Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದ ಅಲ್ಲಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದೆ. ಕೆಲವೆಡೆ ದಾಳಿ ನಡೆಸಿ ಮಾನವ ಜೀವ ಹಾನಿಯಾಗಿದ್ದರೇ, ಮತ್ತೆ ಕೆಲವೆಡೆ ಬೆಳೆ ನಾಶಗೊಂಡು ರೈತ ಕಂಗಾಲಾಗಿದ್ದಾನೆ. ಇದೇ ಸಂದರ್ಭದಲ್ಲಿ ಅರಣ್ಯ ಪ್ರದೇಶದ ಹೊರಗೆ ವನ್ಯ ಜೀವಿಗಳು ಕಂಡು ಬಂದರೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಇಲಾಖೆ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು. https://twitter.com/KarnatakaVarthe/status/2008083720532832460 https://kannadanewsnow.com/kannada/term-insurance-mandatory-for-medical-education-department-staff/

Read More

ಬೆಂಗಳೂರು: ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಪ್ರಸ್ತುತ ಸಂಬಳ ಮತ್ತು ಹುದ್ದೆಗೆ ಅನುಗುಣವಾಗಿ ಅವಧಿ ವಿಮೆ (ಟರ್ಮ್ ಇನ್‌ಶ್ಯೂರೆನ್ಸ್‌) ಕಡ್ಡಾಯವಾಗಿ ಪಡೆಯಬೇಕು. ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ವಿಮಾ ಹಣ ಪಡೆಯಲು ಅವರ ಕುಟುಂಬದ ಸದಸ್ಯರು ತಾಂತ್ರಿಕ ಸಮಸ್ಯೆಗಳು ಎದುರಿಸಿದ ಕಾರಣ, ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಅವಧಿ ವಿಮೆ ಪಡೆಯುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಸೂಚನೆ ನೀಡಿದ್ದಾರೆ. https://twitter.com/KarnatakaVarthe/status/2008083291518468533 https://kannadanewsnow.com/kannada/us-vice-president-jd-vances-residence-raided-suspect-arrested/ https://kannadanewsnow.com/kannada/make-weekend-with-ramesh-a-lesson-change-the-education-system-young-man-commits-suicide-by-writing-a-death-note/

Read More

ಅಮೇರಿಕಾ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರ ಓಹಿಯೋ ಮನೆಯ ಮೇಲೆ ವ್ಯಕ್ತಿಯೊಬ್ಬ ದಾಳಿ ಮಾಡಿದ್ದಾನೆ.  WLWT 5 ರ ದೃಶ್ಯಗಳ ಪ್ರಕಾರ, ಘಟನೆಯ ನಂತರ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯ ಸಮಯದಲ್ಲಿ ವ್ಯಾನ್ಸ್ ಮನೆಯಲ್ಲಿ ಇರಲಿಲ್ಲ ಮತ್ತು ಯಾವುದೇ ಗಾಯಗಳು ವರದಿಯಾಗಿಲ್ಲ. ಶಂಕಿತನ ಉದ್ದೇಶ ಅಥವಾ ಹೆಚ್ಚಿನ ವಿವರಗಳನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಿಲ್ಲ. ಅಮೆರಿಕ ವೆನೆಜುವೆಲಾ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸಭೆಯ ನಂತರ ವ್ಯಾನ್ಸ್ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ತಮ್ಮ ಗಾಲ್ಫ್ ಕ್ಲಬ್‌ನಲ್ಲಿದ್ದರು ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ ನಂತರ ಅವರು ನಂತರ ತಮ್ಮ ಸಿನ್ಸಿನಾಟಿ ಮನೆಗೆ ಮರಳಿದರು. ಘಟನೆಯ ಬಗ್ಗೆ ಪೊಲೀಸರು ತುರ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಯುಎಸ್ ಸೀಕ್ರೆಟ್ ಸರ್ವಿಸ್ ಇನ್ನೂ ಹೇಳಿಕೆ ನೀಡಿಲ್ಲ. https://kannadanewsnow.com/kannada/make-weekend-with-ramesh-a-lesson-change-the-education-system-young-man-commits-suicide-by-writing-a-death-note/

