Author: kannadanewsnow09

ಬೆಂಗಳೂರು: ಬಿಜೆಪಿ ನಾಯಕರೇ ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಎಕ್ಸ್ ಮಾಡಿ ಪ್ರಶ್ನಿಸಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಕಾಂಗ್ರೆಸ್, ಅಂದು – ಪ್ರಜ್ವಲ್, ರೇವಣ್ಣನ ಮಗ ಅಲ್ಲ, ನನ್ನ ಮಗ. ಇಂದು – ಅವರೇ ಬೇರೆ, ನಾವೇ ಬೇರೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು.  ಅಂದು – “ಪ್ರಜ್ವಲ್ ರೇವಣ್ಣನನ್ನು ಬೆಂಬಲಿಸಿ ನನಗೆ ಶಕ್ತಿ ತುಂಬಿ” ಇಂದು – ಮೌನವನ್ನು ಪ್ರಧಾನಿ ನರೇಂದ್ರ ಮೋದಿಯವರು ವಹಿಸಿದ್ದಾರೆ ಎಂಬುದಾಗಿ ಹೇಳಿದೆ. ಬಿಜೆಪಿ ಹಾಗೂ ಮಿತ್ರರ ನಾಲಿಗೆಗೆ ಮೂಳೆ ಇಲ್ಲದ ನಾಲಿಗೆ ಯಾವಾಗ ಹೇಗೆ ಬೇಕಾದರೂ ಹೊರಳುತ್ತದೆ, ಅವರ ಸಿದ್ದಾಂತವೂ ಅಷ್ಟೇ, ಅವರ ಯೋಚನೆಯೂ ಅಷ್ಟೇ! ಬಿಜೆಪಿ ನಾಯಕರೇ, ಏಕೆ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರ ಬಗ್ಗೆ ಕಾಳಜಿ ತೋರುತ್ತಿಲ್ಲ? ನಿಮ್ಮ ನಾಲಿಗೆಗಳು ಈಗ ಏಕೆ ನಲಿದಾಡುತ್ತಿಲ್ಲ? ಎಂದು ಪ್ರಶ್ನಿಸಿದೆ. https://twitter.com/INCKarnataka/status/1784968713097351363 https://kannadanewsnow.com/kannada/woman-dies-of-heart-attack-while-dancing-during-wedding-mehndi-shastra/ https://kannadanewsnow.com/kannada/baba-ramdev-crossed-red-line-with-false-statement-of-covid-19-cure-ima-president/

Read More

ಮೀರತ್: ತನ್ನ ಸೋದರಸಂಬಂಧಿಯ ‘ಹಲ್ದಿ ಸಮಾರಂಭ’ದಲ್ಲಿ ನೃತ್ಯ ಮಾಡುವಾಗ 18 ವರ್ಷದ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೀರತ್ ನಲ್ಲಿ ಶನಿವಾರ ಸಂಜೆ ನಡೆದಿದೆ. ಸಂತ್ರಸ್ತೆ ಲಿಸಾರಿ ಗೇಟ್ ನಿವಾಸಿಯಾಗಿದ್ದು, ಸಮಾರಂಭವು ನಗರದ ಅಹ್ಮದ್ ನಗರ ಪ್ರದೇಶದಲ್ಲಿ ನಡೆಯುತ್ತಿತ್ತು. ದುರಂತ ಘಟನೆಯ ವೀಡಿಯೊವನ್ನು ನಂತರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವೈರಲ್ ಆಗಿರುವಂತ 30 ಸೆಕೆಂಡುಗಳ ಕ್ಲಿಪ್ನಲ್ಲಿ, 18 ವರ್ಷದ ರಿಮ್ಷಾ ಹಳದಿ ಉಡುಪನ್ನು ಧರಿಸಿ, ತನ್ನ ಸಂಬಂಧಿಕರೊಂದಿಗೆ ಬಾಲಿವುಡ್ ಹಾಡಿಗೆ ಮಾಡುತ್ತಿರುವುದನ್ನು ಕಾಣಬಹುದು. https://twitter.com/SachinGuptaUP/status/1784539218448199936 ಅವಳು ಇದ್ದಕ್ಕಿದ್ದಂತೆ ತನ್ನ ಎದೆಯನ್ನು ಹಿಡ್ಕೊಳ್ಳುತ್ತಾಳೆ. ಆ ನಂತ್ರ ನೆಲದ ಮೇಲೆ ಕುಸಿದು ಬೀಳುವ ಮೊದಲು ಇನ್ನೊಬ್ಬರ ಕೈಯನ್ನು ಹಿಡಿಯಲು ಪ್ರಯತ್ನಿಸುತ್ತಾಳೆ. ಆದ್ರೆ ಆ ಬಾಲಕನ ಕೈ ಹಿಡಿದು, ಆತನನ್ನು ಎಳೆದುಕೊಂಡು ಹೃದಯಾಘಾತದಿಂದ ಕುಸಿದು ಬೀಳುವುದನ್ನು ವೀಡಿಯೋದಲ್ಲಿ ನೀವು ಕಾಣಬಹುದಾಗಿದೆ. ಈ ಬಗ್ಗೆ ಆಕೆಯ ನೆರೆಹೊರೆಯವರಲ್ಲೊಬ್ಬರಾದ 42 ವರ್ಷದ ಮೊಹಮ್ಮದ್ ಅಹ್ಮದ್, “ರಿಮ್ಷಾ ಇತರರೊಂದಿಗೆ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಮೂರ್ಛೆ ಹೋದಳು. ಕೂಡಲೇ ಅವಳನ್ನು…

