Author: kannadanewsnow09

ಬೆಂಗಳೂರು: ಜ್ಞಾನಭಾರತಿಯ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಆರು ಸಿಂಡಿಕೇಟ್ ಸದಸ್ಯರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿತ್ತು. ಅದರಲ್ಲಿ ರಮೇಶ್ ಬಾಬು ಎಂಬುವರ ಹೆಸರು ಕೂಡ ಇತ್ತು. ಅದು ನಾನಲ್ಲ. ಅವರು ರಾಮನಗರ ನಿವಾಸಿಯಾಗಿರುತ್ತಾರೆ. ನಾನು ಯಾವುದೇ ವಿವಿ ಸಿಂಡಿಕೇಟ್ ಸದಸ್ಯನಾಗಿ ನಾಮನಿರ್ದೇಶನ ಹೊಂದಿರುವುದಿಲ್ಲ. ಅಂದಹ ಆಪೇಕ್ಷೆಯನ್ನು ಪಟ್ಟಿರುವುದಿಲ್ಲ ಎಂಬುದಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ನಿಯಮಾನುಸಾರ ರಾಜ್ಯದ ವಿವಿಧ   ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರನ್ನು ನಾಮನಿರ್ದೇಶನ ಮಾಡಿ 27-08-2024 ರಂದು ಅಧಿಸೂಚನೆ ಹೊರಡಿಸಿರುತ್ತದೆ. ಸದರಿ ಅಧಿಸೂಚನೆಯ ಮೂಲಕ ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ  (ಜ್ಞಾನಭಾರತಿ) ಆರು ಸಿಂಡಿಕೇಟ್ ಸದಸ್ಯರನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮದ ಅಡಿಯಲ್ಲಿ ಪ್ರದರ್ಥವಾದ  ಅಧಿಕಾರವನ್ನು ಚಲಾಯಿಸಿ ಮೂರು  ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿದ್ದು, ಅದರಲ್ಲಿ ರಾಮನಗರದ ನಿವಾಸಿಯಾದ ರಮೇಶ್…

Read More

ನವದೆಹಲಿ: ಒಲಂಪಿಕ್ಸ್ ನಲ್ಲಿ ಪದಕ ವಂಚಿತ ವಿನೇಶ್ ಪೋಗಟ್ ಅವರು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷ ಸೇರುವ ಮುನ್ನವೇ ತಾವು ಕರ್ತವ್ಯ ನಿರ್ವಹಿಸುತ್ತಿದ್ದಂತ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಅವಧಿಯಾಗಿದೆ ಎಂದಿದ್ದಾರೆ. ನನ್ನ ಜೀವನದ ಈ ಹಂತದಲ್ಲಿ, ನಾನು ರೈಲ್ವೆ ಸೇವೆಯಿಂದ ಹಿಂದೆ ಸರಿಯಲು ಮತ್ತು ನನ್ನ ರಾಜೀನಾಮೆ ಪತ್ರವನ್ನು ಭಾರತೀಯ ರೈಲ್ವೆಯ ಸಕ್ಷಮ ಅಧಿಕಾರಿಗಳಿಗೆ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಯಾವಾಗಲೂ ಭಾರತೀಯ ರೈಲ್ವೆ ಕುಟುಂಬಕ್ಕೆ ಕೃತಜ್ಞನಾಗಿರುತ್ತೇನೆ ಎಂದು ತಿಳಿಸಿದ್ದಾರೆ. https://twitter.com/Phogat_Vinesh/status/1831965621631750353 https://kannadanewsnow.com/kannada/time-magazine-has-released-a-list-of-the-worlds-100-most-influential-people-including-actor-anil-kapoor/ https://kannadanewsnow.com/kannada/breaking-instagram-star-younis-zaroora-taken-into-police-custody-in-bengaluru/

