Author: kannadanewsnow09

ಬೆಂಗಳೂರು: ನಮ್ಮ ಗ್ಯಾರಂಟಿಗಳನ್ನು ಟೀಕಿಸಿ, ನಮ್ಮ ಗ್ಯಾರಂಟಿಗಳನ್ನೇ ಕದ್ದು “ಮೋದಿ ಗ್ಯಾರಂಟಿ” ಎಂದು ಹೆಸರು ಬದಲಾಯಿಸಿ ಬಿಜೆಪಿ ಘೋಷಿಸಿದ್ದನ್ನು ವಿವರಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮೋದಿ ಗ್ಯಾರಂಟಿ” ಜಾಹಿರಾತು ಪ್ರದರ್ಶಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರಿಸಿ ಮಾತನಾಡಿದಂತ ಅವರು, NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ: ಬಿಜೆಪಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಹಾಕಿದರು. ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ: ಇಲ್ಲಿ ನೀವು ವಿರೋಧಿಸುತ್ತಿದ್ದೀರಿ, ಏನಿದು ಎಂದರು. ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ…

Read More

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರ ನೀಡಿದರು. ಅವರ ಭಾಷಣದ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ. ರಾಜ್ಯಪಾಲರ ಭಾಷಣದಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಡುವ ಭಾಷಣವಿರುತ್ತದೆ. ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೇಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಬೇಕೆಂದು ವಿನಂತಿಸಿದರು. ವಿರೋಧ ಪಕ್ಷದ ನಾಯಕರಾದಿಯಾಗಿ 14 ಜನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. ವಾಸ್ತವವನ್ನು ಸದನಕ್ಕೆ ತಿಳಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ವಾಸ್ತವಾಂಶಗಳನ್ನು ಸದನದ ಸದಸ್ಯರಿಗೆ ತಿಳಿಸುತ್ತೇನೆ. ನಮ್ಮ ಸರ್ಕಾರ ಜನರ ಆಶೀರ್ವಾದದಿಂದ 2023 ಮೇ 22 ರಂದು ಅಧಿಕಾರಕ್ಕೆ ಬಂದಿತು. ನಮ್ಮ ಪಕ್ಷ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು 2 ವರ್ಷಗಾಳಾಗುತ್ತಿದೆ. ಇದು…

Read More

ಬೆಂಗಳೂರು: ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇಂತಹ ಮೃತ ಮಹಿಳೆಯ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸೂರಜ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಆನೆ ಮತ್ತು ಮಾನವ ಸಂಘರ್ಷ ಇಂದು, ನಿನ್ನೆಯದಲ್ಲ. ಇದು ಹಲವು ವರ್ಷಗಳಿಂದ ನಡೆಯುತ್ತಿರುವಂತ ಸಂಘರ್ಷವಾಗಿದೆ ಎಂದರು. ಕೊರೋನಾ ಬಳಿಕ ಹಾಸನದಲ್ಲಿ 4 ರಿಂದ 5 ಜನರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಾವು ಪರಿಹಾರ ಕೊಡಬಹುದೇ ಹೊರತು, ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎಂಬುದಾಗಿ ವಿಷಾದ ವ್ಯಕ್ತ ಪಡಿಸಿದರು. ಕಾಡಾನೆ ಹಾವಳಿ ಸಂಬಂಧ ನಿಯಂತ್ರಣ ಕೊಠಡಿ ಮಾಡಿದ್ದೇವೆ. ಎಲಿಫ್ಯಾಂಟ್ ಟಾಸ್ಕ್ ಪೋರ್ಸ್ ರಚನೆ ಮಾಡಿದ್ದೇವೆ. ಆನೆಗೆ ಬೇಕಾದ ಬಿದಿರು ಮತ್ತು ಇತರೆ ಬೆಳೆ ಬೆಳೆಯಲು ಸೂಚನೆ ನೀಡಲಾಗಿದೆ. ರೈತರ ಬೆಳೆ ಹಾಳಾಗಿದ್ದಕ್ಕೆ ಬೆಲೆ ನಿಗದಿ ಪಡಿಸಲಾಗಿದೆ ಎಂದರು. ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುತ್ತೇವೆ. ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ.…