Read More

ಬೆಂಗಳೂರು: ನಗರದಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ತಘಟ್ಟಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಶೋಭಾ ಹಿಲ್ಸ್ ವ್ಯೂ ಅಪಾರ್ಮೆಂಟಿನ 14ನೇ ಮಹಡಿಯಿಂದ ಕೆಳಗೆ ಬಿದ್ದಂತ ಸಂಜೀವ್(25) ಎಂಬ ಯುವಕ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಸ್ಥಳೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ಸಂಜೀವ್, ಶೋಭಾ ಹಿಲ್ಸ್ ವ್ಯೂ ಅಪಾರ್ಮೆಂಟಿನ 14ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಶಂಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಆತ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/heat-wave-conditions-likely-to-prevail-in-several-districts-of-the-state-till-may-2-imd/ https://kannadanewsnow.com/kannada/amit-shahs-fake-video-case-assam-police-arrests-first-accused/

Read More

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…

Read More

ನವದೆಹಲಿ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ವೈಯಕ್ತಿಕವಾಗಿ ಮಾತನಾಡುತ್ತಿದ್ದ ಕಾರ್ಯಕ್ರಮದಲ್ಲಿ ‘ಖಲಿಸ್ತಾನ್’ ಕುರಿತು ಪ್ರತ್ಯೇಕತಾವಾದಿ ಘೋಷಣೆಗಳನ್ನು ಎತ್ತಿದ್ದಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯ ಸೋಮವಾರ ಕೆನಡಾದ ಉಪ ಹೈಕಮಿಷನರ್ ಗೆ ಸಮನ್ಸ್ ನೀಡಿದೆ. “ಇಂತಹ ಗೊಂದಲಕಾರಿ ಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಅನಿಯಂತ್ರಿತವಾಗಿ ಮುಂದುವರಿಸಲು ಅನುಮತಿಸುವುದರ ಬಗ್ಗೆ ಭಾರತ ಸರ್ಕಾರದ ತೀವ್ರ ಕಳವಳ ಮತ್ತು ಬಲವಾದ ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದೆ. ಪ್ರತ್ಯೇಕತಾವಾದ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ಕೆನಡಾದಲ್ಲಿ ನೀಡಲಾದ ರಾಜಕೀಯ ಸ್ಥಳವನ್ನು ಇದು ಮತ್ತೊಮ್ಮೆ ವಿವರಿಸುತ್ತದೆ. ಅವರ ನಿರಂತರ ಅಭಿವ್ಯಕ್ತಿಗಳು ಭಾರತ-ಕೆನಡಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಲ್ಲದೆ, ಕೆನಡಾದಲ್ಲಿ ಹಿಂಸಾಚಾರ ಮತ್ತು ಅಪರಾಧದ ವಾತಾವರಣವನ್ನು ಉತ್ತೇಜಿಸುತ್ತವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. https://kannadanewsnow.com/kannada/heat-wave-conditions-likely-to-prevail-in-several-districts-of-the-state-till-may-2-imd/ https://kannadanewsnow.com/kannada/amit-shahs-fake-video-case-assam-police-arrests-first-accused/

