Author: kannadanewsnow09

ನವದೆಹಲಿ: ಭಾರತದ ಪ್ರಮುಖ ಡಿಜಿಟಲ್ ಪಾವತಿ ಅಪ್ಲಿಕೇಶನ್ ಮತ್ತು ಫಿನ್ಟೆಕ್ ಪ್ಲಾಟ್ಫಾರ್ಮ್ ಫೋನ್ಪೇ, “ನಕಲಿ ಅಪ್ಲಿಕೇಶನ್ಗಳು ಯುಪಿಐ ಪಾವತಿಗಳನ್ನು ಮಾಡಬಹುದು” ಎಂದು ಹೇಳುವ ದಾರಿತಪ್ಪಿಸುವ ವೀಡಿಯೊದ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿನ ಸುಳ್ಳು ಹೇಳಿಕೆಗಳ ಬಗ್ಗೆ ಕಂಪನಿಯು ಗ್ರಾಹಕರ ಗಮನವನ್ನು ಸೆಳೆಯಿತು ಮತ್ತು ಅವು ಸುಳ್ಳು ಎಂದು ಹೇಳಿದೆ. ಯುಪಿಐ ವಹಿವಾಟುಗಳನ್ನು ಮಾಡಲು, ಬಳಕೆದಾರರಿಗೆ ಅಧಿಕೃತ ಅಥವಾ ಪರವಾನಗಿ ಪಡೆದ ಮೂರನೇ ಪಕ್ಷದ ಅಪ್ಲಿಕೇಶನ್ ಪೂರೈಕೆದಾರರು (ಟಿಪಿಎಪಿಗಳು) ಬೇಕಾಗಿರಬೇಕು. ಫಿನ್ಟೆಕ್ ಕಂಪನಿಯು ಬಳಕೆದಾರರಿಗೆ ಜಾಗರೂಕರಾಗಿರಲು ಮತ್ತು ಅಂತಹ ದಾರಿತಪ್ಪಿಸುವ ವೀಡಿಯೊಗಳನ್ನು ತಪ್ಪಿಸಲು ಸಲಹೆ ನೀಡಿದೆ. https://twitter.com/PhonePe/status/1874024678043640222 ಹೀಗಿದೆ ಪೋನ್ ಪೇ ಅಧಿಕೃತ ಪ್ರಕಟಣೆ ಇತ್ತೀಚೆಗೆ, “ನಕಲಿ ಅಪ್ಲಿಕೇಶನ್ಗಳು ಯುಪಿಐ ಪಾವತಿಗಳನ್ನು ಮಾಡಬಹುದು” ಎಂದು ಹೇಳುವ ದಾರಿತಪ್ಪಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಹಕ್ಕುಗಳು ಸಂಪೂರ್ಣವಾಗಿ ಸುಳ್ಳು ಎಂದು ನಮ್ಮ ಬಳಕೆದಾರರಿಗೆ ತಿಳಿಸಲು ನಾವು ಬಯಸುತ್ತೇವೆ. ಯುಪಿಐ ವಹಿವಾಟುಗಳನ್ನು ಫೋನ್ಪೇನಂತಹ ಅಧಿಕೃತ / ಪರವಾನಗಿ ಪಡೆದ ಥರ್ಡ್ ಪಾರ್ಟಿ…

