Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೆರಿಟ್ ಪಡೆದ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ. ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಶೋಕ ವಿಶ್ವವಿದ್ಯಾಲಯವು ತನ್ನ ಮುಂದಿನ ಶೈಕ್ಷಣಿಕ ವರ್ಷದ ಪದವಿಪೂರ್ವ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಅಕ್ಟೋಬರ್ ತಿಂಗಳಿನಿಂದ ಆರಂಬಿಸಿದ್ದು, ಮೆರಿಟ್ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹಿತ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಅಂಕದಲ್ಲಷ್ಟೇ ಅಲ್ಲದೆ, ಇತರೆ ವಿಭಾಗದಲ್ಲಿ ಮೆರಿಟ್ ಪಡೆದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನದ ಸೌಲಭ್ಯ ಸಿಗಲಿದೆ. ಅಂಕಗಳಲ್ಲಿ ಮೆರಿಟ್ ಪಡೆದ 200 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದುಕೊಳ್ಳುವ ಅರ್ಹತೆ ಪಡೆದುಕೊಳ್ಳಲಿದ್ದಾರೆ. ವಿಶೇಷ ಮೆರಿಟ್ ಅಂದರೆ, ಜೆಇಇ, ಐಐಎಸ್ಇಆರ್ (ಐಎಟಿ), ಸಿಎಂಐ ಮತ್ತು ಭಾರತೀಯ ರಾಷ್ಟ್ರೀಯ ಒಲಿಂಪಿಯಾಡ್ಸ್ (ಐಎನ್ಒ) ನಲ್ಲಿ ಅಸಾಧಾರಣ ಸಾಧನೆ ಮಾಡಿದ 50 ಮಕ್ಕಳಿಗೆ ಶೇ.100ರಷ್ಟು ಬೋಧನಾ ಶುಲ್ಕ ಮನ್ನಾ ಮಾಡಲಾಗುತ್ತಿದೆ. ಜೊತೆಗೆ, ರಾಷ್ಟ್ರೀಯ ಆಪ್ಟಿಟ್ಯೂಡ್ ಪರೀಕ್ಷೆಗಳಲ್ಲಿ 2000ರ ರಾಂಕ್ ಪಡೆದ 50 ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನದಿಂದ ಪ್ರಯೋಜನ ಪಡೆಯುತ್ತಾರೆ.…
ಹೃದಯಾಘಾತವು ಯುವ ಭಾರತೀಯರನ್ನು ಕೊಲ್ಲುತ್ತಿದೆ, ಲಕ್ಷಣಗಳು ಇರುತ್ತವೆ ಆದರೆ ತಡವಾಗುವವರೆಗೂ ಯಾರೂ ಗಮನಿಸುವುದಿಲ್ಲ. ಹೃದಯದ ಅಡಚಣೆಯು ಸೈರನ್ಗಳೊಂದಿಗೆ ತನ್ನನ್ನು ತಾನು ಪ್ರಕಟಿಸಿಕೊಳ್ಳುವುದಿಲ್ಲ. ಅದು ಸಣ್ಣ ಲಕ್ಷಣಗಳ ಮೂಲಕ ಪಿಸುಗುಟ್ಟುತ್ತದೆ. ಎದೆಯ ಬಿಗಿತ, ಮೆಟ್ಟಿಲುಗಳನ್ನು ಹತ್ತುವಾಗ ಉಸಿರಾಟದ ತೊಂದರೆ. ಏನೂ ಮಾಡದ ನಂತರ ದಣಿದ ಭಾವನೆ. ನೀವು ಈ ಚಿಹ್ನೆಗಳನ್ನು ಮನೆಯಲ್ಲಿಯೇ ಹಿಡಿಯಬಹುದು. ಯಾವುದೇ ಯಂತ್ರಗಳ ಅಗತ್ಯವಿಲ್ಲ. ಕೇವಲ ಐದು ನಿಮಿಷಗಳು ಮತ್ತು ನಿಮ್ಮ ಸ್ವಂತ ದೇಹ. 1. ವೈದ್ಯರು ಮಾಡುವಂತೆ ನಿಮ್ಮ ನಾಡಿಮಿಡಿತವನ್ನು ಪರಿಶೀಲಿಸಿ ನಿಶ್ಯಬ್ದವಾಗಿ ಕುಳಿತುಕೊಳ್ಳಿ. ಟಿವಿ ಇಲ್ಲ. ಫೋನ್ ಇಲ್ಲ. ಒಂದು ನಿಮಿಷ ಕುಳಿತುಕೊಳ್ಳಿ. ಈಗ ಎರಡು ಬೆರಳುಗಳನ್ನು (ನಿಮ್ಮ ಹೆಬ್ಬೆರಳಲ್ಲ) ನಿಮ್ಮ ಮಣಿಕಟ್ಟಿನ ಮೇಲೆ ಇರಿಸಿ. ನೀವು ನಿಮ್ಮ ಗಡಿಯಾರವನ್ನು ಧರಿಸಿದ ಸ್ಥಳದಲ್ಲಿಯೇ ಇರಿಸಿ. ನಾಡಿಮಿಡಿತವನ್ನು ಅನುಭವಿಸಿ. 60 ಸೆಕೆಂಡುಗಳ ಕಾಲ ನಿಮ್ಮ ಹೃದಯ ಬಡಿತಗಳನ್ನು ಎಣಿಸಲು ಪ್ರಯತ್ನಿಸಿ, ಕೇವಲ ಊಹಿಸಬೇಡಿ. ನಿಜವಾಗಿಯೂ ಅವುಗಳನ್ನು ಎಣಿಸಿ. ವಿಶ್ರಾಂತಿ ಪಡೆಯುವಾಗ ಸಾಮಾನ್ಯ ಹೃದಯವು ನಿಮಿಷಕ್ಕೆ 60 ರಿಂದ 100…
ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ?. ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ | ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ. ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ…
ಶಿವಮೊಗ್ಗ: ಸಾಗರ ತಾಲ್ಲೂಕಿನ ಕಟ್ಟ ನಿರ್ಮಾಣ ಸೇರಿದಂತೆ ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸೇಫ್ಟಿ ಕಿಟ್ ವಿತರಣೆ ಮಾಡಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಕಾರ್ಮಿಕ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ತಾಲ್ಲೂಕಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದಲ್ಲಿ ತೊಡಗಿರೋರು, ಕಾರ್ಪೆಂಟರ್, ಪೇಂಟರ್, ಎಲೆಕ್ಟ್ರೀಷಿಯನ್, ವೇಲ್ಡರ್, ಪ್ಲಂಬರ್, ನೋಂದಾಯಿತ ಫಲಾನುಭವಿಗಳಿಗೆ ಸೇಫ್ಟಿ ಕಿಟ್ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ. ಅರ್ಹ ಫಲಾನುಭವಿಗಳು ತಮ್ಮ ಕಾರ್ಮಿಕ ಕಾರ್ಡ್ ಚೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿಯನ್ನು ಸಾಗರದ ಸೊರಬ ರಸ್ತೆಯಲ್ಲಿರುವಂತ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಸೇಫ್ಟಿ ಕಿಟ್ ವಿತರಣೆಗಾಗಿ ಅರ್ಜಿ ಸಲ್ಲಿಕೆಯು ನಾಳೆಯಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-11-2025 ಆಗಿರುತ್ತದೆ. ಫಲಾನುಭವಿಗಳು ಕಚೇರಿಗೆ ಸ್ವತಹ ಭೇಟಿ ನೀಡಿ, ಅರ್ಜಿ ಸಲ್ಲಿಸುವಂತೆ ಕೋರಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/shivamogga-anganwadi-worker-gopalamma-of-kanahalli-sorabada-retires-bids-farewell-with-affection/ https://kannadanewsnow.com/kannada/public-attention-significant-change-in-aadhaar-card-update-rules-from-november-1/
ನವದೆಹಲಿ: ಫೋನ್ಗಳು ಮತ್ತು ಇತರ ಪರದೆಗಳಿಂದ ಸೇರಿದಂತೆ ರಾತ್ರಿಯಲ್ಲಿ ಪ್ರಕಾಶಮಾನವಾದ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಹೃದಯ ವೈಫಲ್ಯದ ಅಪಾಯವು 56% ರಷ್ಟು ಹೆಚ್ಚಾಗಬಹುದು ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ತಡರಾತ್ರಿಯ ಬೆಳಕಿಗೆ ಒಡ್ಡಿಕೊಳ್ಳುವುದು ಗಮನಾರ್ಹ ಅಪಾಯಕಾರಿ ಅಂಶವಾಗಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಆಸ್ಟ್ರೇಲಿಯಾದ ಫ್ಲಿಂಡರ್ಸ್ ವಿಶ್ವವಿದ್ಯಾಲಯದ ವಿಜ್ಞಾನಿಗಳ ನೇತೃತ್ವದ ಸಂಶೋಧನೆಯು, ಯುಕೆಯಲ್ಲಿ ಸುಮಾರು 89,000 ಭಾಗವಹಿಸುವವರ ಮೇಲೆ ಮಣಿಕಟ್ಟು-ಧರಿಸಿದ ಸಂವೇದಕಗಳ ಮೂಲಕ ಸಂಗ್ರಹಿಸಲಾದ 13 ಮಿಲಿಯನ್ ಗಂಟೆಗಳ ಬೆಳಕಿನ ಮಾನ್ಯತೆ ಡೇಟಾವನ್ನು ವಿಶ್ಲೇಷಿಸಿದೆ. ಭಾಗವಹಿಸುವವರನ್ನು ಒಂಬತ್ತು