Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕೇಂದ್ರ ಲೋಕಸೇವಾ ಆಯೋಗ ನಡೆಸಿದಂತ ಐಎಎಸ್ ಪರೀಕ್ಷೆಯಲ್ಲಿ 288ನೇ ಶ್ರೇಯಾಂಕದಲ್ಲಿ ಸಾಗರದ ವಿಕಾಸ್ ತೇರ್ಗಡೆಯಾಗಿದ್ದರು. ಈ ಮೂಲಕ ಐಎಎಸ್ ಪಾಸ್ ಮಾಡಿದ್ದರು. ಇಂತಹ ವಿಕಾಸ್ ಗೆ ಸಾಗರ ನಗರಸಭೆ ವತಿಯಿಂದ ಮೇ.5ರ ನಾಳೆ ನಾಗರೀಕ ಸನ್ಮಾನ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾಗರ ನಗರಸಭೆ ಕಮೀಷನರ್ ಹೆಚ್.ಕೆ ನಾಗಪ್ಪ ಅವರು, ಸಾಗರ ನಗರದಲ್ಲಿ ಪ್ರಪ್ರಥಮ ಬಾರಿಗೆ ಯುಪೆಸ್ಸಿ ಪರೀಕ್ಷೆಯಲ್ಲಿ 288ನೇ ಶ್ರೇಯಾಂಕದಲ್ಲಿ ಐಎಎಸ್ ಅಧಿಕಾರಿಯಾಗಿ ನಮ್ಮೂರಿನ ವಿಕಾಸ್.ವಿ ಆಯ್ಕೆಯಾಗಿದ್ದಾರೆ. ಅವರಿಗೆ ಸಾಗರ ಜನತೆಯ ಪರವಾಗಿ ನಗರಸಭೆ ವತಿಯಿಂದ ನಾಗರೀಕ ಸನ್ಮಾನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೇ.5ರ ನಾಳೆ ಬೆಳಗ್ಗೆ 11 ಗಂಟೆಗೆ ಸಾಗರದ ಪುರಭವನದಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿರುವಂತ ವಿಕಾಸ್.ವಿ ಅವರನ್ನು ಸನ್ಮಾನಿಸಲಾಗುತ್ತದೆ. ಸಾಗರ ತಾಲ್ಲೂಕಿನ ಜನತೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ನಮ್ಮೂರಿನ ಹೆಮ್ಮೆಯ ಪುತ್ರ ವಿಕಾಸ್.ವಿ ಅಭಿನಂದಿಸುವಂತೆ ಕೋರಿದ್ದಾರೆ. ಮೊದಲ ಪ್ರಯತ್ನದಲ್ಲೇ ‘UPSC’ ತೇರ್ಗಡೆ: 288ನೇ Rank ಗಳಿಸಿದ ‘ಸಾಗರದ ವಿಕಾಸ್’ ಶಿವಮೊಗ್ಗ ಜಿಲ್ಲೆಯ…
ತುಮಕೂರು: ಮಧುಗಿರಿ ಪಟ್ಟಣವನ್ನೇ ಬೆಚ್ಚಿಬೀಳಿಸಿದ ಕೊಲೆ ಪ್ರಕರಣದ 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ.50 ಸಾವಿರ ದಂಡವನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 12-03-2021 ರಂದು ಬೆಳಗ್ಗೆ ಸುಮಾರು 09:15 ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್. ವೀರಭದ್ರಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ-1 ಗುರುಕಿರಣ್ ಡ್ರಾಗರ್ನಿಂದ, 2ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, 3ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಎಂದಿದ್ದಾರೆ. ಸದರಿ 3…
ಹಾನಗಲ್ : “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು.…
ಲಂಡನ್: ಪಾಕಿಸ್ತಾನದ ಇಬ್ಬರು ಪತ್ರಕರ್ತರಾದ ಸಫೀನಾ ಖಾನ್ ಮತ್ತು ಅಸಾದ್ ಅಲಿ ಮಲಿಕ್ ಲಂಡನ್ನ ಉಪಾಹಾರ ಗೃಹದಲ್ಲಿ ಪರಸ್ಪರ ನಿಂದಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಎಆರ್ವೈ ನ್ಯೂಸ್ ಮತ್ತು ಹಮ್ ನ್ಯೂಸ್ನ ಇತರ ಪತ್ರಕರ್ತರೊಂದಿಗೆ ಮಲಿಕ್ ತನ್ನ ಮೇಲೆ ಸಾಮೂಹಿಕ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಖಾನ್ ಆರೋಪಿಸಿದ್ದಾರೆ. ನಿಯೋ ನ್ಯೂಸ್ನಲ್ಲಿ ಕೆಲಸ ಮಾಡುವ ಮತ್ತು ಲಂಡನ್ನ ಪಾಕಿಸ್ತಾನ್ ಪ್ರೆಸ್ ಕ್ಲಬ್ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಖಾನ್, ಯುಕೆ ಪೊಲೀಸರನ್ನು ಟ್ಯಾಗ್ ಮಾಡುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತನಗೆ ಏನಾದರೂ ಸಂಭವಿಸಿದರೆ, ಎಆರ್ವೈ ನ್ಯೂಸ್ ವರದಿಗಾರ ಫರೀದ್ ಮತ್ತು ಹಮ್ ನ್ಯೂಸ್ ಪತ್ರಕರ್ತ ರಫೀಕ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಲಂಡನ್ ಮೂಲದ ಪತ್ರಕರ್ತೆ ಹೇಳಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪ್ರಧಾನ ಕಾರ್ಯದರ್ಶಿ ಸಲ್ಮಾನ್ ಅಕ್ರಮ್ ರಾಜಾ ಅವರ ಮಾಧ್ಯಮ ಪ್ರಸಾರದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಲ್ಮಾನ್ ಅಕ್ರಮ್ ರಾಜಾ ಅವರ ಪ್ರಸಾರದ…
ಹಾವೇರಿ: “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116…
ಹಾಸನ: ನಾನು ಟೈಂ ಬರ್ಲಿ ಅಂತ ಕಾಯ್ತಾ ಇದ್ದೀನಿ. ಎಲ್ಲವನ್ನೂ ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಗನೇ ಅಲ್ಲ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಗುಡುಗಿದ್ದಾರೆ. ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನಡೆದಂತ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕೆಲವರು ಹೇಳುತ್ತಿದ್ದಾರೆ. ರೇವಣ್ಣ, ದೇವೇಗೌಡರದ್ದು ಮುಗೀತು ಅಂತ. ಆದರೇ ಈ ಜಿಲ್ಲೆಯ ಜನರಿಗೆ ಗೊತ್ತು, ದೇವೇಗೌಡ ಅವರ ಕೊಡುಗೆ ಏನು ಅಂತ ಎಂಬುದಾಗಿ ಹೇಳಿದರು. ಹಾಸನದಲ್ಲಿ ರೈಲ್ವೆ ಯೋಜನೆ, ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮಾಡಿದ್ದು ಯಾರು.? ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಐದು ಸಾವಿರ ಕೋಟಿ ಕೊಟ್ಟಿದ್ರು ಎಂಬುದಾಗಿ ತಿಳಿಸಿದರು. ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದ್ದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನು ಇಲ್ಲೇ ಇರ್ತೀನಿ. ಇದೆಲ್ಲ ಎಷ್ಟು ದಿನ ಇರುತ್ತೋ ಕಾದು…
ನವದೆಹಲಿ: ಇಸ್ರೇಲ್ ರಾಜಧಾನಿಯ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆದ ಕಾರಣ ದೆಹಲಿಯಿಂದ ಟೆಲ್ ಅವೀವ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ಅಬುಧಾಬಿಗೆ ತಿರುಗಿಸಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಎಎಫ್ಪಿ ಪ್ರಕಾರ, ಟೆಲ್ ಅವೀವ್ನ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ವಿಮಾನದ ಮಾರ್ಗ ಬದಲಾವಣೆಯನ್ನು ದೃಢಪಡಿಸಿದ್ದಾರೆ. ವಿಮಾನವು ಟೆಲ್ ಅವೀವ್ನಲ್ಲಿ ಇಳಿಯುವ ಒಂದು ಗಂಟೆಗಿಂತ ಕಡಿಮೆ ಸಮಯ ಮೊದಲು ದಾಳಿ ನಡೆದಿದೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ವಿಮಾನ AI139 ದೆಹಲಿಗೆ ಹಿಂತಿರುಗಲಿದೆ ಎಂದು ಮೂಲಗಳು ತಿಳಿಸಿವೆ. ವಿಮಾನ ಟ್ರ್ಯಾಕಿಂಗ್ ವೆಬ್ಸೈಟ್ Flightradar24.com ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಧಿಕಾರಿಗಳು ಅಬುಧಾಬಿಗೆ ತಿರುಗಿಸಲು ನಿರ್ಧರಿಸಿದಾಗ ಏರ್ ಇಂಡಿಯಾ ವಿಮಾನವು ಜೋರ್ಡಾನ್ ವಾಯುಪ್ರದೇಶದಲ್ಲಿತ್ತು. ಟೆಲ್ ಅವೀವ್ನಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ರದ್ದುಗೊಳಿಸಲಾಗಿದೆ. ಏರ್ ಇಂಡಿಯಾದಿಂದ ಹೇಳಿಕೆಗಾಗಿ ಕಾಯಲಾಗುತ್ತಿತ್ತು. ಯೆಮೆನ್ನಿಂದ ಹಾರಿಸಲಾದ ಕ್ಷಿಪಣಿ ಟೆಲ್ ಅವೀವ್ ವಿಮಾನ…