Read More

ನವದೆಹಲಿ: ಸಗಟು ಬೆಲೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇಕಡಾ 2.38 ಕ್ಕೆ ಏರಿದೆ. ಮುಖ್ಯವಾಗಿ ಆಹಾರ ಉತ್ಪನ್ನಗಳು, ಆಹಾರ ವಸ್ತುಗಳು, ಇತರ ಉತ್ಪಾದನೆ, ಆಹಾರೇತರ ವಸ್ತುಗಳು ಮತ್ತು ಜವಳಿ ತಯಾರಿಕೆಯ ಬೆಲೆಗಳಲ್ಲಿನ ಹೆಚ್ಚಳದಿಂದಾಗಿ ಆಗಿದೆ. ಜನವರಿಗೆ ಹೋಲಿಸಿದರೆ ಫೆಬ್ರವರಿಯಲ್ಲಿ ಸಗಟು ಬೆಲೆ ಹಣದುಬ್ಬರದಲ್ಲಿ ಮಾಸಿಕ ಬದಲಾವಣೆಯು ಶೇಕಡಾ 0.06 ರಷ್ಟಿದೆ. ಈ ಹಿಂದೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವರದಿಯು ಫೆಬ್ರವರಿ 2025 ರಲ್ಲಿ ಡಬ್ಲ್ಯುಪಿಐನಲ್ಲಿ ಕುಸಿತವನ್ನು ಊಹಿಸಿತ್ತು. ಮುಖ್ಯವಾಗಿ ತೈಲ ಬೆಲೆಗಳ ಕುಸಿತ ಮತ್ತು ಆಹಾರ ಬೆಲೆಗಳಲ್ಲಿ ಕಾಲೋಚಿತ ಕುಸಿತದಿಂದಾಗಿ ಡಬ್ಲ್ಯುಪಿಐ ಶೇಕಡಾ 2 ಕ್ಕೆ ಇಳಿಯಬಹುದು ಎಂದು ವರದಿ ಹೇಳಿದೆ. ಸಗಟು ಆಹಾರ ಹಣದುಬ್ಬರವು ಜನವರಿಯಲ್ಲಿ ಶೇ.7.47ರಿಂದ ಕಳೆದ ತಿಂಗಳು ಶೇ.5.94ಕ್ಕೆ ಇಳಿದಿದ್ದರೆ, ಫೆಬ್ರವರಿಯಲ್ಲಿ ಪ್ರಾಥಮಿಕ ವಸ್ತುಗಳ ಹಣದುಬ್ಬರವು ಜನವರಿಯಲ್ಲಿ ಶೇ.4.69ರಿಂದ ಶೇ.2.81ಕ್ಕೆ ಇಳಿದಿದೆ. ಇಂಧನ ಮತ್ತು ವಿದ್ಯುತ್ ಸಗಟು ಬೆಲೆಗಳು ಕಳೆದ ತಿಂಗಳು ಶೇ. 0.71 ರಷ್ಟು ಕುಸಿದಿದ್ದು, ಜನವರಿಯಲ್ಲಿ ಶೇ. 2.78 ರಷ್ಟು ಕುಸಿತ ಕಂಡಿತ್ತು. ವಾಣಿಜ್ಯ…

