Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಮಹಾದಾಯಿ ಯೋಜನೆಯ ಅರಣ್ಯ ಭೂಮಿ ವರ್ಗಾವಣೆಯ ವಿಷಯವನ್ನು ಮುಂದೂಡಿರುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು ಮತ್ತು ಈ ಕುರಿತು ಸರ್ವಪಕ್ಷಗಳ ಸಭೆಯನ್ನು ನಡೆಸಲು ಹಾಗೂ ದೆಹಲಿಗೆ ಪ್ರಧಾನ ಮಂತ್ರಿಯವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು ತೀರ್ಮಾನಿಸಲಾಯಿತು. ರಾಜ್ಯ ಸಂಪುಟವು ವನ್ಯ ಜೀವಿ ಮಂಡಳಿಯ ನಿರ್ಣಯದ ಬಗ್ಗೆ ಅಸಮಾದಾನ ಮತ್ತು ಕಳವಳ ವ್ಯಕ್ತಪಡಿಸಿ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಪರಿಶೀಲಿಸಲು ಕಾನೂನು ಇಲಾಖೆಗೆ ಸೂಚಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು. ಸಚಿವ ಸಂಪುಟದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಸಭೆಯ ನಿರ್ಣಯಗಳ ಬಗ್ಗೆ ವಿವರಿಸಿದ ಕಾನೂನು ಸಚಿವರು ಕೇಂದ್ರ ಸರ್ಕಾರದ ವನ್ಯ ಜೀವಿ ಮಂಡಳಿಯ 79ನೇ ಸಭೆಯ ನಡವಳಿಯ ಉದೃತ ಭಾಗವನ್ನು ಪತ್ರಿಕಾಗೋಷ್ಠಿಯಲ್ಲಿ ಓದಿ ಹೇಳಿದರು. 79ನೇ SC-NBWL ಸಭೆಯ ನಡಾವಳಿಯ ಉಧೃತಭಾಗ ಕೆಳಕಂಡಂತಿದೆ: “ಮಹದಾಯಿ ಯೋಜನಾ…
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಯಲ್ಲಿ ನಡೆಸಲು ಮುಖ್ಯಮಂತ್ರಿ ಗಳಾದ ಸಿದ್ದ ರಾಮಯ್ಯ ಅವರು ಹಾಗೂ ಸಂಪುಟದ ಎಲ್ಲ ಸಚಿವರು ಒಪ್ಪಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಅವರಿಗೆ ಕಲಬುರಗಿ ಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದು ಸಭೆಯ ದಿನಾಂಕ ಸಧ್ಯದಲ್ಲೇ ನಿಗದಿಪಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗಾಗಿ ಸಂವಿಧಾನ ಕಲಂ 371ಕ್ಕೆ ತಿದ್ದುಪಡಿ ತಂದು ಜೆ ಸೇರಿಸಿ ಶಿಕ್ಷಣ, ಉದ್ಯೋಗ ಹಾಗೂ ಅನುದಾನ ಒದಗಿಸಿಕೊಡುವುದಕ್ಕೆ ವಿಶೇಷ…
ಬೆಂಗಳೂರು: ನಗರದ ಆಸ್ತಿ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಆಸ್ತಿ ತೆರಿಗೆ ಪಾವತಿಸಲು ಸಮಯವನ್ನು ವಿಸ್ತರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಇಂದು ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡುವಂತ ತೀರ್ಮಾನ ಕೈಗೊಳ್ಳಲಾಗಿದೆ. ದಿನಾಂಕ 30-11-2024ರವರೆಗೆ ಸಮಯ ವಿಸ್ತರಣೆಯ ನಿರ್ಧಾರವನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು. ಪೆರಿಪರಲ್ ರಸ್ತೆಗೆ ಬಂಡವಾಳ ಸಂಗ್ರಹ ಮಾಡಲು ಸಮಯ ವಿಸ್ತರಣೆ ಮಾಡಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಸಂಗ್ರಹಕ್ಕೆ ಸಮ್ಮತಿ ನೀಡಲಾಗಿದೆ ಎಂದರು. ರಾಜ್ಯಪಾಲರು 11 ಬಿಲ್ ವಾಪಸ್ ಕಳಿಸಿದ್ದಾರೆ. 5 ಬಿಲ್ಗಳಿಗೆ ನಾವು ಉತ್ತರ ಕೊಟ್ಟಿದ್ದೇವೆ. ಸಂಪೂರ್ಣ ಮಾಹಿತಿಯನ್ನ ಒದಗಿಸಿದ್ದೇವೆ. 6 ಬಿಲ್ ಗಳಿಗೆ ಮಾಹಿತಿ ಸಂಗ್ರಹಿಸಿ ಕಳಿಸಬೇಕಿದೆ ಎಂದು ತಿಳಿಸಿದರು. https://kannadanewsnow.com/kannada/big-shock-to-ineligible-bpl-cardholders-legal-action-will-be-taken-soon-minister-k-h-muniyappa/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/ https://kannadanewsnow.com/kannada/ramesh-babu-alleges-rs-23-crore-scam-in-distribution-of-free-sarees-under-bhagyalakshmi-scheme/
