Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಡಿಜಿಟಲ್ ಆಯಾಮದ ಕಲಿಕೆ ಹೆಚ್ಚು ಅಗತ್ಯವಿದೆ. ಇಂತಹ ಕಾರ್ಯಗಳಲ್ಲಿ ತೊಡಗಿರುವ ಶಿಲ್ಪಾ ಫೌಂಡೇಶನ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಎಲ್ಕೆ ಕ್ಯೂ ಇಂಡಿಯಾ ಮುಖ್ಯಸ್ಥ ಕಿಶೋರ್ ಕುಮಾರ್ ವಾಸುದೇವ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಲ್ಪಾ ಫೌಂಡೇಶನ್ ಹಾಗೂ ಎಲ್ಕೆ ಕ್ಯೂ ಇಂಡಿಯಾ ಸಹಯೋಗದೊಂದಿಗೆ ಜೆ.ಪಿ. ನಗರದ ಸರ್ಕಾರಿ ಹಿರಿಯ ಪ್ರೌಢಶಾಲೆ ಪುಟ್ಟೇನಹಳ್ಳಿ ಯಲ್ಲಿ ಆಯೋಜಿಸಿದ್ದ ‘ಶಾಲಾ ಅಭಿವೃದ್ಧಿ ಯೋಜನೆ’ ಕಾರ್ಯಕ್ರಮದಲ್ಲಿ ಶಾಲೆಗೆ ಉಚಿತವಾಗಿ ಪೀಠೋಪಕರಣ, ಕ್ರೀಡಾ ಉಪಕರಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಲಕರಣೆ ನೀಡಿ ಮಾತನಾಡಿದರು. ಸರ್ಕಾರಿ ಶಾಲೆಗಳ ಮಕ್ಕಳು ಯಾವ ಕ್ಷೇತ್ರದಲ್ಲಿಯೂ ಕಡಿಮೆ ಇಲ್ಲ. ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಿದರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ, ಅವರಿಗೆ ಅಗತ್ಯ ಸೌಲಭ್ಯ ಒದಗಿಸುವುದು ನಮ್ಮ ಆದ್ಯತೆಯಾಗಲಿ. ಈಗಾಗಲೇ ಎಲ್ಕೆ ಕ್ಯೂ ಇಂಡಿಯಾ ಸಾಮಾಜಿಕ ಸಹ ಭಾಗಿತ್ವ ಅಡಿಯಲ್ಲಿ ಶಿಲ್ಪಾ ಫೌಂಡೇಶನ್ ಅಂದಾಜು 15 ಲಕ್ಷ ರೂ.ವೆಚ್ಚದಲ್ಲಿ…
ಬೆಂಗಳೂರು: ಮಾರ್ಚ್.22ರಂದು ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾಧ್ಯಂತ ಬಂದ್ ಇರಲಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಅವರು ಮಾರ್ಚ್.22ರಂದು ಕನ್ನಡಿಗರಿಗಾಗಿ ಬಂದ್. ಇದು ಕರ್ನಾಟಕದ ಜನತೆಗಾಗಿ ಬಂದ್. ಮಾರ್ಚ್.22ರಂದು ಎಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ಕೋರಿದರು. ಮಾರ್ಚ್.22ರಂದು ಬೆಂಗಳೂರಿನ ಟೌನ್ ಹಾಲ್ ನಿಂದ ಬೃಹತ್ ಮೆರವಣಿಗೆಯ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಮಾರ್ಚ್.22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾಧ್ಯಂತ ಎಲ್ಲವೂ ಬಂದ್ ಆಗಲಿದ್ದಾವೆ. ಕನ್ನಡಿಗರಿಗೆ ಅನ್ಯಾಯ ಖಂಡಿಸಿ ಈ ಬಂದ್ ನಡೆಸಲಾಗುತ್ತಿದೆ ಎಂದರು. ಎಂಇಎಸ್ ನಿಷೇಧ ಮಾಡಬೇಕು. ಕನ್ನಡಿಗರ ಮೇಲಿನ ಅನ್ಯಾಯಕ್ಕೆ ತಕ್ಕ ಪಾಠವನ್ನು ಮರಾಠಿಗರಿಗೆ ಕಲಿಸುವಂತ ಕೆಲಸವನ್ನು ಸರ್ಕಾರ ಮಾಡಬೇಕು. ಹೀಗಾಗಿ ವಾಹನ ಚಾಲಕರು, ಮಾಲೀಕರು, ರಾಜ್ಯದ ಜನರು ಮಾರ್ಚ್.22ರ ಅಖಂಡ ಕರ್ನಾಟಕ ಬಂದ್ ಗೆ ಬೆಂಬಲಿಸಬೇಕು ಎಂಬುದಾಗಿ ತಿಳಿಸಿದರು. https://kannadanewsnow.com/kannada/gate-exam-2025-result-2025-declared-check-the-result-like-this/…
ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ರೂರ್ಕಿ ಇಂದು ಗೇಟ್ 2025 ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು gate2025.iitr.ac.in ನ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು. ಗೇಟ್ 2025 ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು gate2025.iitr.ac.in ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಮುಖಪುಟದಲ್ಲಿ ಕಾಣಿಸಿಕೊಳ್ಳುವ ‘ಗೇಟ್ 2025 ಫಲಿತಾಂಶಗಳು’ ಲಿಂಕ್ ಅನ್ನು ಕ್ಲಿಕ್ ಮಾಡಿ. ನೀವು ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಅದು ನಿಮ್ಮನ್ನು ಹೊಸ ಪುಟಕ್ಕೆ ಕರೆದೊಯ್ಯುತ್ತದೆ. ಅಗತ್ಯವಿರುವ ರುಜುವಾತುಗಳನ್ನು ನಮೂದಿಸಿ. ಸಲ್ಲಿಸು ಆಯ್ಕೆಯನ್ನು ಕ್ಲಿಕ್ ಮಾಡಿ. ನಿಮ್ಮ ಗೇಟ್ 2025 ಫಲಿತಾಂಶವು ಪರದೆಯ ಮೇಲೆ ಗೋಚರಿಸುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶವನ್ನು ಡೌನ್ಲೋಡ್ ಮಾಡಿ ಅಥವಾ ಉಳಿಸಿ. GATE 2025 ಫಲಿತಾಂಶ ಪರಿಶೀಲಿಸಲು ನೇರ ಲಿಂಕ್ https://goaps.iitr.ac.in/login GATE 2025 ಸ್ಕೋರ್ಕಾರ್ಡ್ ತಮ್ಮ ವರ್ಗಕ್ಕೆ (SC, ST, ಅಥವಾ PwD) ನಿಗದಿಪಡಿಸಿದ ಅಂಕಗಳಿಗಿಂತ ಕನಿಷ್ಠ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಅಂಕಪಟ್ಟಿಯನ್ನು…
