Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಪ್ರಿಲಿಮ್ಸ್ ಪಾಸ್ ಮಾಡಿದಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮೆಯನ್ಸ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಅಧಿಸೂಚನೆ ಹೊರಡಿಸಲಾಗಿದೆ.  ತಮ್ಮ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೆ ಎ ಎಸ್ ಮೆಯನ್ಸ್ ಪರೀಕ್ಷೆಗೆ ತರಬೇತಿ ನೀಡಲಾಗುವುದು ಅಂತ ತಿಳಿಸಿದೆ. 2024-25ರ ಕೆ ಎ ಎಸ್ ಪ್ರಿಲಿಮ್ಸ್ ಉತ್ತೀರ್ಣರಾದಂತ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದು ಕೆ ಎ ಎಸ್ ಮೆಯನ್ಸ್ ಪರೀಕ್ಷೆ ತರಬೇತಿಯಾಗಿದೆ. ತರಬೇತಿ ಬಯಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.5 ಲಕ್ಷ ಮೀರಿರಬಾರದು ಅಂತ ಹೇಳಿದೆ. ಕೆಎಎಸ್ ಮೆಯನ್ಸ್ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸ ಬಯಸುವಂತ ಎಸ್ಸಿ, ಎಸ್ಟಿ ಅಭ್ಯರ್ಥಿಗಳು ಕೆಎಎಸ್ ಪ್ರಿಲಿಮ್ಸ್ ಪ್ರವೇಶ ಪತ್ರ, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದೊಂದಿಗೆ…

Read More

ಬೆಂಗಳೂರು: ನಗರದಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲೇ ಸ್ಥಳ ಘೋಷಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಗೆ ಹಲವು ಪ್ರದೇಶಗಳ ಪ್ರಸ್ತಾವ ಬಂದಿತ್ತು. ಅವುಗಳನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ಮುಂದಿನ ದಶಕಗಳಲ್ಲಿ ಆಗುವ ಬೆಳವಣಿಗೆ, ಸಂಚಾರ ಮತ್ತು ವಿಮಾನ ಹಾರಾಟ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಸ್ಥಳ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1889587305201148192 https://kannadanewsnow.com/kannada/20-lakh-jobs-to-be-created-in-karnataka-siddaramaiah/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/

Read More

ಬೆಂಗಳೂರು: 2025-30ನೇ ಸಾಲಿನ ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಲಾಗಿದೆ. ಈ ನೀತಿಯಂತೆ ಕರ್ನಾಟಕದಲ್ಲಿ ಬರೋಬ್ಬರಿ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಆ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2025-30 ನೇ ಸಾಲಿನ ನೂತನ ಕೈಗಾರಿಕಾ ನೀತಿಯಡಿ ರಾಜ್ಯಾದ್ಯಂತ ₹7.5 ಲಕ್ಷ ಕೋಟಿ ಹೂಡಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆಗೂ ಕೈಗಾರಿಕೆಗಳ ಸ್ಥಾಪನೆಗೆ ನೂತನ ನೀತಿ ಒತ್ತು ನೀಡಲಿದೆ. ಸುಸ್ಥಿರ ಅಭಿವೃದ್ಧಿಯ ಮಾದರಿಗಳನ್ನು ಅನುಸರಿಸಲಿದೆ. ಎಲ್ಲ ಕ್ಷೇತ್ರ ಮತ್ತು ವಲಯಗಳಲ್ಲೂ ಹೂಡಿಕೆಗೆ ಉತ್ತೇಜನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1889608258001969237 https://kannadanewsnow.com/kannada/disney-hotstar-back-online-audio-and-video-quality-issues-fixed/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/ https://kannadanewsnow.com/kannada/sslc-students-in-the-state-should-note-change-in-timings-of-preparatory-test/

