ್ಟದ 48 ಮಂದಿಯ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್ ಗಳಿದ್ದಾವೆ. ಇದರಲ್ಲಿ ಜಡ್ಜ್ ಗಳದ್ದೂ ಇದೆ. ತನಿಖೆಗೆ ನೀಡುವಂತೆ…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಇಇಡಿಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ 7ನೇ ವೇತನ ಶ್ರೇಣಿ ಹಾಗೂ ವೇತನವನ್ನು ಇಇಡಿಎಸ್ ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಮಾಹಿತಿ ಹಂಚಿಕೊಂಡಿದ್ದು, ವಿಷಯದನ್ವಯ ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಇದುವರೆಗೆ ಒಟ್ಟು 18 ಸೇವೆಗಳನ್ನು ನೌಕರರಿಗೆ ಕಡ್ಡಾಯಗೊಳಿಸಿದ್ದರೂ ಸಹ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆ /ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಇ.ಇ.ಡಿ.ಎಸ್ ತಂತ್ರಾಂಶದ ಮೂಲಕ ರಜೆ ಅನುಮತಿ ಸಲ್ಲಿಸದೆ ಇರುವುದು ಇ.ಇ.ಡಿ.ಎಸ್ ವರದಿಗಳಲ್ಲಿ ಕಂಡುಬಂದಿರುತ್ತದೆ ಎಂದು ಹೇಳಿದ್ದಾರೆ. ಇನ್ನು ಮುಂದೆ ಶಾಲಾ/ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ/ಸಿಬ್ಬಂದಿಗಳು (ಬೋದಕ/ಬೋದಕೇತರ) ರಜೆಗೆ ತೆರಳುವ ಮುಂಚಿತವಾಗಿ ಇ.ಇ.ಡಿ.ಎಸ್. ತಂತ್ರಾಂಶದ ಮೂಲಕವೇ ಎಲ್ಲಾ ರೀತಿಯ ರಜಾ ಸೌಲಭ್ಯಗಳಾದ [C.L/R.H/E.L/H.P.L /ಇತರೆ] ರಜಾ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ ಇ.ಇ.ಡಿ.ಎಸ್ ತಂತ್ರಾಂಶದ ಮೂಲಕವೇ…

Read More

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದು, ಬಗರ್ ಹುಕುಂ ಅಡಿಯಲ್ಲಿ ಮಂಜೂರಾತಿಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಮಂಜೂರಾತಿ ಪತ್ರ ದೊರೆಯಲಿದೆ. ಇದರ ಜೊತೆಗೆ ಜೊತೆಗೆ ಅಕ್ರಮವಾಗಿ ಬಗರ್ ಹುಕುಂ ಜಮೀನು ಮಂಜೂರಾತಿ ಪಡೆದವರಿಗೂ ಸರ್ಕಾರ ಬಿಗ್ ಶಾಕ್ ನೀಡಿದೆ. ಅದೇ ಅಕ್ರಮವಾಗಿ ಜಮೀನು ಮಂಜೂರು ಮಾಡಿಸಿಕೊಂಡಿದ್ರೆ ಖಾತೆಯಾಗಲ್ವಂತೆ. ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿರುವಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ಬಗರ್‌ಹುಕುಂ ಅಡಿಯಲ್ಲಿ ಮಂಜೂರಾದ ಜಮೀನುಗಳಿಗೆ ಖಾತೆ ಮಾಡಿಕೊಡಲು ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ದೂರು ಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮವಾಗಿ ಮಂಜೂರಾದ ಪ್ರಕರಣಗಳಲ್ಲಿ ಖಾತೆ ಆಗುವುದಿಲ್ಲ. ಕ್ರಮಬದ್ಧವಾಗಿ ಇರುವ ಪ್ರಕರಣಗಳಲ್ಲಿ ಖಾತೆ ಮಾಡಿಕೊಡಲಾಗುತ್ತದೆ ಎಂದಿದ್ದಾರೆ. ಶೀಘ್ರವೇ ಅದನ್ನು ಮುಗಿಸಲು ಕ್ರಮ ಕೈಗೊಳ್ಳಲಾಗುವುದು. ಆದರೇ ಅಕ್ರಮವಾಗಿ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿ ಪಡೆದವರಿಗೆ ಖಾತೆ ಮಾಡಿಕೊಡುವುದಿಲ್ಲ ಅಂತ ಹೇಳುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ. https://twitter.com/KarnatakaVarthe/status/1902658313965449711 https://kannadanewsnow.com/kannada/karnataka-govt-finalises-3-locations-for-construction-of-2nd-international-airport-in-bengaluru/ https://kannadanewsnow.com/kannada/not-only-minister-rajanna-but-his-son-mlc-rajendra-also-honey-trapped/

