Author: kannadanewsnow09

ಹಾಸನ: ನಾನು ಕಾಂಗ್ರೆಸ್ ನಾಯಕರಿಗೆ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಕೊಟ್ಟಿಲ್ಲ. ನಾನು ಕೊಟ್ಟಿದ್ದು ಕೇವಲ ದೇವರಾಜೇಗೌಡ ಬಳಿ ಮಾತ್ರವೇ ಎಂಬುದಾಗಿ ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಅಜ್ಞಾತ ಸ್ಥಳದಿಂದ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ನಾನು ಹದಿನೈದು ವರ್ಷಗಳಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದು, ನನ್ನ ಜಮೀನು ಬರೆಸಿಕೊಂಡು, ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು. ಹಿಂಸೆ ಕೊಟ್ಟು ಹಲ್ಲೆ ಮಾಡಿದ್ರು. ಆ ಕಾರಣಕ್ಕೆ ನಾನು ಅವರ ಮನೆಯಲ್ಲಿ ಕಾರು ಚಾಲಕನ ಕೆಲಸ ಬಿಟ್ಟು ಹೊರ ಬಂದೆ ಎಂಬುದಾಗಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಫ್ಯಾಮಿಲಿ ವಿರುದ್ಧ ದೇವರಾಜೇಗೌಡ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ನನಗೆ ದೇವೇಗೌಡಕ ಫ್ಯಾಮಿಲಿಯಿಂದ ಅನ್ಯಾಯವಾಗಿತ್ತು. ಯಾರಿಂದಲೂ ನ್ಯಾಯ ಸಿಗದೇ ಇದ್ದಾಗ, ದೇವರಾಜೇಗೌಡ ಬಳಿ ಹೋಗಿದ್ದೆ ಎಂದರು. ನನ್ನ ಬಳಿಯಿದ್ದಂತ…

Read More

ಕಲಬುರಗಿ: ಸೋಲಿನ ಭೀತಿಯಿಂದಾಗಿ ಖರ್ಗೆ ಕಲಬುರಗಿಗೆ ಪದೇ ಪದೇ ಬರುತ್ತಿದ್ದಾರೆ ಎನ್ನುವ ಸಂಸದ ಉಮೇಶ್ ಜಾಧವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಸಲ ಕಲಬುರಗಿ ಯಿಂದ ಲೋಕಸಭೆ ಸದಸ್ಯರಾಗಿದ್ದವರು. ಈಗ ರಾಜ್ಯಸಭೆ ವಿರೋಧ ಪಕ್ಷದ ನಾಯಕರು. ಅವರು ಕಲಬುರಗಿಗೆ ಬರಲು ಚಿಂಚೋಳಿ ಎಂಪಿ ಅವರ ಅನುಮತಿ ಬೇಕಿಲ್ಲ ಎಂದು ತಿರುಗೇಟು ನೀಡಿದರು. ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಚಿಂಚೋಳಿ ಎಂಪಿ ಯವರೇ ನೀವು ಕೂಡಾ ಮೋದಿ, ಅಮಿತ್ ಶಾ, ಯಡಿಯೂರಪ್ಪ, ವಿಜಯೇಂದ್ರ, ಸಿ.ಟಿ.ರವಿ ಸೇರಿದಂತೆ ಹಲವಾರು ನಾಯಕರನ್ನು ಕರೆಸಿದ್ದೀರಲ್ಲ ಯಾಕೆ? ನಿಮಗೂ ಸೋಲಿನ ಭೀತಿ ಆವರಿಸಿದೆಯಾ? ಎಂದು ಪ್ರಶ್ನಿಸಿದರು. “ಬಿಜೆಪಿಯವರು ಹತಾಶೆರಾಗಿದ್ದಾರೆ, ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕಲಬುರಗಿಗೆ ಬರುತ್ತಿದ್ದಾರೆ. ಪ್ರಿಯಾಂಕ್ ಹಾಗೂ ಶರಣಪ್ರಕಾಶ ಪಾಟೀಲ್ ಗ್ರಾಮಪಂಚಾಯತಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜಾಧವ ಹೇಳುತ್ತಾರೆ. ಹೌದು,…

