Subscribe to Updates
Get the latest creative news from FooBar about art, design and business.
Author: kannadanewsnow09
ಈ ಇಂಗ್ಲಿಷ್ ತಿಂಗಳ ಕೊನೆಯ ಅಮಾವಾಸ್ಯೆ ನಾಳೆ ಬರಲಿದೆ. ಡಿಸೆಂಬರ್ 30-12-2024 ಸೋಮವಾರದಂದು ಅಮವಾಸಿ. ಈ ದಿನ ಪೂರ್ವಜರ ಪೂಜೆಯನ್ನು ಮಾಡಬೇಕು. ಕುಲದೇವತೆಯ ಪೂಜೆಯನ್ನೂ ಮಾಡಬೇಕು. ಈ ದಿನವನ್ನು ತಪ್ಪಿಸಿಕೊಳ್ಳಬೇಡಿ. ಇದರ ಹೊರತಾಗಿ ಈ ಅಮಾವಾಸ್ಯೆಯಂದು ನಾವು ಮಾಡಬಹುದಾದ ಸರಳ ಪರಿಹಾರವು ನಿಮ್ಮ ಜೀವನದಲ್ಲಿ ವಸಂತವನ್ನು ತರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ…
ಬೆಂಗಳೂರು: ಈ ವರ್ಷದ ನವೆಂಬರ್ ವರೆಗೆ ಕರ್ನಾಟಕದಲ್ಲಿ 348 ತಾಯಂದಿರ ಸಾವುಗಳು ವರದಿಯಾಗಿದ್ದು, ಆಗಸ್ಟ್ ಮತ್ತು ನವೆಂಬರ್ ನಡುವೆ ಗಮನಾರ್ಹ ಏರಿಕೆಯಾಗಿದ್ದು, ಈ ಸಾವುಗಳಲ್ಲಿ 217 ಸಾವುಗಳು ಸಂಭವಿಸಿವೆ. ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, ವಿಶೇಷವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ, ಅಲ್ಲಿ 179 ಸಾವುಗಳು ದಾಖಲಾಗಿವೆ ಮತ್ತು ಖಾಸಗಿ ಸೌಲಭ್ಯಗಳಲ್ಲಿ 38 ಸಾವುಗಳು ಸಂಭವಿಸಿವೆ. ರಾಜ್ಯದ ಆರೋಗ್ಯ ವ್ಯವಸ್ಥೆಯು ಈಗ ಪರಿಶೀಲನೆಯಲ್ಲಿದೆ, ತಜ್ಞರು ರಿಂಗರ್ಸ್ ಲ್ಯಾಕ್ಟೇಟ್ನಂತಹ ಕೆಲವು ಐವಿ ದ್ರವಗಳ ಬಳಕೆಯನ್ನು ಮೀರಿದ ವ್ಯವಸ್ಥಿತ ಸಮಸ್ಯೆಗಳನ್ನು ಗುರುತಿಸಿದ್ದಾರೆ, ಇದು ಬಳ್ಳಾರಿಯಲ್ಲಿ ಸಾವಿನ ನಂತರ ಈ ಹಿಂದೆ ದೂಷಿಸಲ್ಪಟ್ಟಿದೆ ಎಂದು ವರದಿ ತಿಳಿಸಿದೆ. ಆಗಸ್ಟ್ ಮತ್ತು ನವೆಂಬರ್ ನಡುವೆ, ರಾಜ್ಯವು ಪ್ರತಿ ತಿಂಗಳು 50 ಕ್ಕೂ ಹೆಚ್ಚು ತಾಯಂದಿರ ಸಾವುಗಳಿಗೆ ಸಾಕ್ಷಿಯಾಗಿದೆ, ಇದು ವೈದ್ಯಕೀಯ ವೃತ್ತಿಪರರಲ್ಲಿ ಕಳವಳವನ್ನು ಹುಟ್ಟುಹಾಕಿದೆ. ತಾಯಂದಿರ ಸಾವಿನ ವರದಿಗಳ ನಂತರ ರಿಂಗರ್ಸ್ ಲ್ಯಾಕ್ಟೇಟ್ ಅನ್ನು ಪರಿಶೀಲಿಸಲಾಗಿದ್ದರೂ, ತಜ್ಞರು ಸಮಸ್ಯೆಯನ್ನು ಸರಳೀಕರಿಸುವುದರ ವಿರುದ್ಧ ಎಚ್ಚರಿಕೆ…
ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೈ ಓವರ್ನ ಅಂಡರ್ ಪಾಸ್ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರು, ಶಿವಮೊಗ್ಗ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ವಲಯ-1 ರ ಅಬಕಾರಿ ನಿರೀಕ್ಷಕ ಹನುಮಂತಪ್ಪ ಡಿ.ಎನ್ ಇವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎ-1 ಹರೀಶ, ಎ-2 ಶಿವು ಚನ್ನಗಿರಿ ತಾಲ್ಲೂಕು ಇವರು ಮದ್ಯವನ್ನು ನೋಂದಣಿ ಸಂಖ್ಯೆ ಕೆಎ 17 ಹೆಚ್ಕ್ಯು 0728 ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುವಾಗ ಜಪ್ತಿ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಚಂದ್ರಪ್ಪ ಎಸ್.ಡಿ,…
