Author: kannadanewsnow09

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿಳಂಬ ನೇಮಕಾತಿ ಪ್ರಕ್ರಿಯೆಗೆ ಹೆಸರುವಾಸಿ. ಇದಕ್ಕೆ ಉದಾಹರಣೆ ಎನ್ನುವಂತೆ ಕೋರ್ಟ್ ಆದೇಶದ ಮೇರೆಗೆ ಬರೋಬ್ಬರಿ 19 ವರ್ಷಗಳ ಹಿಂದಿನ ಮೋಟಾರು ವಾಹನ ನಿರೀಕ್ಷೆಕರ ಹುದ್ದೆಯ ನೇಮಕಾತಿಗೆ ಮರು ಚಾಲನೆ ನೀಡಿದೆ. ಹೌದು ಬಹುತೇಕ 2 ದಶಕಗಳ ಬಳಿಕ ಕರ್ನಾಟಕ ಲೋಕಸೇವಾ ಆಯೋಗವು ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮರು ಚಾಲನೆಯನ್ನು ಕೋರ್ಟ್ ಆದೇಶದ ಮೇಲೆ ನೀಡಿದೆ. ಈಗ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ಆಸಕ್ತಿ ಇದೆಯೋ ಇಲ್ಲವೋ ಅಥವಾ ನಿವೃತ್ತರಾಗಿದ್ದಾರೋ ಬದುಕಿದ್ದಾರೋ ಎಂಬುದೇ ತಿಳಯದು. 2006ರ ಆಗಸ್ಟ್ ನಲ್ಲಿ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಶೈಕ್ಷಣಿಕ ಅರ್ಹತೆ ವಿಚಾರವಾಗಿ ಅಸ್ಪಷ್ಟತೆ ಕಾರಣ ಅಭ್ಯರ್ಥಿಗಳು ಆಡಳಿತ ನ್ಯಾಯಮಂಡಳಿ ಮೊರೆ ಹೋಗಿದ್ದರು. ಆ ಬಳಿಕ ಪ್ರಕರಣ ತಾರ್ಕಿಕ ಅಂತ್ಯಕಾರಣದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈಗ ಸುಧೀರ್ಘ ವಿಚಾರಣೆಯ ಬಳಿಕ ಇದೇ ಫೆಬ್ರವರಿಯಲ್ಲಿ ಮಧ್ಯಂತರ ಆದೇಶ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಪ್ರಶ್ಸಿರುವ…

Read More

ಬೆಂಗಳೂರು: ನಗರದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಇಬ್ಬರು ಯುವಕ ಮೇಲೆ ಹಲ್ಲೆ ಮಾಡಿರುವಂತ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಂತ ಇಬ್ಬರು ಯುವಕ ಮೇಲೆ ಪುಂಡರಿಂದ ಹಲ್ಲೆ ಮಾಡಲಾಗಿದೆ. ಕಾರಿಗೆ ಪೆಟ್ರೋಲ್ ಹಾಕಿಸುತ್ತಿದ್ದಂತ ಯುವಕರಿಬ್ಬರ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಆಗಮಿಸಿದ್ದರು. ಓರ್ವ ಪುಂಡನನ್ನು ಹಿಡಿದು, ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದಂತ ಯುವಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/another-hit-and-run-case-in-bengaluru-auto-drivers-leg-chopped-off/ https://kannadanewsnow.com/kannada/no-property-registration-without-e-khata-state-govt/

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಆಟೋಗೋ ಕಾರೊಂದು ಗುದ್ದಿ ಪರಾರಿಯಾದ ಪರಿಣಾಮ, ಚಾಲಕನ ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆ ಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ಆಟೋ ಒಂದಕ್ಕೆ ಇನ್ನೋವಾ ಕಾರೊಂದು ಗುದ್ದಿದೆ. ಈ ಪರಿಣಾಮ ಆಟೋ ಚಾಲಕ ವಸೀಂ ಪಾಷಾ ಎಂಬುವರ ಕಾಲು ಮುರಿತಗೊಂಡಿದೆ. ಈ ಹಿಟ್ ಅಂಡ್ ರನ್ ಬಳಿಕ ಇನ್ನೋವಾ ಕಾರು ಚಾಲಕ ವಾಹನ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಆಟೋ ಸಂಪೂರ್ಣ ಜಖಂ ಗೊಂಡಿದೆ. ಗಾಯಾಳು ಆಟೋ ಚಾಲಕ ವಸೀಂ ಪಾಷಾನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಚಾಮರಾಜಪೇಟೆ ಠಾಣೆಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವಂತ ಇನ್ನೋವ ಕಾರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/mammoottys-cancer-is-a-fake-news-friends/ https://kannadanewsnow.com/kannada/no-property-registration-without-e-khata-state-govt/

Read More

ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ನೋಂದಾಯಿಸಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ…

