Subscribe to Updates
Get the latest creative news from FooBar about art, design and business.
Author: kannadanewsnow09
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…
ಶಿವಮೊಗ್ಗ: ಬಿಜೆಪಿ, ಬಡವರು, ರೈತರ, ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗುಡುಗಿದ್ದಾರೆ. ಇಂದು ಶಿವಮೊಗ್ಗದಲ್ಲಿನ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದಂತ ಅವರು, 10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ ಎಂದರು. ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್ಗಳ ಹಾರ ಹಾಕಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮೀ ಯೋಜನೆಯ ಹಣ ಹಾಗೂ…
ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಗಜೇಂದ್ರಘಡದಲ್ಲಿ ಇಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೇ ಕೆಲಸ ಮಾಡಿದ್ದಾರೆ. ತಮ್ಮ ತಾಯಿ ತಿರಿಕೊಂಡಾಗ ಅಂತ್ಯ ಸಂಸ್ಕಾರ ಮಾಡಿ ಮತ್ತೆ ಕರ್ತವ್ಯಕ್ಕೆ ಹಾಜರಿಯಾಗಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದದರ್ಭದಲ್ಲಿ ಕಾಂಗ್ರೆಸ್ ನ್ನು ವಿಸರ್ಜಿಸುವಂತೆ ಮಹಾತ್ಮಾ ಗಾಂಧಿಜಿ ಸೂಚಿಸಿದ್ಸರು. ಆಗ ಕಾಂಗ್ರೆಸ್ ವಿಸರ್ಜಿಸಲಿಲ್ಲ. ಈಗ ಜನರು ಮಹಾತ್ಮಾ ಗಾಂಧಿ ಯವರ ಆದೇಶ ಪಾಲನೆ ಮಾಡಿ ಕಾಂಗ್ರೆಸ್ ನ್ನು ನಿರ್ಮೂಲನೆ ಮಾಡುತ್ತಿದ್ದಾರೆ ಎಂದರು. ರಾಜ್ಯದಲಿ ನರೇಂದ್ರ ಮೋದಿಯವರ ಆಶೀರ್ವಾದಿಂದ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ನಾನು ರೈತರಿಗೆ ನಾಲ್ಕು ಸಾವಿರ ಕೊಡುವುದನ್ನು ಯಾಕೆ ನ್ಲಿಲ್ಲಿಸಿದಿರಿ. ಭಾಗ್ಯಲಕ್ಷ್ಮೀ ಯಾಕೆ ನಿಲ್ಲಿಸಿದಿರಿ, ಸರ್ಕಾರ ದಿವಾಳಿಯಾಗಿದೆ.…
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಅದರಲ್ಲೂ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾದ ತಾಪಮಾನ ಮಾತ್ರ ನಿಮ್ಮನ್ನು ಬೆಚ್ಚಿ ಬೀಳಿಸುತ್ತೆ. ಅದೆಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದ್ದು, ರಾಜ್ಯದ ಜಿಲ್ಲಾವಾರು ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಈ ಕೆಳಗಿನಂತೆ ದಾಖಲಾಗಿದೆ. ಇಂದು ಕೊಪ್ಪಳದಲ್ಲಿ 46.7 ಡಿಗ್ರಿ ಸೆಲ್ಸಿಯರ್ ನಷ್ಟು ದಾಖಲೆಯ ತಾಪಮಾನ ದಾಖಲಾಗಿದೆ ಎಂದಿದೆ. ಇಂದು ಕೆಲ ಜಿಲ್ಲೆಗಳನ್ನು ಹೊರತು ಪಡಿಸಿದ್ರೇ ಬರುತೇಕ ರಾಜ್ಯದ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೇಲೆ ತಾಪಮಾನ ದಾಖಲಾಗಿದೆ. ಈ ಮೂಲಕ ರಾಜ್ಯದ ಜನರು ಬಿಸಿಲ ತಾಪಕ್ಕೆ ಕಂಗೆಡುವಂತೆ ಮಾಡಿದೆ. ಹೀಗಿದೆ ಜಿಲ್ಲಾವಾರು ತಾಪಮಾನದ ವಿವರ ಬೆಂಗಳೂರು ನಗರ- 41.1 ಡಿಗ್ರಿ ಸೆಲ್ಸಿಯಸ್ ಬೆಂಗಳೂರು ಗ್ರಾಮಾಂತರ- 40.6 ರಾಮನಗರ-42.2 ಕೋಲಾರ-43.5 ಚಿಕ್ಕಬಳ್ಳಾಪುರ- 41.2 ತುಮಕೂರು-…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಎ.1 ಆರೋಪಿಯಾಗಿದ್ದಾರೆ. ಪ್ರಕರಣದ ಗಂಭೀರತೆಯನ್ನು ಅರಿತಂತ ಪುತ್ರ ಹಾಗೂ ತಂದೆ ಇಬ್ಬರೂ ನಿರೀಕ್ಷಣಾ ಜಾಮೀನು ಕೋರಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೇಲೆ ನಾನ್ ಬೇಲೆಬಲ್ ಕೇಸ್ ಬುಕ್ ಆಗೋ ಸಾಧ್ಯತೆ ಇದೆ. ಹೀಗಾಗಿ ಅವರು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನಾಳೆಯೇ ಬಂಧನಕ್ಕೆ ಒಳಗಾಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಪ್ರಜ್ವಲ್ ರಾಸಲೀಲೆ ಕೇಸ್ ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ಹೊಳೆನರಸೀಪುರ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಸಂತ್ರಸ್ತ ಮಹಿಳೆಯಿಂದ ಜಡ್ಜ್ ಮುಂದೆ 164ರ ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಇನ್ನೂ ಸಂತ್ರಸ್ತ ಮಹಿಳೆಯು ನ್ಯಾಯಾಧೀಶರ ಮುಂದೆ ಪೊಲೀಸರು ಪ್ರಕರಣದಲ್ಲಿ ದಾಖಲಿಸಿರುವಂತ ಎಫ್ಐಆರ್ ನಲ್ಲಿ ಸರಿಯಾದ ಸೆಕ್ಷನ್ ಹಾಕಿಲ್ಲ. ಹೀಗಾಗಿ ಎಫ್ಐಆರ್ ನಲ್ಲಿ 376 ಸೆಕ್ಷನ್ ಸೇರಿಸುವಂತೆ ಮನವಿ ಮಾಡಲಾಗಿದೆ. ಒಂದು ವೇಳೆ ನ್ಯಾಯಾಲಯವು…
ಬಳ್ಳಾರಿ: ಇಂದು ನಗರದ ಕಲ್ಯಾಣಿ ಜ್ಯೂವೆಲ್ಲರ್ ಶಾಪ್ ನಲ್ಲಿ ಎಸಿ ಬ್ಲಾಸ್ ಆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಬಳ್ಳಾರಿ ನಗರದ ತೇರು ಬೀದಿಯಲ್ಲಿರುವಂತ ಚಿನ್ನಾಭರಣ ಮಾರಾಟ ಮಳಿಗೆ ಕಲ್ಯಾಣಿ ಜ್ಯೂವೆಲ್ಲರ್ ಶಾಪ್ ನಲ್ಲಿ ಇಂದು ಸಂಜೆ ಎಸಿ ದಿಢೀರ್ ಸ್ಪೋಟಗೊಂಡಿದೆ. ಇದರಿಂದಾಗಿ ನಾಲ್ವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡಿದೆ ಎನ್ನಲಾಗಿದೆ. ಎಸಿ ಸ್ಪೋಟಗೊಂಡ ರಭಸಕ್ಕೆ ಆಭರಣ ಮಳಿಗೆಯ ಕಿಟಕಿ ಗಾಜುಗಳು ಒಡೆದು, ಚಿನ್ನಾಭರಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾವೆ ಎನ್ನಲಾಗುತ್ತಿದೆ. ಎಸಿ ಸ್ಪೋಟದಿಂದ ಉಂಟಾದಂತ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. https://kannadanewsnow.com/kannada/rbi-removes-curbs-against-bajaj-finance/ https://kannadanewsnow.com/kannada/elections-to-six-legislative-council-seats-in-karnataka-to-be-held-on-june-3-results-to-be-declared-on-june-6/