Read More

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ಶಕ್ತಿ ನಿರ್ಮಾಣ ಕಾರ್ಯಕ್ರಮದಡಿ ಆಯ್ಕೆಗೊಂಡ ಅಡುಗೆ ಸಿಬ್ಬಂದಿ, ಅಡುಗೆ ಕೆಲಸ ನಿರ್ವಹಿಸುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ 60 ವರ್ಷಗಳ ವಯೋಮಿತಿಯನ್ನು ಪೂರೈಸಿದ ದಿನಾಂಕ 31-03-2022ರಂದು ಅಥವಾ ನಂತ್ರ ಅಡುಗೆ ಕೆಲಸದಿಂದ ಬಿಡುಗಡೆ ಹೊಂದಿರುವ ಅಥವಾ ಕೆಲಸದಿಂದ ಬಿಡುಗಡೆ ಹೊಂದುವ ಅಡುಗೆ ಸಿಬ್ಬಂದಿಗಳಿಗೆ ಅಂತಿಮವಾಗಿ ಒಂದು ಬಾರಿಗೆ ಇಡಿಗಂಟು ಸೌಲಭ್ಯವನ್ನು ಒದಗಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಸುತ್ತೋಲೆ ಹೊರಡಿಸಿದ್ದು, ಪ್ರಧಾನಮಂತ್ರಿ ಪೋಷಣೆ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆ) ಕಾರ್ಯಕ್ರಮದಡಿ ಆಯ್ಕೆಗೊಂಡು ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದು, ದಿನಾಂಕ:31.03.2022 ರಂದು 60 ವರ್ಷಗಳ ವಯೋಮಿತಿಯನ್ನು ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಮತ್ತು ಈ ದಿನಾಂಕದ ನಂತರದ ಅವಧಿಯಲ್ಲಿ 60 ವರ್ಷ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದುವ ಅಡುಗೆ ಸಿಬ್ಬಂದಿಗೆ ಒಂದು ಬಾರಿಯ ಇಡಿಗಂಟು ಸೌಲಭ್ಯವನ್ನು…

Read More

ಬೀದರ್: ಇಂದು ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ. ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ…

