Author: kannadanewsnow09

ನವದೆಹಲಿ: ಭಾರತ ಸೇರಿದಂತೆ ವಿಶ್ವದಾದ್ಯಂತ ಗೂಗಲ್ ಸರ್ವರ್ ಡೌನ್ ಆಗಿರೋದಾಗಿ ಬಳಕೆದಾರರು ವರದಿ ಮಾಡಿದ್ದಾರೆ. ಗೂಗಲ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಬಳಕೆದಾರರು ಪರದಾಡುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಬಳಕೆದಾರರು ಮಾಡುತ್ತಿದ್ದಾರೆ. ಗೂಗಲ್ ಡೌನ್ ಆಗಿದೆಯೇ? ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ. ಸರ್ಚ್ ಇಂಜಿನ್ ಇಲ್ಲದೆ ಗೊಂದಲಕ್ಕೊಳಗಾದಾಗ ನೆಟ್ಟಿಗರು ಕೇಳುತ್ತಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 8:20 ರ ಸುಮಾರಿಗೆ ಗೂಗಲ್ ಹುಡುಕಾಟವು ನೆಟ್ಟಿಗರಿಗೆ ಕೆಲಸ ಮಾಡುತ್ತಿಲ್ಲ ಎಂಬುದಾಗಿ ದೂರಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಡೌನ್ ಡೆಟೆಕ್ಟರ್ ಪ್ರಕಾರ, ಇದನ್ನು ಬರೆಯುವ ಸಮಯದಲ್ಲಿ ಭಾರತದಲ್ಲಿ ಸುಮಾರು 600 ವರದಿಗಳಿವೆ. ಜಾಗತಿಕ ಮಟ್ಟದಲ್ಲಿ, ಗೂಗಲ್ 1300 ಕ್ಕೂ ಹೆಚ್ಚು ವರದಿಗಳೊಂದಿಗೆ ಕುಸಿದಿದೆ ಎಂದು ವರದಿಯಾಗಿದೆ. ಡೌನ್ ಡಿಟೆಕ್ಟರ್ ನ ಸ್ಥಗಿತ ನಕ್ಷೆಯ ಪ್ರಕಾರ, ದೆಹಲಿ, ಲಕ್ನೋ, ಕೋಲ್ಕತಾ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಗೂಗಲ್ ನೊಂದಿಗೆ ಸಮಸ್ಯೆಗಳನ್ನು ವರದಿ ಮಾಡಿವೆ. ಪ್ರಪಂಚದಾದ್ಯಂತ ಸ್ಪಷ್ಟವಾದ ಸ್ಥಗಿತವನ್ನು ಎದುರಿಸಿದ್ದರಿಂದ…

Read More

ನವದೆಹಲಿ: ಅಮಿತ್ ಶಾ ಅವರ ಮಾರ್ಫಿಂಗ್ ವೀಡಿಯೊದ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಯುತ್ತಿರುವ ಮಧ್ಯೆ ಜಾರ್ಖಂಡ್ ಕಾಂಗ್ರೆಸ್ನ ಅಧಿಕೃತ ಎಕ್ಸ್ ಖಾತೆಯನ್ನು ಬುಧವಾರ ತಡೆಹಿಡಿಯಲಾಗಿದೆ. ಬಿಜೆಪಿ ಸರ್ಕಾರ ಮತ್ತೆ ರಚನೆಯಾದರೆ ಒಬಿಸಿ ಮತ್ತು ಎಸ್ಸಿ / ಎಸ್ಟಿ ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಅಮಿತ್ ಶಾ ಅವರ ಚುನಾವಣಾ ಭಾಷಣ ವೈರಲ್ ಆಗಿದೆ” ಎಂಬ ಶೀರ್ಷಿಕೆಯೊಂದಿಗೆ ಹ್ಯಾಂಡಲ್ ವೀಡಿಯೊವನ್ನು ಹಂಚಿಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಸೆಲ್ ಸಿಆರ್ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೆ ನೋಟಿಸ್ ನೀಡಿದ್ದು, ಮೇ 2 ರಂದು ಸೆಲ್ ಕಚೇರಿಯಲ್ಲಿ ಹಾಜರಾಗುವಂತೆ ಸೂಚಿಸಿದೆ. ಏಪ್ರಿಲ್ 29 ರ ಪತ್ರದಲ್ಲಿ, ಇನ್ಸ್ಪೆಕ್ಟರ್ ನರೇಶ್ ಮಲಿಕ್ ವಿಶೇಷ ಸೆಲ್, “ಮೇಲೆ ತಿಳಿಸಿದ ಪ್ರಕರಣವನ್ನು ಸಹಿ ಮಾಡಿದವರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿತ್ತು. ತನಿಖೆಯ ಉದ್ದೇಶಕ್ಕಾಗಿ, ಈ…

