Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮಾಡಬೇಕೆಂಬುದು ನನ್ನ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಆದರೆ, ರಾಜ್ಯ ಸರ್ಕಾರ ಇಷ್ಟು ಬೇಗ ನಮ್ಮ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಭಾರಿಯಾಗಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ಪಟ್ಟಣದ ಶ್ರೀ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆ ಹಾಗೂ ವಸತಿ ಗೃಹಗಳ ಮೂಲ ಸೌಕರ್ಯಗಳ ಕಾಮಗಾರಿಗೆ ಅಂದಾಜು 1 ಕೋಟಿ 30 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಮದ್ದೂರು ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡಬಹುದಾದ ದಿನ ಈ ದಿನವಾಗಿದೆ. ಹಲವು ದಶಕಗಳಿಂದ ಸಣ್ಣ ಹಳ್ಳಿಯಂತ್ತಿರುವ ಮದ್ದೂರು ಪಟ್ಟಣ ಸಮಗ್ರ ಅಭಿವೃದ್ಧಿಯಿಂದ ಸಾಕಷ್ಟು ಹಿಂದುಳಿದಿದೆ. ನಾನು ಶಾಸಕನಾಗಿ ಆಯ್ಕೆಯಾದ ದಿನದಿಂದಲೇ ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂಬುದು ನನ್ನ ಬಹು ದಿನಗಳ ಕನಸಾಗಿತ್ತು. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಹೋರಾಟ, ಒತ್ತಡ…
ಬೆಂಗಳೂರು: ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳುತ್ತದೆ. ಆದರೇ ಮೇ.25ರಂದು ಬೆಂಗಳೂರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ.25ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ದಿನಾಂಕ 25.05.2025 ಭಾನುವಾರ ದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC Preliminary Exams, 2025) ನಡೆಯಲಿರುವುದರಿಂದ, ಮೆಟ್ರೋ ರೈಲು ಸೇವೆಗಳು ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ಮಾದಾವರ, ಮತ್ತು ರೇಷ್ಮೆ ಸಂಸ್ಥೆ, ಈ ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ಬದಲಾಗಿ 06.00 ಗಂಟೆಗೆ ಪ್ರಾರಂಭವಾಗಲಿದೆ ಎಂದಿದೆ. https://kannadanewsnow.com/kannada/important-information-for-students-regarding-the-bmtc-concession-bus-pass/ https://kannadanewsnow.com/kannada/employment-news-notification-from-the-state-government-for-the-recruitment-of-51000-guest-teachers-here-is-the-complete-information/
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದಂತ ಕೆಇಟಿ-2025ರ ಪರೀಕ್ಷೆಯ ಫಲಿತಾಂಶ ( KCET-2025 Exam Results) ನಾಳೆ ಪ್ರಕಟವಾಗಲಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ-2025ರ ಪರೀಕ್ಷೆಯ ( CET-2025 ) ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.in ಜಾಲತಾಣಕ್ಕೆ ಭೇಟಿ ನೀಡುವಂತೆ ಸೂಚಿಸಿದೆ. https://twitter.com/KEA_karnataka/status/1925880959242588459 ಸಿಇಟಿ ಪರೀಕ್ಷೆ ( CET Exam 2025) ಫಲಿತಾಂಶ ಈ ರೀತಿ ಚೆಕ್ ಮಾಡಿ -ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು. -ಕೆಸಿಇಟಿ ಫಲಿತಾಂಶ 2024 ಎಂಬಲ್ಲಿ ಕ್ಲಿಕ್ ಮಾಡಬೇಕು. -ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ. -ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. https://kannadanewsnow.com/kannada/trump-threatens-25-tariff-on-iphones-mad-outside-us/ https://kannadanewsnow.com/kannada/employment-news-notification-from-the-state-government-for-the-recruitment-of-51000-guest-teachers-here-is-the-complete-information/