ಬೆಂಗಳೂರು: ಕನ್ನಡದ ಪ್ರಖ್ಯಾತ ವಾಗ್ಮಿ, ಹಾಸ್ಯ ಕಲಾವಿಧೆ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು (67) ಅವರು ಅನಾರೋಗ್ಯದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಜಯಪ್ರಕಾಶ್ ಬರಗೂರು ನಿಧನರಾಗಿದ್ದಾರೆ. ಅಂದಹಾಗೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಂತ ಜಯಪ್ರಕಾಶ್ ಬರಗೂರು ಜಯದೇವ ಆಸ್ಪತ್ರೆಗೆ ದಾಖಲಾಗಿ ಕೆಲ ವರ್ಷಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಬಗ್ಗೆ ಸುಧಾ ಬರಗೂರು ಅವರು ವಿಕೇಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ತಾವೇ ಮಾಹಿತಿ ಹಂಚಿಕೊಂಡಿದ್ದರು. ಇಂದು ಅನಾರೋಗ್ಯದಿಂದ ಖ್ಯಾತ ಹಾಸ್ಯ ಕಲಾವಿಧೆ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ಅವರು ಓರ್ವ ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಕತ್ರಿಗುಪ್ಪೆಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಬಳಿ ಇರುವ ಸುಧಾ…
ಬೆಂಗಳೂರು: ಬೆಳಗಾವಿಯ ವಿಧಾನ ಪರಿಷತ್ ಕಲಾಪದ ವೇಳೆಯಲ್ಲೇ ಪೊಲೀಸರ ಬಂಧನ, ಆ ಬಳಿಕ ಹೈಡ್ರಾಮಾ ಕುರಿತಂತೆ ಡಿಜಿಪಿ ಕರೆದು ಸ್ಪಷ್ಟನೆ ಕೇಳುವಂತೆ ರಾಜ್ಯಪಾಲರಿಗೆ ಸಿ.ಟಿ ರವಿ ಅವರು 8 ಪುಟಗಳ ದೂರು ನೀಡಿದ್ದಾರೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದಂತ ಎಂಎಲ್ಸಿ ಸಿ.ಟಿ ರವಿಯನ್ನು ಒಳಗೊಂಡಂತ ಬಿಜೆಪಿ ಮುಖಂಡರು, ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಬಂಧನದ ಹೈಡ್ರಾಮಾ ಕುರಿತಂತೆ ದೂರು ನೀಡಿದರು. ಸಿ.ಟಿ ರವಿ ಸಲ್ಲಿಸಿರುವಂತ 8 ಪುಟಗಳ ದೂರಿನಲ್ಲಿ ಡಿಸೆಂಬರ್.19ರ ರಾತ್ರಿ ಪೊಲೀಸರ ವರ್ತನೆ ಬಗ್ಗೆ ಇಂಚಿಂಚೂ ಮಾಹಿತಿಯನ್ನು ವಿವರಿಸಲಾಗಿದೆ. ಈ ಘಟನೆ ಸಂಬಂಧ ಡಿಜಿಪಿಯನ್ನು ಕರೆದು ಸ್ಪಷ್ಟೀಕರಣ ಕೇಳುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಇದಲ್ಲದೇ ತಮ್ಮ ಮೇಲೆ ಪೊಲೀಸರ ದೌರ್ಜನ್ಯದ ಬಗ್ಗೆಯೂ ವಿವರಿಸಲಾಗಿದೆ. ಇದೀಗ ರಾಜ್ಯಪಾಲರು ಸಿಟಿ ರವಿ ಅವರಿಂದ ದೂರು ಪಡೆದಿದ್ದು, ಡಿಜಿಪಿ ಅವರನ್ನು ಕರೆದು, ಸ್ಪಷ್ಟೀಕರಣವನ್ನು