Author: kannadanewsnow09

ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ನಾಪತ್ತೆಯಾಗಿರುವಂತ ಐವರು ವಿದ್ಯಾರ್ಥಿಗಳು ಬೆಂಗಳೂರಿನ ಖಾಸಗೀ ಕಾಲೇಜಿನ ವಿದ್ಯಾರ್ಥಿಗಳು ಎಂಬುದಾಗಿ ತಿಳಿದು ಬಂದಿದೆ. ಅವರು ನೀರುಪಾಲಾಗಿ, ಸಾವನ್ನಪ್ಪಿದಾಗಿ ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ಘಟನೆ ನಡೆದಿತ್ತು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಂತ ಮೂವರು ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿದ್ದು, ನಾಪತ್ತೆಯಾಗಿರೋ ವಿದ್ಯಾರ್ಥಿಗಳ ಪತ್ತೆಗೆ ಕ್ರಮವಹಿಸಿದ್ದರು. ವಿದ್ಯಾರ್ಥಿಗಳು ಕಾವೇರಿ ನದಿಯ ಸಮೀಪದಲ್ಲಿ ಶವವಾಗಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅವರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಹೊರತೆಗೆದಿದ್ದಾರೆ. https://kannadanewsnow.com/kannada/pocso-case-muruga-sri-surrenders-before-court/

Read More

ನವದೆಹಲಿ: ಜನಪ್ರಿಯ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ‘ಎಕ್ಸ್’ ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿತ್ತು, ಇದು ವಿಶ್ವಾದ್ಯಂತ ಬಳಕೆದಾರರಿಗೆ ತೊಂದರೆಯನ್ನು ಸೃಷ್ಟಿಸುತ್ತಿದೆ ಎಂದು ವರದಿಯಾಗಿದೆ. ಡೌನ್ಡೆಟೆಕ್ಟರ್ ಪ್ರಕಾರ, ಭಾರತೀಯ ಬಳಕೆದಾರರು ಎಲೋನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಅನ್ನು ವೆಬ್ ಮತ್ತು ಅಪ್ಲಿಕೇಶನ್ ಎರಡರಲ್ಲೂ ಪ್ರವೇಶಿಸುವಲ್ಲಿ ಸಮಸ್ಯೆ ಇದೆ ಎಂದು ದೂರು ನೀಡಿದ್ದಾರೆ. ಡೌನ್ಡೆಟೆಕ್ಟರ್ ಜಾಗತಿಕ ಬಳಕೆದಾರರೊಂದಿಗೆ, ಮುಖ್ಯವಾಗಿ ಅಪ್ಲಿಕೇಶನ್ನಲ್ಲಿನ ಸಮಸ್ಯೆಗಳೊಂದಿಗೆ ಹೆಚ್ಚಳವನ್ನು ತೋರಿಸಿದೆ. ಕೆಲ ದಿನಗಳ ಹಿಂದಷ್ಟೇ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಎಕ್ಸ್ ಸರ್ವರ್ ಡೌನ್ ಆಗಿತ್ತು. ಈಗ ಮತ್ತೆ ಕೈಕೊಟ್ಟಿದ್ದು, ಬಳಕೆದಾರರು ಪರದಾಡುವಂತೆ ಆಗಿದೆ. https://kannadanewsnow.com/kannada/prajwal-revanna-expelled-from-jds-former-cm-hd-kumaraswamy/ https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/

Read More

ಶಿವಮೊಗ್ಗ: ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಲಾಗಿದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗೋದಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದರು. ನಾವೇ ಹೇಳುತ್ತಿದ್ದೇವಲ್ಲ ಸಮಗ್ರ ತನಿಖೆ ಆಗಬೇಕೆಂದು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ನನಗೂ, ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸ್ಪಷ್ಟ ಪಡಿಸಿದರು. ಅಂದಹಾಗೇ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ಹೊರ ಬಂದಿತ್ತು. ಪೆನ್ ಡ್ರೈವ್ ಕೇಸ್ ಎಂಬುದಾಗಿಯೇ ಎಂಬುದಾಗಿ ವೀಡಿಯೋ ವೈರಲ್ ಆಗಿತ್ತು. https://kannadanewsnow.com/kannada/five-students-who-had-gone-for-a-swim-at-mekedatu-sangama-went-missing/ https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/

