Author: kannadanewsnow09

ಸಾಗರ : ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಮರ್ತೂರು ಗ್ರಾಮ ಪಂಚಾಯ್ತಿ ಆಲಳ್ಳಿ-ಶಿರೂರು ಗ್ರಾಮದಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯಲು ಮುಂದಾದ ಕ್ರಮ ಖಂಡಿಸಿ ಸೋಮವಾರ ಆಲಳ್ಳಿ-ಶಿರೂರು ಗ್ರಾಮದಲ್ಲಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿ ಯಾವುದೇ ಕಾರಣಕ್ಕೂ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯದಂತೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಆಲಳ್ಳಿ-ಶಿರೂರು ಗ್ರಾಮದಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುವುದಿಲ್ಲ. ಈ ಭಾಗದಲ್ಲಿ ಎಲ್ಲ ಜಾತಿ ಜನಾಂಗದವರು ವಾಸ ಮಾಡುತ್ತಿದ್ದು ಹೆಚ್ಚಿನ ಜನಸಂಖ್ಯೆ ಈಡಿಗ ಸಮುದಾಯದ್ದೆ ಆಗಿರುತ್ತದೆ. ಮದ್ಯದಂಗಡಿ ತೆರೆಯುವುದರಿಂದ ಯುವಜನರು, ಕೂಲಿಕಾರ್ಮಿಕರು ಮದ್ಯದ ಚಟಕ್ಕೆ ಬೀಳುವ ಸಾಧ್ಯತೆ ಇದೆ. ಹಿಂದೆಯೆ ಇಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ಮಾಡಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾಗಿ ಸಭೆಯಲ್ಲಿ ಚರ್ಚೆಯಾಯಿತು. ಈಗಾಗಲೆ ಗ್ರಾಮಸ್ಥರ ವಿರೋಧದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಂಗಡಿಯವರಿಗೆ ನೋಟಿಸ್ ನೀಡಿದ್ದಾರೆ. ಈ ನೋಟಿಸ್ ಪ್ರಶ್ನಿಸಿ ಅಂಗಡಿ ಮಾಲೀಕರು ಹೈಕೋರ್ಟ್ಗೆ ಹೋಗುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಪರವಾಗಿ ನಾವು ಮೇಲ್ಮನವಿ ಸಲ್ಲಿಸಬೇಕಾಗುತ್ತದೆ.…

Read More

ಸಾಗರ : ಚಿಕ್ಕ ವಯಸ್ಸಿನಲ್ಲಿ ಯುಪಿಎಸ್‌ಸಿಯಲ್ಲಿ 288ನೇ ರ‍್ಯಾಂಕ್ ಪಡೆದಿರುವುದು ದೊಡ್ಡ ಸಾಧನೆ. ನಿಮ್ಮಂತಹ ಯುವಕರಿಗೆ ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುವ ಅವಕಾಶ ಸಿಗುವಂತಾಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಪುರಭವನದಲ್ಲಿ ಸೋಮವಾರ ನಗರಸಭೆ ವತಿಯಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 288ನೇ ರ‍್ಯಾಂಕ್ ಗಳಿಸಿರುವ ವಿಕಾಸ್ ವಿ. ಅವರಿಗೆ ಹಮ್ಮಿಕೊಳ್ಳಲಾಗಿದ್ದ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಐಎಎಸ್ ಐಪಿಎಸ್ ಐಎಫ್‌ಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಅತ್ಯಂತ ಕಠಿಣವಾಗಿರುತ್ತದೆ. ಅದರಲ್ಲಿ ಯಶಸ್ವಿಯಾಗಲು ಬದ್ದತೆ ಹಾಗೂ ಏಕಾಗ್ರತೆ ಅಗತ್ಯ. ವಿಕಾಸ್ ತಂದೆತಾಯಿ ಪ್ರೊತ್ಸಾಹ, ಗುರುಹಿರಿಯರ ಮಾರ್ಗದರ್ಶನದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ನಿಮ್ಮ ಸೇವೆ ನಮ್ಮ ನೆಲಕ್ಕೆ ಸಿಗಬೇಕು ಎನ್ನುವುದು ನನ್ನ ಉದ್ದೇಶ. ಐಎಎಸ್ ಅಧಿಕಾರಿಗಳು ಆರಂಭದಲ್ಲಿ ತಗ್ಗಿಬಗ್ಗಿ ಕೆಲಸ ಮಾಡುತ್ತಾರೆ. ಕೆಲವು ವರ್ಷದ ನಂತರ ದರ್ಪ ತೋರಿಸುತ್ತಾರೆ. ಅಂತಹದ್ದಕ್ಕೆ ಅವಕಾಶ ಕೊಡದೆ ದೇಶದ ಯಾವುದೇ ರಾಜ್ಯದಲ್ಲಿ ಕೆಲಸ ಮಾಡಿದರೂ ಕರ್ನಾಟಕ ರಾಜ್ಯ, ಸಾಗರವನ್ನು ಮರೆಯಬೇಡಿ.…