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ, ಹಿನ್ನಲೆ ಎನ್ನುವಂತೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಬದಲಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ನಕಾರ ವ್ಯಕ್ತ ಪಡಿಸಿದೆ. ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂಬುದಾಗಿ ಹೆಸರು ಬದಲಾವಣೆಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೇ ರಾಮನಗರ ಜಿಲ್ಲೆಗೆ ಹೊಸ ಹೆಸರು ನಾಮಕರಣ ಮಾಡುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡೋದಾಗಿಯೂ ಘೋಷಣೆ ಮಾಡಿದ್ದರು. ಅದರಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಮರು ನಾಮಕರಣ ಮಾಡಿ, ಕೇಂದ್ರಕ್ಕೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದಿಂದ ಕಳುಹಿಸಲಾಗಿತ್ತು. ಆದರೇ ಕೇಂದ್ರ ಸರ್ಕಾರ ಇದಕ್ಕೆ ನಕಾರ ವ್ಯಕ್ತ ಪಡಿಸಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದಂತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಹೀಗೆ ತಿರಸ್ಕರಿಸೋದಕ್ಕೆ ನಿಖರ ಕಾರಣ ಕೂಡ ಕೊಟ್ಟಿಲ್ಲ. ಹೀಗಾಗಿ ರಾಜ್ಯ…
ಕ್ರೋದಿ ನಾಮ ಸಂವತ್ಸರ 2025 ಪ್ರಥಮ ಸೂರ್ಯಗ್ರಹಣ ಇದೇ ಶನಿವಾರ ಮಾರ್ಚ್ 29 ರಂದು ಆಗಲಿದೆ. ನಂತರ ವಿಶ್ವಾಸವುನಾಮ ಸಂವತ್ಸರ ಆರಂಭ ಕಾಲದಲ್ಲಿ ಈ ಸೂರ್ಯಗ್ರಹಣವು 5 ರಾಶಿಯವರಿಗೆ ತುಂಬಾ ಮಂಗಳಕರವಾಗಿರಲಿದ್ದು, ಈ ಗ್ರಹಣದ ಪ್ರಭಾವವು ಅವರ ಆರೋಗ್ಯ ಶಿಕ್ಷಣ ಉದ್ಯೋಗ ವೃತ್ತಿಜೀವನದಲ್ಲಿ ಯಶಸ್ಸನ್ನು, ತರುತ್ತದೆ. ಆ ರಾಶಿಗಳಾವುವು ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಂದ್ರದಿಂದಲೂ ಅನುದಾನ ತಂದಿಲ್ಲ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು 15 ನೇ ಹಣಕಾಸು ಆಯೋಗದ ಅಧ್ಯಕ್ಷರು 11,495 ಕೋಟಿ ರೂ. ಶಿಫಾರಸ್ಸು ಮಾಡಿದರು. ನೀವು ಅಧಿಕಾರದಲ್ಲಿದ್ದಾಗ ಈ ಬಗ್ಗೆಯೂ ಕೇಳಲಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಸಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿಯಲ್ಲಿ ಒಂದು ರೂಪಾಯಿ ಬರಲಿಲ್ಲ. ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿಲ್ಲ. ನೀವು ಬಿಜೆಪಿಯವರು ಅದರ ಬಗ್ಗೆ ಒಂದೂ ಮಾತೂ ಆಡಲಿಲ್ಲ ಎಂದಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವಾಗ ಧ್ವನಿ ಎತ್ತಲಿಲ್ಲ. ಕೇಂದ್ರ ಸರ್ಕಾರದಲ್ಲಿ ನ್ಯಾಯಯುತವಾಗಿ ಬರಬೇಕಾದ್ದನ್ನು ಕೇಳಲೂ ನಿಮ್ಮಿಂದ ಆಗಲಿಲ್ಲ. ರಾಜ್ಯಕ್ಕೆ ಇದರಿಂದ ಸಾಕಷ್ಟು ನಷ್ಟವಾಗಿದೆ. ವಿರೋಧ ಪಕ್ಷ ಇರುವುದು ಭಾಷಣ ಮಾಡಲು ಮಾತ್ರವೇ? ಎಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ…
ಬೆಂಗಳೂರು: ರಾಜ್ಯದಲ್ಲಿ ಸರ್ವರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೈಸೂರು, ಕಲಬುರ್ಗಿಯಲ್ಲಿ ತಲಾ 7 ಕೋಟಿ ವೆಟ್ಟದಲ್ಲಿ ನಿಮ್ಹಾನ್ಸ್ ಮಾದರಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮೈಸೂರು, ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ₹7 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತದೆ. ಅತೀ ಶೀಘ್ರದಲ್ಲಿ ಇವು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದರು. ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹೀಗೆ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ಒದಗಿಸಲು ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು. ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1901994564497322405 https://kannadanewsnow.com/kannada/home-minister-g-parameshwara-said-that-the-safety-and-security-of-tourists-in-the-state-is-a-top-priority/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/
ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ವಿಶೇಷ ಆದ್ಯತೆಯನ್ನು ನೀಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ ಎಂದರು. https://twitter.com/KarnatakaVarthe/status/1901993458505547987 ಪ್ರವಾಸಿಗರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲು ಮಾಡುವುದು, ಸೂಕ್ತ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ವಿದೇಶಿ ಪ್ರವಾಸಿಗರ ಆಗಮನದ ಮಾಹಿತಿಯನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ಹೆದ್ದಾರಿ ಗಸ್ತು ವಾಹನ ನಿಯೋಜಿಸಿದ್ದು, ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://kannadanewsnow.com/kannada/two-youths-killed-in-illegal-sand-mining-in-karnataka-bike-riders-killed-on-spot-after-tipper-ran-over-them/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/
ಕೊಪ್ಪಳ: ರಾಜ್ಯದಲ್ಲಿ ಅಕ್ರಮ ಮರಳು ದಂಧೆಗೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. ಕೊಪ್ಪಳದ ಕನಕಗಿರಿಯ ನವಲಿ ಬಳಿಯಲ್ಲಿ ಮರಳು ತುಂಬಿದ್ದಂತ ಟಿಪ್ಪರ್ ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಮೇಶ್ ಜವಳಗೇರಿ (27) ಹಾಗೂ ಸಿದ್ದಪ್ಪ ಪ್ಯಾಟ್ಯಾಳ್ (34) ಎಂಬುದಾಗಿ ಗುರುತಿಸಲಾಗಿದೆ. ಯುವಕರು ಕನಕಗಿರಿ ತಾಲ್ಲೂಕಿನ ಗುಡೂರಿನ ನಿವಾಸಿಗಳು. ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಂತ ಟಿಪ್ಪರ್ ಲಾರಿಯಿಂದಲೇ ಇಬ್ಬರು ಯುವಕರು ಬಲಿಯಾಗುವಂತೆ ಆಗಿದೆ ಎಂಬುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು. ಪೊಲೀಸರು ಕೊಪ್ಪಳದ ಕನಕಗಿರಿಯಲ್ಲಿ ನಡೆಯುತ್ತಿರುವಂತ ಅಕ್ರಮ ಮರಳು ದಂಧೆಯನ್ನು ನಿಲ್ಲಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. ಬೈಕ್ ಸವಾರರ ಸಾವಿನ ಸಂಬಂಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/this-is-not-siddaramaiahs-guarantee-its-kannadigas-guarantee-cm-siddaramaiah/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಸುವುದು ಕಡ್ಡಾಯ ಎಂಬುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಅಕ್ರಮ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ. ರಾಜ್ಯ ಸರ್ಕಾರವು ‘ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ ಎಂದರು. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1901992594948649451 https://kannadanewsnow.com/kannada/this-is-not-siddaramaiahs-guarantee-its-kannadigas-guarantee-cm-siddaramaiah/ https://kannadanewsnow.com/kannada/breaking-%e0%b2%a8%e0%b2%9f-%e0%b2%a6%e0%b2%b0%e0%b3%8d%e0%b2%b6%e0%b2%a8%e0%b3%8d-%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%8a%e0%b2%82%e0%b2%a6%e0%b3%81-%e0%b2%b8%e0%b2%82/