Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಬಳಸಗೋಡಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದು ಪ್ರತಿಭಟನೆಗೂ ಕಾರಣವಾಗಿತ್ತು. ಇದರಿಂದ ಸಿಟ್ಟಗೊಂಡ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಪುಲ್ ಕ್ಲಾಸ್ ತೆಗೆದುಕೊಂಡರು. ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಸಭೆ ನಡೆಸಿದಂತ ಅವರು, ನನ್ನ ಗಮನಕ್ಕೆ ಬಾರದೇ ಜನರಿಗೆ ನೋಟಿಸ್ ಕೊಟ್ಟಿದ್ದು ಏಕೆ ಎಂಬುದಾಗಿ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಜನರಿಗೆ ಒತ್ತುವರಿ ಸಂಬಂಧ ನನ್ನ ಗಮನಕ್ಕೆ ಬಾರದೇ ನೋಟಿಸ್ ನೀಡದಂತೆ ಖಡಕ್ ಸೂಚನೆ ನೀಡಿದರು. ಬಳಸಗೋಡಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿ ನಿರ್ಮಿಸಲು ಉದ್ದೇಶಿಸಲಾಗಿದೆ. ನಮಗೆ 100 ಎಕರೆ ಬೇಕಿದೆ. ಆದರೇ ಅಲ್ಲಿ 80 ಎಕರೆ ಇದೆ ಎಂಬುದಾಗಿ ಗಮನಕ್ಕೆ ಬಂದಿದೆ. ಯಾವುದೇ ಒತ್ತುವರಿಯಾಗದಂತೆ ಇಲಾಖೆಯವರು ಗಮನ ಹರಿಸಬೇಕು ಎಂದು ಸೂಚಿಸಿದರು. ಬೆಳ್ಳಂದೂರು ಅರಣ್ಯ ಭೂಮಿ ವಿಚಾರವಾಗಿಯೂ ಚರ್ಚಿಸಿದಂತ ಅವರು, ಕಾನೂನು ಪ್ರಕಾರ ಗೇಣಿದಾರರಿಗೆ ಮೂರು ಎಕರೆ ಬಗರ್ ಹುಕುಂ ಅಡಿಯಲ್ಲಿ ಭೂಮಿ…
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿ ತತ್ವವನ್ನು ಜಾಗೃತಗೊಳಿಸಬೇಕಾಗುತ್ತದೆ; ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ. ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ? : ‘ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬರದಿಂದ ಸಾಗಿದೆ. ಹೀಗೆ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025 ರಿಂದ 07.10.2025ರ ವರೆಗೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಿದ್ದು, ಸಮೀಕ್ಷೆಯ ಕಾರ್ಯ ಪ್ರಗತಿಯಲ್ಲಿದೆ ಎಂದಿದೆ. ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಆರ್ಥಿಕ ಇಲಾಖೆಯಿಂದ ಪೂರಕ ಆಯವ್ಯಯ-2 ರಲ್ಲಿ ಅನುದಾನ ಒದಗಿಸುವ ಷರತ್ತುಗಳಿಗೆ ಒಳಪಟ್ಟು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ನಿಗಮಗಳ ಪಿ.ಡಿ. ಖಾತೆಗಳಲ್ಲಿ ಲಭ್ಯವಿರುವ ರೂ.348.36 ಕೋಟಿಗಳನ್ನು ಸಮೀಕ್ಷೆಯ ಉದ್ದೇಶಕ್ಕೆ ಬಳಸಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಲಾಗಿದೆ. ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್.ಎಂ ಅವರು ಅಧಿಕಾರ ವಹಿಸಿಕೊಂಡರು. ದಿನಾಂಕ 26-09-2025 ರಂದು ನಿಕೇತ್ ರಾಜ್. ಎಂ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಶ್ರೀ ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು.