Read More

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರಿಗೆ ನಿಜಕ್ಕೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದ್ದರೇ, ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಭಾಗಿಯಾಗಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋದಲ್ಲ, ಉಚ್ಚಾಟನೆ ಮಾಡಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಆಗ್ರಹಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಜ್ವಲ್ ರೇವಣ್ಣನ ಕೃತ್ಯಗಳನ್ನು ಒಪ್ಪಿಕೊಳ್ಳುತ್ತಲೇ ಜೆಡಿಎಸ್  “ಪ್ರಜ್ವಲ್ ಅಮಾನತು“ ಎಂಬ ನಾಟಕವಾಡುತ್ತಿದೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ನಿಜಕ್ಕೂ ಮಹಿಳೆಯರ ಬಗ್ಗೆ ಕಾಳಜಿ ಇದ್ದಿದ್ದೇ ಆದರೆ ಅಮಾನತು ಮಾಡುತ್ತಿರಲಿಲ್ಲ, ಉಚ್ಚಾಟನೆ ಮಾಡುತ್ತಿದ್ದರು. ಪಕ್ಷದಿಂದ ಉಚ್ಚಾಟನೆ ಮಾಡಬೇಕಿತ್ತು, ವಜಾ ಮಾಡಬೇಕಿತ್ತು ಎಂದು ಹೇಳಿದೆ. ಇದ್ಯಾವುದನ್ನೂ ಮಾಡದೆ ಕೇವಲ ಅಮಾನತು ಎನ್ನುವುದು ಕಣ್ಣೋರೆಸುವ ತಂತ್ರವಷ್ಟೇ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರಜ್ವಲ್ ರೇವಣ್ಣನ ಹೀನ ಕೃತ್ಯವನ್ನು ಒಪ್ಪಿಕೊಳ್ಳಲು ಇನ್ನೂ ತಾಯಾರಿಲ್ಲವೇ ಅಥವಾ ಆತನ ಕೃತ್ಯವನ್ನು ಸಾಧನೆ ಎನ್ನುವಂತೆ ನೋಡುತ್ತಿವೆಯೇ? ಎ2 ಆರೋಪಿಯನ್ನು ಅಮಾನತು ಮಾಡುತ್ತೇವೆ ಎನ್ನುವ ಕುಮಾರಸ್ವಾಮಿಯವರು ಇಷ್ಟಕ್ಕೂ ಎ1 ಆರೋಪಿಯಾಗಿರುವ ರೇವಣ್ಣರ ಬಗ್ಗೆ ಮಾತೇ…

Read More

ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಕೊರೋನಾದಿಂದ ರಕ್ಷಣೆಗಾಗಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿವಿ ಅಭಿವೃದ್ಧಿ ಪಡಿಸಿದಂತ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿತ್ತು. ಆದ್ರೇ ಈ ಲಸಿಕೆ ಪಡೆದವರಿಗೆ ಅಪರೂಪವಾಗಿ ಅಡ್ಡ ಪರಿಣಾಮದಿಂದ ಕಾಯಿಲೆ ಬರೋದನ್ನು ಕಂಪನಿ ಒಪ್ಪಿಕೊಂಡಿದೆ. ಈ ಬಗ್ಗೆ ಸ್ವತಹ ಅಸ್ಟ್ರಾಜೆನೆಕಾ ತಪ್ಪು ಒಪ್ಪಿಕೊಂಡಿದ್ದು, ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟೋ ಕಾಯಿಲೆಗೆ ಕಾರಣವಾಗಲಿದೆ. ಅಲ್ಲದೇ ಪ್ಲೇಟ್ ಲೆಟ್ ಕಡಿಮೆಯಾಗೋದಕ್ಕೂ ಕಾರಣವಾಗಬಹುದು ಎಂಬುದಾಗಿ ನ್ಯಾಯಾಲಯಕ್ಕೆ ಸಲ್ಲಿಸಿರುವಂತ ದಾಖಲೆಗಳಲ್ಲಿ ಸ್ಪಷ್ಟ ಪಡಿದೆ. ಇನ್ನೂ ಯುಕೆಯಲ್ಲಿ ಲಸಿಕೆಯನ್ನು ಪಡೆದಂತ ಅನೇಕರು ಸಾವು, ತೀವ್ರತರವಾದ ಗಾಯಗಳಿಗೆ ಒಳಗಾಗಿದ್ದಾರೆ. ಹೀಗಾಗಿ ಅಸ್ಟ್ರಾಜೆನೆಕಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಯುಕೆ ಹೈಕೋರ್ಟ್ ನಲ್ಲಿ 51 ಪ್ರಕರಣಗಳು ಈ ಸಂಬಂಧ ದಾಖಲಾಗಿದ್ದವು. ಅಲ್ಲದೇ 100 ಮಿಲಿಯನ್ ಪೌಂಡ್ ಗಳವರೆಗೆ ಪರಿಹಾರ ಕೋರಿದ್ದರು. ಯುಕೆ ನ್ಯಾಯಾಲಯಕ್ಕೆ ಕೋವಿಶೀಲ್ಡ್ ಅಡ್ಡ ಪರಿಣಾಮಗಳ ಬಗ್ಗೆ ಅಸ್ಟ್ರಾಜೆನೆಕಾ ಕಂಪನಿ ದಾಖಲೆಯನ್ನು ಸಲ್ಲಿಸಿದ್ದು, ಅದರಲ್ಲಿ ಲಸಿಕೆಯು ಅಪರೂಪದ ಅಡ್ಡ ಪರಿಣಾಮಗಳಿಗೆ ಕಾರಣವಾಗಲಿದೆ ಎಂದು ಒಪ್ಪಿಕೊಂಡಿದೆ.…

Read More

ಬೆಂಗಳೂರು: “ಪ್ರಜ್ವಲ್ ರೇವಣ್ಣ ಅವರ ಪ್ರಕರಣ ದೇಶದ ಅತಿದೊಡ್ಡ ಮಾನಹಾನಿ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣ. ಇದಕ್ಕೆ ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ” ಎಂದು ಸಂಸದ ಡಿ.ಕೆ.ಸುರೇಶ್ ಅವರು ನೇರ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಡಿ.ಕೆ. ಸುರೇಶ್ ಅವರು ಮಂಗಳವಾರ ಮಾತನಾಡಿದರು. ಪ್ರಜ್ವಲ್ ಪೆನ್ ಡ್ರೈವ್ ವಿಚಾರ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರಿಗೆ ಮೊದಲೇ ಗೊತ್ತಿತ್ತು ಎನ್ನುವ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ: “ನಮಗೆ ವಿಷಯ ಗೊತ್ತಿದ್ದರೇ ಈ ವಿಚಾರ ಇನ್ನು ಮುಂಚೆಯೇ ವಿಷಯ ಹೊರ ಬರುತ್ತಿತ್ತು. ಆರೋಪ ಮಾಡುವುದಕ್ಕಾಗಿ ನಮ್ಮ ಹೆಸರುಗಳನ್ನು ತರಲಾಗುತ್ತಿದೆ. ಗುಸು ಗುಸು ಸುದ್ದಿ ಹಾಸನದಲ್ಲಿ ಇತ್ತು, ಸೂಕ್ತ ದಾಖಲೆಗಳು ಇಲ್ಲದೇ ಮಾತನಾಡುವುದು ಸೂಕ್ತವಲ್ಲ. ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಉನ್ನತ ನಾಯಕರಿಗೆ ಪತ್ರ ಬರೆದಿದ್ದರು. ಪ್ರಕರಣದ ಬಗ್ಗೆ ಪ್ರಧಾನಿಗಳು ಹಾಗೂ ಅವರ ಕಾರ್ಯಾಲಯ ಮತ್ತು ಕುಟುಂಬಕ್ಕೆ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡಿ.…

Read More

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಕುಪ್ವಾರಾದಲ್ಲಿ ಭೂಕುಸಿತ ಮತ್ತು ಪ್ರವಾಹದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಹಲವಾರು ಮನೆಗಳಿಗೆ ಹಾನಿಯಾಗಿದೆ ಮತ್ತು ನೂರಾರು ನಿವಾಸಿಗಳು ಬಾಧಿತರಾಗಿದ್ದಾರೆ. ಜಮ್ಮು ಪ್ರದೇಶದ ದೋಡಾ, ರಿಯಾಸಿ, ಕಿಶ್ತ್ವಾರ್ ಮತ್ತು ರಂಬನ್ ಮತ್ತು ಕಾಶ್ಮೀರದ ಕಿಶ್ತ್ವಾರ್ ಸೇರಿದಂತೆ ಹಲವಾರು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತ ಸಂಭವಿಸಿದೆ. ನಿನ್ನೆ, ರಂಬನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ ನಂತರ ಶ್ರೀನಗರ-ಜಮ್ಮು ಮಾರ್ಗವನ್ನು ಮುಚ್ಚಲಾಯಿತು. ಕುಪ್ವಾರಾದಲ್ಲಿ, ಪರಿಸ್ಥಿತಿ ಸುಧಾರಿಸಲು ಪ್ರಾರಂಭಿಸಿದೆ. ನೀರಿನ ಮಟ್ಟವು ಕಡಿಮೆಯಾಗುತ್ತಿದೆ ಮತ್ತು ಜನರು ತಮ್ಮ ಹಾನಿಗೊಳಗಾದ ಮನೆಗಳಿಗೆ ಮರಳುತ್ತಿದ್ದಾರೆ. ನಿನ್ನೆಯ ದೃಶ್ಯಗಳಲ್ಲಿ ಕಂಡುಬರುವಂತೆ, ಪ್ರವಾಹದಿಂದಾಗಿ ರಸ್ತೆಯ ಒಂದು ಭಾಗವು ಕೊಚ್ಚಿಹೋಗಿದೆ ಮತ್ತು ಹಲವಾರು ಮನೆಗಳು ಮೊಣಕಾಲು ಆಳದ ನೀರಿನಲ್ಲಿ ಮುಳುಗಿವೆ. ನದಿಗೆ ಎದುರಾಗಿರುವ ಮನೆಯ ಒಂದು ಭಾಗ ಕೊಚ್ಚಿ ಹೋಗಿದೆ. ನಿನ್ನೆ, ಅಧಿಕಾರಿಗಳು ಕುಪ್ವಾರಾದ ಪೊಹ್ರು ನಲ್ಲಾಗೆ ಅಪಾಯದ ಎಚ್ಚರಿಕೆ ನೀಡಿದ್ದಾರೆ. ಸಮಯೋಚಿತ ತಂಡದ ಸ್ಥಳಾಂತರವು ಪ್ರವಾಹ ಪೀಡಿತ…

Read More

ಮನುಷ್ಯನು ಹುಟ್ಟಿದ ನಂತರ ಶ್ರೀಮಂತನಾಗಲು ಮಹಾಲಕ್ಷ್ಮಿ ಅನುಗ್ರಹ ಖಂಡಿತವಾಗಿ ಬೇಕು. ತಾಯಿ ಲಕ್ಷ್ಮೀದೇವಿಗೆ ಶುಭ್ರತೆ ಎಂದರೆ ಬಹಳ ಇಷ್ಟ , ಆದ್ದರಿಂದ ಸದಾಕಾಲದಲ್ಲೂ ಮನೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಲಕ್ಷ್ಮಿ ದೇವಿಗೆ ಸಂಬಂಧಪಟ್ಟ ವಸ್ತುಗಳನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಉದಾಹರಣೆಗೆ ಕಸಗುಡಿಸುವ ಪೊರಕೆ, ರುಬ್ಬುವ ಕಲ್ಲು, ಮನೆಯ ಮುಖ್ಯದ್ವಾರದ ಹೊಸ್ತಿಲು. ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ.…

