Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಡಿಜಿಟಲ್ ಡೆಸ್ಕ್: ಮಾಹಿತಿ ಹಕ್ಕು (Right to Information Act 2005 – RTI) ಕಾಯ್ದೆಯನ್ನು 2005 ರಲ್ಲಿ ಪರಿಚಯಿಸಲಾಯಿತು. ಇದು ಭಾರತದ ನಾಗರಿಕರಿಗೆ ಸರ್ಕಾರ ಅಥವಾ ಸರ್ಕಾರಿ ಸಂಸ್ಥೆಗಳು ಹೊಂದಿರುವ ಯಾವುದೇ ಮಹತ್ವದ ಮಾಹಿತಿಯನ್ನು ತಿಳಿದುಕೊಳ್ಳುವ ಹಕ್ಕನ್ನು ನೀಡುತ್ತದೆ. ಹಾಗಾದರೇ ನೀವು ಕುಳಿತಲ್ಲೇ ಆನ್ ಲೈನ್ ಮೂಲಕ ಆರ್ ಟಿ ಐ ಅಡಿಯಲ್ಲಿ ಅರ್ಜಿ ಸಲ್ಲಿಕೆ ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸಾರ್ವಜನಿಕ ಪ್ರಾಧಿಕಾರಗಳ ನಿಯಂತ್ರಣದಲ್ಲಿ ಮಾಹಿತಿಯ ಪ್ರವೇಶವನ್ನು ಪಡೆಯಲು ನಾಗರಿಕರಿಗೆ ಸಹಾಯ ಮಾಡಲು ಮತ್ತು ಎಲ್ಲಾ ಸಾರ್ವಜನಿಕ ಪ್ರಾಧಿಕಾರದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಉತ್ತೇಜಿಸಲು ಮಾಹಿತಿ ಹಕ್ಕು ಕಾಯ್ದೆ, 2005 ಅನ್ನು ಪರಿಚಯಿಸಲಾಯಿತು. ಆರ್ಟಿಐ ಕಾಯ್ದೆಯ ಪ್ರಕಾರ, ಯಾವುದೇ ಮಾಹಿತಿಯನ್ನು ಪಡೆಯಲು ಬಯಸುವ ಯಾವುದೇ ವ್ಯಕ್ತಿಯು ಅಗತ್ಯ ಶುಲ್ಕವನ್ನು ಪಾವತಿಸುವ ಮೂಲಕ ಆರ್ಟಿಐ ಆನ್ಲೈನ್ ಮೂಲಕ ಲಿಖಿತವಾಗಿ ಅಥವಾ ಆನ್ಲೈನ್ನಲ್ಲಿ ವಿನಂತಿಸಬಹುದು. ಆರ್ಟಿಐ ಕಾಯ್ದೆಯಡಿ ಮಾಹಿತಿಗಾಗಿ ವಿನಂತಿಯನ್ನು ಸ್ವೀಕರಿಸಿದ ನಂತರ, ಕೇಂದ್ರ ಸಾರ್ವಜನಿಕ ಮಾಹಿತಿ…
ರಾಜ್ಯದಲ್ಲಿ ಶಿಕ್ಷಣಕ್ಕಾಗಿ 8,800 ಕೋಟಿ ಸಿಎಸ್ ಆರ್ ನಿಧಿಯನ್ನು ಮೀಸಲಿರಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬರುವ ₹8,800 ಕೋಟಿ ಸಿಎಸ್ಆರ್ ನಿಧಿಯನ್ನು ಮುಂದಿನ 3-4 ವರ್ಷಗಳ ಕಾಲ ಶಾಲೆಗಳ ನಿರ್ಮಾಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. https://twitter.com/KarnatakaVarthe/status/1832004426329989409 https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/ https://kannadanewsnow.com/kannada/good-news-good-news-for-tb-patients-centre-approves-new-treatment-eliminates-tb-in-6-months/
ಪೂಜೆ! ಮೂಲಕ ಯಾವುದಾದರೂ ಶುಭ ಕಾರ್ಯಕ್ರಮಗಳು ನಡೆದರೆ ನಮಗೆಲ್ಲರಿಗೂ ಸಂತೋಷವಾಗುತ್ತದೆ ಆದರೆ ಶುಭ ಸಮಾರಂಭ ಎಂದಾಕ್ಷಣ ನಮಗೆ ನೆನಪಿಗೆ ಬರುವುದು ಮದುವೆ, ಆದರೆ ಮದುವೆ, ಕಿವಿ ಚುಚ್ಚುವಿಕೆ, ಶಿಶುನಾಳ, ಮಕ್ಕಳನ್ನು ಶಾಲೆಗೆ ಸೇರಿಸುವುದು ಮತ್ತು ಕಾಲೇಜುಗಳು, ಮಕ್ಕಳಿಗೆ ಒಳ್ಳೆಯ ಕೆಲಸ ಸಿಗುವುದು ಎಲ್ಲವೂ ಶುಭ ಕಾರ್ಯಕ್ರಮಗಳು. ಜೀವನದಲ್ಲಿ ಆಗಬಹುದಾದ ಎಲ್ಲಾ ಶುಭಕಾರ್ಯಗಳು ಶಿವಕಾರ್ಯಗಳು, ಕೆಲವರು ಮನೆಯಲ್ಲಿ ಶುಭ ಕಾರ್ಯಗಳಿಗೆ ಯೋಜನೆ ಹಾಕಿಕೊಂಡರೂ ಅದಕ್ಕೆ ಅಡ್ಡಿಯಾಗುತ್ತಲೇ ಇರುತ್ತದೆ. ಆ ಮಂಗಳಕರ ಅಡೆತಡೆಗಳನ್ನು ನಿವಾರಿಸಲು ಮತ್ತು ಮನೆಯಲ್ಲಿ ಶುಭ ಕಾರ್ಯಗಳು ನಡೆಯಲು ಗಣಪತಿಯನ್ನು ಪೂಜಿಸುವ ಬಗ್ಗೆ ನೀವು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೋಡಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ, ಇತರೆ ಮಾಧ್ಯಮದ ಜೊತಕೆಗೆ ಆಂಗ್ಲ ಅಂದರೆ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಇಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ. 2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ)…
ಹಾಸನ : ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಈ ಯೋಜನೆಯ ಪರಿಷ್ಕೃತ ಅಂದಾಜು 23252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16152ಕೋಟಿ ರೂ.ಗಳನ್ನು ವೆಚ್ಚ ವಾಗಿದ್ದು, ಇನ್ನುಳಿದ 6-7 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು. ಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು,ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದರು. https://kannadanewsnow.com/kannada/good-news-for-those-heading-home-for-ganesh-festival-ksrtc-bmtc-to-arrange-special-buses-from-bengaluru/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/ https://kannadanewsnow.com/kannada/good-news-good-news-for-tb-patients-centre-approves-new-treatment-eliminates-tb-in-6-months/
ಬೆಂಗಳೂರು: ಗೌರಿ ಗಣೇಶ ಹಬ್ಬದ ಕಾರಣ ಸಾಲು ಸಾಲು ರಜೆಯಿದೆ. ಹೀಗಾಗಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಿವಿಧ ಊರುಗಳಿಗೆ ತೆರಳುವುದಕ್ಕೆ ಜನ ಜಂಗುಳಿಯೇ ಏರ್ಪಟ್ಟಿದೆ. ಇಂತಹ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ 1500 ಕೆ ಎಸ್ ಆರ್ ಟಿಸಿ ಬಸ್ ಅಲ್ಲದೇ, ಹೆಚ್ಚುವರಿಯಾಗಿ ಬಿಎಂಟಿಸಿಯಿಂದ 200ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:08.09.2024ದಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ,…
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League -IPL) 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ( Rajasthan Royals ) ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ( Rahul Dravid ) ಅವರನ್ನು ನೇಮಕ ಮಾಡಲಾಗಿದೆ. ದ್ರಾವಿಡ್ ತಕ್ಷಣದಿಂದ ಜಾರಿಗೆ ಬರುವಂತೆ ಫ್ರಾಂಚೈಸಿಯ ಮುಖ್ಯ ತರಬೇತುದಾರರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಮುಂಬರುವ ಮೆಗಾ ಹರಾಜು ಸೇರಿದಂತೆ 2025 ರ ಋತುವಿನ ಯೋಜನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ರಾಜಸ್ಥಾನ್ ರಾಯಲ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವಾಪಸಾಗಲಿದ್ದಾರೆ ಎಂದಿದೆ. ಕ್ರಿಕೆಟ್ ಐಕಾನ್ ತನ್ನ ಗುಲಾಬಿ ಜರ್ಸಿಯನ್ನು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲಶ್ ಮೆಕ್ಕ್ರಮ್ ಅವರಿಂದ ಸ್ವೀಕರಿಸುವಾಗ ಸೆರೆಹಿಡಿಯಲಾಯಿತು. ಬೆಂಗಳೂರಿನಲ್ಲಿ ಸಹಿ ಹಾಕಲಾಗುತ್ತಿರುವ ಒಪ್ಪಂದವನ್ನು ಸೆರೆಹಿಡಿಯಲು ಆರ್ ಆರ್ ಅಡ್ಮಿನ್ ಕೂಡ ಹಾಜರಿದ್ದರು ಎಂದು ನಂಬಲಾಗಿದೆ ಎಂದು ಹೇಳಿದೆ. “ವಿಶ್ವಕಪ್…
ಶಿವಮೊಗ್ಗ : ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಹರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ಅನ್ಲೈನ್ ಕೌನ್ಸಲಿಂಗ್ಗೆ ಅರ್ಜಿ ಆಹ್ವಾನ ಶಿವಮೊಗ್ಗದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 06ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/breaking-instagram-star-younis-zaroora-taken-into-police-custody-in-bengaluru/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/
ಶಿವಮೊಗ್ಗ : ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಸೆ. 10 ರಿಂದ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 10 ರಂದು ನೆಹರು ಕ್ರೀಡಾಂಗಣದಲ್ಲಿ, ಸೆಪ್ಟೆಂಬರ್ 14 ರಂದು ನೆಹರೂ ಮೈದಾನ, ಸಾಗರದಲ್ಲಿ, ಸೆಪ್ಟೆಂಬರ್ 15 ರಂದು ವಿ.ಐ.ಎಸ್.ಎಲ್ ಕ್ರೀಡಾಂಗಣ ಭದ್ರಾವತಿ ಮತ್ತು ಸೊರಬ ತಾಲ್ಲೂಕಿನ ಆನವಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣ, ಸೆಪ್ಟೆಂಬರ್ 17 ರಂದು ತಾಲ್ಲೂಕು ಕ್ರೀಡಾಂಗಣ ಶಿಕಾರಿಪುರ ಮತ್ತು ತಾಲ್ಲೂಕು ಕ್ರೀಡಾಂಗಣ ಹೊಸನಗರದಲ್ಲಿ, ಸೆಪ್ಟೆಂಬರ್ 18 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ತೀರ್ಥಹಳ್ಳಿಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ನಿಯಮಗಳು: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗುವುದು. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು…
ಶಿವಮೊಗ್ಗ : ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದುದಿಲ್ಲ. ಸಾಗರ ತಾಲ್ಲೂಕಿನ ತಲವಾಟ 01, ಎಸ್.ಎಸ್ ಭೋಗ್ 01, ಉಳ್ಳೂರು 01, ತೀರ್ಥಹಳ್ಳಿ ತಾಲ್ಲೂಕಿನ ಹಾರೊಗೊಳಿಗೆ 01, ಅರಳಸುರಳಿ 01,…