Read More

ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ನಾಪತ್ತೆಯಾಗಿರುವಂತ ಐವರು ವಿದ್ಯಾರ್ಥಿಗಳು ಬೆಂಗಳೂರಿನ ಖಾಸಗೀ ಕಾಲೇಜಿನ ವಿದ್ಯಾರ್ಥಿಗಳು ಎಂಬುದಾಗಿ ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಂತ ಮೂವರು ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿದ್ದು, ನಾಪತ್ತೆಯಾಗಿರೋ ವಿದ್ಯಾರ್ಥಿಗಳ ಪತ್ತೆಗೆ ಕ್ರಮವಹಿಸಿದ್ದಾರೆ. https://kannadanewsnow.com/kannada/former-karnataka-cm-sm-krishnas-health-deteriorates-hospitalised/ https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವಂತ ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಎಸ್ಎಂ ಕೃಷ್ಣಾ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಆಸ್ಪತ್ರೆಯ ವೈದ್ಯರು ಬುಲೆಟಿನ್ ಮೂಲಕ ತಿಳಿಸಿದ್ದಾರೆ. ಏಪ್ರಿಲ್.21ರಂದು ಎಸ್ ಎಂ ಕೃಷ್ಣ ಅವರಿಗೆ ಜ್ವರ, ಕೆಮ್ಮ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ನಂತ್ರ ಅವರು ಡಿಸ್ಚಾರ್ಜ್ ಆಗಿದ್ದರು. ಆದ್ರೇ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ, ಮತ್ತೆ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/ https://kannadanewsnow.com/kannada/pocso-case-muruga-sri-surrenders-before-court/

Read More

ಬೆಂಗಳೂರು: ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಪಕ್ಷವು ಪೋಲೀಸ್ ಆಯುಕ್ತರಿಗೆ ದೂರು ನೀಡಿದೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ. ಹಾಸನ ಜಿಲ್ಲೆಯಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟು ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲ ಪುರುಷ, ಮಹಿಳೆಯರು ಬೆಂಗಳೂರಿನಲ್ಲಿ ಭಾನುವಾರ (28-4-2024) ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿರುವುದು ಸರಿಯಷ್ಟೇ. ಈ ಪ್ರಕರಣದ ಬಗ್ಗೆ ಅವರು ಪ್ರತಿಭಟನೆ ಮಾಡುವ ವಿಚಾರದ ಬಗ್ಗೆ ನಮ್ಮ ಪಕ್ಷಕ್ಕೆ ಯಾವುದೇ ತಕರಾರು, ಆಕ್ಷೇಪ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪುರುಷರು, ಮಹಿಳೆಯರು…

Read More

ಬೆಂಗಳೂರು: ನಗರದಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ನಿವಾಸದ ಗೋಡೆಯ ಮೇಲೆಯೇ ದೇಶ ವಿರೋಧಿ ಬರಹ ಬರೆದಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಂಡಾಪುರದಲ್ಲಿ ಪೊಲೀಸ್ ಪೇದೆ ಮುನಿರಾಜು ಎಂಬುವರ ಮನೆಯ ಗೋಡೆಯ ಮೇಲೆ ದೇಶ ವಿರೋಧಿ ಬರಹವನ್ನು ಬರೆದಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವಂತ ಮುನಿರಾಜು ಮನೆಯ ಗೋಡೆಯ ಮೇಲೆಯೇ ದೇಶ ವಿರೋಧಿ ಬರಹ ಬರೆದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/prajwal-revanna-pornography-video-case-victims-relatives-allege-she-is-not-well/ https://kannadanewsnow.com/kannada/ii-puc-exam-2-25790-students-appear-4609-absent-on-day-1/

