Author: kannadanewsnow09

ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ. ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ. ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ…

Read More

ಶಿವಮೊಗ್ಗ: ಸಾಗರದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ. ಜಾತ್ರೆ ಅತ್ಯಂತ ವಿಜೃಂಭಣೆಯಿoದ ನಡೆಸಲು ಅಗತ್ಯ ಸಿದ್ದತೆ ನಡೆಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಶಿವಮೊಗ್ಗದ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಸೋಮವಾರ ಫೆಬ್ರವರಿ 3ರಿಂದ ನಡೆಯಲಿರುವ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಗೋಪುರಕ್ಕೆ ಬಣ್ಣ ಬಳಿಯುವುದು, ಮಂಟಪ, ಶಾಮಿಯಾನ, ಲೈಟಿಂಗ್ ಇನ್ನಿತರೆ ಟೆಂಡರ್‌ಗಳು ಕಾನೂನುಬದ್ದವಾಗಿ ಕರೆದು ಕೆಲಸ ಪ್ರಾರಂಭಿಸಲು ತಿಳಿಸಲಾಗಿದೆ ಎಂದು ಹೇಳಿದರು. ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2 ಕೋಟಿ ಅನುದಾನ ಮಂಜೂರು ಮಾಡಿದ್ದು ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿದೆ. ನಗರದ ಬಿ.ಎಚ್.ರಸ್ತೆ ಡಾಂಬಾರೀಕರಣ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಇದರ ಜೊತೆಗೆ ಕೆಳದಿ ರಸ್ತೆ, ಹೊಸನಗರ ರಸ್ತೆ ಸಹ ಅಭಿವೃದ್ದಿಪಡಿಸಿ ಡಿವೈಡರ್‌ಗಳನ್ನು ಅಳವಡಿಸಿ ವಿದ್ಯುದ್ದೀಪ ಅಳವಡಿಸಲಾಗುತ್ತಿದೆ. ಒಟ್ಟು ಸಾಗರ ನಗರ ಸಂಪರ್ಕಿಸು ರಸ್ತೆಗಳಲ್ಲಿ 400 ವಿದ್ಯುದ್ದೀಪಗಳನ್ನು ಅಳವಡಿಸಲಾಗುತ್ತಿದೆ ಎಂದರು. ಜಾತ್ರೆ…

Read More

ನವದೆಹಲಿ: ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತು ಮತ್ತು 15 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಮೂರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚಿಸಿತು. ಸಂತ್ರಸ್ತೆಯ ಮನೆಯ 5 ಕಿ.ಮೀ ವ್ಯಾಪ್ತಿಯಲ್ಲಿ ಬರಬಾರದು ಮತ್ತು ಆಕೆ ಅಥವಾ ಆಕೆಯ ತಾಯಿಗೆ ಬೆದರಿಕೆ ಹಾಕಬಾರದು ಎಂದು ಹೈಕೋರ್ಟ್ ಸೆಂಗಾರ್‌ಗೆ ಸೂಚಿಸಿತು. “ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದತಿಗೆ ಕಾರಣವಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ. ಅತ್ಯಾಚಾರ ಪ್ರಕರಣದಲ್ಲಿ ತನ್ನ ಅಪರಾಧ ಸಾಬೀತು ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಸೆಂಗಾರ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಅವರ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019 ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು…

