Subscribe to Updates
Get the latest creative news from FooBar about art, design and business.
Author: kannadanewsnow09
ಮಡಿಕೇರಿ: ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂನ್, 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6 ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದ್ದು, ಜೂನ್, 10 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ,…
ಮಂಡ್ಯ : ಕೆಲ ದಿನಗಳ ಹಿಂದೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಉಳಿವು ಹೋರಾಟ ಸಮಿತಿ ಸದಸ್ಯರು ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಜಮಾವಣೆಗೊಂಡ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಉಳಿವು ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಮದ್ದೂರು ಪುರಸಭೆಯನ್ನು ರಾಜ್ಯ ಸರ್ಕಾರವು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆದರೆ, ಸೋಮನಹಳ್ಳಿ ಗ್ರಾಮ…
ಮಂಡ್ಯ : ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜೀವನದ ಕೊನೆಯುಸಿರಿರೋ ತನಕ ಕ್ಷೇತ್ರದ ಜನರ ಸೇವೆಯನ್ನು ನಿರಂತರವಾಗಿ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಶಾಸಕ ಕೆ.ಎಂ.ಉದಯ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ಎಂ.ಉದಯ್ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೈನಿಕರ ಕುಟುಂಬದವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಖ್ಯಾತ ಗಾಯಕರಿಂದ ರಸ ಮಂಜರಿ ಕಾರ್ಯಕ್ರಮದಲ್ಲಿ ತಮ್ಮ ಹುಟ್ಟು ಆಚರಿಸಿಕೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜಗತ್ತನ್ನೆ ಕಾಡುತ್ತಿದ್ದ ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ನಾನು ಸಮಾಜ ಸೇವೆ ಮಾಡಲು ಬಂದವನು. ರಾಜಕೀಯಕ್ಕೆ ಬರಬೇಕೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಆದರೆ, ನಾನು ಮಾಡುತ್ತಿದ್ದ ಸಮಾಜ ಸೇವೆಯನ್ನು ಮೆಚ್ಚಿ ಮೊದಲ ಚುನಾವಣೆಯಲ್ಲೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಿರಿ ಹೀಗಾಗಿ ನಿಮಗೆ ಕೃತಜ್ಞನಾಗಿದ್ದಿನಿ ಎಂದರು. ಕ್ಷೇತ್ರದ ಜನರು ನನಗೆ ತೋರುತ್ತಿರುವ…
ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಖಾರವಾಗಿ ಪೋಸ್ಟ್ ಮಾಡಿರುವ ಅವರು; ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ ಸಿಎಂ ಹೇಳಿಕೆಯನ್ನು ಸಿಎಂ ಖಂಡಿಸಿದ್ದಾರೆ. ಸನ್ಮಾನ್ಯ ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರನ್ನು ‘ಮೆಟ್ಟಿಲು ಮುಖ್ಯಮಂತ್ರಿ’ ಎಂದು ಕೇಂದ್ರ ಸಚಿವರು ಟೀಕಿಸಿದ್ದಾರೆ. https://twitter.com/hd_kumaraswamy/status/1931956536621842617 https://kannadanewsnow.com/kannada/tomorrow-the-kusum-c-scheme-will-be-inaugurated-by-chief-minister-siddaramaiah-minister-k-j-george/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು. “ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್ಗಳ ಬಳಿ ಸೋಲಾರ್ ಘಟಕಗಳನ್ನು…
ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಬಂಧನಕ್ಕೆ ಒಳಗಾದವರ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಸಿಸಿಬಿಯು ಅಕ್ರಮವಾಗಿ ತಮ್ಮನ್ನು ಬಂಧಿಸಲಾಗಿದೆ ಎಂಬುದಾಗಿ ಆರ್ ಸಿ ಬಿ ಮ್ಯಾನೇಜರ್ ನಿಖಿಲ್ ಸೋಸಲೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದಿಸಿದರು. ರಾಜ್ಯ ಸರ್ಕಾರ ಸಿಸಿಬಿಯಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದ. ಇದು ಕಾನೂನು ಉಲ್ಲಂಘಿಸಿ ಬಂಧಿಸಿದಂತ ಬಂಧನವಾಗಿದೆ. ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ವೇಳೆ ಹೈಕೋರ್ಟ್ ನಿಖಿಲ್ ಸೋಸಲೆಯನ್ನು ಬಂಧಿಸುವಂತ ಅಧಿಕಾರ ಸಿಸಿಬಿಗೆ ಇತ್ತೆ ಎಂಬುದಾಗಿ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದಂತ…
ಬೆಂಗಳೂರು: ಸಾರಿಗೆ ಇಲಾಖೆಗೆ ಶುಲ್ಕ, ತೆರಿಗೆ ಮತ್ತು ದಂಡದ ರೂಪದಲ್ಲಿ ಜಮೆ ಆಗಬೇಕಿದ್ದಂತ ಮೊತ್ತವನ್ನು ಕಟ್ಟದೇ ಕರ್ತವ್ಯ ಲೋಪವೆಸಗಿದಂತ ದ್ವಿತೀಯ ದರ್ಜೆ ಸಹಾಯಕನನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಾರಿಗೆ ಮತ್ತು ಶಿಸ್ತು ಪ್ರಾಧಿಕಾರದ ಆಯುಕ್ತರು ನಡವಳಿಯನ್ನು ಹೊರಡಿಸಿದ್ದು, ಬಳ್ಳಾರಿ ಪ್ರಾದೇಶಿಕ ಸಾರಿಗೆ ಕಛೇರಿಯ ಖಜಾನೆ ವಿಭಾಗದಲ್ಲಿ ದೈನಂದಿನ ಸಂಗ್ರಹವಾಗುವ ಶುಲ್ಕ, ತೆರಿಗೆ ಮತ್ತು ದಂಡಗಳ ಮೊತ್ತವನ್ನು ಅದೇ ದಿನ ಅಥವಾ ಕೆಲಸದ ಅವಧಿಯ ನಂತರದ ದಿನದಂದು ಸರ್ಕಾರದ ಖಜಾನೆಗೆ ಕೆ-2 ಚಲನ್ ಮುಖಾಂತರ ಪಾವತಿಸುವುದು KFC & KTC ಕಾಯ್ದೆಯನ್ವಯ ಕಡ್ಡಾಯವಾಗಿರುತ್ತದೆ. ಆದರೆ 2025ರ ಮೇ ತಿಂಗಳ ದಿನಾಂಕ: 21, 26 ರಿಂದ 31 ರ ಅವಧಿಯ ಒಟ್ಟು 7 ಕರ್ತವ್ಯ ದಿನಗಳ ಖಜಾನೆ ವಸೂಲಾತಿಯ ಒಟ್ಟು ರೂ.16,72,518/- ಸರ್ಕಾರಕ್ಕೆ ಸಂದಾಯ ಮಾಡಿರೋದಿಲ್ಲ. ಒಟ್ಟು 7 ದಿನಗಳ ಖಜಾನೆ ಸಂಗ್ರಹಣೆ ಮೊತ್ತ ರೂ. 16,72,518/- ನ್ನು ಸರ್ಕಾರಕ್ಕೆ ಪಾವತಿಸದೇ ತಾತ್ಕಾಲಿಕವಾಗಿ ಸರ್ಕಾರದ ರಾಜನ್ಯವು ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಕಂಡು…
ನವದೆಹಲಿ: ಸ್ವಾಯತ್ತ ಯುದ್ಧ ಸಾಮರ್ಥ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ, ಭಾರತವು ಸೋಮವಾರ ಎತ್ತರದ ಭೂಪ್ರದೇಶದಲ್ಲಿ ಕೃತಕ ಬುದ್ಧಿಮತ್ತೆ-ಸಕ್ರಿಯಗೊಳಿಸಿದ ಲೈಟ್ ಮೆಷಿನ್ ಗನ್ (LMG) ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಡೆಹ್ರಾಡೂನ್ ಮೂಲದ ರಕ್ಷಣಾ ಸಂಸ್ಥೆ BSS ಮೆಟೀರಿಯಲ್ ಲಿಮಿಟೆಡ್ ಅಭಿವೃದ್ಧಿಪಡಿಸಿದ, AI-ಚಾಲಿತ ನೆಗೆವ್ LMG ಅನ್ನು ಭಾರತೀಯ ಸೇನೆಯ ಸಹಯೋಗದೊಂದಿಗೆ 14,000 ಅಡಿ ಎತ್ತರದಲ್ಲಿ ಪ್ರಯೋಗಗಳಿಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಯು ಸವಾಲಿನ ಪರ್ವತ ಪರಿಸರದಲ್ಲಿ ಗುರಿಗಳನ್ನು ಸ್ವಾಯತ್ತವಾಗಿ ಗುರುತಿಸುವ ಮತ್ತು ತೊಡಗಿಸಿಕೊಳ್ಳುವ ಸಾಮರ್ಥ್ಯವನ್ನು ಪ್ರದರ್ಶಿಸಿತು. ಇದು ಭಾರತದ ಕಠಿಣ ಗಡಿ ಪ್ರದೇಶಗಳಲ್ಲಿ ಕಾರ್ಯಾಚರಣೆಗಳಿಗೆ ನಿರ್ಣಾಯಕ ಪ್ರಯೋಜನವಾಗಿದೆ. ಕಾರ್ಯಕ್ಷಮತೆ ಮತ್ತು ನಿಖರತೆಯ ಮೇಲೆ ಕೇಂದ್ರೀಕರಿಸಿದ ಪ್ರಯೋಗಗಳು, ‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ್ ಭಾರತ್’ ಉಪಕ್ರಮಗಳ ಅಡಿಯಲ್ಲಿ ಸ್ಥಳೀಯ ನಾವೀನ್ಯತೆಯ ಮೂಲಕ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ವಿಶಾಲವಾದ ಪ್ರಯತ್ನದ ಭಾಗವಾಗಿದೆ. BSS ಮೆಟೀರಿಯಲ್ ಪ್ರಕಾರ, AI-ಸಂಯೋಜಿತ ವ್ಯವಸ್ಥೆಯು ಪ್ರಯೋಗಗಳ ಉದ್ದಕ್ಕೂ ಸ್ಥಿರವಾದ ಗುರಿ ಸ್ವಾಧೀನ, ಹೊಂದಾಣಿಕೆಯ ಬೆಂಕಿ ನಿಯಂತ್ರಣ ಮತ್ತು…
ನವದೆಹಲಿ: ಸೌದಿ ಅರೇಬಿಯಾಕ್ಕೆ ಭಾರತೀಯರು ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ ಎಂಬ ವರದಿಗಳು ತಪ್ಪು ಎಂದು ಸರ್ಕಾರಿ ಮೂಲಗಳು ಸೋಮವಾರ ತಿಳಿಸಿವೆ. ಸೌದಿ ಸರ್ಕಾರ ಈ ವಿಷಯದ ಬಗ್ಗೆ ಯಾವುದೇ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಅವರು ಹೇಳಿದರು. ಸೌದಿ ಸರ್ಕಾರವು ಆ ದೇಶಕ್ಕೆ ಪ್ರಯಾಣಿಸುವ ಭಾರತೀಯರ ಮೇಲೆ ನಿರ್ಬಂಧಗಳನ್ನು ವಿಧಿಸಿದೆ ಎಂದು ಕೆಲವು ವರದಿಗಳು ಹೇಳಿಕೊಂಡ ನಂತರ ಈ ಸ್ಪಷ್ಟೀಕರಣ ಬಂದಿದೆ. “ಪ್ರಾಯೋಗಿಕವಾಗಿ, ಹಜ್ ಋತುವಿನಲ್ಲಿ, ಹಜ್ ಮುಕ್ತಾಯದೊಂದಿಗೆ ಕೊನೆಗೊಳ್ಳುವ ಈ ಋತುವಿನಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಅಲ್ಪಾವಧಿಯ ವೀಸಾಗಳ ಮೇಲೆ ತಾತ್ಕಾಲಿಕ ನಿರ್ಬಂಧಗಳಿವೆ” ಎಂದು ಮೂಲವೊಂದು ತಿಳಿಸಿದೆ. https://kannadanewsnow.com/kannada/complete-ban-on-the-use-of-plastic-including-water-bottles-in-the-states-muzarai-temples/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/
ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್.15ರಿಂದ ನೀರಿನ ಬಾಟಲಿ ಸೇರಿದಂತ ಎಲ್ಲಾ ಬಗೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಜರಾಯಿ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ನಿರ್ಧರಿಸಲಾಗಿದೆ. ಈ ಹಿನ್ನಲೆಯಲ್ಲಿ ಆಗಸ್ಟ್.15ರಿಂದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸುತ್ತಿರುವುದಾಗಿ ಹೇಳಿದರು. ಆಗಸ್ಟ್.15ರಿಂದ ಮುಜರಾಯಿ ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು 2 ತಿಂಗಳ ಸಮಯಾವಕಾಶ ನೀಡಲಾಗಿದೆ. ಈಗಾಗಲೇ ಪ್ಲಾಸ್ಟಿಕ್ ವಸ್ತುಗಳನ್ನು ದೇವಾಲಯಗಳಲ್ಲಿ ಖರೀದಿಸಿದ್ದರೇ ಬಳಕೆ ಮಾಡಬಹುದು. 2 ತಿಂಗಳ ಬಳಿಕ ಮಾಡುವಂತಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/