Read More

ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿರುವಂತ ಸಂತ್ರಸ್ತ ಮಹಿಳೆ ಸರಿಯಿಲ್ಲ. ದೇವೇಗೌಡರ ಕುಟುಂಬಕ್ಕೆ ಕಪ್ಪುಚುಕ್ಕೆ ತರೋದಕ್ಕಾಗಿ ದೂರು ನೀಡಿದ್ದಾರೆ ಎಂಬುದಾಗಿ ಸಂತ್ರಸ್ತ ಮಹಿಳೆಯ ಸಂಬಂಧಿಕರೇ ಗಂಭೀರ ಆರೋಪ ಮಾಡಿದ್ದಾರೆ. ಇಂದು ಹಾಸನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದಂತ ಸಂತ್ರಸ್ತ ದೂರುದಾರ ಮಹಿಳೆಯ ಸಂಬಂಧಿಕರ ಕುಟುಂಬಸ್ಥರು, ಪ್ರಜ್ವಲ್ ರೇವಣ್ಣ, ಹೆಚ್.ಡಿ ರೇವಣ್ಣ ಅವರ ವಿರುದ್ಧ ದೂರು ನೀಡಿರುವಂತ ಮಹಿಳೆ ಸರಿಯಿಲ್ಲ. ತುಂಬಾ ಸಾಲ ಮಾಡಿಕೊಂಡಿದ್ದಾರೆ. ಜಮೀನು ಸಹ ಮಾರಾಟ ಮಾಡಿದ್ರು ಎಂದರು. ದೇವೇಗೌಡ ಅವರ ಕುಟುಂಬಕ್ಕೆ ಕಪ್ಪುಚುಕ್ಕೆ ತರೋದಕ್ಕಾಗಿಯೇ ದೂರು ನೀಡಿದ್ದಾರೆ. 5 ವರ್ಷಗಳ ಹಿಂದೆ ಸುಮ್ಮನೇ ಇದ್ದು, ಚುನಾವಣೆ ವೇಳೆ ದೂರು ನೀಡಿದ್ದಾರೆ. ಸಂತ್ರಸ್ತೆಯನ್ನು ಹೆದರಿಸಿ ಕರೆದುಕೊಂಡು ಹೋಗಿ ದೂರು ಕೊಡಿಸಿದ್ದಾರೆ. ರೇವಣ್ಣ ಕುಟುಂಬ ನಮಗೆ ಸಂಬಂಧಿಕರು. ಸುಳ್ಳು ದೂರು ನೀಡಿದ್ದಾರೆ ಎಂಬುದಾಗಿ ಹೇಳಿದರು. ಅಂದಹಾಗೇ ಹಾಸನ ಜಿಲ್ಲೆ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿರುವ ಮಹಿಳೆ…

Read More

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಮೊದಲ ದಿನದ ಪರೀಕ್ಷೆ ನಡೆಯಿತು. ಇಂದು ಕನ್ನಡ ಹಾಗೂ ಅರೇಬಿಕ್ ಪರೀಕ್ಷೆಗಳು ನಡೆದವು. ಮೊದಲ ದಿನದ ಪರೀಕ್ಷೆಗೆ 25,790 ವಿದ್ಯಾರ್ಥಿಗಳು ಹಾಜರಾದ್ರೇ, 4609 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳ ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 29-04-2024ರಂದು ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಿತು. ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯನ್ನು ನಡೆಸಲಾಯಿತು ಎಂದಿದೆ. ಬೆಂಗಳೂರು ನಾರ್ಥ್ ನಲ್ಲಿ ನೋಂದಾಯಿಸಿಕೊಂಡ 2183 ವಿದ್ಯಾರ್ಥಿಗಳಲ್ಲಿ 1772 ಮಂದಿ ಹಾಜರಾದ್ರೇ, 411 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಬೆಂಗಳೂರು ಸೌಥ್ ನಲ್ಲಿ 2392 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ 249 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ತಿಳಿಸಿದೆ. ಇಂದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗೆ 30399 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 25790 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆದ್ರೇ ವಿವಿಧ ಕಾರಣಗಳಿಗಾಗಿ 4609 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.84.84 ರಷ್ಟು ವಿದ್ಯಾರ್ಥಿಗಳ ಹಾಜರಾತಿ ದೃಢೀಕರಣವಾಗಿದೆ ಎಂದು ತಿಳಿಸಿದೆ. https://kannadanewsnow.com/kannada/pocso-case-muruga-sri-surrenders-before-court/ https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/

Read More

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಆರೋಪಿಯಾಗಿರುವಂತ ಮುರುಘಾ ಮಠದ ಶಿವಮೂರ್ತಿ ಶರಣರು, ಇಂದು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಏಪ್ರಿಲ್.22ರಂದು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನೀಡಿದ್ದಂತ ಷರತ್ತು ಬದ್ದ ಜಾಮೀನಿಗೆ ನಾಲ್ಕು ತಿಂಗಳು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 2.20ಕ್ಕೆ ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲದೇ ಜಿಲ್ಲಾ ನ್ಯಾಯಾಲಯಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣರು ಶರಣಾದರು. https://kannadanewsnow.com/kannada/sslc-exam-result-to-be-declared-on-may-8-heres-the-viral-photo-real-truth/ https://kannadanewsnow.com/kannada/big-news-sc-seeks-information-from-centre-on-uniform-rates-in-private-hospitals/

Read More