Read More

ಬೆಂಗಳೂರು: ತಮ್ಮ ಮತಬ್ಯಾಂಕಿಗಾಗಿ ಕರ್ನಾಟಕ ಸುರಕ್ಷತೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ಷೇಪಿಸಿದರು. ಧಾರವಾಡ ಲೋಕಸಭಾ ಕ್ಷೇತ್ರದ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ದೇಶ ಸುರಕ್ಷತೆಗೆ ಶ್ರಮಿಸುವ ನರೇಂದ್ರ ಮೋದಿಜೀ ಮತ್ತು ದೇಶವಿರೋಧಿಗಳನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷದ ನಡುವೆ ಒಬ್ಬರನ್ನು ಕರ್ನಾಟಕದ ಮತದಾರರು ಆಯ್ಕೆ ಮಾಡಬೇಕು ಎಂದು ತಿಳಿಸಿದರು. ಪ್ರಲ್ಹಾದ್ ಜೋಷಿಯವರಿಗೆ ನೀಡಿದ ಪ್ರತಿಮತವು ಮೋದಿಯವರ ಕೈಗಳನ್ನು ಬಲಪಡಿಸಲಿದೆ ಹಾಗೂ ನಕ್ಸಲ್‍ವಾದ, ಆತಂಕವಾದವನ್ನು ಅಂತ್ಯಗೊಳಿಸಲಿದೆ; ಹಾಗೂ ಭಾರತವನ್ನು ವಿಶ್ವದ ಮೂರನೇ ಆರ್ಥಿಕÀ ಶಕ್ತಿಯಾಗಿ ಮಾರ್ಪಡಿಸಲಿದೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಎಲ್ಲ 28 ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸಿ ಎಂದು ವಿನಂತಿಸಿದರು. ಕಾಶ್ಮೀರವೇ ಇರಲಿ, ಕನ್ಯಾಕುಮಾರಿ, ಬಂಗಾಲ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಕರ್ನಾಟಕ ಸೇರಿ ಎಲ್ಲೆಡೆ ಮೋದಿ ಮೋದಿ ಎಂಬ ಘೋಷಣೆ ಕೇಳಿಸುತ್ತಿದೆ.…

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಬಿಸಿಲಿನ ತಾಪ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ದಾಖಲೆಯ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ಅದರಲ್ಲಿ ಬಳ್ಳಾರಿ ಸೇರಿದಂತೆ ಆರು ಜಿಲ್ಲೆಗಳಲ್ಲಿ 45 ಡಿಗ್ರಿ ದಾಖಲಾಗುವ ಮೂಲಕ, ಅತಿಹೆಚ್ಚು ತಾಪಾಮಾನ ದಾಖಲಾಗಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹೊರತು ಪಡಿಸಿ, ಇಂದು ಉಳಿದ ಎಲ್ಲಾ ಜಿಲ್ಲೆಯಲ್ಲಿ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ ಎಂಬುದಾಗಿ ತಿಳಿಸಿದೆ. ಇನ್ನೂ ಬಳ್ಳಾರಿ, ಕೊಪ್ಪಳ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಇಂದು ದಾಖಲೆಯ ತಾಪಮಾನ ಎನ್ನುವಂತೆ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಜನರು ಮೇ.5ರವರೆಗೆ ಎಚ್ಚರಿಕೆಯಿಂದ ಇರುವಂತೆ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ ಎಚ್ಚರಿಕೆ ನೀಡಿದೆ.…