Read More

ನವದೆಹಲಿ: ಡಿಸ್ನಿ + ಹಾಟ್ಸ್ಟಾರ್ ಬುಧವಾರ ಸಂಕ್ಷಿಪ್ತ ಸ್ಥಗಿತದ ನಂತರ ಆನ್ಲೈನ್ಗೆ ಮರಳಿದೆ. ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ಆಡಿಯೋ ಮತ್ತು ವೀಡಿಯೊ ಗುಣಮಟ್ಟದ ಸಮಸ್ಯೆಗಳನ್ನು ಸರಿಪಡಿಸಿದೆ. ಪ್ಲಾಟ್ಫಾರ್ಮ್ ಬುಧವಾರ ಮಧ್ಯಾಹ್ನ ಭಾರತದ ಜನರಿಗಾಗಿ ಕೆಲಸ ಮಾಡುವುದನ್ನು ನಿಲ್ಲಿಸಿತ್ತು ಮತ್ತು ಅವರಲ್ಲಿ ಹಲವರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ಮೊಬೈಲ್, ವೆಬ್ ಮತ್ತು ನಿಮ್ಮ ಸ್ಮಾರ್ಟ್ ಟಿವಿಯಲ್ಲಿ ಲಭ್ಯವಿದೆ. ಸೇವೆಯು ವೆಬ್ ಮತ್ತು ಅವುಗಳ ದೊಡ್ಡ ಪರದೆಗಳಲ್ಲಿ ಸಮಸ್ಯೆಗಳನ್ನು ಎದುರಿಸಿದೆ ಎಂದು ತೋರುತ್ತದೆ. ಹಾಟ್ಸ್ಟಾರ್ ಇನ್ನೂ ಸಮಸ್ಯೆಯನ್ನು ಒಪ್ಪಿಕೊಂಡಿಲ್ಲ ಅಥವಾ ಸ್ಥಗಿತಕ್ಕೆ ಕಾರಣವಾದ ವಿವರಗಳನ್ನು ಹಂಚಿಕೊಂಡಿಲ್ಲ. ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ನೇ ಏಕದಿನ ಪಂದ್ಯವನ್ನು ವೀಕ್ಷಿಸುವ ಜನರು ಹಿಂದಿ ಆಡಿಯೊದಲ್ಲಿ ಮಾತ್ರ ಆಟವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ ಮತ್ತು ನೀವು ಹೈಸ್ಪೀಡ್ ಇಂಟರ್ನೆಟ್ ನೆಟ್ವರ್ಕ್ನಲ್ಲಿ ವೀಕ್ಷಿಸುತ್ತಿದ್ದರೂ ವೀಡಿಯೊ ಗುಣಮಟ್ಟವು ಹೆಚ್ಚಾಗುತ್ತಿಲ್ಲವಾದ್ದರಿಂದ ಮೊಬೈಲ್ ಮತ್ತು ಟಿವಿ ಅಪ್ಲಿಕೇಶನ್ ಕೆಲವು ಸಮಸ್ಯೆಗಳಿಂದ ಕೂಡಿದೆ. ಜನರು ಈ ಸಂದೇಶವನ್ನು ನೋಡುತ್ತಿದ್ದರು, “ಏನೋ…

Read More

ಬೆಂಗಳೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಕಿರುಚಿಕೊಳ್ಳಬಾರದು ಅಂತ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿ, ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾರೆ. ಮನೆಯ ಅಕ್ಕಪಕ್ಕದವರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪತಿ ಸಿದ್ದಲಿಂಗಸ್ವಾಮಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಅರೆ ಪ್ರಜ್ಞಾನಾವಸ್ಥೆಯಲ್ಲಿದ್ದಂತ ಮಂಜುಳಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಟವರ್ ಲೊಕೇಶನ್ ಮೂಲಕ ಬಂಧಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/udayagiri-police-station-stone-pelting-case-ccb-arrests-8-accused/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/

