Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಐಎಎಸ್ (ಕೆಎನ್: 1998) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು ಕೇಂದ್ರ ಸರ್ಕಾರಿ ಸೇವೆಗೆ ಡೆಪ್ಯುಟೇಶನ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ. ಮನೋಜ್ ಜೈನ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ,…

Read More

ಬೆಂಗಳೂರು: ನಗರದಲ್ಲಿ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಾಡುಬೀಸರಹಳ್ಳಿಯ ಅಪಾರ್ಮೆಂಟ್ ನಲ್ಲಿದ್ದಂತ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಪತ್ನಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಅಂದಹಾಗೇ ಅಭಿನವ್ ಸಿಂಗ್ ಅವರು ಒಡಿಶಾದಲ್ಲಿ ಖ್ಯಾತ ರ್ಯಾಪರ್ ಆಗಿ ಗುರ್ತಿಸಿಕೊಂಡಿದ್ದರು. ಬೆಂಗಳೂರಿನ ಕಾಡುಬೀಸರಹಳ್ಳಿಯಲ್ಲಿ ಅಪಾರ್ಮೆಂಟ್ ನಲ್ಲಿ ವಾಸವಿದ್ದರು. ಇಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/good-news-for-sc-st-community-candidates-in-the-state-apply-for-free-kas-mains-training/ https://kannadanewsnow.com/kannada/2nd-international-airport-to-be-set-up-in-bengaluru-to-be-announced-in-next-two-days-dk-shivakumar/

Read More

ಬೆಂಗಳೂರು: ಸಣ್ಣ ಪಟ್ಟಣಗಳು ಹಾಗೂ 2 ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ಯಮ ಕಾರ್ಯಪರಿಸರ ಅಭಿವೃದ್ಧಿಪಡಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಬುಧವಾರ ಹೇಳಿದರು. ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್-25)ದಲ್ಲಿ ‘ನಗರದ ಆಚೆಗೆ’ (ಬಿಯಾಂಡ್ ಅರ್ಬನ್) ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ನಗರಗಳಲ್ಲಿ ಕೈಗಾರಿಕೆ ಆಧಾರಿತ ಕೌಶಲ್ಯಾಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು. ಮೈಸೂರು, ಮಂಗಳೂರು, ಕಲ್ಬುರ್ಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಹಲವು ನಗರಗಳಲ್ಲಿ ನವೋದ್ಯಮಗಳಿಗೆ ಪೂರಕ ವಾತಾವರಣ ಸೃಷ್ಟಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡಾಟಾ ಸೈನ್ಸ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಪರಿಪೋಷಕ (ಇನ್ ಕ್ಯುಬೇಷನ್) ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು. ‘ನೆಕ್ಸ್ಟ್ ವೆಲ್ತ್’ ಸಂಸ್ಥೆ ಸಿಇಒ ಮೈಥಿಲಿ ರಮೇಶ್ , “ಸಣ್ಣ ನಗರಗಳಲ್ಲಿ ತಂತ್ರಜ್ಞಾನ ಆಧಾರಿತ ಉದ್ಯಮ ಮಾಡಲಾಗದು ಎಂಬ ಬಗ್ಗೆ ಹಲವು ತಪ್ಪುಕಲ್ಪನೆಗಳಿವೆ. ಸಣ್ಣ ನಗರಗಳು ಅಂತಾರಾಷ್ಟ್ರೀಯ ಗುಣಮಟ್ಟದ ಸಂಸ್ಥೆಗಳಿಗೆ ಸೂಕ್ತವಲ್ಲ; ಸಣ್ಣ ನಗರಗಳಲ್ಲಿ ಹೆಚ್ಚು ಅರ್ಹತೆಯ ವೃತ್ತಿಪರರು ಕೆಲಸ ಮಾಡುವುದಿಲ್ಲ; ಅಲ್ಲಿ…

Read More

ಗದಗ: ಬಡ್ಡಿ ದಂಧೆಯಲ್ಲಿ ತೊಡಗಿದ್ದಂತ ಬೆಟಗೇರಿಯ ಯಲ್ಲಪ್ಪ ಮಿಸ್ಕಿನ್ ಅವರ ಮನೆಯ ಮೇಲೆ ಗದಗ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಪತ್ತೆಯಾದಂತ ಹಣ, ಚಿನ್ನಾಭರಣವನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಬಡ್ಡಿ ದಂಧೆಕೋರ ಯಲ್ಲಪ್ಪ ಮಸ್ಕಿ ಮನೆಯಲ್ಲಿ ಬರೋಬ್ಬರಿ 4.90 ಕೋಟಿ ನಗದು ಪತ್ತೆಯಾಗಿದೆ. ಈ ಕುರಿತಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಸ್ ನೇಮಕಗೌಡ ಅವರು ಮಾಹಿತಿ ನೀಡಿದ್ದು, ಎರಡು ದಿನಗಳಿಂದ ಬಡ್ಡಿ ವ್ಯವಹಾರ ನಡೆಸುತ್ತಿದ್ದಂತ ಯಲ್ಲಪ್ಪ ಮಿಸ್ಕಿನ್ ಮನೆಯ ಮೇಲೆ ದಾಳಿಯನ್ನು ನಡೆಸಲಾಗಿತ್ತು. 13 ಕಡೆಯಲ್ಲಿ ನಡೆಸಿದಂತ ದಾಳಿಯಲ್ಲಿ 4.90 ಕೋಟಿ ನಗದು, 992 ಗ್ರಾಂ ಚಿನ್ನ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ. ಇನ್ನೂ ಯಲ್ಲಪ್ಪ ಮಿಸ್ಕಿನ್ ಮನೆಯಲ್ಲಿ 650 ಬಾಂಡ್, 4 ಎಟಿಎಂ ಕಾರ್ಡ್, 9 ಬ್ಯಾಂಕ್ ಪಾಸ್ ಬುಕ್ ಸಿಕ್ಕಿವೆ. ಜೊತೆಗೆ ಅಕ್ರಮವಾಗಿ ಸಂಗ್ರಹ ಮಾಡಿದ್ದಂತ 65 ಲೀಟರ್ ಮದ್ಯವನ್ನು ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-sc-st-community-candidates-in-the-state-apply-for-free-kas-mains-training/ https://kannadanewsnow.com/kannada/india-among-100-most-corrupt-countries-in-the-world-heres-the-list-of-other-countries/ https://kannadanewsnow.com/kannada/2nd-international-airport-to-be-set-up-in-bengaluru-to-be-announced-in-next-two-days-dk-shivakumar/

Read More

ನವದೆಹಲಿ: ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (ಸಿಪಿಐ) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ದೇಶಗಳಲ್ಲಿ ಒಂದಾಗಿದೆ. ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಸ್ಥಾನದಲ್ಲಿದೆ, 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳನ್ನು ಕಳೆದುಕೊಂಡಿದೆ. ಭಾರತವು ತನ್ನ ಸ್ಥಾನವನ್ನು ಇತರ ಎರಡು ರಾಷ್ಟ್ರಗಳಾದ ಗಾಂಬಿಯಾ ಮತ್ತು ಮಾಲ್ಡೀವ್ಸ್ ನೊಂದಿಗೆ ಹಂಚಿಕೊಂಡಿದೆ. ಸಾರ್ವಜನಿಕ ವಲಯದ ಭ್ರಷ್ಟಾಚಾರದ ಜಾಗತಿಕ ಮಾಪಕವಾಗಿ ಕಾರ್ಯನಿರ್ವಹಿಸುವ ಸಿಪಿಐ, 0 (ಹೆಚ್ಚು ಭ್ರಷ್ಟ) ರಿಂದ 100 (ತುಂಬಾ ಸ್ವಚ್ಛ) ವರೆಗಿನ ಸ್ಕೇಲ್ನಲ್ಲಿ ಅಂಕಗಳನ್ನು ನಿಗದಿಪಡಿಸುತ್ತದೆ. 2024 ರಲ್ಲಿ, ಭಾರತವು ಒಟ್ಟಾರೆ 38 ಅಂಕಗಳನ್ನು ಪಡೆಯಿತು, ಇದು 2023 ರಲ್ಲಿ 39 ಮತ್ತು 2022 ರಲ್ಲಿ 40 ರಷ್ಟಿತ್ತು. ಭಾರತದ ನೆರೆಯ ರಾಷ್ಟ್ರಗಳ ಪೈಕಿ ಪಾಕಿಸ್ತಾನ 135, ಶ್ರೀಲಂಕಾ 121, ಬಾಂಗ್ಲಾದೇಶ 149 ಮತ್ತು ಚೀನಾ 76ನೇ ಸ್ಥಾನದಲ್ಲಿವೆ. ಡೆನ್ಮಾರ್ಕ್ (90) ಅತ್ಯಂತ ಕಡಿಮೆ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ,…