Read More

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾರಣಕ್ಕಾಗಿ ನಾವು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ನಾವು ಮಹಿಳೆಯರ ಜೊತೆಗೆ ದೌರ್ಜನ್ಯ ಎಸಗುವವರೊಂದಿಗೆ ಅಲ್ಲ. ಪ್ರಜ್ವಲ್ ರೇವಣ್ಣ ಅವರಿಗೆ ಕಠೋರ ಶಿಕ್ಷೆಯಾಗಬೇಕು. ಅದಕ್ಕೆ ನಾವು ಬೆಂಬಲಿಸುತ್ತೇವೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನಗರದಲ್ಲಿ ನಡೆದಂತ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಯಿತು. ಮೈತ್ರಿ ಮಾಡಿಕೊಂಡ ನಂತ್ರ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಹೊರ ಬಂದಿದೆ ಎಂದರು. ಮಹಿಳೆಯರ ಜೊತೆ ದೌರ್ಜನ್ಯ ಎಸಗುವವರನ್ನು ನಾವು ರಕ್ಷಿಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುದಾಗಿ ಪ್ರಶ್ನಿಸಿದರು. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ಏಕೆ ಬಿಟ್ಟಿದ್ದೀರಿ? ಪ್ರಜ್ವಲ್ ರೇವಣ್ಣ ಅವರಿಗೆ ಕಠೋರ ಶಿಕ್ಷೆ ನೀಡಿ. ನಾವು ಬೆಂಬಲಿಸುತ್ತೇವೆ. ಆದರೇ ಇಂತಹ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ಧಾಳಿ ನಡೆಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ನಿಮಗೆ ಆಗದಿದ್ದರೇ ಹೇಳಿ, ಕರ್ನಾಟಕವನ್ನು…

Read More

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಅದ್ಯಾವಾಗ ಮಳೆ ಬರುತ್ತಪ್ಪ ಅಂತ ಕಾಯುತ್ತಿದ್ದಾರೆ. ಇಂತಹ ಜನತೆಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ರಾಜ್ಯದ ಈ ಜಿಲ್ಲೆಯಲ್ಲಿ ಒಂದು ವಾರ ಭರ್ಜರಿ ಮಳೆ ಬರಲಿದೆ. ಬೆಂಗಳೂರಿಗೂ ವರುಣಾಗಮನ ಆಗಲಿದೆಯಂತೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಧ ಕೆಲ ಜಿಲ್ಲಿಗಳಲ್ಲಿ ಮೇ.4ರಿದಂ ಮಳೆಯಾಗಲಿದೆ. ಮೇ.14ರವರೆಗೆ ಮಳೆಯ ಮುನ್ಸೂಚನೆಯಿದೆ ಅಂತ ತಿಳಿಸಿದೆ. ಮೇ ಮೊದಲ ವಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾದ್ರೇ, 2ನೇ ವಾರದಲ್ಲಿ ಮತ್ತಷ್ಟು ಮಳೆ ಹೆಚ್ಚಾಗೋ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಧಾರವಾಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಹಾಸನ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/severe-heat-wave-conditions-in-these-districts-of-the-state-from-today-till-may-5-imd-issues-red-alert/ https://kannadanewsnow.com/kannada/this-is-proof-that-the-congress-government-is-emptying-the-treasury-by-not-giving-milk-incentives-opposition-leader-r-ashoka/

Read More

ಬೆಂಗಳೂರು: ಮೇ.7ರಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. 2ನೇ ಹಂತದ ವ್ಯಾಪ್ತಿಯ ಜಿಲ್ಲೆಯ ಮತದಾರರು ಮತ ಚಲಾಯಿಸಲು ಅನುಕೂಲ ಆಗುವಂತೆ ಅಂದು ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳು ಮತದಾನ ದಿನದಂದು ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಕೂಡ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ನಡುವೆ ನಟ ಪ್ರಕಾಶ್ ರಾಜ್ ಬಾಯಲ್ಲಿ ರಾಮಬಾಣ, ಒಳಗೆಲ್ಲ ಕಾಮಾಯಣ ಎಂಬುದಾಗಿ ಜೆಡಿಎಸ್ ಪಕ್ಷದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರವು ಮಹಿಳಾ ಆಯೋಗದ ಪತ್ರದ ಬೆನ್ನಲ್ಲೇ ಸಿಐಡಿಯ ಎಸ್ಐಟಿ ತಂಡವನ್ನು ಪ್ರಕರಣದ ತನಿಖೆಗಾಗಿ ರಚಿಸಿ ಆದೇಶಿಸಿದೆ. ಈಗಾಗಲೇ ಎಸ್ಐಟಿ ತಂಡದಿಂದ ತನಿಖೆ ಚುರುಕುಗೊಳಿಸಲಾಗಿದ್ದು, ಸಂತ್ರಸ್ತೆಯರ ಹೇಳಿಕೆಯನ್ನು ಪಡೆಯೋ ಕೆಲಸ ಮಾಡಲಾಗುತ್ತಿದೆ. ಹಾಸನ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ಧ್ವನಿ ಎತ್ತಿದ್ದಾರೆ.…

