Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು. ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ…
ಚಿಕ್ಕಬಳ್ಳಾಪುರ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಹೆಸರು ಮರುನಾಮಕರಣಕ್ಕೆ ಅಸ್ತು ಎಂದಿದೆ. ಇದಲ್ಲದೇ ಇತರೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2023ರಲ್ಲಿ ಅಧಿಕಾರಕ್ಕೆ ಬಂದಮೇಲೆ ಒಂದು ತೀರ್ಮಾನ ಮಾಡಿದ್ವು. ರೆವಿನ್ಯೂ ವಲಯಗಳಲ್ಲಿ ಕ್ಯಾಬಿನೆಟ್ ಮಾಡಬೇಕಂತ ತೀರ್ಮಾನ ಮಾಡಿದ್ವು. ಗುಲ್ಬರ್ಗ ವಿಭಾಗದಲ್ಲಿ ಮಾಡಿದ್ದೇವೆ. ಮೈಸೂರಿನ ಚಾಮರಾಜನಗರ ಜಿಲ್ಲೆಯಲ್ಲಿ ಮಾಡಲಾಗಿದೆ. ಬೆಳಗಾವಿ ಡಿವಿಜನ್ ಕ್ಯಾಬಿನೆಟ್ ನ ಬಿಜಾಪುರದಲ್ಲಿ ಮಾಡಬೇಕಂತ ತೀರ್ಮಾನ ಮಾಡಲಾಗಿದೆ. ನಾಳೆ ಚಿಕ್ಕಬಳ್ಳಾಪುರದ ಮಂತ್ರಿಗಳು ವಿದೇಶಕ್ಕೆ ಹೋಗ್ತಿದ್ದಾರೆ. ಅದಕ್ಕೆ ಇವತ್ತೆ ಕ್ಯಾಬಿನೆಟ್ ಮಾಡ್ತಿದ್ದೇವೆ. ನಾನು ಹೋಗೊದಕ್ಕೆ ಅನುಮತಿ ಕೊಟ್ಟಿದ್ದೇನೆ ಎಂದರು. ಇಂದು ನಂದಿಬೆಟ್ಟದಲ್ಲಿ ಬೆಂಗಳೂರು ರವೆನ್ಯೂ ಡಿವಿಜನ್ ಸಭೆ ನಡೆಸಲಾಯಿತು. ಬೆಂಗಳೂರು ಡಿವಿಜನ್ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಬೇರೆ ಜಿಲ್ಲೆಗಳದ್ದು ತುರ್ತು ಇದ್ರೆ ಚರ್ಚೆ ಮಾಡಲಾಗುತ್ತೆದೆ. 48 ವಿಷಯಗಳನ್ನ ಚರ್ಚೆ ಮಾಡಿದ್ದೇವೆ. ಸುಮಾರು…
ಕಷ್ಟಪಟ್ಟು ಮಾಡಿದ ಸಾಲವನ್ನೆಲ್ಲಾ ತೀರಿಸಲಾಗದೆ ಪರದಾಡುತ್ತಿರುವವರಿಗೆ ಇಂದಿನ ಅದ್ಭುತ ದಿನ ಬಂದಿದೆ. ಇಂದು ಮಂಗಳವಾರ, ಗುರುವಾರ ಸಾಲ ಮರುಪಾವತಿಗೆ ಉತ್ತಮ ದಿನ. ಈ ದಿನದ ಜೊತೆಗೆ ಅಷ್ಟಮಿ ತಿಥಿ ಕೂಡ ಇಂದು ಸಂಜೆ ಹುಟ್ಟಲಿದೆ. ಕಾಲದ ದೃಷ್ಟಿಯಿಂದ ಇಂದು 2.07.25 ಸಂಜೆ 6:50ಕ್ಕೆ ಅಷ್ಟಮಿ ತಿಥಿ ಹುಟ್ಟಿದೆ. ನಾಳೆ 3.07.25 ಗುರುವಾರ ಸಂಜೆ 6:55 ರವರೆಗೆ ಅಷ್ಟಮಿ ತಿಥಿ ಮಾನ್ಯವಾಗಿದೆ. ನಾಳೆ ಎಲ್ಲ ದೇವಸ್ಥಾನಗಳಲ್ಲಿ ಅಷ್ಟಮಿ ತಿಥಿ ಪೂಜೆ ನಡೆಯಲಿದೆ. ನಾಳೆ ಸಂಜೆ ದೇವಸ್ಥಾನಕ್ಕೆ ಹೋಗಿ ದೀಪ ಹಚ್ಚಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು. ಮುಂದುವರೆದು, ಈ ಕೆಳಕಂಡ ಅಧಿಕಾರಿಗಳನ್ನು ನಮೂದಿಸಿರುವ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ ಎಂದಿದ್ದಾರೆ. ಹೀಗಿದೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಪಟ್ಟಿ ಹರ್ಷ ಗುಪ್ತ – ಬೆಂಗಳೂರು ನಗರ ಡಾ.ಪಿಸಿ ಜಾಫರ್ – ಬೆಂಗಳೂರು ಗ್ರಾಮಾಂತರ ವಿ.ರಶ್ಮಿ ಮಹೇಶ್ – ರಾಮನಗರ ಅಮಲಾನ್…
ಬೆಂಗಳೂರು: ಇಂದು ನಂದಿ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರವೆಂದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರುನಾಮಕರಣಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಬದಲಾವಣೆಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ. ಬಾಗೇಪಲ್ಲಿ ಹೆಸರು ಭಾಗ್ಯನಗರ ಎಂದು ಮರುನಾಮಕರಣ ಮಾಡೋದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಗೂ ಅಸ್ತು ಎಂದಿದೆ. ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. https://kannadanewsnow.com/kannada/the-clarity-in-the-conditions-and-instructions-for-kptcl-is-not-in-the-order-je-transfer-confusion-this-year-too/ https://kannadanewsnow.com/kannada/breaking-explosion-in-telangana-chemical-factory-death-toll-rises-to-40-telangana-factory-blast/
ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿದ್ದಾರೆ. ಈ ರೈತರಿಗೆ ಸ್ಯಾಂಡಲ್ ವುಡ್ ನಟಿ ರಮ್ಯಾ ಬೆಂಬಲಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೆಐಡಿಬಿಗೆ ರೈತರು ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಈ ಧರಣಿಗೆ ತಾನು ಬೆಂಬಲ ನೀಡುವುದಾಗಿ ಸಿಎಂ ಸಿದ್ಧರಾಮಯ್ಯಗೆ ಟ್ಯಾಗ್ ಮಾಡಿ ತಿಳಿಸಿದ್ದಾರೆ. ಇನ್ನೂ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ರೈತರ ಹೋರಾಟಕ್ಕೆ ಸ್ಪಂದಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮನವಿ ಮಾಡಿದ್ದಾರೆ. ಅಂದಹಾಗೇ 1780ಕ್ಕೂ ಹೆಚ್ಚು ದಿನಗಳಿಂದ ಚನ್ನರಾಯಪಟ್ಟಣ ಹೋಬಳಿಯ ರೈತರು ಕೆಐಡಿಎಬಿಗೆ ಭೂಮಿ ಕೊಡುವುದಿಲ್ಲ ಎಂಬುದಾಗಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಧರಣಿಯನ್ನು ರೈತರು ಮುಂದುವರೆಸಿದ್ದಾರೆ. ರೈತರ ಸಮಸ್ಯೆಗೆ ಸ್ಪಂದಿಸಿ ಅವರ ಬಗ್ಗೆ ಕರುಣೆತೋರಿ ಎಂಬುದಾಗಿ ನಟಿ ರಮ್ಯಾ ಟ್ವಿಟ್ಟರ್ ಟ್ಯಾಗ್ ನಲ್ಲಿ ಒತ್ತಾಯಿಸಿದ್ದಾರೆ. https://twitter.com/divyaspandana/status/1940299482593468777
ಚಿಕ್ಕಬಳ್ಳಾಪುರ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದ ಸಿಎಂ, ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ…