Read More

ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ್ದಂತ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನ ಸಂಗೀತ ಕಾರ್ಯಕ್ರಮ ನಡೆಸುವಾಗ ಖ್ಯಾತ ಗಾಯಕ ಸೋನು ನಿಗಮ್ ಅವರು ಹೇಳಿದ್ದಂತ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ದ ಎಫ್ಐಆರ್ ಕೂಡ ದಾಖಲಾಗಿತ್ತು. ಇಂದು ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಕೂಡ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಬೆಳವಣಿಗೆಯ ನಂತ್ರ ಕೊನೆಗೂ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ತಮ್ಮ ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕನ್ನಡಿಗರ ಕ್ಷಮೆಯನ್ನು ಗಾಯಕ ಸೋನು ನಿಗಮ್ ಕೇಳಿದ್ದಾರೆ.

Read More

ಸಾಗರ : ವಿಶ್ವಕರ್ಮ ಯೋಜನೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಸತೀಶ್ ಅಂಗಡಿ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಒಂದು ವರ್ಷದ ಹಿಂದೆ ವಿಶ್ವಕವið ಯೋಜನೆ ಚುನಾವಣೆ ಮುನ್ನ ಘೋಷಣೆ ಮಾಡಿತ್ತು. ಆದರೆ ಯೋಜನೆ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳನ್ನು ತರದೆ ಇರುವುದು ಎಲ್ಲೋ ಯೋಜನೆ ಚುನಾವಣಾ ಗಿಮಿಕ್ ಎನ್ನುವ ಅನುಮಾನ ಮೂಡಿಸಲು ಕಾರಣವಾಗಿದೆ ಎಂದರು. ವಿಶ್ವಕರ್ಮ ಯೋಜನೆ ವ್ಯಾಪ್ತಿಯಲ್ಲಿ ಟೈಲರ್, ಬಡಗಿ ಮತ್ತು ಮೇಸ್ತಿçಗಳನ್ನು ಪರಿಗಣಿಸಿಲ್ಲ. ನಿಜವಾಗಿಯೂ ಈ ವರ್ಗಗಗಳಿಗೆ ಯೋಜನೆ ತೀರ ಅಗತ್ಯವಾಗಿದೆ. ಈ ಕಸುಬು ಮಾಡುತ್ತಿರುವವರು ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ನಿಮ್ಮ ಅರ್ಜಿ ತಿರಸ್ಕೃಗೊಂಡಿದೆ. ನಿಮ್ಮ ಉದ್ಯೋಗ ಬದಲಾಯಿಸಿ ಅರ್ಜಿ ಸಲ್ಲಿಸಿ ಎಂದು ಉತ್ತರ ನೀಡುತ್ತಾರೆ. ಆದರೆ ಯೋಜನೆಗಾಗಿ ತಮ್ಮ ಮೂಲವೃತ್ತಿಯನ್ನು ಬದಲಾಯಿಸಿಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಕೆಲವು ಖೊಟ್ಟಿ ದಾಖಲೆ ಸೃಷ್ಟಿಸಿಕೊಂಡು ಫಲಾನುಭವಿಗಳಿಗೆ ಬಂದ ಹಣವನ್ನು ಲಪಟಾಯಿಸುವ ಕೆಲಸ ನಡೆಯುತ್ತಿದೆ…