ಘಟನೆ ಸಂಬಂಧ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/no-need-for-priyank-kharge-to-resign-home-minister-dr-g-parameshwara/ https://kannadanewsnow.com/kannada/bigg-news-here-is-the-complete-list-of-state-general-holiday-days-for-the-year-2025-holiday-list-2025/ https://kannadanewsnow.com/kannada/shocking-couple-dies-of-suffocation-while-sleeping-in-the-cold/
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್ನೋಟ್ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು. ತನಿಖೆಯ ವರದಿ ಬಂದ ನಂತರ ಏನು ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ. ಅನೇಕ ಪ್ರಕರಣಗಳಲ್ಲಿ…
ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದರು. ಹಿಂದೆ, ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೆ, ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಗ್ರಹಿಸಿದರು. ಯಾರನ್ನೋ ಉಳಿಸುವ, ರಕ್ಷಿಸುವ ದುಸ್ಸಾಹಸ ಬೇಡ ಎಂದು ಎಚ್ಚರಿಸಿದರು. ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಸಿದ್ದರಾಮಯ್ಯನವರು…
ಬೆಂಗಳೂರು: ವರಾಹಿ ಜ್ಯುವೆಲ್ಲರಿ ಮಾಲಕಿಗೆ ವಂಚನೆ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿ ತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಮಾಜಿ ಸಂಸದ ಡಿ.ಕೆ ಸುರೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಐಶ್ವರ್ಯಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ, ವಂಚನೆಯನ್ನು ಮಾಡಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವುದು. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನ್ಯಾಯಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ. ಅಂದಹಾಗೆ ಆರೋಪಿ ಐಶ್ವರ್ಯಾಗೌಡ ಎಂಬುವರು ವರಾಹಿ ಜ್ಯುವೆಲ್ಲರ್ ಮಾಲಕಿಗೆ ಚಿನ್ನ ಪಡೆದು ಕೋಟಿ ಕೋಟಿ ವಂಚನೆ ಮಾಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ದೂರಿನ ವೇಳೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ…