Read More

ಮೈಸೂರು: ನಗರದಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ದುಷ್ ಕೃತ್ಯ ಮೆರೆದಿದ್ದರು. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಸಿಸಿಬಿ ಪೊಲೀಸರು, ಬರೋಬ್ಬರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರ ಸುಹೇಲ್ ಆಲಿಯಾಸ್ ಸೈಯದ್ ಸುಹೇಲ್, ರಹೀಲ್ ಪಾಷಾ, ಸತ್ಯನಗರದ ಏಜಾಜ್, ಮೈಸೂರಿನ ಗೌಸಿಯಾ ನಗರದ ನಿವಾಸಿ ಸಿಯದ್ ಸಾದಿಕ್, ರಾಜೀವ್ ನಗರದ ಸಾದಿಕ್ ಪಾಷಾ ಆಲಿಯಾಸ್ ಖಾಲಿ, ಅರ್ಬಾಜ್ ಷರೀಫ್, ಶೋಹೆಬ್ ಪಾಷಾ ಸೇರಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ಪ್ರಕರಣ ಸಂಬಂಧ ಇನ್ನೂ ಹಲವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ. https://kannadanewsnow.com/kannada/man-from-tumkur-dies-of-heart-attack-while-taking-holy-dip-at-kumbh-mela-in-prayagraj/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/

Read More

ತುಮಕೂರು: ಜಿಲ್ಲೆಯಿಂದ ಉತ್ತರ ಪ್ರದೇಶದ ಮಹಾ ಕುಂಭಮೇಳಕ್ಕೆ ತೆರಳಿ, ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಮೂಲದ ನಾಗರಾಜ್(57) ಎಂಬುವರೇ ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವಂತ ವ್ಯಕ್ತಿಯಾಗಿದ್ದಾರೆ. ನಾಗರಾಜ್ ಸ್ನೇಹಿತರ ಜೊತೆಗೆ ಪ್ರಯಾಗ್ ರಾಜ್ ನ ಕುಂಭಮೇಳಕ್ಕೆ ತೆರಳಇದ್ದರು. ನಿನ್ನೆಯ ಮಂಗಳವಾರದ ಸಾಯಂಕಾಲ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಸಂಧ್ಯಾ ವಂದನೆಯ ಬಳಿಕ, ಪುಣ್ಯ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ಸಾಗಿಸೋಕೂ ಮುನ್ನವೇ ಅವರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/crucial-state-cabinet-meeting-scheduled-for-february-20/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/

Read More

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ನಿನ್ನೆ ಮುಂದೂಡಿಕೆಯಾಗಿತ್ತು. ಈ ಬೆನ್ನಲ್ಲೇ ಫೆಬ್ರವರಿ 20, 2025ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 20-02-2025ರ ಗುರುವಾರದಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 4ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ. ದಿನಾಂಕ 20-02-2025ರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಫೆಬ್ರವರಿ.20ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ಸಚಿವ ಸಂಪುಟ ಸಭೆ ನೀಡಲಿದೆ. https://kannadanewsnow.com/kannada/1984-anti-sikh-riots-court-convicts-former-mp-sajjan-kumar/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/

Read More

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣದ ಬಗ್ಗೆ ತೀರ್ಪನ್ನು ಫೆಬ್ರವರಿ 18ರಂದು ಪ್ರಕಟಿಸಲಿದೆ. ಗಲಭೆಗೆ ಸಂಬಂಧಿಸಿದ ಮತ್ತೊಂದು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕುಮಾರ್, ನವೆಂಬರ್ 1, 1984 ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್ದೀಪ್ ಸಿಂಗ್ ಅವರನ್ನು ಕೊಲ್ಲಲು ಜನಸಮೂಹವನ್ನು ಮುನ್ನಡೆಸಿದರು ಮತ್ತು ಅದನ್ನು ಪ್ರಚೋದಿಸಿದರು ಎಂದು ಆರೋಪಿಸಲಾಗಿದೆ. ಆಪರೇಷನ್ ಬ್ಲೂಸ್ಟಾರ್ ನಂತರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಇಬ್ಬರು ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ನಂತರ ಗಲಭೆಗಳು ಭುಗಿಲೆದ್ದವು. ಕಳೆದ ಡಿಸೆಂಬರ್ ನಲ್ಲಿ ಪ್ರಕರಣದ ಅಂತಿಮ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು. ವಿಚಾರಣೆಯ ಸಮಯದಲ್ಲಿ, ಕುಮಾರ್ ನೇತೃತ್ವದ ಗುಂಪು ಶಸ್ತ್ರಾಸ್ತ್ರಗಳೊಂದಿಗೆ…

Read More