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದು, ಅವರು ತಮ್ಮ ಮಾತನ್ನು ಸಾಬೀತುಪಡಿಸಿದರೆ ನಾನು ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲದೆ, ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಯರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಅವರು, ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿಲ್ಲ. ಬಾಬಾಸಾಹೇಬರನ್ನು ಸೋಲಿಸಿದ್ದು ಕಮ್ಯುನಿಸ್ಟ್ ಪಕ್ಷದ ಡಾಂಗೆ ಮತ್ತು ಆರ್ಎಸ್ಎಸ್ನ ಸಾವರ್ಕರ್ ಎಂದು ಹೇಳಿದ್ದಾರೆ. ಈ ನಾಲ್ವರು ಮುಖಂಡರು ತಮ್ಮ ಮಾತನ್ನು ಸಾಬೀತುಪಡಿಸಿದರೆ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಘೋಷಿಸಲು ಸಿದ್ಧ ಎಂದು ಪ್ರಕಟಿಸಿದರು. ಕಾಂಗ್ರೆಸ್ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ರವರ ಸೋಲಿನ ಸಂಬಂಧ ತಮ್ಮ ಮಾತನ್ನು ಸಾಬೀತುಪಡಿಸಿದರೆ ನನ್ನ ಸ್ವಂತ ವೇತನದಲ್ಲಿ ಒಂದು ಲಕ್ಷದ ಒಂದು ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ. ಒಂದು ವೇಳೆ…
ಮೈಸೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವಂತ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಬೇಕು. ಕನ್ನಡ ಪ್ರತಿಭೆಗಳಿಗೆ ಚಿತ್ರ ಗಾಯನದಲ್ಲಿ ಅವಕಾಶ ಕೊಡಬೇಕು. ಅನ್ಯ ಭಾಷೆಯ ಗಾಯಕರನ್ನು ಹಾಡಿಸುವುದನ್ನು ನಿಲ್ಲಿಸಬೇಕು. ನಿರ್ಮಾಪಕರು ಸೋನು ನಿಗಮ್ ಗೆ ಅವಕಾಶ ನೀಡಬಾರದು ಎಂಬುದಾಗಿ ಒತ್ತಾಯಿಸಿದರು. ಕನ್ನಡ ಚಿತ್ರರಂಗದ ನಟರು ಸೋನು ಹಾಡಿಗೆ ಬಾಯಾಡಿಸುವುದನ್ನು ನಿಲ್ಲಿಸಬೇಕು. ಕೂಡಲೇ ಸೋನು ನಿಗಮ್ ಕನ್ನಡಿಗರ ಕ್ಷಮೆಯಾಚಿಸಬೇಕು. ಪೊಲೀಸರು ಸೋನು ನಿಗಮ್ ಬಂಧಿಸಿ ಜೈಲಿಗೆ ಕಳುಬಿಸಬೇಕು ಎಂಬುದಾಗಿ ವಾಟಾಲ್ ನಾಗರಾಜ್ ಆಗ್ರಹಿಸದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಸಿದ್ಧರಾಮಯ್ಯನವರು ಎಂದರೇ ಹಾಗೆಯೇ, ದೇಹವೂಂದು, ನಾಲಿಗೆ ಎರಡು ಎಂಬುದಾಗಿ ಕಿಡಿಕಾರಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ಧರಾಮಯ್ಯನವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ. ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ ಲೋಕಾರ್ಪಿತ ಮಾಡಿದ್ದಾರೆ. ಸಿದ್ದರಾಮಯ್ಯನವರು ಎಂದರೆ ಹಾಗೆಯೇ.. ದೇಹವೊಂದು, ನಾಲಿಗೆ ಎರಡು ಎಂಬುದಾಗಿ ಹೇಳಿದೆ. ದೇವೇಗೌಡರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಬಗ್ಗೆ ಸಿದ್ದರಾಮಯ್ಯನವರು ಸಹಜ, ಸಕಾರಾತ್ಮಕ ಟೀಕೆ ಮಾಡಲಿ. ಬೇಡ ಎಂದವರು ಯಾರು? ಆದರೆ, ಅದೇ ನಿತ್ಯಕೃಷಿ ಎಂಬಂತೆ ನಿರಂತರವಾಗಿ ರಾಜಕೀಯ ಜನ್ಮಕೊಟ್ಟ ಮೇರು ನಾಯಕನ ಬಗ್ಗೆಯೇ ವಿಷಕಾರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯನವರು ಜನತಾ ಪರಿವಾರದಲ್ಲಿದ್ದಾಗ ಇಂದಿರಾ ಗಾಂಧಿ ಅವರ ಬಗ್ಗೆ ಉದುರಿಸಿದ್ದ ಭಾರೀ ಭಾರೀ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಸಾಧ್ಯವಿದೆಯಾ? ಎಂದು…