Read More

ಬೆಂಗಳೂರು : ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಕಾರ್ಯಕರ್ತ ರಾಜಶೇಖರ್ ಹತ್ಯೆ ಒಂದೆಡೆ, ಆದರೆ ಸ್ವಪಕ್ಷದ ಕಾರ್ಯಕರ್ತನ ಕೊಲೆಯನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇದು ನಾಚುಗೇಡು. ಅದಕ್ಕಾಗಿ ಆ ನತದೃಷ್ಟ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಏನು ಫಲಿತಾಂಶ ಹೊರಬಂತು? ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಏನು ಮಾಹಿತಿ ಇದೆ? ಎಂಬುದನ್ನು…

Read More

ಬೆಂಗಳೂರು: ರಿಲಯನ್ಸ್ ಜಿಯೋ ನವೆಂಬರ್ 2025 ರಲ್ಲಿ ವೈರ್‌ಲೆಸ್ ಮತ್ತು ವೈರ್‌ಲೈನ್ ವಿಭಾಗಗಳಲ್ಲಿ ದೃಢವಾದ ಬೆಳವಣಿಗೆಯನ್ನು ದಾಖಲಿಸುವ ಮೂಲಕ ಕರ್ನಾಟಕದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಜಿಯೋ 2.78 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆಯನ್ನು ದಾಖಲಿಸಿದೆ. ಇದು ನವೆಂಬರ್ 2025 ರ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಅದರ ಒಟ್ಟು ಬಳಕೆದಾರರ ಸಂಖ್ಯೆಯನ್ನು 2.60 ಕೋಟಿಗೆ ಕೊಂಡೊಯ್ದಿದೆ. ಈ ಮೂಲಕ, ಜಿಯೋ ಮತ್ತೊಮ್ಮೆ ರಾಜ್ಯದ ಮೊಬೈಲ್ ವಿಭಾಗದಲ್ಲಿ ಅಗ್ರ ಲಾಭ ಗಳಿಸಿದ ಸ್ಥಾನವನ್ನು ಪಡೆದುಕೊಂಡಿದೆ. ಕರ್ನಾಟಕದಲ್ಲಿ, ರಿಲಯನ್ಸ್ ಜಿಯೋ ಫಿಕ್ಸೆಡ್ ವೈರ್‌ಲೆಸ್ ಆಕ್ಸೆಸ್ (ಎಫ್ ಡಬ್ಲ್ಯೂಎ) ನಲ್ಲಿ ವೇಗವಾಗಿ ಬೆಳೆಯುತ್ತಿದೆ. ಜಿಯೋ ಏರ್ ಫೈಬರ್ ಸೇವೆಯು ಮಾರುಕಟ್ಟೆ ನಾಯಕನಾಗಿ ಹೊರಹೊಮ್ಮುತ್ತಿದೆ. ನವೆಂಬರ್ 2025 ರ ಟ್ರಾಯ್‌ನ ಇತ್ತೀಚಿನ ದತ್ತಾಂಶವು ಈ ಪ್ರದೇಶದಲ್ಲಿ ಜಿಯೋದ ಹೆಚ್ಚುತ್ತಿರುವ ಪ್ರಾಬಲ್ಯವನ್ನು ಎತ್ತಿ ತೋರಿಸುತ್ತದೆ. ಕರ್ನಾಟಕ ವೃತ್ತದಲ್ಲಿ ಸಕ್ರಿಯ ಜಿಯೋ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕರ್ನಾಟಕದಲ್ಲಿ ದೀರ್ಘ ಕಾಲ ಆಡಳಿತ ನಡೆಸಿದ್ದೇನೆ ಎಂಬುದಾಗಿ ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಕೆಟ್ಟ ಆಡಳಿತಕ್ಕೆ ನಿದರ್ಶನ. ಅವರ ಆಡಳಿತದ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಅವರು ಬೇಸರ ವ್ಯಕ್ತಪಡಿಸಿದರು. ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದ್ದ ಕರ್ನಾಟಕ ಇಂದು ಅದಕ್ಷ, ಕೆಟ್ಟ ಆಡಳಿತಕ್ಕೆ ನಿದರ್ಶನ ಆಗಿದೆ. ದೇವರಾಜು ಅರಸು ಎಲ್ಲಿ? ಇವರಲ್ಲಿ? ಅರಸು ಅವರ ದಾಖಲೆ ಮುರಿಯುವುದು ಇರಲಿ, ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ. ಕಾಂಗ್ರೆಸ್ಸಿಗೆ ಮತದಾರರು ಬುದ್ಧಿ ಕಲಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿಕೊಳ್ಳುವ ಇವರಿಗೆ ಮತದಾರರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಕಳೆದ…

Read More

ನವದೆಹಲಿ : ಆಪಲ್ ಇಂಕ್ 2025 ರಲ್ಲಿ ಭಾರತದಿಂದ 50 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಐಫೋನ್‌ಗಳನ್ನು ರಫ್ತು ಮಾಡಿತು, ಇದು ದೇಶದ ಉತ್ಪಾದನಾ ವಲಯಕ್ಕೆ ಮಹತ್ವದ ಮೈಲಿಗಲ್ಲು. ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮ ಮತ್ತು ಉತ್ಪಾದಕ ಆರ್ಥಿಕತೆಯತ್ತ ಪರಿವರ್ತನೆಯಿಂದಾಗಿ ಈ ಬೆಳವಣಿಗೆ ಸಂಭವಿಸಿದೆ ಎಂದು X ನಲ್ಲಿ ಹಂಚಿಕೊಂಡರು. https://twitter.com/AshwiniVaishnaw/status/2008057515364544767 “ಪ್ರಧಾನಿ @narendramodi ಅವರ ‘ಮೇಕ್ ಇನ್ ಇಂಡಿಯಾ’ ಮತ್ತು ಉತ್ಪಾದಕ ಆರ್ಥಿಕತೆಯಾಗುವ ನಮ್ಮ ಅನ್ವೇಷಣೆಗೆ ಪ್ರಮುಖ ಮೈಲಿಗಲ್ಲಾಗಿ, ಆಪಲ್ 2025 ರಲ್ಲಿ $50 ಬಿಲಿಯನ್ ಮೌಲ್ಯದ ಮೊಬೈಲ್ ಫೋನ್‌ಗಳನ್ನು ರವಾನಿಸುತ್ತದೆ” ಎಂದು ವೈಷ್ಣವ್ ಹೇಳಿದರು. ಸಂದರ್ಭವನ್ನು ನೀಡುವುದಾದರೆ, FY21 ರಿಂದ FY25 ರವರೆಗಿನ ಐದು ವರ್ಷಗಳ PLI ಅವಧಿಯಲ್ಲಿ, ಸ್ಯಾಮ್‌ಸಂಗ್ ಸುಮಾರು USD 17 ಬಿಲಿಯನ್ ಮೌಲ್ಯದ ಸಾಧನಗಳನ್ನು ರವಾನಿಸಿತು. “ಕಳೆದ 11 ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ 6 ಪಟ್ಟು…

Read More

ಆಂಧ್ರಪ್ರದೇಶ: ಆಂಧ್ರಪ್ರದೇಶದ ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಒಎನ್‌ಜಿಸಿ ಕೊರೆಯುವ ಸ್ಥಳದಲ್ಲಿ ಅನಿಲ ಸೋರಿಕೆಯಾದ ನಂತರ ಭೀತಿ ಹರಡಿತು. ದೃಶ್ಯಗಳು ಸ್ಥಳದಿಂದ ಭಾರಿ ಬೆಂಕಿ ಮತ್ತು ಹೊಗೆ ಹೊರಹೊಮ್ಮುತ್ತಿರುವುದನ್ನು ತೋರಿಸುತ್ತವೆ. ಮಾಲಿಕಿಪುರಂ ಮಂಡಲದ ಇರ್ಸುಮಂಡ ಗ್ರಾಮದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಅನಿಲ ಹೊರಸೂಸುತ್ತಲೇ ಇದ್ದುದರಿಂದ ಈ ಘಟನೆ ಸ್ಥಳೀಯರು ಮತ್ತು ಕಾರ್ಮಿಕರಲ್ಲಿ ಭಯಭೀತತೆಯನ್ನು ಉಂಟುಮಾಡಿತು. ತಹಶೀಲ್ದಾರ್ ಶ್ರೀನಿವಾಸ ರಾವ್ ಪ್ರದೇಶವನ್ನು ಪರಿಶೀಲಿಸಿದರು, ಆದರೆ ಹಿರಿಯ ಒಎನ್‌ಜಿಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ತಾಂತ್ರಿಕ ತಜ್ಞರನ್ನು ಧಾವಿಸಲಾಗುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದರು. https://twitter.com/Ramvarma2025/status/2008109138795245727 ಪ್ರಾಥಮಿಕ ಮಾಹಿತಿಯ ಪ್ರಕಾರ, ಇಲ್ಲಿಯವರೆಗೆ ಯಾವುದೇ ಸಾವುನೋವು ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಗ್ಯಾಸ್ ಸೋರಿಕೆ ಪ್ರದೇಶದ ವ್ಯಾಪ್ತಿಯ ಜನರನ್ನು ಸ್ಥಳಾಂತರಿಸಲಾಗಿದೆ. ಜನ ಜಾನುವಾರು ಸಮೇತ ಮನೆಯನ್ನು ನೂರಾರು ಜನರು ತೊರೆದಿರುವುದಾಗಿ ತಿಳಿದು ಬಂದಿದೆ.