ವರ್ಷಗಳಿಗೂ ಹೆಚ್ಚು ಕಾಲ ಟ್ರ್ಯಾಕ್ ಮಾಡಲಾಗಿದೆ. ಜರ್ನಲ್ ಆಫ್ ದಿ ಅಮೇರಿಕನ್ ಮೆಡಿಕಲ್ ಅಸೋಸಿಯೇಷನ್ (JAMA) ನೆಟ್ವರ್ಕ್ ಓಪನ್ನಲ್ಲಿ ಪ್ರಕಟವಾದ ಸಂಶೋಧನೆಗಳು, ರಾತ್ರಿಯಲ್ಲಿ ಬೆಳಕಿಗೆ ಒಡ್ಡಿಕೊಳ್ಳುವುದು ಹೃದಯಾಘಾತದ 47% ಹೆಚ್ಚಿನ ಅಪಾಯ, ಪರಿಧಮನಿಯ ಅಪಧಮನಿ ಕಾಯಿಲೆಯ 32% ಹೆಚ್ಚಿನ ಅಪಾಯ ಮತ್ತು ಪಾರ್ಶ್ವವಾಯುವಿನ 28% ಹೆಚ್ಚಿನ ಅಪಾಯದೊಂದಿಗೆ ಸಂಬಂಧಿಸಿದೆ ಎಂದು ಬಹಿರಂಗಪಡಿಸಿದೆ.…
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿನ ವಿವಿಧ ಘಟಕಗಳ 784 ಸ್ಥಾನಗಳಿಗೆ 1,447 ಮಂದಿ ನಾಮಪತ್ರ ಸಲ್ಲಿಸಿರುವುದಾಗಿ ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ತಿಳಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ 27-10-2025 ರಂದು ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ದಿನಾಂಕ: 28-10-2025 ರಂದು ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದೆ. ದಿನಾಂಕ: 30-10-2025 ರಂದು ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ದಿನಾಂಕ: 09-11-2025 ರಂದು ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಕೆಯುಡಬ್ಲುಜೆ…
ಶಿವಮೊಗ್ಗ: ಕಳೆದ 32 ವರ್ಷಗಳಿಂದ ಶಿವಮೊಗ್ಗದ ಸೊರಬ ತಾಲ್ಲೂಕಿನ ಕಾನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಂತ ಗೋಪಾಲಮ್ಮ ಅವರು ಇಂದು ನಿವೃತ್ತರಾದರು. ಅವರಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದಂತ ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ಅವರು, ಗೋಪಾಲಮ್ಮ ಅವರು ಉತ್ತಮ ಕೆಲಸಗಾರ್ತಿಯಾಗಿದ್ದರು. ನಾವು ಯಾವುದೇ ಮಾಹಿತಿ ಕೇಳಿದ್ರೂ ಪಟ್ ಅಂತ ನೀಡುತ್ತಿದ್ದರು. ಸೌಮ್ಯ ಸ್ವಭಾವದವರಾಗಿದ್ದಂತ ಅವರು ನಮ್ಮೆಲ್ಲರಿಗೂ ಕೆಲಸದಲ್ಲಿ ಮಾದರಿಯಾಗಿದ್ದರು ಎಂಬುದಾಗಿ ಹೇಳಿದರು. ಅಂಗನವಾಡಿ ಕಾರ್ಯಕರ್ತೆ ಕೆಲಸ ಮೆಚ್ಚಿ ಸರ್ಕಾರ ಪ್ರಶಸ್ತಿ ಅಂದಹಾಗೇ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಾನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಗೋಪಾಲಮ್ಮ ಸೇವೆಯನ್ನು ಸರ್ಕಾರ ಗುರುತಿಸಿತ್ತು. ಅವರಿಗೆ 2002-3ನೇ ಸಾಲಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. 1993ರಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆಗೆ ಸೇರಿದ್ದಂತ ಗೋಪಾಲಮ್ಮ ಅವರು, ಬರೋಬ್ಬರಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ, ಇಂದು ನಿವೃತ್ತರಾದರು. ಗೋಪಾಲಮ್ಮ ನಿವೃತ್ತರಾಗುವ ಬೀಳ್ಕೊಡುಗೆ ವಿಷಯ ತಿಳಿದಂತ ಈ ಹಿಂದೆ ಅಂಗನವಾಡಿ…
ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಎನ್ ರೆಡ್ಡಿ(103) ಅವರು ನಿಧನರಾಗಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಗಾರ ವಿಎನ್ ರೆಡ್ಡಿ ಇನ್ನಿಲ್ಲವಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೆಂಕಟಾಪುರದಲ್ಲಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ಅವರು ನಿಧನರಾಗಿದ್ದಾರೆ. ತಮ್ಮ ವೆಂಕಟಾಪುರ ಗ್ರಾಮ ಮನೆಯಲ್ಲಿ ವಿಎನ್ ರೆಡ್ಡಿ ನಿಧನರಾಗಿದ್ದಾರೆ. ಮೃತ ಸ್ವಾತಂತ್ರ್ಯ ಹೋರಾಟಗಾರಿ ವಿಎನ್ ರೆಡ್ಡಿ ಅವರು ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿದ್ದರು. ಮಹಾತ್ಮಾ ಗಾಂಧೀಜಿಯವರ ಸೇವೆಯನ್ನು ನಂದಿಬೆಟ್ಟದಲ್ಲಿ ವಿಶ್ರಾಂತಿಯಲ್ಲಿ ಇದ್ದಾಗ ಮಾಡಿದ್ದರು. ಇಂದು ಮೃತರಾದಂತ ಸ್ವಾತಂತ್ರ್ಯ ಹೋರಾಟಗಾರಿ ವಿಎನ್ ರೆಡ್ಡಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸ್ವಾತಂತ್ರ್ಯ ಹೋರಾಟಗಾರ ವಿ.ಎನ್.ರೆಡ್ಡಿ ನಿಧನಕ್ಕೆ ಮಾಜಿ ಸಂಸದ ವಿಎಸ್ ಉಗ್ರಪ್ಪ ಸಂತಾಪ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೆಂಕಟಪುರ ಗ್ರಾಮದ ನಿವಾಸಿ. ತಾಲ್ಲೂಕು ಮಂಡಳಿ ಅಧ್ಯಕ್ಷರಾಗಿದ್ದರು, ಆಜೀವ ಕಾಂಗ್ರೆಸ್ ನಾಯಕರಾಗಿದ್ದರು ಮತ್ತು ತಾತ್ವಿಕವಾಗಿ ಗಾಂಧಿಯಾನ್ ಆಗಿದ್ದರು. ವಿದುರಸ್ವತ ಸ್ವಾತಂತ್ರ್ಯ ಚಳವಳಿ, ಉಪ್ಪಿನ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಯೋಜನೆ ಪರಿಸರಕ್ಕೆ ಮಾರಕ, ನಿರ್ಮಿಸದಂತೆ ವಿರೋಧವನ್ನು ರೈತ ಸಂಘಟನೆಗಳು ವ್ಯಕ್ತ ಪಡಿಸಿದ್ದವು. ಈ ಬೆನ್ನಲ್ಲೇ ಕೆಪಿಸಿಎಲ್ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೆಪಿಸಿಎಲ್ ಅಧಿಕಾರಿಗಳು, ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ 2000 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ ಸ್ಟೋರೇಜ್ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಪರಿಸರಕ್ಕೆ ಹೆಚ್ಚಿನ ಹಾನಿಯಾಗದ ಈ ಯೋಜನೆಯನ್ನು ಜಾರಿಗೊಳಿಸಲು ಕೆಪಿಸಿಎಲ್ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಹೆಜ್ಜೆ ಇಡುತ್ತಿದೆ. ಪ್ರಸ್ತುತ ಪರಿಸರ ಸಂರಕ್ಷಣೆ ಜೊತೆಗೆ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಈ ಯೋಜನೆ ಅನಿವಾರ್ಯ ಎಂದರು. ಈ ಯೋಜನೆ ಜಾರಿ ವೇಳೆ ಈಗಾಗಲೇ ನಿರ್ಮಾಣವಾಗಿರುವ ಗೇರುಸೊಪ್ಪ ಮತ್ತು ತಲಕಳಲೆ…
ಬೆಂಗಳೂರು : “ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯಿಸಿದರು. “ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. ದೆಹಲಿಗೆ ಖಾಸಗಿ ಭೇಟಿ ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ…