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬಜಾಜ್ ಫೈನಾನ್ಸ್ ಗೆ ‘ಇಕಾಮ್’ ಅಡಿಯಲ್ಲಿ ಮತ್ತು ಆನ್ ಲೈನ್ ನಲ್ಲಿ ತನ್ನ ‘ಇನ್ ಸ್ಟಾ ಇಎಂಐ ಕಾರ್ಡ್’ ಮೂಲಕ ಹೊಸ ಸಾಲಗಳ ಮಂಜೂರಾತಿ ಮತ್ತು ವಿತರಣೆಯನ್ನು ಪುನರಾರಂಭಿಸಲು ಅವಕಾಶ ನೀಡಿದೆ. ಕಂಪನಿಯು ತನ್ನ ಅನುಸರಣೆಯನ್ನು ಸೂಚಿಸಿದ ಕೆಲವೇ ದಿನಗಳಲ್ಲಿ ಮತ್ತು ಔಪಚಾರಿಕವಾಗಿ ಆರ್ಬಿಐನಿಂದ ಪರಿಶೀಲನೆಯನ್ನು ಕೋರಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಕಂಪನಿಯು ಕೈಗೊಂಡ ಪರಿಹಾರ ಕ್ರಮಗಳ ಆಧಾರದ ಮೇಲೆ ಆರ್ಬಿಐ ತನ್ನ ಮೇ 2, 2024 ರ ಪತ್ರದ ಮೂಲಕ, ಇಕಾಮ್ ಮತ್ತು ಆನ್ಲೈನ್ ಡಿಜಿಟಲ್ ‘ಇನ್ಸ್ಟಾ ಇಎಂಐ ಕಾರ್ಡ್’ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವ ನಿರ್ಧಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಿಳಿಸಿದೆ ಎಂದು ನಾವು ತಿಳಿಸಲು ಬಯಸುತ್ತೇವೆ. ಕಂಪನಿಯು ಈಗ ಇಎಂಐ ಕಾರ್ಡ್ ಗಳ ವಿತರಣೆ ಸೇರಿದಂತೆ ಮೇಲಿನ ಎರಡು ವ್ಯವಹಾರ ವಿಭಾಗಗಳಲ್ಲಿ ಸಾಲಗಳ ಮಂಜೂರಾತಿ ಮತ್ತು ವಿತರಣೆಯನ್ನು ಪುನರಾರಂಭಿಸಲಿದೆ ಎಂದು ಬಜಾಜ್ ಫೈನಾನ್ಸ್ ನಿಯಂತ್ರಕ ಫೈಲಿಂಗ್ ನಲ್ಲಿ ತಿಳಿಸಿದೆ. https://kannadanewsnow.com/kannada/elections-to-six-legislative-council-seats-in-karnataka-to-be-held-on-june-3-results-to-be-declared-on-june-6/…
ಬೆಂಗಳೂರು: ರಾಜ್ಯದಲ್ಲೇ ಅತಿಹೆಚ್ಚು ಎನ್ನುವಂತೆ ಕಳೆದ 7 ವರ್ಷಗಳಲ್ಲೇ ಅತ್ಯಧಿಕ ದಾಖಲೆಯ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಂದು ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕಳೆದ 7 ವರ್ಷಗಳಲ್ಲೇ ಅತ್ಯಧಿಕ ಎನ್ನುವಷ್ಟು 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು, ಮೇ 02 ರಂದು ಕರ್ನಾಟಕ ರಾಜ್ಯದಲ್ಲಿ ದಾಖಲಾದ ಗರಿಷ್ಠ ತಾಪಮಾನದ ವರ್ಷವಾರು (2017-2024) ಹೋಲಿಕೆ. ಕಳೆದ 7 ವರ್ಷಕ್ಕೆ ಹೋಲಿಸಿದರೆ 46.7˚C ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಎಂದು ತಿಳಿಸಿದೆ. ಕೆಎಸ್ ಡಿಎಂಸಿ ನೀಡಿರುವಂತ ಮಾಹಿತಿಯ ಅಂಕಿ ಅಂಶಗಳ ಪ್ರಕಾರ 2017ರಲ್ಲಿ 42.30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. 