Read More

ಶಿವಮೊಗ್ಗ: ಇಂದು ಮಲೆನಾಡು ಪ್ರದೇಶದ ಇತಿಹಾಸ ಮತ್ತು ಅಭಿವೃದ್ಧಿಯ ಹೆಮ್ಮೆಯ ಸಂಕೇತವಾದ ಸಾಗರ ಜಂಬಗಾರು ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವವನ್ನು ಆಚರಿಸಲಾಯಿತು. ರೈಲ್ವೆ ಇಲಾಖೆಯ ಅಧಿಕೃತ ದಾಖಲೆಗಳ ಪ್ರಕಾರ, ಈ ನಿಲ್ದಾಣವು 1938–39ರಲ್ಲಿ ಸ್ಥಾಪನೆಯಾಗಿ ಹಲವು ದಶಕಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಟೇಷನ್ ಮಹೋತ್ಸವವು ಭಾರತೀಯ ರೈಲ್ವೆಯ ಮಹತ್ವದ ಉಪಕ್ರಮವಾಗಿದ್ದು, ರೈಲು ನಿಲ್ದಾಣಗಳ ಇತಿಹಾಸ, ಪರಂಪರೆ, ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯ ಪಾತ್ರವನ್ನು ಜನರಿಗೆ ಪರಿಚಯಿಸುವುದು ಇದರ ಉದ್ದೇಶವಾಗಿದೆ. ವಿಶೇಷವಾಗಿ ಶಾಲಾ ಮಕ್ಕಳನ್ನು ಒಳಗೊಂಡಂತೆ ಯುವ ಪೀಳಿಗೆಗೆ ರಾಷ್ಟ್ರ ನಿರ್ಮಾಣದಲ್ಲಿ ರೈಲ್ವೆಯ ಮಹತ್ವವನ್ನು ಅರಿವುಗೊಳಿಸುವುದಕ್ಕೆ ಇದು ಸಹಕಾರಿಯಾಗಿದೆ. ಭಾರತೀಯ ರೈಲ್ವೆ ದಾಖಲೆಗಳಲ್ಲಿ ಸಾಗರವನ್ನು ಅಧಿಕೃತವಾಗಿ ಸಾಗರ ಜಂಬಗಾರು ಎಂದು ದಾಖಲಿಸಲಾಗಿದೆ. ಸಾಗರಕ್ಕೆ ಸೇವೆ ನೀಡಿದ ಮೊದಲ ರೈಲು ನಿಲ್ದಾಣವು ಬಸವನ ಹೊಳೆ ಅತ್ತ ಇರುವ ಜಂಬಗಾರು ಗ್ರಾಮದಲ್ಲಿ ಸ್ಥಾಪಿತವಾಗಿತ್ತು. ಮೀಟರ್ ಗೇಜ್ ಅವಧಿಯಲ್ಲಿ ಸಾಗರ ಜಂಬಗಾರು ನಿಲ್ದಾಣವನ್ನು ಎಸ್ಆರ್ ಎಫ್ ಕೋಡ್‌ನಿಂದ ಗುರುತಿಸಲಾಗುತ್ತಿದ್ದು, ತಾಲಗುಪ್ಪ ನಿಲ್ದಾಣಕ್ಕೆ ಟಿಎಲ್ ಜಿಪಿ…

Read More

ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು. ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು. ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ ಎಂದು ವಿವರಿಸಿದರು. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ…

Read More

ಬೆಂಗಳೂರು: 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದರು. ಅವರ ಸಭೆಯ ಮುಖ್ಯಾಂಶ ಹೈಲೈಟ್ಸ್ ಮುಂದಿದೆ ಓದಿ.. ಇಂದು ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ ಎಂದರು. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ. ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕಿನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ…