Read More

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಗೂ ಮೀರಿ ಬಹುಮತ ನೀಡಿದ ಪರಿಣಾಮ ಸಂಸದರಾದ ಕುಮಾರಸ್ವಾಮಿ ಅವರು ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಮಂಡ್ಯಗೆ ಸ್ಥಳಾಂತರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ನೀಡಿದ ಬಹುದೊಡ್ಡ ಬಹುಮಾನ ಎಂದು ಶಾಸಕ ಕೆ.ಎಂ.ಉದಯ್ ಲೇವಡಿ ಮಾಡಿದರು. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಿಂದ ಕೊಲ್ಲಿ ವೃತ್ತದವರೆಗೆ ಹಳೇ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮರು ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷೆಗೂ ಮೀರಿ ಬಹುಮತ ನೀಡಿದ ಪರಿಣಾಮ ಮಾನ್ಯ ಸಂಸದರಾದ ಕುಮಾರಸ್ವಾಮಿ ಅವರು ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಮಂಡ್ಯಗೆ ಸ್ಥಳಾಂತರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ಬಹುದೊಡ್ಡ ಬಹುಮಾನ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕೇಂದ್ರದಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ತೆರೆಯಲು ತುಂಬಾ ಕಷ್ಟದ ಕೆಲಸ ಆದರೆ, ಈಗಿರುವ ಪಾಸ್ ಪೋರ್ಟ್ ಸೇವಾ ಕೇಂದ್ರದಿಂದ ತಾಲೂಕಿನ…

Read More

ಶಿವಮೊಗ್ಗ: ಈ ದೇಶದಲ್ಲಿ ತಲೆಬಾಗುವುದು ಎಂದರೇ ಅದು ಶಿಕ್ಷಕರಿಗೆ ಮಾತ್ರ. ದೇಶದ ಬದಲಾಗಣೆಗೆ ಶಿಕ್ಷಕರ ಪಾತ್ರ ಹೆಚ್ಚು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಸಾಗರ ನಗರದ ನೆಹರೂ ಮೈದಾನದಲ್ಲಿ ನಡೆದಂತ ಶಿಕ್ಷಕರ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನೀವು ಕೇವಲ ಶಿಕ್ಷಕರಲ್ಲ. ಈ ನಾಡಿನ ಶಿಲ್ಪಿಗಳು. ಶಿಕ್ಷಣದ ಕ್ರಾಂತಿ ನಮ್ಮ ತಾಲ್ಲೂಕಿನಲ್ಲಿ ನಿಮ್ಮಿಂದ ನಡೆಯುತ್ತಿದೆ ಎಂದರು. ಸಾಗರ ತಾಲ್ಲೂಕಿನಲ್ಲಿ ಗಣನೀಯ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿದೆ. 24 ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ತಂದುಕೊಟ್ಟಿದ್ದೀರಿ. ಈ ಸಾಧನೆಗೆ ಕಾರಣೀಭೂತರಾದಂತ 24 ಶಾಲೆಯ ಶಿಕ್ಷಕರಿಗೂ ಶಾಸಕರಾಗಿ ತಾನು ಸನ್ಮಾನ ಮಾಡಲಿದ್ದೇನೆ. ಅಂದು ಎಲ್ಲಾ ಶಾಲೆಯ ಶಿಕ್ಷಕರು ಬರಬೇಕು ಎಂದು ಮನವಿ ಮಾಡಿದರು. ಈ ದೇಶದಲ್ಲಿ ತಲೆಬಾಗುವುದು ಶಿಕ್ಷಕರಿಗೆ ಮಾತ್ರ. ದೇಶದ ಬದಲಾವಣೆ ಆಗುತ್ತಿದೆ ಅಂದ್ರೆ ಅದು ಶಿಕ್ಷಕರಿಂದಲೇ ಆಗಿದೆ. ದೇಶದಲ್ಲಿ ಶಿಕ್ಷಕರ ಪಾತ್ರ ಹೆಚ್ಚು ಎಂಬುದಾಗಿ ಶಿಕ್ಷಕರನ್ನು ಕೊಂಡಾಡಿದರು. ಸಾಗರ…