Read More

ಕೇರಳ: ನಟ ಮಮ್ಮುಟ್ಟಿ ಅವರ ಆರೋಗ್ಯದ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅವರ ಕ್ಯಾನ್ಸರ್ ರೋಗನಿರ್ಣಯದ ಅನಾಮಧೇಯ ಹೇಳಿಕೆಗಳನ್ನು ತಳ್ಳಿಹಾಕಿದ ಹಿರಿಯ ನಟನ ತಂಡವು ಪವಿತ್ರ ರಂಜಾನ್ ತಿಂಗಳ ಕಾರಣ ಅವರು ಕೆಲಸದಿಂದ ವಿರಾಮ ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರ ಪಿಆರ್ಒ ಮಿಡ್ಡೇಗೆ ಹೇಳಿಕೆ ನೀಡಿ, “ಇದು ನಕಲಿ ಸುದ್ದಿ. ಅವರು ರಂಜಾನ್ ಉಪವಾಸ ಮಾಡುತ್ತಿರುವುದರಿಂದ ಅವರು ರಜೆಯಲ್ಲಿದ್ದಾರೆ. ಆ ಕಾರಣದಿಂದಾಗಿ ಅವರು ತಮ್ಮ ಶೂಟಿಂಗ್ ವೇಳಾಪಟ್ಟಿಯಿಂದ ವಿರಾಮದಲ್ಲಿದ್ದಾರೆ. ವಾಸ್ತವವಾಗಿ, ವಿರಾಮದ ನಂತರ, ಅವರು ಮೋಹನ್ ಲಾಲ್ ಅವರೊಂದಿಗೆ ಮಹೇಶ್ ನಾರಾಯಣನ್ ಅವರ ಚಿತ್ರದ ಚಿತ್ರೀಕರಣಕ್ಕೆ ಮರಳಲಿದ್ದಾರೆ ಎಂದಿದೆ. ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ಮುಂಬರುವ ಚಿತ್ರಗಳಿವು ಕೆಲಸದ ಪ್ರಕಾರ, ಮಮ್ಮುಟ್ಟಿ ಮುಂದಿನ ಬಜೂಕಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಏಪ್ರಿಲ್ 10ರಂದು ಬಿಡುಗಡೆಯಾಯಿತು. ಇದು ಆಕ್ಷನ್-ಥ್ರಿಲ್ಲರ್ ಆಗಿದ್ದು, ಬಾಬು ಆಂಟನಿ, ಐಶ್ವರ್ಯಾ ಮೆನನ್, ನೀತಾ ಪಿಳ್ಳೈ ಮತ್ತು ಗಾಯತ್ರಿ ಅಯ್ಯರ್ ಅವರೊಂದಿಗೆ ನಟಿಸಿದ್ದಾರೆ. ಅವರು ಕೊನೆಯ…

Read More

ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ…

Read More

ನವದೆಹಲಿ: 2000ರಲ್ಲಿ ಗುಜರಾತ್ ನಲ್ಲಿ ನಡೆದ ಗೋಧ್ರಾ ಗಲಭೆಗಳ ಕುರಿತಾದ ಚರ್ಚೆಗಳಲ್ಲಿ ನನ್ನ ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಹೆಣೆದಿದ್ದ ಕಟ್ಟು ಕಥೆಗಳಿದ್ದವು. ಹಿಂಸೆಯ ಬಳಿಕ ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರು ಅಂದ್ರೆ ಕಾಂಗ್ರೆಸ್ ಪಕ್ಷ ಶಿಕ್ಷೆಯಾಗುವುದನ್ನು ಬಯಸಿದ್ದರು. ಆದರೇ ಕೋರ್ಟ್ ನನ್ನನ್ನು ನಿರ್ದೋಷಿ ಎಂದು ಘೋಷಿಸಿತು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರದಂದು ಪ್ರಸಾರವಾದ ಅಮೇರಿಕಾದ ಖ್ಯಾತ ಫಾಡ್ ಕಾಸ್ಟರ್ ಲಿಕ್ಸ್ ಫ್ರೀಡ್ ಮನ್ ಜೊತೆಗಿನ 3 ಗಂಟೆಗಳ ಫಾಡ್ ಕಾಸ್ಟ್ ನಲ್ಲಿ ಮೋದಿ ಅವರು ಗೋಧ್ರಾ ಗಲಭೆಯ ಕುರಿತಾಗಿ ಪ್ರಸ್ತಾಪಿಸಿದರು. ಆರ್ ಎಸ್ ಎಸ್, ಭಾರತ-ಚೀನಾ ಸಂಬಂಧ, ಅಮೇರಿಕಾ-ಉಕ್ರೇನ್ ಯುದ್ಧ, ಧ್ಯಾನ, ಉಪವಾಸ, ಶಿಕ್ಷಣ, ಬಾಲ್ಯ, ಟ್ರಂಪ್ ಜೊತೆಗಿನ ಸ್ನೇಹ, ಸೇರಿದಂತೆ ಮೊದಲಾದ ವಿಷಯಗಳ ಬಗ್ಗೆ ಸುಧೀರ್ಘವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗುಜರಾತ್ ಗಲಭೆ ವಿಷಯದಲ್ಲಿ ನನ್ನನ್ನು ಹೇಗೆ ಬಲಿಪಶು ಮಾಡುವ ಯತ್ನ ನಡೆಯಿತು ಎಂಬ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿಯವರು ಬಿಚ್ಚಿಟ್ಟರು. 2000ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹತ್ತಿದ…

