Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್, ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು, ಸಂಬಂಧಿತ ದಾಖಲೆಗಳನ್ನು ಒದಗಿಸಲು ಅವಕಾಶ ನೀಡಿದೆ‌. ಅಂದಹಾಗೆ ಈ ಮೊದಲು ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಪೂರ್ಣಾವಧಿಯ ಪತ್ರಕರ್ತರು ಆಗಿರಬೇಕು ಎಂಬುದಾಗಿ ಷರತ್ತು ವಿಧಿಸಲಾಗಿತ್ತು. ಈ ನಿಯಮದ ಕಾರಣ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೈತಪ್ಪುವ ಆತಂಕ ಎದುರಾಗಿತ್ತು. ಏಕೆಂದರೆ…

Read More

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909 ಅಭ್ಯರ್ಥಿಗಳ NEET Rank ಮತ್ತು ಪಡೆದ ಅಂಕಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅತಿ ಹೆಚ್ಚು 670 ಅಂಕ ಪಡೆದ ಅಭ್ಯರ್ಥಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. 113 ಅಂಕ ಪಡೆದ ಅಭ್ಯರ್ಥಿ ಕೊನೆಯಲ್ಲಿ ಇದ್ದು, ಅವರು ಕೂಡ ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕೊಟ್ಟ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೀಟ್ ರೋಲ್ ನಂಬರ್ ನಮೂದಿಸಿ, ನೀಟ್ ಕೌನ್ಸೆಲಿಂಗ್ ಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು. ಹಾಗೆಯೇ ನೀಟ್ ನಲ್ಲಿ ಅರ್ಹತೆ ಪಡೆದು, ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೂ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. https://twitter.com/KEA_karnataka/status/1940777638660132987?t=8h9BePZN9XHlZN0pc-1FIg&s=08

Read More

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ ಮೊದಲ ಸ್ಥಾನ ಪಡೆದರೆ, ಹಿರಿಯೂರು ಎರಡನೇ ಸ್ಥಾನ ಪಡೆದಿದೆ ಎಂದು ಶಿಮುಲ್ ನಿರ್ದೇಶಕ ಬಿಸಿ. ಸಂಜೀವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಖಾಸಗಿ ಅನ್ನಪೂರ್ಣೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಚಳ್ಳಕೆರೆ ವಿಭಾಗದ ಹಿರಿಯೂರು ತಾಲ್ಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮ ಕುರಿತು ಮಾತನಾಡಿದರು. ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ಹಾಲು ಉತ್ಪಾದಕರ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಹಾಗೂ ರೈತರ ಹೈನುಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಳ್ಳಕೆರೆಯಲ್ಲಿ ಶಿಮುಲ್ ವಿಭಾಗಿಯ ಕಛೇರಿಯನ್ನು ಪ್ರಾರಂಭಿಸಲಾಗಿದೆ. ನಾವು ಅಧಿಕಾರಕ್ಕೆ ಬಂದು ಹತ್ತು ತಿಂಗಳು ಕಳೆದಿದ್ದು, ಒಂದಿಷ್ಟು ಬದಲಾವಣೆ ತರಲಾಗಿದೆ. ಹಿರಿಯೂರು ವಿಭಾಗಕ್ಕೆ ಸಭೆ ನಡೆಸಲು ಆಡಳಿತ ಕಛೇರಿ ಅವಶ್ಯಕತೆ ಇದ್ದು ಮುಂದಿನ ವರ್ಷ 40 ಲಕ್ಷ ವೆಚ್ಚದಲ್ಲಿ ಆಡಳಿತ ಕಛೇರಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ತಾಲೂಕಿನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವಲಯ ಅರಣ್ಯ ಅಧಿಕಾರಿ ಸಂತೋಷ್ ಪವಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವನ್ಯಜೀವಿ ವಲಯದ ಅಧಿಕಾರಿಗಳು, ಸಿಬ್ಬಂದಿಗಳು ಮಂಜುನಾಥ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಲ್ಲದೇ ಮಂಜುನಾಥ್ ನೀಡಿದ ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ವಿದೇಶದಿಂದ ಹಿಂದಿರುಗಿದ ಸಾಗರ ಶಾಸಕ ಗೋಪಾಲಕೃಷ್ಣ ಕೃಷ್ಣ ಬೇಳೂರು ಅವರು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಂಜುನಾಥ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ಆ ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಹಲ್ಲೆ ಆರೋಪದ ಸಂಬಂಧ ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಈ ಬೆನ್ನಲ್ಲೇ ಕಾರ್ಗಲ್ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ…