Read More

ನ್ಯೂಜಿಲೆಂಡ್: ಡಿಸೆಂಬರ್ 31, 2024 ರಂದು ಗಡಿಯಾರವು ಮಧ್ಯರಾತ್ರಿಯನ್ನು ಮುಟ್ಟುತ್ತಿದ್ದಂತೆ, ನ್ಯೂಜಿಲೆಂಡ್ ಜನರು ಹೊಸ ವರ್ಷವನ್ನು ಬೆರಗುಗೊಳಿಸುವ ಆಚರಣೆಗಳೊಂದಿಗೆ ಸ್ವಾಗತಿಸಿದರು, 2025 ಕ್ಕೆ ಪ್ರವೇಶಿಸಿದ ವಿಶ್ವದ ಮೊದಲ ದೇಶವಾಗಿದೆ. ನ್ಯೂಜಿಲೆಂಡ್ನ ಅತಿದೊಡ್ಡ ನಗರವಾದ ಆಕ್ಲೆಂಡ್ನಲ್ಲಿ, ಅಪ್ರತಿಮ ಸ್ಕೈ ಟವರ್ ಹಬ್ಬದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿತು, ಅದ್ಭುತ ಪಟಾಕಿ ಪ್ರದರ್ಶನದೊಂದಿಗೆ ಪ್ರೇಕ್ಷಕರನ್ನು ಬೆರಗುಗೊಳಿಸಿತು. ಆಕಾಶವು ರೋಮಾಂಚಕ ಬಣ್ಣಗಳಿಂದ ಬೆಳಗುತ್ತಿದ್ದಂತೆ ಸಾವಿರಾರು ಜನರು ಜಲಾನಯನ ಪ್ರದೇಶದಲ್ಲಿ ಜಮಾಯಿಸಿದರು. ಹರ್ಷೋದ್ಗಾರದೊಂದಿಗೆ ಹಾಡಿ ಕುಣಿದರು. ಭಾರತದಾದ್ಯಂತ ಹೊಸ ವರ್ಷದ ಮುನ್ನಾದಿನದ ಆಚರಣೆಗಳು ಸಂಪ್ರದಾಯಗಳು, ಆಧುನಿಕ ಉತ್ಸವಗಳು ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಅಭಿವ್ಯಕ್ತಿಗಳ ರೋಮಾಂಚಕ ಮಿಶ್ರಣವಾಗಿದೆ. ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ, ರಾತ್ರಿ ಭವ್ಯ ಪಾರ್ಟಿಗಳು, ಪಟಾಕಿ ಪ್ರದರ್ಶನಗಳು ಮತ್ತು ಸಂಗೀತ ಕಚೇರಿಗಳೊಂದಿಗೆ ಜೀವಂತವಾಗಿದೆ. ಇದು ಹೊಸ ವರ್ಷವನ್ನು ಹೆಚ್ಚಿನ ಉತ್ಸಾಹದಿಂದ ಸ್ವಾಗತಿಸುತ್ತದೆ. ಏತನ್ಮಧ್ಯೆ, ಸಣ್ಣ ಪಟ್ಟಣಗಳಲ್ಲಿ, ಜನರು ಹಬ್ಬದ ಭೋಜನ, ಸಂಗೀತ ಮತ್ತು ನೃತ್ಯಕ್ಕಾಗಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಒಟ್ಟುಗೂಡುತ್ತಾರೆ, ಹೆಚ್ಚಾಗಿ ಸ್ಥಳೀಯ ಪದ್ಧತಿಗಳನ್ನು ಜಾಗತಿಕ ಪ್ರವೃತ್ತಿಗಳೊಂದಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಎಂಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಗುಂಪು ವಿಮಾ ಯೋಜನೆಯ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 17 ಮೃತ ನೌಕರರ ಅವಲಂಬಿತರಿಗೆ ಗುಂಪು ವಿಮಾ ಯೋಜನೆಯ ಪರಿಹಾರದ ಹಣವಾಗಿ ರೂ.10.00 ಲಕ್ಷ ವಿತರಣೆಯನ್ನು ಮಾಡಿದರು. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ನೌಕರರ ಹಿತದೃಷ್ಟಿಯಿಂದ ಅನಾರೋಗ್ಯ/ಇನ್ನಿತರೆ ಕಾರಣಗಳಿಂದ ಮೃತಪಟ್ಟಂತಹ ಅಧಿಕಾರಿ/ನೌಕರರ ಅವಲಂಭಿತ ಕುಟುಂಬದ ಆರ್ಥಿಕ ಭದ್ರತೆಯನ್ನು ನೀಡುವ ನಿಟ್ಟಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದಂತಹ ಗುಂಪು ವಿಮಾ ಯೋಜನೆಯ ಪರಿಹಾರ ಮೊತ್ತವನ್ನು ರೂ.3.00 ಲಕ್ಷಗಳಿಂದ ರೂ.10.00 ಲಕ್ಷಗಳಿಗೆ ಪರಿಷ್ಕರಿಸಿ ದಿನಾಂಕ:19.02.2024 ರಿಂದ ಜಾರಿಗೆ ತರಲಾಗಿರುತ್ತದೆ ಎಂದಿದೆ. ಈ ಯೋಜನೆಯನ್ವಯ,  ಪ್ರಸ್ತುತ ಅರ್ಹ 17 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ 10 ಲಕ್ಷಗಳಂತೆ ಒಟ್ಟು ಒಂದು ಕೋಟಿ ಎಪ್ಪತ್ತು ಲಕ್ಷ (1,70,00,000)…