Read More

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದ್ರೇ ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್ ವಿ ಸಂಕನೂರು ಅವರು ರಾಜ್ಯದ ವಿಶ್ವವಿದ್ಯಾಲಯಗಳಲ್ಲನ ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ. ಶೇ.60ರಷ್ಟು ಬೋಧ ಸಿಬ್ಬಂದಿ ಹುದ್ದೆ ಖಾಲಿ ಇದ್ದಾವೆ. ಬೋಧಕೇತರ ಸಿಬ್ಬಂದಿ ಹುದ್ದೆಗಳು ಶೇ.80ರಷ್ಟು ಖಾಲಿ ಇದ್ದಾವೆ. ಯಾವ ಕಾಲಮಿತಿಯಲ್ಲಿ ಭರ್ತಿ ಮಾಡುತ್ತೀರಿ ಅಂತ ಕೇಳಿದರು. ಈ ಪ್ರಶ್ನೆಗೆ ಉತ್ತರಿಸಿದಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು, ಹಿಂದಿನಿಂದಲೂ ಬೋಧಕ, ಬೋಧಕೇತರ ಹುದ್ದೆಗಳು ವಿವಿಯಲ್ಲಿ ಖಾಲಿ ಇದ್ದಾವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ವಿವಿಗಳಲ್ಲಿನ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗಿದೆ ಎಂದರು. ಜಾನಪದ ವಿವಿಯಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆಸಿ, ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಸಚಿವ ಸಂಪುಟದ ಉಪ ಸಮಿತಿಯನ್ನು…

Read More

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಸಾಮಾಜಿಕ ಮಾಧ್ಯಮದ ಸೆನ್ಸೇಷನ್ ಮತ್ತು ಬಾಲಿವುಡ್ ವ್ಯಕ್ತಿತ್ವ, ಓರ್ರಿ (ಓರ್ಹಾನ್ ಅವತ್ರಮಣಿ) ಮತ್ತು ಇತರ ಏಳು ಜನರೊಂದಿಗೆ, ಜಮ್ಮು ವಿಭಾಗದ ಕತ್ರಾದಲ್ಲಿ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲ್ಪಟ್ಟ ನಂತರ ವಿವಾದದ ಕೇಂದ್ರಬಿಂದುವಾದರು. ಅಧಿಕಾರಿಗಳ ಪ್ರಕಾರ, ಓರ್ರಿ ಸೇರಿದಂತೆ ಗುಂಪಿನ ಮೇಲೆ, ಕತ್ರಾದ ಹೋಟೆಲ್‌ನಲ್ಲಿ ಮದ್ಯ ಸೇವಿಸಿದ ಆರೋಪ ಹೊರಿಸಲಾಗಿದ್ದು, ಮದ್ಯ ಸೇವನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂಬ ಸ್ಪಷ್ಟ ಎಚ್ಚರಿಕೆಗಳನ್ನು ಧಿಕ್ಕರಿಸಲಾಗಿದೆ. ಮಾತಾ ವೈಷ್ಣೋ ದೇವಿಯ ಭಕ್ತರಿಗೆ ಪೂಜ್ಯ ಯಾತ್ರಾ ಸ್ಥಳವಾಗಿ ಕತ್ರಾ ಸ್ಥಾನಮಾನವನ್ನು ನೀಡಿದರೆ ಈ ಘಟನೆ ವಿಶೇಷವಾಗಿ ಸೂಕ್ಷ್ಮವಾಗಿದೆ. ಮದ್ಯ ಮತ್ತು ಮಾಂಸಾಹಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದ್ದರೂ, ಈ ಅತಿಥಿಗಳು ಹೋಟೆಲ್ ಆವರಣದೊಳಗೆ, ನಿರ್ದಿಷ್ಟವಾಗಿ ಕಾಟೇಜ್ ಸೂಟ್‌ನಲ್ಲಿ ಮದ್ಯ ಸೇವಿಸಿದ್ದಾರೆ. ಈ ಘಟನೆ ಮಾರ್ಚ್ 15 ರಂದು ನಡೆದಿದ್ದು, 72/25 ಸಂಖ್ಯೆಯ ಎಫ್‌ಐಆರ್ ಅನ್ನು ಪಿ/ಎಸ್ ಕತ್ರಾ ದಾಖಲಿಸಿದ್ದಾರೆ. ORRY ಹೊರತುಪಡಿಸಿ, ಭಾಗವಹಿಸುವ ಅತಿಥಿಗಳಲ್ಲಿ ದರ್ಶನ್ ಸಿಂಗ್, ಪಾರ್ಥ್ ರೈನಾ, ರಿತಿಕ್ ಸಿಂಗ್,…

