Author: kannadanewsnow09

ಇಸ್ರೇಲಿ ಗಡಿಯ ಸಮೀಪವಿರುವ ಈಜಿಪ್ಟ್ನ ತಾಬಾ ಎಂಬ ಪಟ್ಟಣದಲ್ಲಿ ಅನೇಕ ಪ್ರವಾಸಿಗರಿಗೆ ಚೂರಿ ಇರಿತವಾಗಿದೆ ಎಂದು ಈಜಿಪ್ಟ್ನ ಸರ್ಕಾರಿ ಸಂಬಂಧಿತ ಅಲ್-ಖೈದಾ ನ್ಯೂಸ್ ಟಿವಿ ಶುಕ್ರವಾರ ವರದಿ ಮಾಡಿದೆ. ಈಜಿಪ್ಟ್ ನ ತಾಬಾ ಎಂಬಲ್ಲಿ ಅನೇಕ ಪ್ರವಾಸಿಗರ ಮೇಲೆ ವ್ಯಕ್ತಿಯೊಬ್ಬ ಹಲವು ಪ್ರವಾಸಿಗರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/chalavadi-narayanasamy-in-which-quota-did-you-get-an-industrial-site/ https://kannadanewsnow.com/kannada/good-news-for-property-tax-payers-5-discount-extended-till-september-14/

Read More

ಬೆಂಗಳೂರು: ನಾರಾಯಣಸ್ವಾಮಿಯವರೇ, ನೀವೂ ಕೈಗಾರಿಕಾ ನಿವೇಶನವನ್ನು ಪಡೆದಿದ್ದೀರಿ ಅಲ್ಲವೇ? ಯಾವ ಕೋಟಾದಲ್ಲಿ ಪಡೆದಿದ್ದೀರಿ? ಪ್ರಭಾವ ಬಳಸಿ ಪಡೆದಿದ್ದಾ? ಬಕೆಟ್ ಹಿಡಿದು ಪಡೆದಿದ್ದಾ? ಚಡ್ಡಿ ಹೊತ್ತು ಪಡೆದಿದ್ದಾ? ನಾಡಿನ ಜನರಿಗೆ ಉತ್ತರಿಸುವಿರಾ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, ಚಲವಾದಿ ನಾರಾಯಣಸ್ವಾಮಿಯವರು ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಕೃಪೆಯಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು, ಅದೇ ಚಲವಾದಿ ನಾರಾಯಣಸ್ವಾಮಿಯವರನ್ನು ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಮುಂದೆ ಬಿಟ್ಟ ಬಿಜೆಪಿ ಆಟ ನೋಡುತ್ತಿದೆ ಎಂದಿದೆ. ಅಸ್ತಿತ್ವ ಕಟ್ಟಿಕೊಟ್ಟವರನ್ನೇ ಜರಿಯಲು ಮುಂದಾಗಿರುವ ನಾರಾಯಣಸ್ವಾಮಿಯವರ ಅವಕಾಶವಾದಿತನವೇ ಅವರ ರಾಜಕೀಯ ಅಂತ್ಯಕ್ಕೆ ಮುನ್ನುಡಿ ಬರೆಯಲಿದೆ. ನಾರಾಯಣಸ್ವಾಮಿಯವರೇ, ನೀವೂ ಕೈಗಾರಿಕಾ ನಿವೇಶನವನ್ನು ಪಡೆದಿದ್ದೀರಿ ಅಲ್ಲವೇ? ಯಾವ ಕೋಟಾದಲ್ಲಿ ಪಡೆದಿದ್ದೀರಿ? ಪ್ರಭಾವ ಬಳಸಿ ಪಡೆದಿದ್ದಾ? ಬಕೆಟ್ ಹಿಡಿದು ಪಡೆದಿದ್ದಾ? ಚಡ್ಡಿ ಹೊತ್ತು ಪಡೆದಿದ್ದಾ? ನಾಡಿನ ಜನರಿಗೆ ಉತ್ತರಿಸುವಿರಾ? ಎಂದು ಕೇಳಿದೆ. https://twitter.com/INCKarnataka/status/1829521446428901816 https://kannadanewsnow.com/kannada/state-chief-secretary-issues-show-cause-notice-to-dgp-prisons-for-royalty-against-actor-darshan/ https://kannadanewsnow.com/kannada/good-news-for-property-tax-payers-5-discount-extended-till-september-14/ https://kannadanewsnow.com/kannada/bank-holidays-here-is-the-complete-list-of-bank-holidays-for-the-month-of-september/