Read More

ಬೆಂಗಳೂರು: ರಾಜ್ಯದಲ್ಲಿ ನಿರಂತರ ಕಣ್ಣಿನ ಆರೋಗ್ಯ ಒದಗಿಸುವ ಸಲುವಾಗಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಕಣ್ಣಿನ ದೃಷ್ಟಿ ದೋಷದಿಂದ ಬಳಲುತ್ತಿರುವವರಿಗೆ ರಾಜ್ಯ ಸ್ರಕಾರ ಗುಡ್ ನ್ಯೂಸ್ ನೀಡಿದೆ. ದೃಷ್ಟಿದೋಷ ನಿವಾರಣೆಗೆ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ. ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ 393 ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಸಜ್ಜಾಗಿವೆ. ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು.‌ https://twitter.com/KarnatakaVarthe/status/1940377090500481427 https://kannadanewsnow.com/kannada/cabinet-meeting-led-by-cm-siddaramaiah-at-nandi-hills-today-here-are-the-complete-highlights/ https://kannadanewsnow.com/kannada/the-clarity-in-the-conditions-and-instructions-for-kptcl-is-not-in-the-order-je-transfer-confusion-this-year-too/

Read More

ಚಿಕ್ಕಬಳ್ಳಾಪುರ: ಸಚಿವ ಸಂಪುಟವು ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಿದೆ. ನಂದಿ ಬೆಟ್ಟದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 26, 2024 ರಂದು ನಿಧನರಾದ ಮಾಜಿ ಪ್ರಧಾನಿ ಅವರ ಹೆಸರನ್ನು ಇಡಲಾಗುತ್ತಿರುವ ದೇಶದ ಮೊದಲ ವಿಶ್ವವಿದ್ಯಾಲಯ ಇದಾಗಿದೆ. ಮಾರ್ಚ್ 7, 2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಸಿಂಗ್ ಅವರ ಭಾರತಕ್ಕೆ ನೀಡಿದ ಕೊಡುಗೆಗಳ ಗೌರವಾರ್ಥವಾಗಿ ವಿಶ್ವವಿದ್ಯಾಲಯವನ್ನು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಹಿಂದೆ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಎಂದು ಕರೆಯಲಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯವನ್ನು ಮೂಲತಃ 2017 ರಲ್ಲಿ ಸ್ಥಾಪಿಸಲಾಯಿತು ಮತ್ತು 2020 ರಲ್ಲಿ ಮರುನಾಮಕರಣ ಮಾಡಲಾಯಿತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಮತ್ತೊಂದು ಮರುನಾಮಕರಣಕ್ಕೆ ಸಿದ್ಧತೆ ನಡೆದಿದೆ. ಈ ಉಪಕ್ರಮದ ಭಾಗವಾಗಿ, ಸರ್ಕಾರಿ ಕಲಾ ಕಾಲೇಜು ಮತ್ತು ಸರ್ಕಾರಿ ಆರ್‌ಸಿ ಕಾಲೇಜನ್ನು ಘಟಕ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನಾಳೆಯೂ ಮಳೆಯಾಗು ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಜಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಖಾಂಡ್ಯ, ಅಲ್ದೂರು, ವಸ್ತಾರೆ ಹೋಬಳಿಯ ಶಾಲೆಗಳಿಗೆ ರಜೆ ನೀಡಲಾಗಿದೆ. ನಾಳೆ ಈ ಐದು ತಾಲ್ಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ಅವಧಿಯ ತರಗತಿಗಳನ್ನು ಮುಂದಿನ ಶಾಲಾ ಅವಧಿಯಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/chitradurga-dr-f-g-halakatti-and-dr-n-mamata-have-paved-the-way-for-research-in-vachana-literature/ https://kannadanewsnow.com/kannada/the-clarity-in-the-conditions-and-instructions-for-kptcl-is-not-in-the-order-je-transfer-confusion-this-year-too/