Read More

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರೈಲು ಸಂಖ್ಯೆ 07301/07302 ಬೆಳಗಾವಿ-ಮಿರಜ್-ಬೆಳಗಾವಿ ಮತ್ತು ರೈಲು ಸಂಖ್ಯೆ 07303/07304 ಬೆಳಗಾವಿ-ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಎಕ್ಸ್ಪ್ರೆಸ್ ಸೇವೆಗಳನ್ನು ಜನವರಿ 31, 2025 ರವರೆಗೆ ವಿಸ್ತರಿಸಿದೆ. ಈ ಸೇವೆಗಳನ್ನು ಈ ಹಿಂದೆ ಡಿಸೆಂಬರ್ 31, 2024 ರವರೆಗೆ ಓಡಿಸಲು ನಿರ್ಧರಿಸಲಾಗಿತ್ತು. ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ. ಬೀರೂರು ನಿಲ್ದಾಣದಲ್ಲಿ ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ ಈ ಕೆಳಗಿನಂತೆ ಬೀರೂರು ನಿಲ್ದಾಣದಲ್ಲಿ ರೈಲುಗಳಿಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ: ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ವಾರಕ್ಕೆರಡು ಬಾರಿ ಬೀರೂರು ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯ ಜನವರಿ 01 ರಿಂದ ಜೂನ್ 30, 2025 ರವರೆಗೆ ಇನ್ನೂ ಆರು ತಿಂಗಳ ಕಾಲ ಮುಂದುವರಿಯುತ್ತದೆ. https://kannadanewsnow.com/kannada/new-years-eve-bmtc-buses-to-ply-in-bengaluru-till-late-tonight/ https://kannadanewsnow.com/kannada/in-a-tragic-incident-a-girl-who-went-to-anganwadi-in-the-state-died-after-being-bitten-by-a-snake/

Read More

ಮುಂಡಗೋಡ: ಅಂಗನವಾಡಿಗೆ ತೆರಳಿದ್ದಂತ ಬಾಲಕಿಯೊಬ್ಬಳಿಗೆ ಹಾವು ಕಡಿದು, ಸಾವನ್ನಪ್ಪಿರುವಂತ ಧಾರುಣ ಘಟನೆ ಮುಂಡಗೋಡಿನ ಮಾರಿಕಾಂಬಾ ನಗರದಲ್ಲಿ ನಡೆದಿದೆ. ಮುಂಡಗೋಡ ಪಟ್ಟಣದ ಮಾರಿಕಾಂಬಾ ನಗರದಲ್ಲಿರುವಂತ ಅಂಗನವಾಡಿಗೆ ಐದು ವರ್ಷದ ಬಾಲಕಿ ಮಯೂರಿ ಸುರೇಶ ಕಂಬಳೆಪ್ಪನವರು ತೆರಳಿದ್ದಳು. ಮಂಗಳವಾರದಂದು ಮಯೂರಿ ಮೂತ್ರ ವಿಸರ್ಜನೆಗಾಗಿ ಅಂಗನವಾಡಿ ಕೇಂದ್ರದ ಹಿಂಬದಿಗೆ ತೆರಳಿದ್ದಳು. ಈ ವೇಳೆ ಪುಟ್ಟ ಬಾಲಕಿಗೆ ಹಾವು ಕಡಿದೆ. ಇದರಿಂದ ರಕ್ತಸ್ತ್ರಾವ ಉಂಟಾಗಿದೆ. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತ ವೇಳೆ ಮಾರ್ಗ ಮಧ್ಯದಲ್ಲೇ ಮಯೂರಿ ಕೊನೆಯುಸಿರು ಎಳೆದಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/new-years-eve-bmtc-buses-to-ply-in-bengaluru-till-late-tonight/ https://kannadanewsnow.com/kannada/bengaluru-cs-licence-holders-yet-to-get-cs-licence-for-1-day-party/

Read More

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ತೊಡಗುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಟಿಸಿ ಮಹತ್ವದ ಕ್ರಮ ಕೈಗೊಂಡಿದೆ. ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2024 ರಂದು ತಡರಾತ್ರಿಯವರೆಗೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. 1       G-3     ಬ್ರಿಗೇಡ್ ರಸ್ತೆ    ಎಲೆಕ್ಟ್ರಾನಿಕ್ಸ್ ಸಿಟಿ 2       G-4           ಜಿಗಣಿ 3       G-2   ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ       ಸರ್ಜಾಪುರ 4      G-6           ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್ 5       G-7            ಜನಪ್ರಿಯ ಟೌನ್ ಶಿಪ್ 6       G-8           ನೆಲಮಂಗಲ 7       G-9           ಯಲಹಂಕ ಉಪನಗರ 5ನೇ ಹಂತ 8       G-10         …