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಗೆ ಜನ, ಜಾನುವಾರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮೇ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ. ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ ಎಂದು ತಿಳಿಸಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಬಿಸಿಗಾಳಿ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ ಬಿಸಿ ವಾತಾವರಣದ ಮುನ್ಸೂಚನೆಯನ್ನು ನೀಡಿದೆ. https://twitter.com/KarnatakaVarthe/status/1784902313200796123 https://kannadanewsnow.com/kannada/aaps-dilip-pandey-demands-bjps-stand-on-prajwal-revanna-issue/ https://kannadanewsnow.com/kannada/amit-shahs-fake-video-case-assam-police-arrests-first-accused/

Read More

ದೆಹಲಿ: ಅತ್ಯಾಚಾರ, ಮಹಿಳಾ ಶೋಷಣೆ ಮಾಡುವುದೇ ಬಿಜೆಪಿಯಲ್ಲಿ ಚುನಾವಣಾ ಟಿಕೆಟ್ ಪಡೆಯಲು ಮಾನದಂಡವಾಗಿದೆಯೇ? ಎಂದು ದೆಹಲಿ ಶಾಸಕ , ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯದ ಉಸ್ತುವಾರಿ ದಿಲೀಪ್ ಪಾಂಡೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ 3000 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಬಿಡುಗಡೆಯಾಗಿವೆ. ಇದೇ ವ್ಯಕ್ತಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಜನರ ಮುಂದೆ ಕೈಮುಗಿದು ಮತಯಾಚನೆ ಮಾಡಿದ್ದಾರೆ. ಇದೇನಾ ಬಿಜೆಪಿ ಸಂಸ್ಕೃತಿ? ಬಿಜೆಪಿ ಮೈತ್ರಕೂಟದ ಪಾಲುದಾರ, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ವಿಚಾರವಾಗಿ, ಬಿಜೆಪಿಯವರು ತಮ್ಮ‌ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. https://twitter.com/AamAadmiParty/status/1784918139421012288 ಬ್ರಿಜ್ ಭೂಷಣ್ ರಿಂದ ಹಿಡಿದು ಪ್ರಜ್ವಲ್ ರೇವಣ್ಣವರೆಗೆ ಇಂತಹ ಹಲವು ಮಹಿಳಾ ಶೋಷಕರನ್ನು ಬಿಜೆಪಿಯಲ್ಲಿ ನೋಡಬಹುದು. ಪ್ರಧಾನಿ ಮೋದಿ ಅವರೆ ಅತ್ಯಾಚಾರಿಗಳಿಗೆ ನೀವು ಬೆಂಬಲ…

Read More

ಕೊಪ್ಪಳ : ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ರವರ ಪರವಾಗಿ ಮತದಾರರಲ್ಲಿ ಮತ ಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ರೈತರು, ಹಿಂದುಳಿದವರು, ಬಡವರು, ಅಲ್ಪಸಂಖ್ಯಾತರಿಗೆ ದೊಡ್ಡ ಅನ್ಯಾಯ ಮಾಡಿ ಅವರ ಬದುಕು ದುಸ್ತರಗೊಳಿಸಿದ್ದಾರೆ. ಬೆಲೆಯೇರಿಕೆ, ಹಣದುಬ್ಬರ, ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೀಡಾಯಿತು ಎಂದರು. ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತ ಮಾಡಿದ್ದು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ಹುಸಿಗೊಳಿಸಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದಿರಿ. ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಚ್…