ಬೆಂಗಳೂರು: ಇಂದು ಕರ್ನಾಟಕ ರಾಜ್ಯ ಕುರುಬರ ಜಾಗೃತಿ ಸಮಿತಿ ಪತ್ರಿಕಾಗೋಷ್ಠಿ ನಡೆಸಿತು. ಆ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಮುಂದಿದೆ.. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರು, ಮಾಜಿ ಸಚಿವ ಎಚ್.ಎಂ ರೇವಣ್ಣ ಅವರು ಮಾತನಾಡಿ ಕಳೆದ 1931 ರಿಂದ ದೇಶದಲ್ಲಿ ಜನಗಣತಿ ಆಗಿಲ್ಲ. ಹೀಗಾಗಿ ಸಮುದಾಯಗಳ ಸ್ಥಿತಿಗತಿ ತಿಳಿಯಬೇಕಿದೆ ಎಂದರು. ಹಾವನೂರು ವರದಿ ಬಳಿಕ ಯಾವ ವರದಿಗಳು ಆಗಲಿಲ್ಲ. ಕಾಂತರಾಜ್ ವರದಿಗೆ 10 ವರ್ಷ,ಅದು ಸರಿ ಇಲ್ಲ ಎಂದವರು ಮತ್ತೆ ಮಾಡಿ ಎಂದಿದ್ದರು. ಇದು ಹಿಂದುಳಿದ ಜಾತಿಗಳ ಪ್ರಶ್ನೆ ಮಾತ್ರ ಅಲ್ಲ. ಎಲ್ಲಾ ಸಮುದಾಯಗಳ ಪರಿಸ್ಥಿತಿ ತಿಳಿಯಲಿದೆ ಎಂದರು. ನಾವು ಕುರುಬ ಸಮುದಾಯಗಳು ಈ ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಇದು ಸಿದ್ದರಾಮಯ್ಯ ಉಳಿವಿಗಾಗಿ ಅಂತ ಬಹಳ ಜನ ಮಾತಾಡ್ತಾರೆ. ದೇವರಾಜು ಅರಸು ನಂತರ ಎಲ್ಲಾ ಸಮುದಾಯಗಳ ಏಳಿಗೆ ಬಗ್ಗೆ ಕಾಳಜಿ ಇರುವುದು ಸಿದ್ದರಾಮಯ್ಯ ಅವರಿಗೆ. ಕಾನೂನು ಅಡಿ, ಸಾಂವಿಧಾನಿಕ ಅಡಿ ನಡೆಯುತ್ತಿರುವ ಸಮೀಕ್ಷೆಯಾಗಿದೆ. ಯಾರನ್ನೂ ಒತ್ತಾಯ ಮಾಡಬಾರದು ಅಂತ ಕೋರ್ಟ್ ಹೇಳಿದೆ…
ಶಿವಮೊಗ್ಗ : ಸಾಗರದಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಜೊತೆಗೆ ಗುಂಪು ಮನೆ ನಿರ್ಮಾಣಕ್ಕೆ ಗಮನ ಹರಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಈ ಮೂಲಕ ಸಾಗರದ ನಿವೇಶನ ರಹಿತರಿಗೆ ಶಾಸಕರು ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯಲ್ಲಿ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೆ ಆಶ್ರಯ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ನಿವೇಶನ ಕೊಡುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ ಎಂದರು. ಎಲ್ಲರಿಗೂ ಪ್ರತ್ಯೇಕ ನಿವೇಶನ ಕೊಡಲು ಕಷ್ಟಸಾಧ್ಯವಾಗಬಹುದು. ಈ ಹಿನ್ನೆಲೆಯಲ್ಲಿ ಗುಂಪು ಮನೆಗಳನ್ನು ನಿರ್ಮಿಸಿ, ಎಲ್ಲರಿಗೂ ಸೂರು ಕಲ್ಪಿಸುವ ಉದ್ದೇಶವನ್ನೂ ಹೊಂದಲಾಗಿದೆ. ಈಗಾಗಲೆ ನಿವೇಶನ ನೀಡಲು ಅಗತ್ಯವಾದ ಜಾಗವನ್ನು ಕೆಲವು ಕಡೆಗಳಲ್ಲಿ ಗುರುತಿಸಲಾಗಿದ್ದು, ಅದನ್ನು ಮಂಜೂರಾತಿಗೆ ಕಳಿಸಲಾಗುತ್ತದೆ ಎಂದು ಹೇಳಿದರು. ಹಿಂದೆ ಕೆಲವರು ಮನೆ ಕಟ್ಟಿಕೊಳ್ಳಲು ಆಶ್ರಯ ನಿವೇಶನ ಪಡೆದಿದ್ದು ಮನೆಕಟ್ಟದೆ ನಿವೇಶನ ಹಾಗೆ ಬಿಟ್ಟಿದ್ದಾರೆ. ಆಶ್ರಯ ನಿವೇಶನ ಪಡೆದು ಯರ್ಯಾರು ಮನೆ ಕಟ್ಟಿಲ್ಲವೋ ಅಂತಹವರಿಗೆ…
ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಆಯ್ಕೆ
ಮಂಡ್ಯ : ಕೆಎಂಎಫ್ ಸಂಸ್ಥೆಯು ಹಾಲಿನಿಂದ ತಯಾರಿಸುವ ಉಪ ಉತ್ಪನ್ನಗಳ ಮಾದರಿಯಲ್ಲೇ ಕೋಳಿ ಮಾಂಸದ ವಿವಿಧ ಭಾಗಗಳನ್ನು ಪ್ರತ್ಯೇಕಿಸಿ ರಿಟೇಲ್ ಮಳಿಗೆಗಳಲ್ಲಿ ಮಾರಾಟ ಮಾಡುವ ಮಹತ್ವದ ಯೋಜನೆಯನ್ನು ನಮ್ಮ ಒಕ್ಕೂಟವು ಈಗಾಗಲೇ ರೂಪುರೇಷೆ ತಯಾರಿಸಿದೆ ಎಂದು ಒಕ್ಕೂಟದ ನೂತನ ಅಧ್ಯಕ್ಷ ಎಂ.ಆರ್.ಬಾಲಕೃಷ್ಣ ಹೇಳಿದರು. ಇಂದು ಮಂಡ್ಯದ ಮದ್ದೂರು ನಗರದ ಶಿವಪುರದ ಒಕ್ಕೂಟದ ಕಛೇರಿ ಆವರಣದಲ್ಲಿ ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಆರ್.ಬಾಲಕೃಷ್ಣ, ಉಪಾಧ್ಯಕ್ಷರಾಗಿ ಡಿ.ಕೃಷ್ಣಪ್ಪ ಹಾಗೂ ನಿರ್ದೇಶಕರಾಗಿ ಕೆ.ಕೃಷ್ಣಯ್ಯ, ಗೋಪಾಲ, ಬೆಟ್ಟಸ್ವಾಮಿ, ಆತ್ಮಾನಂದ, ಎಂ.ವಿ.ವೆಂಕಟೇಶ್, ಜೋಗಿಗೌಡ, ಬಿ.ಗಿರೀಶ್, ಆರ್.ಸಿದ್ದಪ್ಪ, ಎಸ್.ಎಲ್. ಜಯಲಿಂಗೇಗೌಡ, ಸಿ.ಕೆಂಪರಾಜು, ಎಂ.ಸಿ.ಯೋಗೇಶ್, ಎಲ್.ಸಿ.ಪ್ರವೀಣ್ ಕುಮಾರ್, ಚುನಾಯಿತರಾದರು. ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಬಾಲಕೃಷ್ಣ ಅವರು, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟ ಅಸ್ತಿತ್ವಕ್ಕೆ ಬಂದಿದ್ದು, ಕೆಎಂಎಫ್ ಸಂಸ್ಥೆಯು ಹಾಲಿನಿಂದ ತಯಾರಿಸುವ ಉಪ ಉತ್ಪನ್ನಗಳ ಮಾದರಿಯಲ್ಲೇ ಕೋಳಿ…
ಬೆಂಗಳೂರು: ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆಗೆ ವೀಡಿಯೋ ಸಂವಾದ ನಡೆಸಿದರು. * ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. * ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ…