2018ರಲ್ಲಿ 45, 2019ರಲ್ಲಿ 43.70, 2020ರಲ್ಲಿ 41.90, 2021ರಲ್ಲಿ41.90, 2022ರಲ್ಲಿ 44.70, 2023ರಲ್ಲಿ 38.80 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಆದ್ರೇ 2024ರ ಮೇ.1ರ ಬೆಳಿಗ್ಗೆ 8.30ರಿಂದ ಮೇ.2ರ ಬೆಳಿಗ್ಗೆ 8.30ರವರೆಗೆ…
ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದರು. ಗುರುವಾರ ಸಂಜೆ ಆಗಮಿಸಿದ ನಿರಂಜನ ಹಿರೇಮಠ ದಂಪತಿ, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನ ಹಿರೇಮಠ, ನಮ್ಮ ಕಷ್ಟಕಾಲದಲ್ಲಿ ತಮ್ಮೆಲ್ಲ ಕೆಲಸಗಳನ್ನು ಬಿಟ್ಟು ಲಕ್ಷ್ಮೀ ಹೆಬ್ಬಾಳಕರ್ ಅವರು ಸುರಿಯುತ್ತಿದ್ದ ಮಳೆಯ ಮಧ್ಯೆಯೂ ನಮ್ಮ ಮನೆಗೆ ಬಂದು ನಮ್ಮ ದುಃಖದಲ್ಲಿ ಭಾಗಿಯಾದರು. ಜೊತೆಗೆ ನಮಗೆ ಭದ್ರತೆ ಒದಗಿಸುವ, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮತ್ತು ಪ್ರಕರಣದ ತನಿಖೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಮಾಡುವ ಕೆಲಸ ಮಾಡಿದರು. ಹಾಗಾಗಿ ಅವರಿಗೆ ಕೃತತ್ಜ್ಞತೆ ಸಲ್ಲಿಸಬೇಕೆಂದು ನಾವು…
ಬೆಂಗಳೂರು: ನಗರದಲ್ಲಿ ಬೇಸಿಗೆಯ ಬಿಸಿಯಿಂದ ತತ್ತರಿಸಿ ಹೋಗಿದ್ದಂತ ಜನತೆಗೆ ಇಂದು ಮಳೆರಾಯನ ಆಗಮನದ ಮೂಲಕ ತಂಪೆರೆದಂತೆ ಆಗಿದೆ. ನಗರದ ಹಲವೆಡೆ ಮಳೆರಾಯ ಆರ್ಭಟಿಸಿದ್ದಾನೆ. ಬೆಂಗಳೂರು ನಗರದ ವಸಂತಪುರ, ವಿಜಯನಗರ, ಕುಮಾರಸ್ವಾಮಿ ಲೇಔಟ್, ಕಲ್ಯಾಣ ನಗರ, ವೈಟ್ ಫೀಲ್ಡ್, ಕೆಆರ್ ಪುರಂ ಸೇರಿದಂತೆ ವಿವಿಧ ಕಡೆಯಲ್ಲಿ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಸುರಿದಂತೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತೆ ಆಗಿದೆ. ಕೆಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಬೆಂಗಳೂರಿನ ಪೂರ್ವ ವಲಯ ಹಾಗೂ ನಗರದ ದಕ್ಷಿಣ ಭಾಗದಲ್ಲಿ ಹಲವೆಡೆ ಮಿಂಚು, ಗುಡುಗು ಸಹಿತ ಮಳೆ ಸುರಿಯುತ್ತಿದೆ. ಈ ಮೂಲಕ ಕಳೆದ ಮೂರರಿಂದ ನಾಲ್ಕು ತಿಂಗಳ ಬಳಿಕ ಬೆಂಗಳೂರಲ್ಲಿ ಮಳೆಯಾಗಿ ತಂಪೆರೆದಂತೆ ಆಗಿದೆ. https://kannadanewsnow.com/kannada/another-death-due-to-heat-wave-in-the-state/ https://kannadanewsnow.com/kannada/elections-to-six-legislative-council-seats-in-karnataka-to-be-held-on-june-3-results-to-be-declared-on-june-6/