Read More

ಯಾದಗಿರಿ: ಮಾಜಿ ಸಚಿವ ಭೈರತಿ ಬಸವರಾಜ್ ಅವರ ಕಾರು ಜಿಲ್ಲೆಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ, ಅದರಲ್ಲಿ ಇದ್ದಂತ ಕಾರು ಚಾಲಕ, ಗನ್ ಮ್ಯಾನ್ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿಯಲ್ಲಿ ಬಿಜೆಪಿಯ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಸೇರಿದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಅದರಲ್ಲಿ ಇದ್ದಂತ ಚಾಲಕ, ಬೈರತಿ ಬಸವರಾಜ್ ಅವರ ಗನ್ ಮ್ಯಾನ್ ಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ತಮ್ಮ ಕಾರಿನಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ತೆರಳದೇ ಬೇರೆಯವರ ಕಾರಿನಲ್ಲಿ ತೆರಳುತ್ತಿದ್ದರು. ಹೀಗಾಗಿ ಅವರು ಕಾರು ಪಲ್ಟಿ ಪ್ರಕರಣದಲ್ಲಿ ಯಾವುದೇ ಪ್ರಾಣಾಪಾಯಕ್ಕೆ ಒಳಗಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/let-modi-tell-us-what-he-has-done-for-karnataka-instead-of-abusing-congress-party-mallikarjun-kharge/ https://kannadanewsnow.com/kannada/amit-shahs-fake-video-case-assam-police-arrests-first-accused/

Read More

ಕಲಬುರಗಿ: ‘ಎಲ್ಲರಿಗೂ ನನ್ನ ನಮಸ್ಕಾರ’ ಎಂದು ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಪ್ರಿಯಾಂಕಾ ಗಾಂಧಿ ಅವರು ತಾವು ಸಭೆಗೆ ತಡವಾಗಿ ಬಂದಿರುವುದಕ್ಕೆ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಯಿಸಿದ್ದಕ್ಕೆ ಕ್ಷಮೆ ಕೇಳಿದರು. ಇದು ಬಸವಣ್ಣನವರ ಹಾಗೂ ಖಾಜಾಬಂದೇವನಾಜರ ಪ್ರವಿತ್ರ ಭೂಮಿ ಇದ್ದು. ಸತ್ಯ ಹಾಗೂ ಕ್ರಾಂತಿ ಮತ್ತು ಖರ್ಗೆ ಅವರ ಕರ್ಮಭೂಮಿಯಾಗಿದೆ. ನಮ್ಮ ದೇಶ ಸತ್ಯಮೇವ ಜಯತೇ ಎನ್ನುವ ಮಾತನ್ನು ಅಕ್ಷರಶಃ ಪಾಲಿಸುವ ದೇಶವಾಗಿದೆ. ಮನೆಯಲ್ಲಿ ತಾಯಿ ಮಕ್ಕಳು ಸತ್ಯ ಹೇಳುವಂತೆ ಹೇಳುತ್ತಾಳೆ. ಮಹಾತ್ಮಾಗಾಂಧಿ ಕೂಡಾ ಸತ್ಯದ ಹಾದಿಯಲ್ಲೆ ನಡೆದರು. ರಾಜಕೀಯ ಕೂಡಾ ಸತ್ಯದ ದಾರಿಯಲ್ಲೇ ನಡೆದಿದೆ. ಕಾಂಗ್ರೆಸ್ ಪಕ್ಷ ಸತ್ಯದ ರಾಜಕೀಯದ ಹಾದಿಯಲ್ಲೇ ನಡೆದಿದೆ. ಆದರೆ ಕಳೆದ ಹತ್ತುವರ್ಷಗಳಿಂದ ರಾಜಕೀಯದ ಹಾದಿ ಬದಲಾಗಿದೆ. ಇಲ್ಲಿ ಸತ್ಯಕ್ಕೆ ಜಾಗವಿಲ್ಲದಾಗಿದೆ. ಕಳೆದ ಐದು ವರ್ಷದ ಅವಧಿಯಲ್ಲಿ ಇಲ್ಲಿನ ಸಂಸದ ಒಂದು ರೈಲು ಬಿಡಿಸಿದ್ದು ಬಿಟ್ಟರೇ ಬೇರೆ ಏನು ಮಾಡಿಲ್ಲ ಎಂದು ಆರೋಪಿಸಿದ ಪ್ರಿಯಾಂಕಾ ಗಾಂಧಿ, ಕುಡಿಯುವ ನೀರಿಗೂ ಕೂಡಾ ಕಷ್ಟಪಡುವ ವಾತಾವರಣ ನಿರ್ಮಾಣವಾಗಿದೆ.…

Read More