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ, ಆಪಲ್ ಕಂಪನಿಯು ದೇಶದಲ್ಲಿ ಮಾರಾಟವಾಗುವ ಫೋನ್ಗಳನ್ನು ದೇಶದಲ್ಲಿ ತಯಾರಿಸದಿದ್ದರೆ, ಆಪಲ್ ಕಂಪನಿಯು ಶೇಕಡಾ 25 ರಷ್ಟು ಸುಂಕವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ ಟ್ರಂಪ್, ಅಮೆರಿಕದಲ್ಲಿ ಮಾರಾಟವಾಗುವ ಐಫೋನ್ಗಳನ್ನು ಭಾರತದಲ್ಲಿ ಅಥವಾ ಬೇರೆ ಯಾವುದೇ ದೇಶದಲ್ಲಿ ಅಲ್ಲ, ದೇಶದೊಳಗೆ ನಿರ್ಮಿಸಬೇಕೆಂದು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ತಿಳಿಸಿರುವುದಾಗಿ ಹೇಳಿದರು. ನಾನು ಬಹಳ ಹಿಂದೆಯೇ ಆಪಲ್ನ ಟಿಮ್ ಕುಕ್ ಅವರಿಗೆ ಅಮೆರಿಕದಲ್ಲಿ ಮಾರಾಟವಾಗುವ ಅವರ ಐಫೋನ್ಗಳನ್ನು ಭಾರತ ಅಥವಾ ಬೇರೆಲ್ಲಿಯೂ ಅಲ್ಲ. ಅಮೆರಿಕದಲ್ಲಿ ತಯಾರಿಸಿ ನಿರ್ಮಿಸುವಂತೆ ತಿಳಿಸಿದ್ದೇನೆ ಎಂದು ಟ್ರಂಪ್ ಪೋಸ್ಟ್ನಲ್ಲಿ ಬರೆದಿದ್ದಾರೆ. ಹಾಗೆ ಆಗದಿದ್ದರೆ, ಆಪಲ್ ಅಮೆರಿಕಕ್ಕೆ ಕನಿಷ್ಠ 25% ಸುಂಕವನ್ನು ಪಾವತಿಸಬೇಕು ಎಂದು ಅವರು ಹೇಳಿದರು. ಕಳೆದ ಐದು ವರ್ಷಗಳಲ್ಲಿ, ಭಾರತವು ಆಪಲ್ ಐಫೋನ್ಗಳ ಅತಿದೊಡ್ಡ ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕಳೆದ ಹಣಕಾಸು ವರ್ಷದಲ್ಲಿ ಕಂಪನಿಯ ಅಸೆಂಬ್ಲಿ ಲೈನ್ಗಳು ದೇಶದಲ್ಲಿ $22 ಬಿಲಿಯನ್ ಮೌಲ್ಯದ…
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ…
ಬೆಂಗಳೂರು: ನಾನು ಆಕೆಯ ಮೇಲೆ ಅತ್ಯಾಚಾರ ನಡೆಸಿಲ್ಲ. ಆಕೆಯೊಂದಿಗೆ ಸಂಸಾರ ನಡೆಸಿದ್ದೇನೆ. ಇಬ್ಬರೂ ಚೆನ್ನಾಗಿದ್ದೇವೆ. ಸ್ವಲ್ಪದಿನ ಅವಳಿಗೆ ಟೈಂ ಕೊಡಲಾಗಿಲ್ಲ ಎಂಬುದಾಗಿ ಕಿರುತೆರೆ ನಟ ಮಡೆನೂರು ಮನು ಸ್ಪೋಟಕ ಆಡಿಯೋ ರಿಲೀಸ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಇಂದು ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸ್ಪೋಟಕ ಆಡಿಯೋ ಬಿಡುಗಡೆ ಮಾಡಿರುವಂತ ಅವರು. ನಾವಿಬ್ಬರೂ ಚೆನ್ನಾಗಿದ್ದೇವೆ. ಆಕೆಗೆ ಸ್ವಲ್ಪ ದಿನ ಟೈಂ ಕೊಡಲಾಗಿಲ್ಲ. ಆಕೆಯ ಮೇಲೆ ಅತ್ಯಾಚರ ನಡೆಸಿಲ್ಲ. ಆಕೆಯ ಜೊತೆ ಸಂಸಾರ ಮಾಡಿದ್ದೇನೆ ಎಂದಿದ್ದಾರೆ. ನನ್ನ ಮೇಲೆ ಅತ್ಯಾಚಾರ ದೂರು ಕೊಡಲು ಸಾಧ್ಯವೇ ಇಲ್ಲ. ಮಿಂಚುಗೆ ತಾಳಿ ಕಟ್ಟಿದ್ದೇನೆ. ಅವಳೇ ನನ್ನ ಹೆಂಡತಿ. ನಾನು ಅವಳು ಇನ್ಮುಂದೆ ಚೆನ್ನಾಗಿರುತ್ತೇವೆ. ನಮ್ಮಿಬ್ಬರ ನಡುವೆ ಯಾರೂ ಮಧ್ಯಪ್ರವೇಶಿಸುವುದು ಬೇಡ ಎಂದಿದ್ದಾರೆ. https://kannadanewsnow.com/kannada/pressure-on-the-center-to-increase-the-height-of-the-almatti-dam-by-524-meters-dks/ https://kannadanewsnow.com/kannada/employment-news-notification-from-the-state-government-for-the-recruitment-of-51000-guest-teachers-here-is-the-complete-information/