Read More

ಬೆಂಗಳೂರು: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದಂತ ಪೋಟೋ ವೈರಲ್ ಆಗುತ್ತಿದ್ದಂತೆ ಹಲವು ಅಧಿಕಾರಿ, ಸಿಬ್ಬಂದಿಗಳನ್ನು ಅಮಾತನಗೊಳಿಸಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಕಾರಾಗೃಹ ಡಿಜಿಪಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕೇಸಲ್ಲಿ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಲೆದಂಡವಾಗುವ ಸಾಧ್ಯತೆ ಇದೆ. ಕಾರಣ, ಘಟನೆ ಸಂಬಂಧ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗಳು ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ಜಾರಿಗೊಳಿಸಿರುವಂತ ಶೋಕಾಸ್ ನೋಟಿಸ್ ನಲ್ಲಿ ಕಾರಾಗೃಹದಲ್ಲಿ ನಡೆಯುತ್ತಿರುವಂತ ಈ ಅಕ್ರಮ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ. ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು. ವಿವರವಾದ ಉತ್ತರ ನೀಡುವಂತೆ ಡಿಜಿಪಿಗೆ ಶೋಕಾಸ್ ನೋಟಿಸ್ ನಲ್ಲಿ ತಿಳಿಸಲಾಗಿದೆ. ಜೈಲಿನಲ್ಲಿ ಅಕ್ರಮ ತಡೆಗಾಗಿ ಕೈಗೊಂಡ ಕ್ರಮಗಳೇನು.? ಜೈಲಿನಲ್ಲಿ ನಡೆಯುತ್ತಿರುವಂತ ಅಕ್ರಮಗಳು ನಿಮ್ಮ…

Read More

ನವದೆಹಲಿ; ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಎಐಸಿಸಿಯಿಂದ ವಿವಿಧ ರಾಜ್ಯಗಳಿಗೆ ನೂತನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶಿಸಲಾಗಿದೆ. ಕರ್ನಾಟಕದ ಹಲವರಿಗೆ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬರ್ ಎಐಸಿಸಿ ಕಾರ್ಯದರ್ಶಿಯಾಗಿ ಗಣೇಶ್ ಕುಮಾರ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡಾ.ಪಾಲಕ್ ವರ್ಮಾ ನೇಮಕ ಮಾಡಲಾಗಿದೆ. ಕರ್ನಾಟಕಕ್ಕೆ ಎಐಸಿಸಿ ಕಾರ್ಯದರ್ಶಿಯಾಗಿ ರೋಜಿ ಎಂ ಜಾನ್, ಮಯೂರ ಎಸ್ ಜಯಕುಮಾರ್, ಅಭಿಷೇಕ್ ದತ್ ಹಾಗೂ ಪಿ ಗೋಪಿ ಅವರನ್ನು ನೇಮಕ ಮಾಡಲಾಗಿದೆ. ಕೇರಳ ಮತ್ತು ಲಕ್ಷದ್ವೀಪಕ್ಕೆ ಪಿವಿ ಮೋಹನ್, ವಿಕೆ ಅರಿವಜಗನ್ ಹಾಗೂ ಮನಸೂರ್ ಆಲಿ ಖಾನ್ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಗೋವಾ, ದಾದರ್ ಮತ್ತು ನಾಗರ್ ಹಾವೇಲಿ, ದಾಮನ್ ಮತ್ತು ಡಿಯೂಗೆ ಕಾರ್ಯದರ್ಶಿಯನ್ನಾಗಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ನೇಮಿಸಿದೆ. ತಮಿಳುನಾಡು ಹಾಗೂ ಪಾಂಡಿಚೇರಿ ಕಾರ್ಯದರ್ಶಿಯನ್ನಾಗಿ ಸೂರಜ್ ಹೆಗಡೆ ಅವರನ್ನು ನೇಮಿಸಿ ಆದೇಶಿಸಲಾಗಿದೆ. https://kannadanewsnow.com/kannada/renaming-bengaluru-south-district-will-increase-job-creation-deputy-cm-dk-shivakumar-shivakumar/ https://kannadanewsnow.com/kannada/good-news-for-property-tax-payers-5-discount-extended-till-september-14/…

Read More

ಚನ್ನಪಟ್ಟಣ : “ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಿದ ಕಾರಣಕ್ಕೆ ಯುವ ಪೀಳಿಗೆಗೆ ಉದ್ಯೋಗ ಹಾಗು ಜೀವನ ಕಟ್ಟಿಕೊಳ್ಳಲು ಹೆಚ್ಚು ಅವಕಾಶಗಳು ಸೃಷ್ಟಿಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟರು. ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು “ಬೆಂಗಳೂರಿನ ಹೆಸರು ಈ ಜಿಲ್ಲೆಗೆ ಏಕೆ ಬೇಕು ಎಂದು ಒಂದಷ್ಟು ಜನ ಪ್ರಶ್ನೆ ಮಾಡುತ್ತಿದ್ದರು. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಆಗುವುದು ಬೇಕಿಲ್ಲವೆ. ಉದ್ಯೋಗ ಸೃಷ್ಟಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಗುರಿ” ಎಂದು ಹೇಳಿದರು. “ನಾವು ಉದ್ಯೋಗ ಮೇಳಕ್ಕೆ ಬಂದಿರುವ ಎಲ್ಲರಿಗೂ ಕೆಲಸ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ಆದರೆ ಯಾವ ಮಾರ್ಗದಲ್ಲಿ ನಡೆದರೆ ಯಶಸ್ಸು ಸಿಗುತ್ತದೆ ಎಂದು ದಾರಿ ಮಾಡಿಕೊಡುತ್ತೇವೆ” ಎಂದು ಹೇಳಿದರು. “ನಾನು ಅನೇಕ ಹೆಣ್ಣು ಮಕ್ಕಳನ್ನು ಮಾತನಾಡಿಸಿಕೊಂಡು ಬಂದೆ. ಅನೇಕರಲ್ಲಿ ದುಡಿಯಬೇಕು ಎನ್ನುವ ಹಸಿವು ಹೆಚ್ಚಿದೆ. ನನಗೆ ಅನೇಕರ ಪರಿಸ್ಥಿತಿ ನೋಡಿ ಸಂಕಟ ಉಂಟಾಯಿತು. ನಮ್ಮ ಊರಿನ ಪಕ್ಕದ ಲಂಬಾಣಿ…

Read More

ಚನ್ನಪಟ್ಟಣ : “ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ. ನಾವು ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆ ಬಳಿಕ ಗ್ರಾಮಸ್ಥರನ್ನು ಉದ್ದೇಶಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ನಾವು ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂಬ ಕಾರಣಕ್ಕೆ ರಾಜ್ಯದ ಜನ ನಮಗೆ 135 ಸೀಟು ಕೊಟ್ಟು ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ನಿಮ್ಮ ಊರಿನಲ್ಲಿ ಸಣ್ಣಪುಟ್ಟ ಶುಭ ಕಾರ್ಯಕ್ರಮ ನಡೆಸಲು ಸಮುದಾಯಭವನ ಬೇಕು ಎಂದು ಕೇಳಿಕೊಂಡರು. ಅದಕ್ಕಾಗಿ ನಾವು ಬಂದು ಇಂದು ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. ಈ ಭಾಗದ ನಾಲ್ವರು ವಿಧಾನ ಪರಿಷತ್ ಸದಸ್ಯರು ತಲಾ 15 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ. ಉಳಿದ ಅನುದಾನದ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದರು. “ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮಸ್ಯೆ ಕುರಿತಂತೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. ಸಾರ್ವಜನಿಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಪಡೆಯಬಹುದು ಎಂಬುದಾಗಿ ಸುದ್ದಿ ಹರಿದಾಡುತ್ತಿತ್ತು. ಆದರೇ ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಗೆ ಮಾತ್ರ ಸೀಮಿತ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಸಹಾಯವಾಣಿ ಸಂಖ್ಯೆ 9480683972 ಯನ್ನು ಆರಂಭಿಸಲಾಗಿರುತ್ತದೆ ಎಂದಿದೆ. ಮುಂದುವರಿದು, ಸದರಿ ದೂರವಾಣಿ ಸಂಖ್ಯೆಗೆ ಬಿಬಿಎಂಪಿಯ 28 ವಿಧಾನಸಭಾ ಕ್ಷೇತ್ರಗನ್ನು ಹೊರತುಪಡಿಸಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಕರೆಗಳು ಬರುತ್ತಿವೆ. ಬಿಬಿಎಂಪಿಯಿಂದ ಬಿಡುಗಡೆಗೊಳಿಸಿರುವ ಸಹಾಯವಾಣಿ ಸಂಖ್ಯೆಯು ಪಾಲಿಕೆ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮಾತ್ರ ಗ್ಯಾರಂಟಿ ಯೋಜನೆಗಳ ಬಗ್ಗೆ ಕಛೇರಿ…

Read More

ಬೆಂಗಳೂರು: ಪಿಓಪಿ ಗಣೇಶ ತಯಾರಿಕೆ, ಮಾರಾಟಕ್ಕೆ ನಿಷೇಧವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರ ವಲಯದ ಯಶವಂತಪುರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.198 ಹೆಮ್ಮಿಗೆಪುರ ವ್ಯಾಪ್ತಿಯಲ್ಲಿ ಪಿ.ಓ.ಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ಮೂರ್ತಿಗಳನ್ನು ಸಂಗ್ರಹಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ರವರು ದೂರನ್ನು ಸಲ್ಲಿಸಲಾಗಿತ್ತು ಎಂದಿದೆ. ಸದರಿ ದೂರಿನ ಹಿನ್ನೆಲೆಯಲ್ಲಿ ವಲಯಆಯುಕ್ತರು ಹಾಗೂ ವಲಯ ಜಂಟಿಆಯುಕ್ತರು ರಾಜರಾಜೇಶ್ವರಿನಗರ ವಲಯ ರವರ ನಿರ್ದೇಶನದಂತೆ ದಿನಾಂಕ:29.08.2024 ರಂದು ಯಶವಂತಪುರ ವಿಭಾಗದ ವಾರ್ಡ್ ನಂ.198 ಹೆಮ್ಮಿಗೆಪುರ ವ್ಯಾಪ್ತಿಯ ಚೆಟ್ಟುಪಾಳ್ಯ ಮತ್ತು ಕೋಡಿಪಾಳ್ಯದ ವ್ಯಾಪ್ತಿಯಲ್ಲಿ ಕರ್ನಾಟಕ ಸರ್ಕಾರದಿಂದ ನಿಷೇಧಿಸಲಾದ ಪಿ.ಓ.ಪಿ ಹಾಗೂ ರಾಸಾಯನಿಕಗಳ ವಸ್ತುಗಳನ್ನು ಬಳಸಿ, ತಯಾರಿಸುತ್ತಿರುವ ವಿಗ್ರಹಗಳ ಮಾರಾಟ ಮಾಡುತ್ತಿರುವ ಗೋದಾಮಿಗೆ ಧೀಡಿ‌ ತಪಾಸಣೆ ಕೈಗೊಂಡು ಮೇಲಾಧಿಕಾರಿಗಳ ಆದೇಶದಂತೆ ಗೋದಾಮಿಗೆ ಬೀಗ…

Read More

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ವಿರುದ್ಧದ ಸಿಎ ಸೈಟ್ ಹಗರಣದ ಬಗ್ಗೆ ಬಿಜೆಪಿ ನಾಯಕರಿಗೆ ದಮ್ಮು ತಾಕತ್ತಿದ್ದರೆ ನಿಯಮ ಉಲ್ಲಂಘಿಸಿದ್ದಕ್ಕೆ, ಅಧಿಕಾರ ಬಳಕೆ ಮಾಡಿಕೊಂಡಿದ್ದಕ್ಕೆ, ಪ್ರಭಾವ ಬೀರಿದ್ದಕ್ಕೆ ದಾಖಲೆ ಮುಂದಿಟ್ಟು ಮಾತಾಡಲಿ ಎಂಬುದಾಗಿ ಕಾಂಗ್ರೆಸ್ ಸವಾಲು ಹಾಕಿದೆ. ಈ ಬಗ್ಗೆ ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ನಿಯಮವನ್ನು ಉಲ್ಲಂಘಿಸಿ 39 ಎಕರೆ ಭೂಮಿಯನ್ನು ನುಂಗಿತ್ತು ಯಡಿಯೂರಪ್ಪನವರ ಕುಟುಂಬದ ಪ್ರೇರಣಾ ಟ್ರಸ್ಟ್. ಯಡಿಯೂರಪ್ಪನವರ ಪ್ರಭಾವ ಬಳಸಿ, ಮುಖ್ಯಮಂತ್ರಿ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಈ ಅಕ್ರಮ ನಡೆಸಿದ್ದಲ್ಲವೇ ಬಿಜೆಪಿ? ಎಂದು ಪ್ರಶ್ನಿಸಿದೆ. ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸಿದ್ದಾರ್ಥ ವಿಹಾರ ಟ್ರಸ್ಟ್ ಇಂತಹ ಅಕ್ರಮ ಮಾರ್ಗದಲ್ಲಿ ನಿವೇಶನ ಪಡೆದಿಲ್ಲ ಎಂಬುದನ್ನು ಬಿಜೆಪಿ ಗಮನಿಸಲಿ. ನಿಯಮಾನುಸಾರ, ಸರ್ಕಾರ ನಿಗದಿ ಪಡಿಸಿದ ಹಣ ಪಾವತಿಸಿಯೇ ನಿವೇಶನ ಪಡೆಯಲಾಗಿದೆ ಎಂದು ಹೇಳಿದೆ. ಬಿಜೆಪಿ ನಾಯಕರಿಗೆ ದಮ್ಮು ತಾಕತ್ತಿದ್ದರೆ ನಿಯಮ ಉಲ್ಲಂಘಿಸಿದ್ದಕ್ಕೆ, ಅಧಿಕಾರ ಬಳಕೆ ಮಾಡಿಕೊಂಡಿದ್ದಕ್ಕೆ, ಪ್ರಭಾವ ಬೀರಿದ್ದಕ್ಕೆ ದಾಖಲೆ ಮುಂದಿಟ್ಟು ಮಾತಾಡಲಿ ಎಂದು ಸವಾಲ್…

Read More

ಶಿವಮೊಗ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲ್ಲೂಕು ಶಾಖೆಗೆ ನೂತನ ಪತ್ರಿಕಾ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಣಲೆಕೊಪ್ಪದ ಸ್ತ್ರೀಶಕ್ತಿ ಭವನದ ಮೇಲ್ಭಾಗದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಅಡಿಗಲ್ಲಿಗೆ ಅಕ್ಷತೆ ಹಾಕುವ ಮೂಲಕ ಶಂಕು ಸ್ಥಾಪನೆ ನೆರವೇರಿಸಿದರು. ಈ ಬಳಿಕ ಮಾತನಾಡಿದಂತ ಅವರು, ನಾನು ಶಾಸಕರ ಅನುದಾನದಲ್ಲೇ ಪತ್ರಿಕಾ ಭವನವನ್ನು ನಿರ್ಮಾಣ ಮಾಡಲು ಮುಂದಾಗಿದ್ದೆ. ಆದರೇ ನಗರಸಭೆಯಿಂದ ತಾವೇ ನಿರ್ಮಿಸಿಕೊಡುವುದಾಗಿ ಆಯುಕ್ತ ಹೆಚ್.ಕೆ ನಾಗಪ್ಪ ಅವರು ಹೇಳಿದರು. ಹೀಗಾಗಿ ಇಂದು ಪತ್ರಿಕಾ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ಕಾರ್ಯ ನಡೆದಿದೆ. ನಗರಸಭೆಯಿಂದ ಪತ್ರಿಕಾ ಭವನ ನಿರ್ಮಾಣಕ್ಕಾಗಿ 10 ಲಕ್ಷ ಅನುದಾನವನ್ನು ಒದಗಿಸಿಕೊಡಲಾಗುತ್ತಿದೆ ಎಂದರು. ಎಷ್ಟು ಸಾಧ್ಯವೋ ಅಷ್ಟು ಬೇಗ ಪತ್ರಿಕಾ ಭವನ ನಿರ್ಮಾಣ ಕಾಮಗಾರಿಯನ್ನು ಮುಗಿಸುವಂತೆ ನಗರಸಭೆ ಆಯುಕ್ತರಿಗೆ ಇದೇ ಸಂದರ್ಭದಲ್ಲಿ…

Read More