Read More

ಚಿತ್ರದುರ್ಗ : ವಿಶ್ವಕ್ಕೆ ಮಾದರಿಯಾದ ವಚನ ಸಾಹಿತ್ಯದ ಸಂಶೋಧನೆಗೆ ಡಾ.ಫ.ಗು.ಹಳಕಟ್ಟಿ ಜೀವನವನ್ನೇ ಮುಡುಪಿಟ್ಟರು. ಲಾಭ ತರುವ ವಕೀಲಿ ವೃತ್ತಿಯನ್ನು ಬಿಟ್ಟು, ಸತತ 60 ವರ್ಷಗಳ ಕಾಲ ವಚನ ಸಂಶೋಧನೆ ಹಾಗೂ ಪ್ರಕಟಣೆ ಕಾರ್ಯಕೈಗೊಂಡು 250ಕ್ಕೂ ಅಧಿಕ ವಚನಕಾರರನ್ನು ನಾಡಿಗೆ ಪರಿಚಯಿಸಿಕೊಟ್ಟರು ಎಂದು ಭರಮಸಾಗರ ಬಾಪೂಜಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಡಾ.ಎನ್.ಮಮತಾ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ, ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ಅಂಗವಾಗಿ ಆಯೋಜಿಸಲಾಗಿದ್ದ, ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ವಚನ ಸಾಹಿತ್ಯವನ್ನು ಪುನರುಜ್ಜೀವನಗೊಳಿಸಲು ಜನ್ಮಿಸಿದ ಕಾರಣೀಭೂತ ಡಾ. ಫ.ಗು.ಹಳಹಟ್ಟಿಯವರನ್ನು ಸಾಹಿತಿ ಸಿಂಪಗೆ ಲಿಂಗಣ್ಣ ‘ಕರ್ನಾಟಕದ ಮ್ಯಾಕ್ಸ್ಮುಲ್ಲರ್’ ಎಂದು ಕರೆದಿದ್ದಾರೆ. ಸಾಹಿತಿ ಬಿ.ಎಂ.ಶ್ರೀಕಂಠಯ್ಯನವರು ‘ವಚನಗುಮ್ಮಟ’ ಎಂದು ಹೊಗಳಿದ್ದಾರೆ. ಉತ್ತರ ಕರ್ನಾಟಕದ ಮನೆಗಳಲ್ಲಿ ದೇವರ ಜಗಲಿಯಲ್ಲಿ ಪೂಜೆಗೆ ಇರಿಸಿದ್ದ ವಚನ ಸಾಹಿತ್ಯದ ತಾಳೆಗರಿಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅಧ್ಯಯನ ಮಾಡಿ ವಚನಗಳನ್ನು ಪ್ರಕಟಿಸಿ,…

Read More

ಬೆಂಗಳೂರು: ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ (ಆರ್‌ಜೆಐಎಲ್) ಚಿಕ್ಕಮಗಳೂರು ನಗರ ಮತ್ತು ಹೆದ್ದಾರಿಯಲ್ಲಿ (ಬೆಂಗಳೂರಿನಿಂದ ಚಿಕ್ಕಮಗಳೂರು) ಮೊಬೈಲ್ ನೆಟ್ವರ್ಕ್ ಕಾರ್ಯಕ್ಷಮತೆಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್) ಇತ್ತೀಚಿನ ಇಂಡಿಪೆಂಡೆಂಟ್ ಡ್ರೈವ್ ಟೆಸ್ಟ್ (ಐಡಿಟಿ) ವರದಿ ತಿಳಿಸಿದೆ. ಈ ಪರೀಕ್ಷೆಗಳು ಟ್ರಾಯ್‌ನ ಆವರ್ತಕ ಗುಣಮಟ್ಟದ ಸೇವೆ (ಕ್ಯೂಒಎಸ್) ಲೆಕ್ಕಪರಿಶೋಧನೆಯ ಭಾಗವಾಗಿದೆ. 2025ರ ಮೇ 24ರಿಂದ 28ರವರೆಗೆ ಚಿಕ್ಕಮಗಳೂರು ನಗರ ಮತ್ತು ಹೆದ್ದಾರಿಯಲ್ಲಿ 218.6 ಕಿ.ಮೀ ಡ್ರೈವ್ ಟೆಸ್ಟ್ ಹಾಗೂ 3.4 ಕಿ.ಮೀ ನಡಿಗೆ ಪರೀಕ್ಷೆ ಸೇರಿದಂತೆ ಒಟ್ಟು 222 ಕಿ.ಮೀ ದೂರವನ್ನು ಕ್ರಮಿಸಲಾಗಿತ್ತು. ಚಿಕ್ಕಮಗಳೂರು ನಗರ ಮತ್ತು ಹೆದ್ದಾರಿಯಲ್ಲಿ (ಬೆಂಗಳೂರಿನಿಂದ ಚಿಕ್ಕಮಗಳೂರಿನವರೆಗೆ) ಜಿಯೋದ ಬಲವಾದ ಪ್ರದರ್ಶನವು ಅದರ ಅಗ್ರಸ್ಥಾನವನ್ನು ಪ್ರತಿಬಿಂಬಿಸುತ್ತದೆ. ಟ್ರಾಯ್ ಪರೀಕ್ಷಿಸಿದ ಎಂಟು ಪರವಾನಗಿ ಪಡೆದ ಸೇವಾ ಪ್ರದೇಶಗಳು (ಎಲ್ಎಸ್ಎ) ಮತ್ತು 13 ನಗರಗಳು, ಹೆದ್ದಾರಿಗಳು, ರೈಲ್ವೆ ಮತ್ತು ಕರಾವಳಿ ಮಾರ್ಗಗಳಲ್ಲಿ, ಜಿಯೋ ನಿರಂತರವಾಗಿ ಅಗ್ರಸ್ಥಾನದಲ್ಲಿದೆ. ಐದು ಪ್ರಮುಖ ಧ್ವನಿ ಗುಣಮಟ್ಟ (ವಾಯ್ಸ್ ಕಾಲ್ ಕ್ಲಾರಿಟಿ)…

Read More

ಮೈಸೂರು:-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್‍ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ. ಕೋರ್ಸ್‍ಗಳಾದ (ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್‍ಐಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್‍ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ,…

Read More