Read More

ಸಾಗರ : ಪ್ರಧಾನಿ ನರೇಂದ್ರ ಮೋದಿಯವರೆ ಜಾತಿಗಣತಿಗೆ ಮುಂದಾಗಿದ್ದು ರಾಜ್ಯ ಸರ್ಕಾರದ ಮೇಲಿನ ದೊಡ್ಡಭಾರ ತಪ್ಪಿದೆ. ಅನೇಕ ಜಾತಿಯವರು ತಮ್ಮ ಜನಸಂಖ್ಯೆ ಹೆಚ್ಚು ಎಂದು ವಾದಿಸುತ್ತಿದ್ದರು. ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಜಾತಿಗಣತಿ ಮಾಡಿದ್ದರಿಂದ ನಿಖರವಾದ ಮಾಹಿತಿ ಸಿಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಶಿವಪ್ಪನಾಯಕ ನಗರದ ಪರಿಶಿಷ್ಟ ವರ್ಗದ ಕಾಲೋನಿಯಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ಮನೆಮನೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಜೊತೆ ಜಾತಿಗಣತಿಗೂ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಸಂತೋಷ ತಂದಿದೆ ಎಂದರು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಲೋಪವಾಗಬಾರದು ಎನ್ನುವ ಉದ್ದೇಶಕ್ಕೆ ಪುನರ್ ಪರಿಶೀಲನೆಗೆ ಶಿಫಾರಸ್ಸು ಮಾಡಿತ್ತು. ಪರಿಶಿಷ್ಟ ಜಾತಿಯಲ್ಲಿ 101 ಪಂಗಡಗಳಿದ್ದು ಎಲ್ಲ ಪಂಡಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಅನೇಕ ಸಂದರ್ಭದಲ್ಲಿ ಅರ್ಹರಿಗೆ ಮೀಸಲಾತಿ ಸೌಲಭ್ಯಗಳು ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಮೊರಾದಾಬಾದ್ ಪೊಲೀಸರು ಜಿಲ್ಲೆಯಲ್ಲಿ ವಾಸಿಸುವ 22 ಪಾಕಿಸ್ತಾನಿ ಮಹಿಳೆಯರನ್ನು ದೀರ್ಘಾವಧಿಯ ವೀಸಾಗಳಲ್ಲಿ ಗುರುತಿಸಿದ್ದಾರೆ. ಅವರು ಒಟ್ಟಿಗೆ ಭಾರತದಲ್ಲಿ 95 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಹಿಳೆಯರು ಇನ್ನೂ ಪಾಕಿಸ್ತಾನಿ ಪ್ರಜೆಗಳಾಗಿದ್ದರೂ, ಅವರ ಎಲ್ಲಾ ಮಕ್ಕಳು ಹುಟ್ಟಿನಿಂದಲೇ ಭಾರತೀಯ ಪೌರತ್ವವನ್ನು ಹೊಂದಿದ್ದಾರೆ. ಕಳೆದ ಕೆಲವು ದಶಕಗಳಲ್ಲಿ ಈ ಮಹಿಳೆಯರು ಭಾರತೀಯ ಪುರುಷರನ್ನು ಮದುವೆಯಾದ ನಂತರ ಭಾರತಕ್ಕೆ ಬಂದಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಾರೆ. ಅವರಲ್ಲಿ ಇಬ್ಬರು ನಾಲ್ಕು ವರ್ಷಗಳ ಹಿಂದೆ ಬಂದವರು, ಇತರರು ಈ ಪ್ರದೇಶದಲ್ಲಿ ಹೆಚ್ಚು ಕಾಲ ವಾಸಿಸುತ್ತಿದ್ದಾರೆ. ಮಕ್ಕಳು ಭಾರತೀಯ ನಾಗರಿಕರು, ಆದರೆ ತಾಯಂದಿರು ಇನ್ನೂ ಪಾಕಿಸ್ತಾನಿಗಳು ಪೊಲೀಸ್ ತನಿಖೆಗಳು ಈ ಮಕ್ಕಳಲ್ಲಿ ಅನೇಕರು ಈಗ ವಯಸ್ಕರಾಗಿದ್ದಾರೆ, ಕೆಲವರು ಈಗಾಗಲೇ ವಿವಾಹವಾಗಿದ್ದಾರೆ. ತಮ್ಮದೇ ಆದ ಕುಟುಂಬಗಳನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸಿವೆ. ಸುಮಾರು 35 ಪ್ರತಿಶತ ಮಹಿಳೆಯರು ಈಗ ಅಜ್ಜಿಯರಾಗಿದ್ದಾರೆ. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿದಂತೆ, ಈ ಕುಟುಂಬಗಳು…