Read More

ಬೆಂಗಳೂರು: ನಗರದಲ್ಲಿ ಅನೇಕರು ಇಂದು ರಾತ್ರಿ ಒಂದು ದಿನ ಹೊಸ ವರ್ಷಾಚರಣೆಯ ಕಾರಣದಿಂದ ಹಲವೆಡೆ ಪಾರ್ಟಿ ಆಯೋಜಿಸಲಾಗಿದೆ. ಹೀಗೆ ಪಾರ್ಟಿ ಆಯೋಜಿಸಿರೋರಿಗೆ ಬಿಗ್ ಶಾಕ್ ಎನ್ನುವಂತೆ ಇನ್ನೂ ಅನೇಕರಿಗೆ ಒಂದು ದಿನದ ಮಟ್ಟಿಗೆ ಮಧ್ಯದಂಗಡಿ ತೆರೆದು ಎಣ್ಣೆ ಮಾರಾಟಕ್ಕೆ ಲೈಸೆನ್ಸ್ ದೊರೆತಿಲ್ಲ ಎಂಬುದಾಗಿ ತಿಳಿದು ಬಂದಿದೆ.  ಬೆಂಗಳೂರಿನ ಹಲವೆಡೆ ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜಿಸಲಾಗಿದೆ. ಈ ಪಾರ್ಟಿಯಲ್ಲಿ ಮಧ್ಯ ಸರಬರಾಜು ಮಾಡುವುದಾಗಿಯೂ ಆಯೋಜಕರು ಟಿಕೆಟ್ ಮಾರಾಟ ಮಾಡಿದ್ದಾರೆ. ಹೊಸ ವರ್ಷಾಚರಣೆಯ ಪಾರ್ಟಿಗಾಗಿ ಈಗಾಗಲೇ ಹಲವರು ಆಯೋಜಿಸಿರುವಂತ ಕಾರ್ಯಕ್ರಮದ ಟಿಕೆಟ್ ಸೋಲ್ಡ್ ಔಟ್ ಆಗಿದ್ದಾವೆ. ಪಾರ್ಟಿಗೆ ತೆರಳೋದಕ್ಕೂ ಕೆಲವರು ಹೊರಟು ಸಿದ್ಧರಾಗಿದ್ದಾರೆ. ಹೀಗೆ ಪಾರ್ಟಿಗೆ ಹೊರಟವರಿಗೆ ನಿರಾಸೆ, ಶಾಕ್ ಎನ್ನುವಂತೆ ಒಂದು ದಿನದ ಮಟ್ಟಿಗೆ ಸಿಎಸ್ ತೆರೆದು, ಮದ್ಯ ಮಾರಾಟಕ್ಕೆ ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದ ಅನೇಕ ಪಾರ್ಟಿ ಆಯೋಜಕರಿಗೆ ಅನುಮತಿ ದೊರೆತಿಲ್ಲ. ಹೀಗಾಗಿ ಮದ್ಯ ಮಾರಾಟದ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳೋದಕ್ಕೆ ಸಾಧ್ಯವಾಗಿಲ್ಲ. ಜೊತೆಗೆ ಪಾರ್ಟಿ ಆಯೋಜಕರಿಗೆ ಒಂದು ತಲೆ ಬಿಸಿ…

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಈ ರೀತಿಯಾಗಿ ಪೋಸ್ಟರ್ ಅಂಟಿಸುತ್ತಿದ್ದಂತ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ತೊಡಗಿದ್ದ ಎಲ್ಲರನ್ನೂ ಇದೇವೇಳೆ ಬಂಧಿಸಲಾಯಿತು. https://kannadanewsnow.com/kannada/the-state-government-has-issued-an-order-to-control-stray-dogs-inside-and-outside-the-hospital-premises/ https://kannadanewsnow.com/kannada/cbi-probe-necessary-to-bring-supari-honeytrap-issues-to-come-out-narayanasamy/

Read More