Read More

ಮುಂಬೈ : ಕ್ರಿಕೆಟ್ ಪ್ರಿಯರಿಗೆ ಒಳ್ಳೆಯ ಸುದ್ದಿ. ಜಿಯೋ ತನ್ನ ಅಸ್ತಿತ್ವದಲ್ಲಿರುವ ಮತ್ತು ಹೊಸ ಗ್ರಾಹಕರಿಗೆ ವಿಶೇಷ ಕೊಡುಗೆಯೊಂದಿಗೆ ಬಂದಿದೆ. ಜಿಯೋ ಗ್ರಾಹಕರು ₹ 299 ಅಥವಾ ಅದಕ್ಕಿಂತ ಹೆಚ್ಚಿನ ಯೋಜನೆಯೊಂದಿಗೆ ಹೊಸ ಜಿಯೋ ಸಿಮ್ ಸಂಪರ್ಕವನ್ನು ಪಡೆದರೆ ಅಥವಾ ಕನಿಷ್ಠ 299 ರೂ.ಗಳೊಂದಿಗೆ ರೀಚಾರ್ಜ್ ಮಾಡಿದರೆ ಜಿಯೋ ಹಾಟ್‌ಸ್ಟಾರ್‌ನಲ್ಲಿ ಐಪಿಎಲ್ ಕ್ರಿಕೆಟ್ ಋತುವನ್ನು ಉಚಿತವಾಗಿ ಆನಂದಿಸಬಹುದು. ಈ ಕೊಡುಗೆಯನ್ನು ಮಾರ್ಚ್ 17 ರಿಂದ ಮಾರ್ಚ್ 31, 2025 ರವರೆಗೆ ಪಡೆಯಬಹುದು. ಈ ಅನಿಯಮಿತ ಕ್ರಿಕೆಟ್ ಕೊಡುಗೆಯಲ್ಲಿ, ಗ್ರಾಹಕರು ಟಿವಿ / ಮೊಬೈಲ್‌ನಲ್ಲಿ 90 ದಿನಗಳ ಉಚಿತ ಜಿಯೋಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಪಡೆಯುತ್ತಾರೆ ಮತ್ತು ಅದೂ 4 ಕೆ ಗುಣಮಟ್ಟದಲ್ಲಿ. ಅಂದರೆ, ಮಾರ್ಚ್ 22 ರಿಂದ ಪ್ರಾರಂಭವಾಗುವ ಐಪಿಎಲ್ ಕ್ರಿಕೆಟ್ ಋತುವನ್ನು ಗ್ರಾಹಕರು ಉಚಿತವಾಗಿ ಆನಂದಿಸಲು ಸಾಧ್ಯವಾಗುತ್ತದೆ. ಜಿಯೋ ಹಾಟ್‌ಸ್ಟಾರ್ ಪ್ಯಾಕ್ ಮಾರ್ಚ್ 22, 2025 ರಿಂದ 90 ದಿನಗಳ ಅವಧಿಗೆ ಮಾನ್ಯವಾಗಿರುತ್ತದೆ. ಇದರೊಂದಿಗೆ, ಜಿಯೋ ಮನೆಗಳಿಗೆ ಜಿಯೋ ಫೈಬರ್ ಅಥವಾ ಜಿಯೋ…