ಬೆಂಗಳೂರು: ನಗರದಲ್ಲಿನ ಇನ್ಫೋಸಿಸ್ ಕ್ಯಾಂಪಸ್ನ ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವೀಡಿಯೊಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಟೆಕ್ ದೈತ್ಯ ಸಂಸ್ಥೆಯ ಉದ್ಯೋಗಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಆಂಧ್ರಪ್ರದೇಶದ ಸ್ವಪ್ನಿಲ್ ನಾಗೇಶ್ ಮಾಲಿ (28) ಎಂದು ಗುರುತಿಸಲಾಗಿದೆ. ಜೂನ್ 30 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ನ ಮಹಿಳಾ ಉದ್ಯೋಗಿಯೊಬ್ಬರು ಶೌಚಾಲಯದಲ್ಲಿದ್ದಾಗ ಎದುರಿನ ಬಾಗಿಲಿನಲ್ಲಿ ಪ್ರತಿಬಿಂಬವನ್ನು ಗಮನಿಸಿದಾಗ, ಯಾರೋ ತನ್ನನ್ನು ರೆಕಾರ್ಡ್ ಮಾಡುತ್ತಿದ್ದಾರೆಂದು ಬಹಿರಂಗಪಡಿಸಿದಾಗ ಬೆಳಕಿಗೆ ಬಂದಿತು. ತಕ್ಷಣದ ತನಿಖೆಯ ನಂತರ, ಅವಳು ಆರಂಭದಲ್ಲಿ ತನ್ನನ್ನು ಮಾತ್ರ ನೋಡಿದಳು. ಆದರೆ ಶೌಚಾಲಯದೊಳಗೆ ಮತ್ತಷ್ಟು ಪರಿಶೀಲಿಸಿದಾಗ ಆರೋಪಿ ತನ್ನ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿತು. ಮಹಿಳೆ ತಕ್ಷಣ ಕಿರುಚಿದಳು, ಆರೋಪಿ ಕ್ಷಮೆಯಾಚಿಸಲು ಪ್ರಯತ್ನಿಸಿದನು. ಆದರೇ ಇಷ್ಟಕ್ಕೆ ಉದ್ಯೋಗಿ ಸುಮ್ಮನಾಗದೇ ದೂರು ನೀಡಲಾಗಿದೆ. ಇನ್ಫೋಸಿಸ್ ಮಾನವ ಸಂಪನ್ಮೂಲ ಸಿಬ್ಬಂದಿ ಈ ವಿಷಯವನ್ನು ತನಿಖೆ ಮಾಡಿದರು ಮತ್ತು ಅವರ ಫೋನ್ನಲ್ಲಿ ವಿವಿಧ ಮಹಿಳೆಯರ 30 ಕ್ಕೂ ಹೆಚ್ಚು…
ಬಾಂಗ್ಲಾದೇಶ: ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (International Crimes Tribunal -ICT) ಬುಧವಾರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉಚ್ಚಾಟಿತ ಅವಾಮಿ ಲೀಗ್ ನಾಯಕಿ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ( former prime minister Sheikh Hasina ) ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ದಿ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಅಧ್ಯಕ್ಷ ನ್ಯಾಯಮೂರ್ತಿ ಮೊಹಮ್ಮದ್ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಮೂವರು ಸದಸ್ಯರ ಪೀಠವು ತೀರ್ಪು ನೀಡಿದೆ. ವರದಿಯ ಪ್ರಕಾರ, ಗೈಬಂಧದ ಗೋಬಿಂದಗಂಜ್ನ ಶಕೀಲ್ ಅಕಂದ್ ಬುಲ್ಬುಲ್ ಅವರನ್ನು ಎರಡು ತಿಂಗಳ ಜೈಲು ಶಿಕ್ಷೆಗೆ ಗುರಿಪಡಿಸಿದೆ. ಪದಚ್ಯುತ ಅವಾಮಿ ಲೀಗ್ ನಾಯಕಿ 11 ತಿಂಗಳ ಹಿಂದೆ ಅಧಿಕಾರ ತೊರೆದು ದೇಶದಿಂದ ಪಲಾಯನ ಮಾಡಿದ ನಂತರ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗುತ್ತಿರುವುದು ಇದೇ ಮೊದಲು. ಜೂನ್ ಆರಂಭದಲ್ಲಿ, ಐಸಿಟಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಹಸೀನಾ ಅವರನ್ನು ಔಪಚಾರಿಕವಾಗಿ ಆರೋಪ ಹೊರಿಸಿತು. ಜುಲೈನಲ್ಲಿ ರಾಷ್ಟ್ರವ್ಯಾಪಿ ದಂಗೆಯ ಸಂದರ್ಭದಲ್ಲಿ ಸಾಮೂಹಿಕ…
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು. ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ; ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು.…