Read More

ಬೆಂಗಳೂರು: ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು. ಸಚಿವ ಸಂಪುಟದ ನಿರ್ಣಯಗಳನ್ನು ವಿವರಿಸಿದ ಸಚಿವರು ಪ್ರಮೋದಾ ದೇವಿ ಒಡೆಯರ್ ರವರು ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವ ಆರೋಪ ಸರಿಯಲ್ಲ. ಇಂದು ಈ ರಿಟ್ ಅರ್ಜಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ಸಭೆ ನಡೆದ ದಿನಾಂಕದಂದು ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್. ದೇವದಾಸ ರವರು ಪತ್ರ ಮುಖೇನ ತಿಳಿಸಿರುವುದನ್ನು ತಾವು ಸಚಿವ ಸಂಪುಟದ ಸಭೆಯ ಗಮನಕ್ಕೆ ತಂದಿರುವುದಾಗಿ ಸಚಿವರು ವಿವರಿಸಿದರು. ಚಾಮುಂಡಿ ಪ್ರಾಧಿಕಾರದ ಕಾನೂನು ಅಸ್ತಿತ್ವದಲ್ಲಿದ್ದು, ಈ ಕಾನೂನಿನ ಕಲಂಗಳನ್ನು ಜಾರಿಗೆ ತರಲು ಅಥವಾ ಅನುಷ್ಠಾನಗೊಳಿಸಲು ಯಾವುದೇ ನ್ಯಾಯಾಂಗದ ಅಡ್ಡಿಗಳಿಲ್ಲವೆಂದು…

Read More

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ವೈದ್ಯಕೀಯ ಪರಿಕರಗಳ ಖರೀದಿ, ವಿತರಣೆ ಮತ್ತು ಬಳಕೆ ವಿಷಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸರ್ಕಾರ ನೇಮಿಸಿದ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ನೇತೃತ್ವದ ನ್ಯಾಯಾಂಗ ಆಯೋಗ ಒಂದು ವರದಿಯನ್ನು ಸಲ್ಲಿಸಿದ್ದು, ವರದಿಯನ್ನು ವಿಶ್ಲೇಷಿಸಿ ಅಧ್ಯಯನ ಮಾಡಿ ಮುಂದಿನ ಕ್ರಮಗಳ ಬಗ್ಗೆ ಅಗತ್ಯದ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರನ್ನೊಳಗೊಂಡ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ ಇಂದಿಲ್ಲಿ ಪ್ರಕಟಿಸಿದರು. ಸಚಿವ ಸಂಪುಟದ ನಿರ್ಣುಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಅವರು ಕೋವಿಡ್ ಚಿಕಿತ್ಸೆಯ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾಯಾಂಗ ಆಯೋಗ ವರದಿ ಸಲ್ಲಿಸಿದೆ ಎಂದು ತಿಳಿಸಿದರು. ತಾವು ಮತ್ತು ಶ್ರೀ ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕ ಲೆಕ್ಕಪತ್ರ…