Read More

ಬೆಂಗಳೂರು: ನಗರದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಖಚಿತವಾಗಿದೆ. ಈಗಾಗಲೇ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದೀಗ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಮೂರು ಸ್ಥಳಗಳನ್ನು ಕೂಡ ಫೈನಲ್ ಮಾಡಿರುವುದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಮೂರು ಸ್ಥಳಗಳನ್ನು ಗುರುತಿಸಿ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಐದಾರೂ ಸ್ಥಳಗಳ ಬಗ್ಗೆ ಚರ್ಚೆ ನಡೆಸಲಾದ್ರೂ, ಐಡೆಕ್ ಸಂಸ್ಥೆ ನೀಡಿರುವಂತ ವರದಿಗೆ ಅನುಗುಣವಾಗಿ ಮೂರು ಸ್ಥಳಗಳನ್ನು ಫೈನಲ್ ಮಾಡಿ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕಳಿಸಿದೆ ಎನ್ನಲಾಗುತ್ತಿದೆ. ಅಂದಹಾಗೇ ಐಡೆಕ್ ಸಂಸ್ಥೆಯು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಎಲ್ಲಾ ಮಾನದಂಡಗಳನ್ನು ಅನುಸರಿಸಿ ಕನಕಪುರದ ಬಳಿಯಲ್ಲಿ ಎರಡು ಸ್ಥಳ ಹಾಗೂ ನೆಲಮಂಗಲದ ಕುಣಿಗಲ್ ನಡುವಿನ ಸೋಲು ಬಳಿಯಲ್ಲಿ ಮತ್ತೊಂದು ಸ್ಥಳ ಸೇರಿದಂತೆ ಮೂರು ಸ್ಥಳಗಳನ್ನು ಶಾರ್ಟ್ ಲೀಸ್ಟ್ ಮಾಡಿತ್ತು. ಈ ಸ್ಥಳಗಳನ್ನೇ ರಾಜ್ಯ ಸರ್ಕಾರ ಫೈನಲ್ ಮಾಡಿ, ಕೇಂದ್ರ…

Read More

ನವದೆಹಲಿ: ಪತ್ನಿ ಅಶ್ಲೀಲ ಚಿತ್ರಗಳನ್ನು ನೋಡುವುದು ಅಥವಾ ಸ್ವ-ಸಂತೋಷದಲ್ಲಿ ತೊಡಗುವುದು ವೈವಾಹಿಕ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಾಬೀತಾಗದ ಹೊರತು ಗಂಡನ ಮೇಲಿನ ಕ್ರೌರ್ಯವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಮತ್ತು ನ್ಯಾಯಮೂರ್ತಿ ಆರ್.ಪೂರ್ಣಿಮಾ ಅವರ ನ್ಯಾಯಪೀಠವು ಖಾಸಗಿತನದ ಮೂಲಭೂತ ಹಕ್ಕು ವೈವಾಹಿಕ ಗೌಪ್ಯತೆಯನ್ನು ಒಳಗೊಂಡಿದೆ ಮತ್ತು ವೈವಾಹಿಕ ಗೌಪ್ಯತೆಯ ರೂಪರೇಖೆಗಳು ಮಹಿಳೆಯ ಲೈಂಗಿಕ ಸ್ವಾಯತ್ತತೆಯನ್ನು ಒಳಗೊಂಡಿದೆ ಎಂದು ಹೇಳಿದೆ. ಹೈಕೋರ್ಟ್ನ ಮಧುರೈ ಪೀಠವು ಸ್ವಯಂ-ಸಂತೋಷವು ನಿಷೇಧಿತ ಹಣ್ಣಲ್ಲ ಮತ್ತು ಮದುವೆಯ ನಂತರವೂ ಮಹಿಳೆ ತನ್ನ ವ್ಯಕ್ತಿತ್ವ ಮತ್ತು ತನ್ನ ಮೂಲಭೂತ ಗುರುತನ್ನು ಉಳಿಸಿಕೊಳ್ಳುತ್ತಾಳೆ ಮತ್ತು ವೈವಾಹಿಕ ಸ್ಥಾನಮಾನದಿಂದ ಒಳಗೊಳ್ಳುವುದಿಲ್ಲ ಎಂದು ತೀರ್ಪು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಖಾಸಗಿಯಾಗಿ ಅಶ್ಲೀಲತೆಯನ್ನು ನೋಡುವ ಪ್ರತಿವಾದಿಯ (ಪತ್ನಿ) ಕೃತ್ಯವು ಅರ್ಜಿದಾರರಿಗೆ ಕ್ರೌರ್ಯವಾಗುವುದಿಲ್ಲ. ಇದು ನೋಡುವ ಸಂಗಾತಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಅದು ಇತರ ಸಂಗಾತಿಯನ್ನು ಕ್ರೂರವಾಗಿ ನಡೆಸಿಕೊಳ್ಳುವುದಕ್ಕೆ ಸಮನಾಗುವುದಿಲ್ಲ ಎಂದು ನ್ಯಾಯಾಲಯ…