ಬೆಂಗಳೂರು: ರಾಜ್ಯದಲ್ಲಿ ಅನರ್ಹತೆಯನ್ನು ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿರುವಂತವರಿಗೆ ಬಿಗ್ ಶಾಕ್ ಎನ್ನುವಂತೆ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಎಪಿಎಲ್ ಕಾರ್ಡ್ ದಾರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಅರ್ಹರಲ್ಲದವರೂ ಪಡೆದಿರುವುದು ತಿಳಿದಿದೆ. ಅರ್ಹ ಫಲಾನುಭವಿಗಳ ಹೊರತಾಗಿ, ಅನರ್ಹರಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬಿಪಿಎಲ್ ಕಾರ್ಡ್ ದಾರರಿಗೆ ಈಗ ಕೊಡುತ್ತಿರುವ ಅಕ್ಕಿ ಮುಂದುವರಿಕೆ ಮಾಡಲಾಗುತ್ತಿದೆ. ಅಕ್ಕಿ ಜೊತೆಗೆ ಬೇಳೆಕಾಳು ನೀಡಬೇಕು ಎನ್ನುವಂತ ಬೇಡಿಕೆ ಇದೆ. ಈ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಆದರೇ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾದಂತ ಚರ್ಚೆಯೊಂದಿಗೆ ತೀರ್ಮಾನಿಸಲಾಗುತ್ತದೆ ಎಂದರು. https://kannadanewsnow.com/kannada/world-democratic-day-to-be-observed-on-september-15-siddaramaiah/ https://kannadanewsnow.com/kannada/22-special-trains-to-run-on-ganesh-chaturthi-dussehra-diwali/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/
ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ ಎಂದು ಸಿಎಂ ಅಭಿಪ್ರಾಯಪಟ್ಟರು. ಬೀದರ್ ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ , ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ ಎಂದು ಕರೆ ನೀಡಿದರು. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಮಾಹಿತಿ ನೀಡುವಂತೆ ರಾಜ್ಯಪಾಲರಿಗೆ ರಾಷ್ಟ್ರಪತಿಗಳು ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಪಾಲರಿಂದ ರಾಷ್ಟ್ರಪತಿಗಳಿಗೆ ರಾಜ್ಯದ ವಿದ್ಯಾಮಾನಗಳ ಇಂಚಿಂಚೂ ಮಾಹಿತಿಯನ್ನು ರವಾನಿಸಲಾಗಿದೆ. ಮುಡಾ ಹಗರಣದ ವಿಚಾರ ರಾಷ್ಟ್ರದ ರಾಜಧಾನಿ ನವದೆಹಲಿಯನ್ನು ತಲುಪಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಪಾಲರಿಗೆ ಪತ್ರ ಬರೆದು ಮಾಹಿತಿ ನೀಡುವಂತೆ ಕೋರಿದ್ದರ ಹಿನ್ನಲೆಯಲ್ಲಿ, ಕರ್ನಾಟಕದ ವಿದ್ಯಮಾನಗಳ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮುಡಾ ಹಗರಣದ ವಿಚಾರವಾಗಿ ನಡೆದ ಪ್ರತಿಭಟನೆ, ರಾಜಭವನದ ಮೇಲೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಒತ್ತಡ, ಕಾಂಗ್ರೆಸ್ ನಾಯಕರಿಂದ ರಾಜಭವನಕ್ಕೆ ನುಗ್ಗುವುದಾಗಿ ಬೆದರಿಕೆ ಹಾಕಿದ ಮಾಹಿತಿಯನ್ನು ರಾಷ್ಟ್ರಪತಿಗಳಿಗೆ ವರದಿ ರೂಪದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದಾರೆ. ಇದಷ್ಟೇ ಅಲ್ಲದೇ ರಾಜ್ಯಾಧ್ಯಂತ ಮುಡಾ ಹಗರಣದ ಸಂಬಂಧ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ವಿಚಾರವನ್ನೂ ನೀಡಿರುವುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮುಡಾ ಹಗರಣ ಸಂಬಂಧ ರಾಜ್ಯದಲ್ಲಿನ ಹಲವು ಅಂಶಗಳನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಸೂಚನೆ…
ಬೆಂಗಳೂರು ಜನತೆ ಗಮನಕ್ಕೆ: ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಈ ಸಂಚಾರ ಮಾರ್ಗ ಬದಲಾವಣೆ | Bengaluru Traffic Update