Read More

ಬೆಂಗಳೂರು : ಇಲ್ಲಿ ನಡೆಯುತ್ತಿರುವ ಇನ್ವೆಸ್ಟ್‌ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆಯು ಯಶಸ್ವಿಯಾಗಿದೆ. ʼನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ. ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ವಿಜಯಪುರದಲ್ಲಿ 3000 ಮೆಗಾವಾಟ್‌ ಸಾಮರ್ಥ್ಯದ ಗಾಳಿ ವಿದ್ಯುತ್‌ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್‌ ಟರ್ಬೈನ್‌ ಬ್ಲೇಡ್‌ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್‌ ಕಂಪನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಉಪಕ್ರಮವು, ಗಾಳಿ ವಿದ್ಯುತ್‌ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ. ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್‌ ಸಾಮರ್ಥ್ಯದ…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70 ಭಾಗ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ.…

Read More

ಮೈಸೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆಯ ನಂತ್ರ, ಹುಣಸೂರು ನಗರದಲ್ಲಿರುವಂತ ಪ್ರತಿಷ್ಠಿತ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಜೆಟ್ ವಿಶ್ಲೇಷಣೆ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಕಳೆದ ಸೋಮವಾರದಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವಂತ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಜೆಟ್ ವಿಶ್ಲೇಷಣೆ ಕಾರ್ಯಗಾರವನ್ನ ಕಲಾ ವಿಭಾಗದ ವತಿಯಿಂದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ಜಗದೀಶ್ ಬಿ.ಆರ್ ಅವರು ಬಜೆಟ್ ವಿಶ್ಲೇಷಣೆಯ ಕುರಿತು ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಭಗಿನಿ ಆರೋಕ್ಯ ಮೇರಿ ಅವರು ಮಾತನಾಡಿ ಪದವಿ ಕಾಲೇಜುಗಳು ಕೇವಲ ಉಪನ್ಯಾಸಕ್ಕೆ ಮಾತ್ರ ಸೀಮಿತವಾಗಿರದೇ ಪಠ್ಯೇತರ ಚಟುವಟಿಕೆಗಳನ್ನು ಪದವಿ ಮಟ್ಟದಲ್ಲಿ ಆಯೋಜನೆಯನ್ನು ಮಾಡಬೇಕು. ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಒಳಗೊಂಡಂತೆ ಸಾಮಾನ್ಯ ಜ್ಞಾನದ ವಿಚಾರಗಳನ್ನ ಅವರಲ್ಲಿ ತುಂಬಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಲಾ ವಿಭಾಗದ ಮುಖ್ಯಸ್ಥರಾದಂತಹ ಲೋಕೇಶ್.ಬಿ ಮಾತನಾಡಿ ಬಜೆಟ್ ಒಂದು ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಸಹಾಯಕವಾಗುವಂತಹ ಸಾಧನವಾಗಿದೆ. ಜನರಿಂದ…

Read More

ಬೆಂಗಳೂರು: ಕುಂಭಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ ರೈಲು (06221) ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಮೈಸೂರು-ಲಕ್ನೋ ಏಕಮಾರ್ಗ ವಿಶೇಷ ರೈಲು (06221) ಶುಕ್ರವಾರ (ಫೆ.14, 2025) ಬೆಳಿಗ್ಗೆ 7:30 ಗಂಟೆಗೆ ಮೈಸೂರಿನಿಂದ ಹೊರಟು, ಭಾನುವಾರದಂದು ( ಫೆ.16, 2025) ಸಂಜೆ 4:00 ಗಂಟೆಗೆ ಲಕ್ನೋ ನಿಲ್ದಾಣವನ್ನು ತಲುಪಲಿದೆ. ಈ ರೈಲಿನಲ್ಲಿ 1 ಎಸಿ ತ್ರಿ ಟೈರ್, 8 ಸ್ಲೀಪರ್ ಕ್ಲಾಸ್, 10 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ. ಈ ರೈಲು ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಕಟ್ನಿ, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್ ಚಿಯೋಕಿ…

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ…

Read More