Read More

“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ…

Read More

ನವದೆಹಲಿ: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಇಂದು ಒಂದೇ ದಿನಕ್ಕೆ ಚಿನ್ನದ ದರವು ರೂ.2,400 ಹೆಚ್ಚಳವಾಗಿದೆ. ಆ ಮೂಲಕ ಒಂದೇ ದಿನಕ್ಕೆ ದಾಖಲೆ ಮಟ್ಟದಲ್ಲಿ ಆಭರಣದ ದರವು ಹೆಚ್ಚಳಗೊಂಡಿದೆ. ಡಿಸೆಂಬರ್ 23, 2025 ರಂದು, 24K ಚಿನ್ನದ ಬೆಲೆ 10 ಗ್ರಾಂಗೆ ₹138,320 ಕ್ಕೆ ತಲುಪಿದ್ದು, ಹಿಂದಿನ ಮುಕ್ತಾಯಕ್ಕೆ ಹೋಲಿಸಿದರೆ ₹2,400 ರಷ್ಟು ಏರಿಕೆ ಕಂಡಿದೆ. ಏತನ್ಮಧ್ಯೆ, 22K ಚಿನ್ನದ ಬೆಲೆ 10 ಗ್ರಾಂಗೆ ₹126,793 ಕ್ಕೆ ತಲುಪಿದೆ. ಭಾರತದಲ್ಲಿ ಚಿನ್ನದ ಬೆಲೆಗಳು ಅಂತರರಾಷ್ಟ್ರೀಯ ಸ್ಪಾಟ್ ಚಿನ್ನದ ದರಗಳು, US ಡಾಲರ್ ಏರಿಳಿತಗಳು ಮತ್ತು ಚಿನ್ನದ ಮೇಲಿನ ಆಮದು ಸುಂಕಗಳು ಸೇರಿದಂತೆ ಇತರ ವಿಷಯಗಳಿಂದ ಹೆಚ್ಚಾಗಿ ಪ್ರಭಾವಿತವಾಗಿವೆ. ಭಾರತದಲ್ಲಿ ಚಿನ್ನದ ಬೆಲೆಗಳು ದುಬೈಗಿಂತ ಹೆಚ್ಚೇ ಮುಂದುವರೆದಿದೆ. ಡಿಸೆಂಬರ್ 23, 2025 ರಂದು ಭಾರತದಲ್ಲಿ 24K ಚಿನ್ನದ ಬೆಲೆ 10 ಗ್ರಾಂಗೆ ₹138,320 ಆಗಿದ್ದರೆ, ದುಬೈನಲ್ಲಿ ₹112,816 ಆಗಿದ್ದು, ಇದು ₹25,504 ಅಥವಾ 22.61% ವ್ಯತ್ಯಾಸವನ್ನು ಪ್ರತಿಬಿಂಬಿಸುತ್ತದೆ. ಅದೇ ರೀತಿ, ಭಾರತದಲ್ಲಿ…

Read More

ಬೆಂಗಳೂರು: ರಾಜ್ಯದ ಆ ಆಸ್ಪತ್ರೆಗೆ ಬಡ ವರ್ಗದ ಜನರು ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯೋದು ಮಾಮೂಲಿ. ಆ ಆಸ್ಪತ್ರೆಗೆ ತೆರಳೋ ರೋಗಿಗಳಿಗೆ ಚಿಕಿತ್ಸೆ ವೇಳೆಯಲ್ಲಿ ಔಷಧಿಗಾಗಿ ಬರೆದು ಕೊಡೋ ಚೀಟಿಯನ್ನು ತೆಗೆದುಕೊಂಡು ನೀವು ಔಷಧಿ ತರೋದಕ್ಕೆ ಹೋದ್ರೆ, ಅಲ್ಲಿ ನಡೆಯೋದೇ ಬೇರೆ. ಹಾಗಾದ್ರೆ ನೀವು ರಾಜ್ಯದ ಆ ಪ್ರಸಿದ್ಧ ಆಸ್ಪತ್ರೆಗೆ ಹೋಗಿ, ಔಷಧಿ ಬರೆದುಕೊಟ್ಟಾಗ ತೆಗೆದುಕೊಂಡು ಹೋಗೋ ಮುನ್ನ ಮುಂದಿನ ಸುದ್ದಿ ಓದಿ.. ಕಾಯಿಲೆ ವಾಸಿಗೆ ಪ್ರಿಸ್ಕ್ರಪ್ಪನ್‌ನಲ್ಲಿ (ಔಷಧ ಚೀಟಿ) ವೈದ್ಯರು ಬರೆಯುವ ಔಷಧವನ್ನೇ ಕಡ್ಡಾಯವಾಗಿ ರೋಗಿಗಳಿಗೆ ನೀಡುವುದು ಔಷಧ ಮಳಿಗೆಗಳ ಕರ್ತವ್ಯ. ಆದರೆ,ವೈದ್ಯರು ಬರೆದಿರುವ ಔಷಧ ಬದಲು ಇನ್ಯಾವುದೋ ಕೊಡುವ ಔಷಧವನ್ನು ಸೇವಿಸಿದರೆ ರೋಗಿಗಳ ದೇಹದಲ್ಲಿ ಅಡ್ಡ ಪರಿಣಾಮ ಅಥವಾ ಕೆಲವೊಮ್ಮೆ ಪ್ರಾಣಕ್ಕೂ ಅಪಾಯ ಇರುತ್ತದೆ. ಅದರಂತೆ, ರಾಜ್ಯದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಹಾಗೂ ನಿಮ್ಹಾನ್ಸ್ ಆವರಣದಲ್ಲಿರುವ ‘ಜನತಾ ಬಜಾರ್ ಔಷಧ ಮಳಿಗೆಗಳು, ಬದಲಿ ಔಷಧ ಕೊಟ್ಟು ಸಾವಿರಾರು ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಸಹಕಾರ ಇಲಾಖೆಯ ಅಧೀನದ ಕರ್ನಾಟಕ…