Read More

ಕೇರಳ: ಹೇಮಾ ಸಮಿತಿ ವರದಿ ಮತ್ತು #MeToo ಆರೋಪಗಳ ಹಿನ್ನೆಲೆಯಲ್ಲಿ, ಮಲಯಾಳಂ ನಟಿ ಸೌಮ್ಯಾ ಅವರು ತಮಿಳು ನಿರ್ದೇಶಕರ ವಿರುದ್ಧ ಕೆಲವು ಆಘಾತಕಾರಿ ಆರೋಪಗಳನ್ನು ಮಾಡಿದ್ದಾರೆ. ‘ಲೈಂಗಿಕ ಗುಲಾಮನಂತೆ ರೂಪುಗೊಂಡ’ ತನ್ನ ಭಯಾನಕ ಅನುಭವವನ್ನು ಹಂಚಿಕೊಂಡ ಸೌಮ್ಯ, ಪ್ರಸ್ತುತ ಮಾಲಿವುಡ್ನಲ್ಲಿ ಹಲವಾರು ಲೈಂಗಿಕ ಕಿರುಕುಳ ಪ್ರಕರಣಗಳ ತನಿಖೆ ನಡೆಸುತ್ತಿರುವ ಕೇರಳ ಸರ್ಕಾರ ನೇಮಿಸಿದ ವಿಶೇಷ ಪೊಲೀಸ್ ತಂಡಕ್ಕೆ ಆ ತಮಿಳು ನಿರ್ದೇಶಕನ ಗುರುತನ್ನು ಬಹಿರಂಗಪಡಿಸಲು ಯೋಜಿಸಿದ್ದೇನೆ ಎಂದು ಹೇಳಿದರು. ನಾನು 18 ವರ್ಷದವಳಾಗಿದ್ದೆ ಮತ್ತು ನನ್ನ ಕಾಲೇಜಿನ ಮೊದಲ ವರ್ಷದಲ್ಲಿ… ನಾನು ತುಂಬಾ ಆಶ್ರಯ ಹಿನ್ನೆಲೆಯಿಂದ ಬಂದಿದ್ದೇನೆ ಮತ್ತು ನನ್ನ ಹೆತ್ತವರಿಗೆ ಚಲನಚಿತ್ರಗಳ ಬಗ್ಗೆ ಏನೂ ತಿಳಿದಿರಲಿಲ್ಲ. ಈ ಅವಕಾಶ (ತಮಿಳು ಚಿತ್ರದಲ್ಲಿ ನಟಿಸಲು) ನನ್ನ ಕಾಲೇಜು ರಂಗಭೂಮಿ ಸಂಪರ್ಕದ ಮೂಲಕ ಬಂದಿತು. ಬಾಲ್ಯದಲ್ಲಿ ನಾನು ಆ ಸಮಯದಲ್ಲಿ ನನ್ನ ಮನೆಯ ಬಳಿ ವಾಸಿಸುತ್ತಿದ್ದ ನಟಿ ರೇವತಿಯಿಂದ ಆಕರ್ಷಿತನಾಗಿದ್ದೆ… ನಾನು ಕಾಲ್ಪನಿಕ ಜಗತ್ತಿನಲ್ಲಿದ್ದೆ. ಆದ್ದರಿಂದ ನಾನು ಈ ದಂಪತಿಯೊಂದಿಗೆ ಸ್ಕ್ರೀನ್ ಟೆಸ್ಟ್…