Read More

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದ ಕಾರಣ, ತಾಯಿ-ಮಗಳ ನಡುವೆ ವಾಗ್ವಾದ ಉಂಟಾಗಿದೆ. ವಾಗ್ವಾದ ತಾರಕಕ್ಕೇರಿದ ಪರಿಣಾಮ ತಾಯಿ-ಮಗಳು ಪರಸ್ವರ ಚಾಕುವಿನಿಂದ ಇರಿದುಕೊಂಡಿದ್ದಾರೆ. ಈ ಘಟನೆಯಲ್ಲಿ ಪುತ್ರಿ ತೀವ್ರ ರಕ್ತಸ್ತ್ರಾವದೊಂದಿಗೆ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಹಾಗೂ ಪುತ್ರಿಯ ನಡುವೆ ವಾಗ್ವಾದ ಉಂಟಾಗಿದೆ. ವಾಗ್ವಾದ ತರಾಕಕ್ಕೇರಿ ತಾಯಿ ಪದ್ಮಜಾ ಹಾಗೂ ಪುತ್ರಿ ಸಾಹಿತಿ(18) ಪರಸ್ಪರ ಚಾಕುವಿನಿಂದ ಇರಿದಾಡಿಕೊಂಡಿದ್ದಾರೆ. ಪದ್ಮಜಾಗೆ 4-5 ಬಾರಿ ಪುತ್ರಿ ಸಾಹಿತಿ ಇರಿದಿದ್ದರೇ, ಪ್ರತಿಯಾಗಿ ಪದ್ಮಜಾ ಪುತ್ರಿಗೆ ಇರಿದ ಪರಿಣಾಮ ತೀವ್ರ ರಕ್ತ ಸ್ತ್ರಾವದೊಂದಿಗೆ ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಸದ್ಯ ತಾಯಿ ಪದ್ಮಜಾ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/cm-siddaramaiah-pays-last-respects-to-sreenivasa-prasad-to-be-cremated-with-state-honours-tomorrow/ https://kannadanewsnow.com/kannada/baba-ramdev-crossed-red-line-with-false-statement-of-covid-19-cure-ima-president/

Read More

ಮೈಸೂರು: ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು . ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. 15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ರಾಜಕೀಯದಲ್ಲಿ ಸಂತೋಷದ ಕ್ಷಣ ಬಹಳ ಕಡಿಮೆ. ಹೋರಾಟ ಮಾಡುವಾಗ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷ ಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದೆ ಎಂದು ಹೇಳಿರಬಹುದು ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜೊತೆಯಲ್ಲಿಯೇ ರಾಜಕಾರಣ ಮಾಡಿದವರು, ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಜನತಾ ಪಕ್ಷ ಹಾಗೂ ಕಾಂಗ್ರೆಸ್ ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ ಎಂದರು. ದಮನಿತರ ಧ್ವನಿಯಾಗಿ ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ…

Read More

ವಿಜಯನಗರ: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಮಾಜಿ ಉಪ ಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಧರ್ಮ ಪತ್ನಿ ರುದ್ರಾಂಬ(78) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಮಾಜಿ ಡಿಸಿಎಂ ದಿ. ಎಂ.ಪಿ ಪ್ರಕಾಶ್ ಅವರ ಪತ್ನಿ ರುದ್ರಾಂಬ ಇಂದು ಸಂಜೆ 7.30ರ ವೇಳೆಗೆ ಹೂವಿನ ಹಡಗಲಿಯಲ್ಲಿ ವಿಧಿವಶರಾಗಿದ್ದಾರೆ. ಇಂದು ನಿಧನರಾದಂತ ಎಂ.ಪಿ ಪ್ರಕಾಶ್ ಅವರ ಪತ್ನಿ ರುದ್ರಾಂಬ ಅವರ ಅಂತ್ಯಕ್ರಿಯೆಯನ್ನು ನಾಳೆ ಲಿಂಗಾಯತ ಸಂಪ್ರದಾಯದಂತೆ ನಾಳೆ ಸಂಜೆ 4.30ಕ್ಕೆ ದಿ. ಎಂ.ಪಿ ಪ್ರಕಾಶ್ ಅವರ ಸಮಾಧಿಯ ಪಕ್ಕದಲ್ಲೇ ಜರುಗಲಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. https://kannadanewsnow.com/kannada/uttarakhand-govt-cancels-licence-of-15-products-sold-by-patanjali-ayurved/ https://kannadanewsnow.com/kannada/baba-ramdev-crossed-red-line-with-false-statement-of-covid-19-cure-ima-president/

Read More