Read More

ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್.ಇ.ಎಸ್. ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವಲೆ ಕೆರೆಹೊಸೂರು, ಇಂದಿರಗಾAಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ.ಡಬ್ಲೂö್ಯಡಿ ಲೇಔಟ್, ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಲಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಾಂಗಿ ಸ್ಟೇಜ್ 01, ರೆಡ್ಡಿ ಲೇಔಟ್, ಜೆ.ಎನ್.ಸಿ.ಸಿ. ಕಾಲೇಜ್, ಹಳೆ ಬೊಮ್ಮನಕಟ್ಟೆ, ದೇವಾಂಗಿ ಸ್ಟೇಜ್ 2 ಕರೆಂಟ್ ಇರೋದಿಲ್ಲ. ಬೊಮ್ಮಕಟ್ಟೆ ಎ ಯಿಂದಿ ಹೆಚ್ ಬ್ಲಾಕ್‌ವರೆಗೆ, ಎಂ.ಎನ್.ಕೆ.ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಳ್ಳಿ ರಸ್ತೆ, ಶಾದ್‌ನಗರ, ಮಲ್ಲಿಕಾರ್ಜುನ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲ್ಒನ್ ಅಪ್ಲಿಕೇಶನ್ ಮೂಲಕ ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್ 3% ಡಿಜಿಟಲ್ ಪಾವತಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಪ್ರಯಾಣಿಕರಿಗೆ ಇನ್ನಷ್ಟು ಸುಲಭ ಮತ್ತು ಸುಗಮ ಸೇವೆಗಳನ್ನು ಒದಗಿಸುವ ಉದ್ದೇಶದಿಂದ, ಭಾರತೀಯ ರೈಲ್ವೆ ತನ್ನ ಹೊಸ ಅಧಿಕೃತ ಮೊಬೈಲ್ ಅಪ್ಲಿಕೇಶನ್ ರೈಲ್ಒನ್ ಅನ್ನು ಪ್ರಾರಂಭಿಸಿದೆ. ಈ ಅಪ್ಲಿಕೇಶನ್ನಲ್ಲಿ ಎಲ್ಲಾ ಪ್ರಮುಖ ರೈಲ್ವೆ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸಲಾಗಿದೆ. ರೈಲ್ಒನ್ ಅಪ್ಲಿಕೇಶನ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್ಗಳ ಬುಕ್ಕಿಂಗ್, ಲೈವ್ ರೈಲು ಸಂಚಾರ ಸ್ಥಿತಿ ವೀಕ್ಷಣೆ, ಪಿಎನ್ಆರ್ ಮಾಹಿತಿ ಪರಿಶೀಲನೆ, ಪ್ರಯಾಣ ಯೋಜನೆ, ರೈಲ್ ಮದದ್ ಮೂಲಕ ದೂರು ದಾಖಲಿಸುವುದು ಹಾಗೂ ಪ್ರಯಾಣದ ವೇಳೆ ಆಹಾರ ಆರ್ಡರ್ ಮಾಡುವಂತಹ ಸೌಲಭ್ಯಗಳನ್ನು ಪಡೆಯಬಹುದು. ಎಂ-ಪಿನ್ ಮತ್ತು ಬಯೋಮೆಟ್ರಿಕ್ ಆಧಾರಿತ ಸುರಕ್ಷಿತ ಲಾಗಿನ್ ವ್ಯವಸ್ಥೆ, ಆರ್-ವಾಲೆಟ್ ಪಾವತಿ ವ್ಯವಸ್ಥೆ ಮತ್ತು ರೈಲ್ಕನೆಕ್ಟ್ ಹಾಗೂ ಯುಟಿಎಸ್ ಖಾತೆಗಳೊಂದಿಗೆ ಸಮನ್ವಯತೆ ಈ ಅಪ್ಲಿಕೇಶನ್ ಅನ್ನು ಹೆಚ್ಚು ಸುರಕ್ಷಿತ ಮತ್ತು ಬಳಕೆದಾರ…

Read More