Read More

ನವದೆಹಲಿ: ಪ್ಯಾನ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಗಡುವಿಗೆ ಕೇವಲ ಒಂಬತ್ತು ದಿನಗಳು ಉಳಿದಿದ್ದು, ಭವಿಷ್ಯದಲ್ಲಿ ಯಾವುದೇ ಅಡೆತಡೆಗಳನ್ನು ತಪ್ಪಿಸಲು ನಾಗರಿಕರು ಡಿಸೆಂಬರ್ 31, 2025 ರೊಳಗೆ ತಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಸೂಚಿಸಲಾಗಿದೆ. ನೀವು ನಿರ್ದಿಷ್ಟ ಸಮಯದೊಳಗೆ ನಿಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಜನವರಿ 1, 2026 ರಿಂದ ನಿಷ್ಕ್ರಿಯಗೊಳ್ಳುತ್ತದೆ. ಪ್ಯಾನ್ ಲಿಂಕ್ ಆಧಾರ್, ಪ್ಯಾನ್-ಆಧಾರ್ ಲಿಂಕ್ ಕೊನೆಯ ದಿನಾಂಕ ಏಪ್ರಿಲ್ 3, 2025 ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ಹಣಕಾಸು ಸಚಿವಾಲಯವು ಹೀಗೆ ಹೇಳಿದೆ: “ಆದಾಯ ತೆರಿಗೆ ಕಾಯ್ದೆ, 1961 (1961 ರ 43) ಸೆಕ್ಷನ್ 139AA ನ ಉಪವಿಭಾಗ (2A) ನಿಂದ ನೀಡಲಾದ ಅಧಿಕಾರವನ್ನು ಚಲಾಯಿಸುವಲ್ಲಿ, ಅಕ್ಟೋಬರ್ 1, 2024 ರ ಮೊದಲು ಸಲ್ಲಿಸಲಾದ ಆಧಾರ್ ಅರ್ಜಿ ನಮೂನೆಯ ದಾಖಲಾತಿ ಐಡಿ ಆಧಾರದ ಮೇಲೆ ಶಾಶ್ವತ ಖಾತೆ ಸಂಖ್ಯೆಯನ್ನು ಪಡೆದ ಪ್ರತಿಯೊಬ್ಬ ವ್ಯಕ್ತಿಯು ತನ್ನ ಆಧಾರ್ ಸಂಖ್ಯೆಯನ್ನು ಆದಾಯ…

Read More