Read More

ಬೆಂಗಳೂರು: ರಾಜ್ಯದ ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸುಭದ್ರವೆಂಬುದಾಗಿ ತಿಳಿದು ಬಂದಿದೆ. ಅಕ್ಟೋಬರ್ ನಲ್ಲಿ ಇದು ಮುಗಿಯಲಿದ್ದು, ಆ ಬಳಿಕ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಸ್ವತಹ ಅವರೇ ಮುಳಿಸುವ ನೀಡಿದ್ದು, ರಾಜ್ಯದಲ್ಲಿ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ. ಹೀಗಾಗಿ ಅಕ್ಟೋಬರ್ ತಿಂಗಳವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸಾಧ್ಯತೆಯಿಲ್ಲ ಎಂಬುದಾಗಿ ಹೇಳಲಾಗುತ್ತಿದೆ. ಶನಿವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದಂತ ಪದಾಧಿಕಾರಿಗಳ ಸಭೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಕಾಂಗ್ರೆಸ್ 100 ಕಚೇರಿ ಸ್ಥಾಪನೆ ನೆರವೇರಿಸಲಿದೆ. ಕಾರ್ಯಕ್ರಮದ ಬಳಿಕ ನಾನು ದೊಡ್ಡ ಜವಾಬ್ದಾರಿಯಿಂದ ಮುಕ್ತವಾಗುತ್ತೇನೆ. ಬಳಿಕ ಯಾರಾದರೂ ಜವಾಬ್ದಾರಿ ತೆಗೆದುಕೊಳ್ಳಲಿ ಎಂಬುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದೆ. ಜೊತೆಗೆ ಅಕ್ಟೋಬರ್ ವರೆಗೆ ಮಾತ್ರವೇ…

Read More

ಬೆಂಗಳೂರು: ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ ಬಿಬಿಎಂಪಿಯಿಂದ ಆಸ್ತಿ ನೋಂದಣಿಗೆ ಹೊಸ ನಿಯಮ ಜಾರಿಯಾಗಿದ್ದು, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸಿ ಆಸ್ತಿಗಳನ್ನು ನೋಂದಾಯಿಸುವಂತೆ ಸೂಚನೆ ನೀಡಲಾಗಿದೆ. ಹೌದು, ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ನೋಂದಣಿ ಮಹಾ ನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ದಯಾನಂದ ಕೆ.ಎ. ಅವರು, ಆಸ್ತಿ ನೋಂದಣಿ ಸಮಯದಲ್ಲಿ ಉಪ ನೋಂದಣಾಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಬಾರದು. ಕರ್ನಾಟಕ ನಾಗರಿಕ ಸೇವಾ ನಿಯಮಗಳ (KCSR) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ. ಈ ಸುತ್ತೋಲೆಯು ಮಹಾನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಎಲ್ಲಾ ಆಸ್ತಿಗಳಿಗೆ ಅನ್ವಯಿಸುತ್ತದೆ. ಇ ಖಾತಾ ಇಲ್ಲದೆ ಆಸ್ತಿ ನೋಂದಣಿ ಮಾಡುವಂತಿಲ್ಲ. ಬೆಂಗಳೂರಿನಲ್ಲಿ ಕೆಲವು ನಿವಾಸಿಗಳಿಗೆ ಇ-ಖಾತಾ ದುಬಾರಿಯಾಗಿದೆ. ಆದರೂ ಈ ಹೊಸ ನಿಯಮ ಜಾರಿಯಲ್ಲಿದೆ. ಅಗತ್ಯವಿರುವ ದಾಖಲೆಗಳು: (1) ಮಾಲೀಕರ ಆಧಾರ್ ಕಾರ್ಡ್ (2) ಆಸ್ತಿ…

Read More

ಬೆಂಗಳೂರು: ವಯಸ್ಸಾದ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಲಹದೇ ಈ ರೀತಿ ಅಮಾನವೀಯರಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಮಕ್ಕಳ ಹೆಸರಿಗೆ ಬರೆದಿರುವಂತ ಆಸ್ತಿ, ಉಯಿಲು ರದ್ದು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂಧಿದೆ.  ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್‌” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ…

Read More