Read More

ಮಂಡ್ಯ : ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳು, ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡುವ ಮೂಲಕ ಸತ್ಪ್ರಜೆಗಳನ್ನು ರೂಪಿಸಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಿಳಿಸಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮದ್ದೂರು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿ ಗುರುವಿನ ಸ್ಥಾನಕೆ ತನ್ನದೆಯಾದ ವಿಶೇಷ ಸ್ಥಾನ ಮತ್ತು ಮಹತ್ವವಿದೆ. ಶ್ರೇಷ್ಠ ಶಿಕ್ಷಕರಿಂದ ಶಿಕ್ಷಕ ವೃಂದಕ್ಕೆ ಗೌರವ ಸಿಗುತ್ತದೆ. ಪ್ರತಿಯೊಬ್ಬ ಶಿಕ್ಷಕರು ಶ್ರೇಷ್ಠ ಶಿಕ್ಷಕರಾಗುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಆದರ್ಶವಾಗಬೇಕೆಂದು ಕಿವಿಮಾತು ಹೇಳಿದರು. ಶಿಕ್ಷಕರು ಆಜೀವ ಕಲಿಕೆಗೆ ಪ್ರೋತ್ಸಾಹ, ಬೆಂಬಲ ಮತ್ತು ಸಮರ್ಪಣೆಯನ್ನು ನೀಡುತ್ತಾರೆ, ವಿಮರ್ಶಾತ್ಮಕ ಚಿಂತನೆಯನ್ನು ಪ್ರೇರೇಪಿಸುತ್ತಾರೆ ಮತ್ತು ಕಲಿಕೆಯ ಪ್ರೀತಿಯನ್ನು ನೀಡುತ್ತಾರೆ. ಇದಲ್ಲದೆ, ಶೈಕ್ಷಣಿಕ ಬೆಳವಣಿಗೆ ಮೂಲಕ ನೈತಿಕ ವ್ಯಕ್ತಿಗಳ ಅಭಿವೃದ್ಧಿಯಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಾರೆ ಎಂದರು. ಕೆ.ಎಂ.ಉದಯ್…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ,  ಕಾರ್ಕಳದಲ್ಲಿ ಟೆಕ್ಸ್ ಪಾರ್ಕ್ ಸ್ಥಾಪನೆ ಸೇರಿದಂತೆ 36 ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಆ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿಯನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೀಡಿದರು. ಇಂದು ಒಟ್ಟು 36 ವಿಷಯಗಳ ಬಗ್ಗೆ ಚರ್ಚೆಯಾಗಿದೆ. 35 ವಿಷಯಗಳಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಪಟ್ಟಿಯಲ್ಲಿಲ್ಲದ ಮೂರು ವಿಷಯ ಚರ್ಚೆಯಾಗಿದೆ ಎಂದರು. ಮಹದಾಯಿ ಯೋಜನೆಗೆ ಅನುಮತಿ ತಡೆ ವಿಚಾರವಾಗಿ ವನ್ಯಜೀವಿ‌ಮಂಡಳಿ ಅನುಮೋದನೆ ನೀಡಿಲ್ಲ. ಕೆಲವು ಕಾರಣ ಕೊಟ್ಟು ಮುಂದೂಡಿದೆ. ಇದು ಕನ್ನಡಿಗರಿಗೆ ನಿರಾಸೆ ತಂದಿದೆ. ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ ಆಗ್ತಿದೆ. ಗೋವಾದ 400 ವಿದ್ಯುತ್ ಮಾರ್ಗಕ್ಕೆ ಒಪ್ಪಿಗೆ ನೀಡುತ್ತೆ. ಆದರೆ ನಮ್ಮ ಪ್ರಪೋಸಲ್ ಮುಂದೂಡಿದೆ. 435 ಎಕರೆ ವಿದ್ಯುತ್ ಮಾರ್ಗಕ್ಕೆ ಅರಣ್ಯ ಭೂಮಿ ಬಳಕೆಯಾಗಿದೆ. ಗೋವಾ ತಮ್ನೂರು ವಿದ್ಯತ್ ಮಾರ್ಗಕ್ಕೆ…

Read More

ಸಕಲೇಶಪುರ : “ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ನಂಬಿದ್ದೇನೆ. ಈ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ಮಾಧ್ಯಮಗಳ ಕ್ಯಾಮೆರಾಗಳೇ ಉತ್ತರ ನೀಡುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಕಲೇಶಪುರದ ದೊಡ್ಡನಗರದ ಡಿ.ಸಿ- 3 ಪಂಪ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ಆಲಮಟ್ಟಿ ಯೋಜನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದ್ದರು. 2006ರಲ್ಲಿ ಅಬ್ದುಲ್ ಕಲಾಂ ಅವರು ಯೋಜನೆ ಉದ್ಘಾಟನೆ ಮಾಡಿದ್ದರು. ಆಲಮಟ್ಟಿ ಯೋಜನೆ ಜಾರಿ ನಂತರ ಎತ್ತಿನಹೊಳೆ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾಗಿದೆ. 2014 ಮಾರ್ಚ್ 5ರಂದು ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈಗ ಅವರ ನೇತೃತ್ವದಲ್ಲಿ ಈ ಯೋಜನೆ ಉದ್ಘಾಟನೆಯಾಗುತ್ತಿದೆ. 10 ವರ್ಷಗಳು ಕಳೆದಿದ್ದು, ಬೇಕಾದಷ್ಟು ಟೀಕೆ ಟಿಪ್ಪಣಿಗಳು ಕೇಳಿ ಬಂದವು. ಎಲ್ಲವನ್ನೂ ಮೆಟ್ಟಿನಿಂತು ಯೋಜನೆ…

Read More