Read More

ಬೆಂಗಳೂರು: ಕೇವಲ ಸಹಕಾರ ಸಚಿವ ಕೆ.ಎನ್ ರಾಜಣ್ಣನ ಮೇಲೆ ಮಾತ್ರವೇ ಅಲ್ಲದೇ, ಅವರ ಪುತ್ರ ಎಂಎಸ್ಸಿ ರಾಜೇಂದ್ರ ರಾಜಣ್ಣ ಅವರ ಮೇಲೂ ಹನಿಟ್ರ್ಯಾಪ್ ಮಾಡಿರೋ ಗಂಭೀರ ಆರೋಪ ಸದನದಲ್ಲಿ ಪ್ರತಿಧ್ವನಿಸಿತು. ಈ ಬಗ್ಗೆ ಸದನದಲ್ಲಿ ಮಾತನಾಡಿದಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ವಿರುದ್ಧ ಮಾತ್ರವೇ ಹನಿಟ್ರ್ಯಾಪ್ ಮಾಡೋದಕ್ಕೆ ಯತ್ನಿಸಿದ ಪುರಾವೆಗಳು ಇದ್ದಾವೆ. ಈ ಬಗ್ಗೆ ಲಿಖಿತ ದೂರು ನೀಡುವುದಾಗಿ ಸದನದಲ್ಲಿ ತಿಳಿಸಿದರು. ಇನ್ನೂ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡೋದಕ್ಕೆ ಪ್ರಯತ್ನಿಸಿರೋದಷ್ಟೇ ಅಲ್ಲ. ಅವರ ಪುತ್ರ ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರ ಮೇಲೂ ಈ ಯತ್ನ ನಡೆಸಲಾಗಿದೆ. ಈ ಮಾತನ್ನು ಸ್ವತಹ ಎಂಎಲ್ಸಿ ರಾಜೇಂದ್ರ ರಾಜಣ್ಣ ತಿಳಿಸಿದ್ದಾರೆ. ನನಗೆ ಈ ಸಂಬಂಧ ಹಲವು ವೀಡಿಯೋ ಕಾಲ್, ಮಸೇಜ್ ಗಳು ಬರುತ್ತಿವೆ. ಕಳೆದ ಆರು ತಿಂಗಳಿನಿಂದ ಹನಿಟ್ರ್ಯಾಪ್ ಗೆ ಸಿಲುಕಿಸಲು ಪ್ರಯತ್ನಿಸಲಾಗಿದೆ. ಹನಿಟ್ರ್ಯಾಪ್ ಬಹಳ ದಿನಗಳಿಂದ ನಡೆಯುತ್ತಿದೆ. ನಮ್ಮ ತಂದೆಯವರ ಮೇಲೆ ಮಾತ್ರವಲ್ಲ, ನನ್ನ ಮೇಲೂ ಯತ್ನಿಸಲಾಗಿದೆ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಮಧ್ಯಾಹ್ನ ಆರಂಭಗೊಂಡ ಮಳೆ ಸತತ ಒಂದು ಗಂಟೆಯ ವರೆಗೆ ಸುರಿದಿದೆ. ಮುಂಗಾರು ಪೂರ್ವ ಮಳೆಯು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜನತೆಗೆ ತಂಪೆರೆದಿದೆ. ಸೊರಬ, ಸಾಗರ, ಉಳವಿ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಿದೆ. ಇಂದು ಗುಡುಗು ಸಿಡಿಲು ಸಹಿತ ಆಲಿಕಲ್ಲಿನೊಂದಿಗೆ ಭಾರೀ ಮಳೆಯೇ ಸೊರಬ ತಾಲ್ಲೂಕಿನಲ್ಲಿ ಆಗಿದೆ. ಸೊರಬ ತಾಲ್ಲೂಕಿನ ಉಳವಿಯಲ್ಲಿ ಸಂಜೆ 4 ಗಂಟೆಯ ಸುಮಾರಿಗೆ ಆರಂಭಗೊಂಡಂತ ಮಳೆ ಮುಕ್ಕಾಲು ಗಂಟೆಯವರೆಗೆ ಸುರಿಯಿತು. ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಮರಗಳು ಮುರಿದು ಬಿದ್ದಿರುವ ಪರಿಣಾಮ, ವಿದ್ಯುತ್ ತಂತಿಗಳು ತುಂಡಾಗಿವೆ ಎನ್ನಲಾಗುತ್ತಿದೆ. ಹೀಗಾಗಿ ವಿದ್ಯುತ್ ಸರಬರಾಜಿನಲ್ಲೂ ವ್ಯತ್ಯಯ ಉಂಟಾಗೋದಾಗಿ ಮೆಸ್ಕಾಂ ಮೂಲಗಳಿಂದ ತಿಳಿದು ಬಂದಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/honeytrap-allegations-state-govt-orders-high-level-probe/ https://kannadanewsnow.com/kannada/centre-approves-mandya-ring-road-project-at-a-cost-of-rs-900-crore/ https://kannadanewsnow.com/kannada/breaking-encounter-between-security-forces-in-bijapur-chhattisgarh-22-naxals-killed-naxal-encounter/

Read More