ನವದೆಹಲಿ: ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು 2024 ರ ಸ್ಮರಣೀಯ ಪ್ರದರ್ಶನದ ನಂತರ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಬುಮ್ರಾ ಅವರಲ್ಲದೆ, ಇಂಗ್ಲೆಂಡ್ನ ಸಮೃದ್ಧ ಬ್ಯಾಟ್ಸ್ಮನ್ ಜೋ ರೂಟ್ ಸಹ ಸಹ ಆಟಗಾರ ಹ್ಯಾರಿ ಬ್ರೂಕ್ ಅವರೊಂದಿಗೆ ನಾಮನಿರ್ದೇಶನಗೊಂಡಿದ್ದರೆ, ಶ್ರೀಲಂಕಾದ ಕಮಿಂಡು ಮೆಂಡಿಸ್ ಕೂಡ ಸ್ಥಾನ ಪಡೆದಿದ್ದಾರೆ. ಬುಮ್ರಾ ಕಳೆದ ಎರಡು ವರ್ಷಗಳಿಂದ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ ಮತ್ತು ಟೆಸ್ಟ್ ಕ್ರಿಕೆಟ್ನಲ್ಲಿ ಚೆಂಡಿನೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಆಡಿದ 13 ಟೆಸ್ಟ್ ಪಂದ್ಯಗಳಲ್ಲಿ 14.92 ಸರಾಸರಿ ಮತ್ತು 30.16 ಸ್ಟ್ರೈಕ್ ರೇಟ್ನಲ್ಲಿ 71 ವಿಕೆಟ್ಗಳನ್ನು ಪಡೆದರು, ಇದು ದೀರ್ಘ ಸ್ವರೂಪದಲ್ಲಿ ಯಾವುದೇ ಬೌಲರ್ಗೆ ಅತ್ಯುತ್ತಮ ಅಂಕಿಅಂಶವಾಗಿದೆ. ಬಲಗೈ ವೇಗಿ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ನಾಲ್ಕು ಪಂದ್ಯಗಳಲ್ಲಿ 30 ವಿಕೆಟ್ಗಳೊಂದಿಗೆ ಅತ್ಯುತ್ತಮ ಬೌಲರ್ ಆಗಿದ್ದಾರೆ. “2023 ರಲ್ಲಿ ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಟೆಸ್ಟ್ ಅಖಾಡಕ್ಕೆ ಮರಳಿದ ಬುಮ್ರಾ 2024 ರಲ್ಲಿ…
ತುಮಕೂರು: ಎಟಿಎಂ ಮೆಷಿನ್ನಿಗೆ ಸ್ಕಿಮ್ಮಿಂಗ್ ಮಿಷಿನ್ ಹಾಗೂ ಕ್ಯಾಮರಾ ಅಳವಡಿಸಿ ಸಾರ್ವನಿಕರ ಡೆಟಾ ಕದ್ದು, ಹಣ ವಂಚಿಸಿದ್ದಂತ ಇಬ್ಬರು ವಿದೇಶಿ ಪ್ರಜೆಗಳಿಗೆ 8 ವರ್ಷ ಜೈಲು ಹಾಗೂ ತಲಾ ಐದು ಲಕ್ಷ ದಂಡವನ್ನು ವಿಧಿಸಿ ತುಮಕೂರು ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ತುಮಕೂರಿನಲ್ಲಿ 2022ರ ಅಕ್ಟೋಬರ್ 31ರಂದು ಎಟಿಎಂಗಳಿಗೆ ಸ್ಕಿಮ್ಮಿಂಗ್ ಮಿಷನ್ ಹಾಗೂ ಕ್ಯಾಮಾರಾ ಅಳಡವಿಡಿಸಿದ್ದಂತ ಕೀನ್ಯಾದ ವಾನ್ ಕಂಬೋಡಜಿ ಹಾಗೂ ನೈಜೀರಿಯಾದ ಲಾರೆನ್ಸ್ ಮೊಕೆಮೋ ಅವರು ಎಟಿಎಂ ಕಾರ್ಡ್ ದಾರರ ಡೆಟಾ ಕದ್ದು ನಕಲಿ ಕಾರ್ಡ್ ಬಳಸಿ ಹಣ ಡ್ರಾ ಮಾಡಿದ್ದರು. ಈ ಸಂಬಂಧ ತುಮಕೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಶೇಷಾದ್ರಿ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಸರ್ಕಾರಿ ಅಭಿಯೋಜಕರಾದಂತ ವಿಎ ಕವಿತಾ ಅವರು ವಾದ ಮಂಡಿಸಿದ್ದರು. ಸುಧೀರ್ಘ ವಿಚಾರಣೆಯ ಬಳಿಕ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದೆ. ಕೀನ್ಯಾದ ವಾನ್ ಕಂಬೋಡಜಿ, ನೈಜೀರಿಯಾದ ಲಾರೆನ್ಸ್ ಮೊಕೆಮೋಗೆ 8 ವರ್ಷ ಜೈಲು ಶಿಕ್ಷೆ…