Read More

ಬಳ್ಳಾರಿ: ಜಿಲ್ಲೆಯ 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ಅಪರೂಪದ ವನ್ಯ ಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನಗಳಲ್ಲಿ ದರೋಜಿ ಗುಡ್ಡವೂ ಒಂದಾಗಿದೆ. ಇಂತಹ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಈಗ ಇಡೀ ಗುಡ್ಡಕ್ಕೆ ಆವರಿಸಿರುವುದಾಗಿ ತಿಳಿದು ಬಂದಿದೆ. ದರೋಜಿ ಗುಡ್ಡದಲ್ಲಿ 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯಜೀವಿಗಳು, ಪಕ್ಷಿಗಳು ವಾಸಿಸುತ್ತಿದ್ದು, ಈಗ ಬೆಂಕಿಯ ಕೆನ್ನಾಲಿಗೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿವೆ ಎನ್ನಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಸದ್ಯ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ವನ್ಯಜೀವಿಗಳ ಪ್ರಾಣಹಾನಿಯಾಗಿಲ್ಲ ಎಂಬುದಾಗಿ ಹೇಳಲಾಗುತ್ತಿದೆ. ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/akhand-karnataka-bandh-on-march-22-vatal-nagaraj-calls-crucial-meeting-tomorrow/ https://kannadanewsnow.com/kannada/amritsar-temple-blast-one-suspect-shot-dead-in-police-encounter-another-on-the-run/

Read More

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ ಮಾರ್ಚ್.22ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೂ ಮುನ್ನ ನಾಳೆ ಬಂದ್ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ವಾಟಾಳ್ ನಾಗರಾಜ್ ಮಹತ್ವದ ಸಭೆ ಕರೆದಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೂ ಪೂರ್ವದಲ್ಲಿ ಈ ಅಖಂಡ ಕರ್ನಾಟಕ ಬಂದ್ ಬಗ್ಗೆ ಚರ್ಚಿಸಲು ದಿನಾಂಕ 18-03-2025ರ ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ಸಭೆಯನ್ನು ಕರೆಯಲಾಗಿದೆ.…

Read More

ಚಂಡೀಗಢ: ಇಲ್ಲಿನ ಅಮೃತಸರ ದೇವಸ್ಥಾನದ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಂತ ಓರ್ವ ಶಂಕಿತ ಆರೋಪಿ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.  ಅಮೃತಸರದ ದೇವಾಲಯದ ಹೊರಗೆ ನಡೆದ ಸ್ಫೋಟ ಘಟನೆಯಲ್ಲಿ ಶಂಕಿತನೊಬ್ಬ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾನೆ ಎಂದು ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಇನ್ನೊಬ್ಬ ಶಂಕಿತ ಪರಾರಿಯಾಗಿದ್ದಾನೆ. ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಮಾರ್ಚ್ 15 ರಂದು ಠಾಕೂರ್ ದ್ವಾರಾ ದೇವಾಲಯದ ಹೊರಗೆ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಸ್ಫೋಟಕ ಸಾಧನವನ್ನು ಅದರ ಕಡೆಗೆ ಎಸೆದು, ಅದರ ಗೋಡೆಯ ಒಂದು ಭಾಗವನ್ನು ಹಾನಿಗೊಳಿಸಿದ್ದಾನೆ ಮತ್ತು ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾನೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಅಮೃತಸರ ಪೊಲೀಸರು ದೇವಾಲಯದ ಮೇಲಿನ ದಾಳಿಗೆ ಕಾರಣರಾದವರನ್ನು ಪತ್ತೆ ಹಚ್ಚಿದ್ದಾರೆ ಎಂದು ಪಂಜಾಬ್ ಪೊಲೀಸ್ ಮುಖ್ಯಸ್ಥ ಗೌರವ್ ಯಾದವ್ ಹೇಳಿದ್ದಾರೆ. “ಪೊಲೀಸ್ ತಂಡಗಳು ರಾಜಸಾನ್ಸಿಯಲ್ಲಿ ಶಂಕಿತರನ್ನು ಪತ್ತೆಹಚ್ಚಿವೆ. ಆರೋಪಿಗಳು ಗುಂಡು ಹಾರಿಸಿ ಎಚ್.ಸಿ.ಗುರ್ಪ್ರೀತ್ ಸಿಂಗ್ ಮತ್ತು ಇನ್ಎಸ್ಪಿ ಅಮೋಲಕ್ ಸಿಂಗ್…

Read More