Read More

ಬೆಂಗಳೂರು: ಕರ್ನಾಟಕ ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿದ್ದು, ಬೇಸಿಗೆ ಸಮಯದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಪರಿಸ್ಥಿತಿಯನ್ನು ಎದುರಿಸಲು 60 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2025-26ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು, ಟ್ಯಾಂಕರ್ಗಳ ಮುಖಾಂತರ ಹಾಗೂ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಹಾಗೂ ಕೊಳವೆಬಾವಿಗಳು ಬತ್ತಿ ಹೋದಲ್ಲಿ ಪ್ರಥಮ ಆದ್ಯತೆ ಮೇರೆಗೆ ಮೇಲೆ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ…

Read More

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ಉಳಿಕೆ ಮೂಲ ವೃಂದದ ನಿರ್ವಾಹಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿರ್ವಾಹಕರ ಉಳಿಕೆ ಮೂಲ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಹಾಗೂ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿ ವಾರು ಕೊನೆಯ ಅಭ್ಯರ್ಥಿಯ ಶೇಕಡವಾರು ಅಂಕಗಳ ವಿವರವನ್ನು ಪ್ರಕಟಿಸಿ ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದಿದೆ. ಇನ್ನೂ ಸ್ವೀಕರಿಸಲಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಗಳ ಶೇಕಡವಾರು ಅಂದರೆ Cut-Off ಅಂಕ ಹಾಗೂ ಹುಟ್ಟಿದ ದಿನಾಂಕದ ವಿವರಗಳನ್ನು ಪರಿಶೀಲಿಸುವಂತೆ ತಿಳಿಸಿದೆ. https://kannadanewsnow.com/kannada/major-surgery-in-chief-ministers-secretariat-state-govt-orders-transfer-of-9-staff/ https://kannadanewsnow.com/kannada/good-news-for-state-government-employees-state-govt-orders-1-50-per-cent-hike-in-dearness-allowance/

Read More

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!! ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ…

Read More

  ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹೊಳಲೂರು ಏತನೀರಾವರಿ ಪುನಶ್ಚೇತನ ಕಾಮಗಾರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ಅನುಮೋದನೆ ನೀಡಿದ್ದು, ₹4.80 ಕೋಟಿ ವೆಚ್ಚದ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತುಂಗಭದ್ರಾ ನದಿಯಿಂದ ನಾರಾಯಣ ಕೆರೆ, ಸೀಗೆಹಳ್ಳಿ, ಬೂದಿಗೆರೆ ಕೆರೆ, ಸುತ್ತುಕೋಟೆ ಕೆರೆಗಳಿಗೆ ಏತ ನೀರಾವರಿ ಯೋಜನೆಯಡಿ ನೀರೆತ್ತುವ ವ್ಯವಸ್ಥೆಯನ್ನು ದುರಸ್ತಿ, ನವೀಕರಣಗೊಳಿಸುವ, ಪಂಪ್‌ ಮೋಟಾರ್‌ಗಳ ರಿಪೇರಿ, ಹರಮಘಟ್ಟ ಕೆರೆ ಪಾತ್ರದ ಹೊಸ ಪ್ರದೇಶಗಳಿಗೆ ಮೋಟಾರು ಪರಿಕರಗಳನ್ನು ಸಾಗಿಸುವ, ಸೀಗೆ ಕೆರೆ ಬಳಿ ಹೊಸದಾಗಿ ಪೈಪ್‌ಲೈನ್‌ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡುವಂತೆಯೂ ಸೂಚಿಸಿದ್ದಾರೆ. https://TWITTER.com/KarnatakaVarthe/status/1919368131648401920 https://kannadanewsnow.com/kannada/important-information-for-those-who-applied-for-ksrt-driver-conductor-post/

Read More