ಬೆಂಗಳೂರು: ಸೆಪ್ಟಂಬರ್.7ರಂದು ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ವಾಹನ ಸವಾರರಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ( Bengaluru City Traffic Police ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ದಿನಾಂಕ 07.09.2024 ರಿಂದ ದಿನಾಂಕ:- 09.09.2024 ವರೆಗೆ ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000 ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವಿರುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ದಿನಾಂಕಗಳಂದು ಸಂಜೆ 04-00 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದಿದ್ದಾರೆ. ಸಂಚಾರ ನಿರ್ಬಂಧ: > ಕೆನ್ಸಿಂಗ್ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್ಟನ್…
ಬೆಂಗಳೂರು; ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳಿಗೆ ಊರಿಗೆ ತೆರಳುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯಿಂದ 22 ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ ಎಂದಿದೆ. ಗಣೇಶ ಚತುರ್ಥಿ ಹಬ್ಬದ ವಿಶೇಷ ರೈಲುಗಳು: ಕ್ರ ಸಂ ರೈಲು ಸಂಖ್ಯೆ ಯಿಂದ ನಿರ್ಗಮನ ಗೆ ಆಗಮನ ದಿನಾಂಕ ಟ್ರಿಪ್ಸ್ 1. 06589 SMVT ಬೆಂಗಳೂರು 09:15 pm ಕಲಬುರಗಿ 07:40 am 05.09.24 to 07.09.24 3 2. 06590 ಕಲಬುರಗಿ 09:35 am SMVT ಬೆಂಗಳೂರು 08:00 pm 06.09.24 to 08.09.24 ದೀಪಾವಳಿ ಹಬ್ಬದ ವಿಶೇಷ…
ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ.ಸೆಪ್ಟೆಂಬರ್ 14 ರಂದು ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು. ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವದಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂದರು. ಎರಡು ದಿನಗಳ ಕಾಲ ನಡೆಯುವ ಗಗನಚುಕ್ಕಿ ಜಲಪಾತೋತ್ಸವದ ಹಿನ್ನಲೆ ಆಗಮಿಸುವ ಸಾರ್ವಜನಿಕರಿಗೆ ಕಾರ್ಯಕ್ರಮದ ಜೊತೆಗೆ ಉಚಿತ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಊಟದ ವ್ಯವಸ್ಥೆ ಮಾಡಲಾಗಿದೆ. ಪರಿಸರದ ಸೌಂದರ್ಯ ಸವಿಯುವ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಬೆಳಿಗ್ಗೆಯಿಂದ ರಾತ್ರಿಯವರೆಗೆ ಇರುತ್ತದೆ ಎಂದರು. ಗಗನ ಚುಕ್ಕಿಯನ್ನು ಬೃಹತ್ ಆಕರ್ಷಣೀಯ ಕೇಂದ್ರವನ್ನಾಗಿಸಲು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಇಲ್ಲಿ ಸಿಗುವ ಸೌಲಭ್ಯದೊಂದಿಗೆ ರಾಜ್ಯ ಸರ್ಕಾರದಿಂದ ಕೇಂದ್ರ…
ಸೆ.7ರಂದು ವಿನಾಯಕ ಚತುರ್ಥಿ ಬರುತ್ತಿದೆ. ಅಂದರೆ ನಾಳೆಯ ಮರುದಿನ ಶನಿವಾರ ವಿನಾಯಕ ಚತುರ್ಥಿ ಬರುತ್ತಿದೆ. ಈ ಕೆಳಗಿನಂತೆ ಶನಿವಾರದಿಂದ ಪ್ರಾರಂಭಿಸಿ ಸತತ ಹತ್ತು ದಿನಗಳ ಕಾಲ ಗಣಪತಿಯನ್ನು ಪೂಜಿಸುತ್ತಾರೋ ಅವರ ಮನೆಯಲ್ಲಿ ಬಡತನವಿರುವುದಿಲ್ಲ. ಮನೆಯಲ್ಲಿನ ಬಡತನವು ಮನೆಯಿಂದ ಓಡಿಹೋಗುತ್ತದೆ. ಸಂಪತ್ತು ನಿಮಗೆ ಹೇರಳವಾಗಿ ಲಭ್ಯವಾಗಲಿದೆ. ಇಂತಹ ಗಣೇಶನ ಪೂಜೆಯನ್ನು ಕಷ್ಟಪಟ್ಟು ಮಾಡಬೇಕೇ? ತಲೆಕೆಡಿಸಿಕೊಳ್ಳಬೇಡಿ. ತುಂಬಾ ಸರಳವಾದ ವಿಧಾನವಿದೆ. ಅದನ್ನೇ ನಾವು ಇಂದು ಕಂಡುಹಿಡಿಯಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ…