Author: kannadanewsnow09

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದಂತ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಜಮೀರ್ ಅಹ್ಮದ್ ಗೆ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೇ ಕೆಲ ನೀತಿ ಜಾರಿಗೊಳಿಸುವ ಭರವಸೆ ಮತದಾರರಿಗೆ ಆಮಿಷವೊಡ್ಡಿದಂತೆ ಆಗುವುದಿಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಚಾಮರಾಜಪೇಟೆಯ ಮತದಾರ ಶಶಾಂಕ್ ಜೆ ಶ್ರೀಧರ್ ಎಂಬುವರು ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರು ವಿಚಾರಣೆ ನಡೆಸಿದರು. ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದಂತ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ ಆಮಿಷವೊಡ್ಡಿದಂತೆ ಆಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. https://kannadanewsnow.com/kannada/phase-2-witnesses-70-21-voting-in-kerala-wayanad-records-72-70-turnout/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/

Read More

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಯ ಅಡಿಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಮತದಾನ ಮುಕ್ತಾಯವಾಗಿದ್ದು, ಶೇಕಡಾ 72.70 ರಷ್ಟು ಮತದಾನವಾಗಿದೆ. ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವು ಬಿಜೆಪಿ ಮಿತ್ರಪಕ್ಷಗಳ ನಡುವೆ ಕಠಿಣ ಸ್ಪರ್ಧೆಗೆ ಸಾಕ್ಷಿಯಾಗಿದೆ. ಭಾರತ ಬಣದ ಭಾಗವಾಗಿದ್ದರೂ, ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಚುನಾವಣೆಯಲ್ಲಿ ಪ್ರತ್ಯೇಕವಾಗಿ ಭಾಗವಹಿಸಿದ್ದವು. ವಯನಾಡ್ನಲ್ಲಿ ಗಾಂಧಿ ಕುಟುಂಬದ ವಂಶಸ್ಥರಿಗೆ ಕಠಿಣ ಸ್ಪರ್ಧೆ ನೀಡುವ ಪ್ರಯತ್ನದಲ್ಲಿ ಸಿಪಿಐ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ಕೆ ಸುರೇಂದ್ರನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಎಲ್ಲಾ 20 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮತದಾನ ಮುಕ್ತಾಯಗೊಂಡ ಕೇರಳದಲ್ಲಿ, ಕೊನೆಯ ವರದಿಯವರೆಗೆ ಶೇಕಡಾ 70.21 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ (ಇಸಿ) ಹಂಚಿಕೊಂಡ ಅಂಕಿ ಅಂಶಗಳು…

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ನಂತ್ರ, ಬಿಸಿಲಿನ ಬೇಗೆ ಹೆಚ್ಚಾಗಿದೆ. ಇದರ ಪರಿಣಾಮ ಬಿಸಿಲಿನಿಂದ ಉಂಟಾಗುವಂತ ಕಾಯಿಲೆಗಳು ಉಲ್ಬಣಗೊಂಡಿದ್ದಾವೆ. ಅದರಲ್ಲೂ ಅತಿಸಾರ ತಾಂಡವವಾಡುತ್ತಿದ್ದು, 21 ದಿನಗಳಲ್ಲಿ 7 ಸಾವಿರ ಮಂದಿಗೆ ಅತಿಸಾರ ಕಾಣಿಸಿಕೊಂಡಿರೋದಾಗಿ ತಿಳಿದು ಬಂದಿದೆ. ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಉಷ್ಣಾಂಶ, ಬಿಸಿಗಾಳಿಯಿಂದಾಗಿ ಜನರು ನಿರ್ಜಲೀಕರಣದ ಜೊತೆಗೆ ಅತಿಸಾರ, ಹೊಟ್ಟೆ ನೋವು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆಯಂತೆ. ಇದೇ ಕಾರಣಕ್ಕೆ 21 ದಿನಗಳಲ್ಲಿ Acute Diarrhoeal Diseases ಸಂಬಂಧಿಸಿದ 7,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಇನ್ನೂ ಬಿಸಿಲಾಘಾತ ಒಂದೆಡೆಯಾದರೇ, ನೀರಿಗಾಗಿ ಉಂಟಾದಂತ ಆಹಾಕಾರದಿಂದ ಅಲ್ಲಲ್ಲಿ ಅಸುರಕ್ಷಿತ ನೀರು ಮತ್ತು ಆಹಾರ ಸೇವಿಸಿದ ಪರಿಣಾಮ ಮಕ್ಕಳು ಸೇರಿ ಎಲ್ಲ ವಯೋಮಾನದವರಲ್ಲೂ ತೀವ್ರ ಅತಿಸಾರ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ಏಪ್ರಿಲ್.1ರಿಂದ 21ರವರೆಗೆ 7,324 ತೀವ್ರತರ ಅತಿಸಾರ ಪ್ರಕರಣಗಳು ದೃಞಪಟ್ಟಿವೆ. ಬೇಸಿಗೆಯಲ್ಲಿ ಬಾಯಾರಿಕೆ ಸಾಮಾನ್ಯ. ಮನೆಯಿಂದ ಹೊರಹೋಗುವವರು ದಣಿವಾರಿಸಿಕೊಳ್ಳಲು ಸಿಕ್ಕ ಸಿಕ್ಕಲ್ಲಿ ನೀರು,…

Read More

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಯಲ್ಲಿ ಶೇ.100ರಷ್ಟು ಮತದಾನ ಆಗಿದ್ದು, ಅಧಿಕಾರಿಗಳು ಗ್ರಾಮಸ್ಥರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಹೌದು. ನಿನ್ನೆ ನಡೆದಂತ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮೊದಲ ಬಾರಿಗೆ ನಕ್ಸಲ್ ಪೀಡಿತ ಬಾಂಜಾರುಮಲೆಯಲ್ಲಿ ಶೇ.100 ಮತದಾನವಾಗಿ, ದಾಖಲೆ ನಿರ್ಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಾಂಜಾರುಮಲೆಯ ಮತಗಟ್ಟೆ ಸಂಖ್ಯೆ 86ರ ಸಮುದಾಯ ಭವನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಲ್ಲಿ 51 ಮಹಿಳೆಯರು, 60 ಪುರುಷರು ಸೇರಿ ಒಟ್ಟು 111 ಮತದಾರರಿದ್ದಾರೆ. 2019ರಲ್ಲಿ ಇಲ್ಲಿ ಶೇ.99ರಷ್ಟು ಮತದಾನವಾಗಿತ್ತು. ಈ ಬಾರಿ ಜಿಲ್ಲಾ ಸ್ವೀಪ್ ಸಮಿತಿ ಮಾರ್ಗದರ್ಶನದಂತೆ ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿ ಅಧ್ಯಕ್ಷ ವೈಜಣ್ಣ ಹಾಗೂ ತಂಡ ಶೇ.100ರಷಅಟು ಮತದಾನ ಮಾಡುವಂತೆ ಊರ ಜನರಲ್ಲಿ ಜಾಗೃತಿ ಮೂಡಿಸಿತ್ತು. ಈ ಪರಿಣಾಮವಾಗಿ ನೆಟ್ವರ್ಕ್, ರಸ್ತೆ, ಮೂಲ ಸೌಕರ್ಯವಿಲ್ಲದ ಪುಟ್ಟ ಗ್ರಾಮ ಬಂಜಾರುಮಲೆಯಲ್ಲಿ ಶೇ.100ರಷ್ಟು ಮತದಾನ ನಡೆಯುವ ಮೂಲಕ, ಜಿಲ್ಲೆಗೆ ಮಾದರಿ ನಡೆಯನ್ನು ತೋರಿದಂತೆ ಆಗಿದೆ. https://kannadanewsnow.com/kannada/69-voter-turnout-recorded-in-14-lok-sabha-constituencies-in-the-first-phase/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/

Read More

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ನಡೆದಂತ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಶೇ.69ರಷ್ಟು ಮತದಾನ ನಡೆದಿದೆ. ಅಲ್ಲದೇ ಬಹುತೇಕ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆದಿದೆ. ಚಾಮರಾಜನಗರ ತಾಲೂಕಿನ ಮಹದೇಶ್ವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯಲ್ಲಿ ಮತಯಂತ್ರಕ್ಕೆ ಬೆಂಕಿ ಹಚ್ಚಿ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದಂತೆ ಘಟನೆ ನಡೆದಿದೆ. ಅಲ್ಲದೇ ಬೆಂಗಳೂರಿನ ಮಂಜುನಾಥ ನಗರ ಕಾಂಗ್ರೆಸ್ ಕಾರ್ಯಕರ್ತರಿಂದ ಚೊಂಬು ಖಾಲಿ ಸಿಲಿಂಡರ್ ಪ್ರದರ್ಶನ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್ ನಲ್ಲಿ ತಾಂತ್ರಿಕ ದೋಷ ಸೇರಿದಂತೆ ಸಣ್ಣಪುಟ್ಟ ಘಟನೆ ಹೊರತುಪಡಿಸಿ, ರಾಜ್ಯಾಧ್ಯಂತ ಶಾಂತಿಯುತವಾಗಿ ಮತದಾನ ನಡೆದಿದೆ. ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಶೇ.69.23ರಷ್ಟು ಮತದಾನವಾಗಿದೆ. ಮತದಾನಕ್ಕೆ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 30,602 ಮತಗಟ್ಟೆ ಸ್ಥಾಪಿಸಲಾಗಿತ್ತು. https://kannadanewsnow.com/kannada/omaha-airport-shut-down-after-tornado-touchdown-in-nebraska-city-flights-delayed/

Read More

ಒಮಾಹಾ: ಇಲ್ಲಿ ಶುಕ್ರವಾರ ಭಾರಿ ಸುಂಟರಗಾಳಿ ನೆಬ್ರಾಸ್ಕಾ ನಗರದ ವಿಮಾನ ನಿಲ್ದಾಣವಾದ ಎಪ್ಪ್ಲಿ ವಾಯುನೆಲೆಗೆ ಹಾನಿಯನ್ನುಂಟು ಮಾಡಿದೆ. ಚಂಡಮಾರುತದ ಚಟುವಟಿಕೆಯಿಂದಾಗಿ ಪ್ರಸ್ತುತ ಮುಚ್ಚಲಾಗಿದೆ ಎಂದು ವಿಮಾನ ನಿಲ್ದಾಣವು ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ತಿಳಿಸಿದೆ. ಸ್ಥಳೀಯರು ವಿಮಾನಯಾನ ಸಂಸ್ಥೆಗಳಲ್ಲಿ ವಿಳಂಬವನ್ನು ನಿರೀಕ್ಷಿಸಬಹುದು. “ಹಾನಿಯ ಮೌಲ್ಯಮಾಪನಕ್ಕಾಗಿ ಎಪ್ಪ್ಲಿ ವಾಯುನೆಲೆ (ಒಎಂಎ) ಮುಚ್ಚಲ್ಪಟ್ಟಿದೆ. ಒಎಂಎ ಟರ್ಮಿನಲ್ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ಪ್ರಯಾಣಿಕರು ಆಶ್ರಯದಿಂದ ಹೊರಗುಳಿದಿದ್ದಾರೆ. ಯಾವುದೇ ವಿಮಾನ ವಿಳಂಬಕ್ಕಾಗಿ ದಯವಿಟ್ಟು ನಿಮ್ಮ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಿ” ಎಂದು ವಿಮಾನ ನಿಲ್ದಾಣ ತಿಳಿಸಿದೆ. ಒಮಾಹಾದಲ್ಲಿ, ಬಹುಶಃ ಎಪ್ಪ್ಲಿ ವಾಯುನೆಲೆಯ ಮೇಲೆ ಅನೇಕ ತಿರುವುಗಳು ಕಂಡುಬಂದ ನಂತರ ಈ ಪ್ರಕಟಣೆ ಬಂದಿದೆ. “ಒಎಂಎ ಟರ್ಮಿನಲ್ನಲ್ಲಿರುವ ಪ್ರಯಾಣಿಕರನ್ನು ಚಂಡಮಾರುತ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ” ಎಂದು ವಿಮಾನ ನಿಲ್ದಾಣ ಈ ಹಿಂದೆ ತಿಳಿಸಿತ್ತು. ಸ್ಥಳೀಯರು ಮತ್ತು ಚಂಡಮಾರುತ ಬೆನ್ನಟ್ಟುವವರು ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಸುಂಟರಗಾಳಿಯ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಮತ್ತು ನಿವಾಸಿಗಳಿಗೆ…

Read More

ಬೆಂಗಳೂರು: ರಾಜ್ಯದ ಜನರು ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದಾರೆ. ಅಬ್ಬಾ ಮಳೆ ಬಂದ್ರೆ ಸಾಕು, ಧರಣಿ ತಂಪಾಗಿ, ತಣ್ಣಗಾದ್ರೆ ಸಾಕು ಅಂತ ಕಾಯುತ್ತಿದ್ದಾರೆ. ಈ ನಿರೀಕ್ಷೆಯಲ್ಲಿರುವಂತ ಜನರಿಗೆ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ 11ಕ್ಕೂ ಹೆಚ್ಚು ಚಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯದ ಬೀದರ್, ಕೊಪ್ಪಳ, ಯಾದಗಿರಿ, ಬಳ್ಳಾರಿ, ಗದಗ, ಬಾಗಲಕೋಟೆ, ಕಲಬುರ್ಗಿ, ದಾವಣಗೆರೆ, ಮಂಡ್ಯ, ಕೊಡಗು, ತುಮಕೂರು, ಹಾಸನ, ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾದ್ರೇ, ಇನ್ನುಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. https://kannadanewsnow.com/kannada/here-is-the-constituency-wise-polling-list-of-14-lok-sabha-constituencies-in-karnataka/ https://kannadanewsnow.com/kannada/the-first-phase-of-polling-for-14-lok-sabha-constituencies-in-the-state-ends/

Read More

ಬೆಂಗಳೂರು: ಇಂದು ಕರ್ನಾಟಕದ ಲೋಕಸಭಾ ಚುನಾವಣೆಯ 14 ಕ್ಷೇತ್ರಗಳ ಮೊದಲ ಹಂತದ ಮತದಾನ ಸಂಜೆ 6 ಗಂಟೆಗೆ ಮುತ್ತಾಯವಾಗಿದೆ. ಹಾಗಾದ್ರೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಕ್ಷೇತವಾರು ವಿವರ ಮುಂದೆ ಓದಿ. ಕೇಂದ್ರ ಚುನಾವಣಾ ಆಯೋಗದ ಮಾಹಿತಿಯಂತೆ ಸಂಜೆ 7.30ರವರೆಗಿನ ಮತ ಲೆಕ್ಕಾಚಾರದಲ್ಲಿ ರಾಜ್ಯದ 14 ಕ್ಷೇತ್ರದಲ್ಲಿ ಶೇಕಡಾ 65ರಷ್ಟು ಮತದಾನವಾಗಿದೆ. ಇದರಲ್ಲಿ ಅತಿ ಕಡಿಮೆ ಬೆಂಗಳೂರು ಸೆಂಟ್ರಲ್‌ನಲ್ಲಿ 49 ಪರ್ಸೆಂಟ್ ವೋಟಿಂಗ್ ಆಗಿದೆ. ಬೆಂಗಳೂರು ಉತ್ತರದಲ್ಲಿ 51 ಪರ್ಸೆಂಟ್, ಬೆಂಗಳೂರು ಗ್ರಾಮಾಂತರದಲ್ಲಿ ಶೇಕಡಾ 61ರಷ್ಟು ಮತದಾನವಾಗಿದೆ. ಇನ್ನೂ ಬೆಂಗಳೂರು ದಕ್ಷಿಣದಲ್ಲಿ 49ರಷ್ಟು ವೋಟಿಂಗ್ ಆಗಿದೆ. ಚಾಮರಾಜನಗರದಲ್ಲಿ 69, ಚಿಕ್ಕಬಳ್ಳಾಪುರದಲ್ಲಿ 71, ಚಿತ್ರದುರ್ಗದಲ್ಲಿ 67, ದಕ್ಷಿಣ ಕನ್ನಡದಲ್ಲಿ 72, ಹಾಸನದಲ್ಲಿ ಶೇ.72ರಷ್ಟು ಮತದಾನವಾಗಿದೆ. ಇನ್ನೂ ಕೋಲಾರದಲ್ಲಿ 73ರಷ್ಟು ಮತದಾನವಾಗಿದೆ. ಇನ್ನೂ ಮಂಡ್ಯದಲ್ಲಿ ಅತಿ ಹೆಚ್ಚು ಅಂದ್ರೆ, 74.87ರಷ್ಟು ವೋಟಿಂಗ್ ಆಗಿದೆ. ಮೈಸೂರಲ್ಲಿ 66, ತುಮಕೂರು ಮತ್ತು ಚಿಕ್ಕಮಗಳೂರಲ್ಲಿ 72ರಷ್ಟು ಮತದಾನವಾಗಿದೆ. https://kannadanewsnow.com/kannada/bjp-is-not-confident-of-winning-even-in-its-stronghold-dinesh-gundu-rao/ https://kannadanewsnow.com/kannada/breaking-cbse-board-exams-likely-to-be-held-twice-a-year-from-academic-year-2025-26-sources/

Read More

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಆರ್.ಟಿ ನಗರದ ಬೋಸ್ಟನ್ ಸ್ಕೂಲ್ ನಲ್ಲಿ ಇಂದು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ತನ್ನ ಭದ್ರಕೋಟೆಯಲ್ಲೂ ನಿಶ್ಚಿತವಾಗಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನ ಕಳೆದುಕೊಂಡಿದೆ. ಕರಾವಳಿ‌ ಭಾಗದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡಿದ್ದಾರೆ. ದಕ್ಷಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಆದರೆ ಮತಗಟ್ಟೆಗಳಿಂದ ಬರುತ್ತಿರುವ ಮಾಹಿತಿ ನೋಡಿದರೆ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿದೆ. ನಮ್ಮ ಅಭ್ಯರ್ಥಿ ಗೆಲ್ಲುವ ಸಾಧ್ಯತೆಗಳನ್ನ ತಳ್ಳಿಹಾಕುವಂತಿಲ್ಲ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಚುನಾವಣೆ ಸಮಯದಲ್ಲಿ ಇನ್ನಷ್ಟು ಹೆಚ್ಚಾಗಿರುವುದನ್ನ ಗಮನಿಸಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಹಾಗೂ ಕೇಂದ್ರ ಕ್ಷೇತ್ರಗಳಲ್ಲಿ ನಮ್ಮ…

Read More

ವಿಜಯಪುರ: ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ. ಇದರಲ್ಲಿ ನಂಬಿಕೆ ಇಟ್ಟು ಅವಕಾಶ ವಂಚಿತರಿಗೆ ಅವಕಾಶ ಕೊಡಲಾಗುತ್ತಿದೆ. ಗರೀಬಿ ಹಠಾವೋ, ಭೂ ಸುಧರಣಾ ಕಾಯ್ದೆ, ಜೀತ ಪದ್ಧತಿ ರದ್ದು ಕಾಯ್ದೆ, ಮಲ ಹೊರುವ ಪದ್ಧತಿ ರದ್ದತಿ ಜಾರಿಗೆ ಬಂದಿದ್ದು ಕಾಂಗ್ರೆಸ್ ಕಾಲದಲ್ಲಿ. ವಾಜಪೇಯಿ ಅವರು ಇಂಡಿಯಾ ಶೈನಿಂಗ್ ಎಂದು 2004 ರ ಸೋತರು. 2047 ಕ್ಕೇ ವಿಕಸಿತ ಭಾರತ್ ಎಂದು ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಸೋಲುತ್ತಾರೆ . ಅದಕ್ಕಾಗಿಯೇ 400 ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಸಂವಿಧಾನ ಬದಲಾಯಿಸಲು 400…

Read More