ವಿಜಯಪುರ: “ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಜಯಪುರ ಜಿಲ್ಲೆಯ ಕೊಲ್ಹಾರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನೆರವೇರಿಸಿ ಮಾತನಾಡಿದರು. “ಬಸವಣ್ಣನವರು ಹುಟ್ಟಿದ ನಾಡಿಗೆ ಬಂದು, ಇಲ್ಲಿನ ಶರಣರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಬುದ್ಧ, ಪ್ರೀತಿ ಹಾಗೂ ಶಾಂತಿ ಎಂದು ಹೇಳುತ್ತಾನೆ. ದುರ್ಯೋಧನ, ಹಠ ಹಾಗೂ ಛಲ ಎಂದು ಹೇಳುತ್ತಾನೆ. ಏಕಲವ್ಯ ಮತ್ತು ಅರ್ಜುನ, ಗುರಿ ಎಂದು ಹೇಳುತ್ತಾರೆ. ಧರ್ಮರಾಯ, ಸುಧರ್ಮ ಎನ್ನುತ್ತಾನೆ. ಕೃಷ್ಣ ತಂತ್ರ ಎಂದರೆ, ಭೀಷ್ಮ ಪ್ರತಿಜ್ಞೆ ಎನ್ನುತ್ತಾನೆ, ಸಂತರು ನಮ್ಮದು ಭಕ್ತಿ ಎನ್ನುತ್ತಾರೆ. ಅಲೆಕ್ಸಾಂಡರ್ ಯುದ್ಧ ಎನ್ನುತ್ತಾನೆ. ಬಸವಣ್ಣ ಸಮಾನತೆ, ಸರ್ವರಿಗೂ ಸಮಬಾಳು, ಸಮಪಾಲು ಎಂದು ಹೇಳುತ್ತಾರೆ” ಎಂದರು. “ಶ್ರೀಮಂತರು ಆಸ್ತಿ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ( Telangana CM Revanth Reddy, Karnataka Dy CM DK Shivakumar ) ಮತ್ತು ಇತರ ಹಲವಾರು ಹಿರಿಯ ಕಾಂಗ್ರೆಸ್ ನಾಯಕರನ್ನು ಜಾರಿ ನಿರ್ದೇಶನಾಲಯ (Enforcement Directorate -ED) ಹೆಸರಿಸಿದ್ದು, ಯಂಗ್ ಇಂಡಿಯನ್ ಮತ್ತು ಎಜೆಎಲ್ಗೆ ಈ ನಾಯಕರ ನಿರ್ದೇಶನದ ಮೇರೆಗೆ ಭಾರಿ ದೇಣಿಗೆ ನೀಡಲಾಗಿದೆ ಎಂದು ಹೇಳಿದೆ. ED ಯ ಆರೋಪಪಟ್ಟಿಯ ಪ್ರಕಾರ, ರೇವಂತ್ ರೆಡ್ಡಿ ಅವರ ಸೂಚನೆಯ ಮೇರೆಗೆ 80 ಲಕ್ಷ ರೂ.ಗಳ ದೇಣಿಗೆ ನೀಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಇತರ ಹಲವಾರು ವ್ಯಕ್ತಿಗಳಿಗೂ ದೇಣಿಗೆ ನೀಡುವಂತೆ ಕೇಳಿಕೊಂಡರು. ಶಿವಕುಮಾರ್ ತಮ್ಮ ಟ್ರಸ್ಟ್ನಿಂದ 25 ಲಕ್ಷ ರೂ. ಮತ್ತು 2 ಕೋಟಿ ರೂ.ಗಳನ್ನು ದೇಣಿಗೆ ನೀಡಿದ್ದಾರೆ. ಆಗಿನ ಎಐಸಿಸಿ ಖಜಾಂಚಿ ಪವನ್ ಬನ್ಸಾಲ್ ಅವರ ಸೂಚನೆಯ ಮೇರೆಗೆ ತಾನು ದೇಣಿಗೆ ನೀಡಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ. ಆರೋಪಪಟ್ಟಿಯ ಪ್ರಕಾರ, ಪಕ್ಷದ ಹಿರಿಯ…
ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂಬುದನ್ನು ಒತ್ತಿ ಹೇಳಿದರು. ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಾ ಹೊಸದಾಗಿ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು. ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8000ರಿಂದ 10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೊರಬ ತಾಲ್ಲೂಕಿನಲ್ಲಿ ಮೇ.24ರ ನಾಳೆ, ಮೇ.26ರಂದು ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಾಳೆ ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಈ ಬಗ್ಗೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 24-05-2025ರ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೊರಬ ತಾಲ್ಲೂಕಿನ ಸೊರಬ ಟೌನ್, ಇಂಡಸ್ಟ್ರೀಯಲ್ ಫೀಡರ್, ತಾವರೇಹಳ್ಳಿ, ಕಕ್ಕರಸಿ, ನಡಹಳ್ಳಿ, ಕಲ್ಲಂಬಿ, ಕಡಸೂರು, ಯಲವಳ್ಳಿ, ಬಿಳಗಿ, ಮಂಚಿ, ಓಟೂರು, ಚಿಕ್ಕಾವಲಿ, ಸಾರೇಕೊಬ್ಬ ಹಾಗೂ ಬಳ್ಳಿಬೈಲು ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ಮೇ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇನ್ನೂ ಮೇ.26ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಳವಿ ವಿದ್ಯುತ್ ಸರಬರಾಜು ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಮೇ.26ರಂದು ಪುರ, ಕಾನಳ್ಳಿ, ಉಳವಿ, ಹೊಸಬಾಳೆ, ದೂಗೂರು ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಪವರ್…