Read More

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರು ಬಿಸಿಲಿನ ನಡುವೆ ಹೆಚ್ಚಾಗಿದೆ. ಈ ವೇಳೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದಂತ ತೆಲಂಗಾಣ ಮಾಡಿ ಸಿಎಂ ಕೆ.ಚಂದ್ರಶೇಖರ ರಾವ್ ಅವರಿಗೆ ಚುನಾವಣಾ ಆಯೋಗವು 48 ಗಂಟೆ ಪ್ರಚಾರ ಮಾಡದಂತೆ ನಿಷೇಧ ಹೇರಿದೆ. ಈ ಬಗ್ಗೆ ಎಎನ್ಐ ಮಾಹಿತಿ ನೀಡಿದ್ದು, ಸಿರ್ಸಿಲ್ಲಾದಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಅವರನ್ನು ಚುನಾವಣಾ ಆಯೋಗವು ಮೇ 1 ರಂದು ರಾತ್ರಿ 8 ಗಂಟೆಯಿಂದ 48 ಗಂಟೆಗಳ ಕಾಲ ಪ್ರಚಾರದಿಂದ ನಿಷೇಧಿಸಿದೆ ಎಂದಿದೆ. https://twitter.com/ANI/status/1785652296506052855 https://kannadanewsnow.com/kannada/severe-heat-wave-conditions-in-these-districts-of-the-state-from-today-till-may-5-imd-issues-red-alert/ https://kannadanewsnow.com/kannada/this-is-proof-that-the-congress-government-is-emptying-the-treasury-by-not-giving-milk-incentives-opposition-leader-r-ashoka/

Read More

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲೇ ಕೇಂದ್ರ ಗೃಹ ಸಚಿವರಿದ್ದರೂ ಇದರ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಈ ನಡುವೆ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್ ಶಾಗೆ ಎಂಬುದಾಗಿ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಕರ್ನಾಟಕದಲ್ಲಿದ್ದಾರೆ, ಪಾಪ,, ಅವರೇ ಹೇಳಿಕೊಂಡಂತೆ ಅವರಿಗೆ ನಾರಿಶಕ್ತಿ, ಮಾತೃಶಕ್ತಿಯ ಬಗ್ಗೆ ಬಹಳ ಗೌರವವಿದೆಯಂತೆ! ಅವರ ಪಕ್ಷ ಬಿಜೆಪಿಯೇ ಬೆಂಬಲಿಸಿದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರು ತೀವ್ರ ಆತಂಕ, ನೋವಿನಲ್ಲಿದ್ದಾರೆ, ನಾರಿಶಕ್ತಿಯ ಬಗ್ಗೆ ಗೌರವ ಇರುವ ಅಮಿತ್ ಶಾ ಅವರು ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯರನ್ನು ಭೇಟಿಯಾಗಿ ಧೈರ್ಯ ತುಂಬಿಲ್ಲ ಏಕೆ?ಎಂದು ಪ್ರಶ್ನಿಸಿದೆ. ಜಾಗತಿಕ ಮಟ್ಟದಲ್ಲಿ ಈ ಪ್ರಕರಣ ಸದ್ದು ಮಾಡಿದ್ದರೂ ದೇಶದ ಗೃಹಸಚಿವರಾಗಿ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿಲ್ಲವೇಕೆ? ಪ್ರಜ್ವಲ್ ರೇವಣ್ಣನ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್…

Read More