ಶಿವಮೊಗ್ಗ : ಜಿಲ್ಲೆಯ ಸಾಗರದ ಸರ್ಕಾರಿ ಬಸ್ ನಿಲ್ದಾಣವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುತ್ತಿದ್ದು, ಡೆಲ್ಟಾ ಯೋಜನೆಯಡಿ 1 ಕೋಟಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನ 2 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಸದ್ಯದಲ್ಲಿಯೆ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿವಿಧ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿಯೆ ಹಿಂದೆ ಲೋಕಾರ್ಪಣೆ ಮಾಡಲಾಗಿತ್ತು. ಅಂದಿನಿಂದ ಹೊಸ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಇದೀಗ ಪ್ರಯಾಣಿಕರ ನಿರೀಕ್ಷಣಾ ಕೊಠಡಿಗಳಿಗೆ ಮೇಲ್ಚಾವಣಿ, ಮುಖ್ಯ ಕಟ್ಟಡ ಹಾಗೂ ನೆಲಕ್ಕೆ ಗ್ರಾನೈಟ್, 8 ಬಸ್ ನಿಲ್ಲಿಸುವುದಕ್ಕೆ ಹೊಸದಾಗಿ 3 ಬಸ್ ನಿಲ್ಲಿಸಲು ಜಾಗ ವಿಸ್ತರಿಸುವುದು, ಸುಸಜ್ಜಿತ ಶೌಚಾಲಯ, ಶುದ್ದ ಕುಡಿಯುವ ನೀರಿನ ಘಟಕ, ಪಾರ್ಕಿಂಗ್ ವ್ಯವಸ್ಥೆ ವಿಸ್ತರಣೆ, ಉಪಹಾರ ಗೃಹ ನವೀಕರಣ, ಮಹಿಳೆಯರಿಗೆ…
ಶಿವಮೊಗ್ಗ: ಮಹಿಳೆಯರ ಸಬಲೀಕರಣಕ್ಕಾಗಿ ರಚನೆಯಾದಂತ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ ದೇವರಾಜ್, ಉಪಾಧ್ಯಕ್ಷರಾಗಿ ಲತಾ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಾಗರ ತಾಲ್ಲೂಕಿನಾಧ್ಯಂತ ಗ್ರಾಮ ಪಂಚಾಯ್ತಿಗೊಂದು ಒಕ್ಕೂಟ ರಚನೆಯಾಗಿದೆ. ಸಾಗರ ತಾಲ್ಲೂಕಿನಲ್ಲಿ 35 ಒಕ್ಕೂಟದ ಸದಸ್ಯರಿದ್ದು, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಗರ ತಾಲ್ಲೂಕು ಮಟ್ಟದ ಒಕ್ಕೂಟಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇಂದು ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ ದೇವರಾಜ್, ಉಪಾಧ್ಯಕ್ಷರಾಗಿ ಲತಾ, ಕಾರ್ಯದರ್ಶಿಯಾಗಿ ಮಮತಾ, ಸಹ ಕಾರ್ಯದರ್ಶಿಯಾಗಿ ಶಾಂತಾ ಬಿ.ಸಿ ಹಾಗೂ ಖಜಾಂಚಿಯಾಗಿ ವನಿತಾ ಆಯ್ಕೆಯಾಗಿದ್ದಾರೆ. ಏನಿದು ತಾಲ್ಲೂಕು ಮಟ್ಟದ ಒಕ್ಕೂಟ? ಏನಿದರ ಕಾರ್ಯ ನಿರ್ವಹಣೆ? ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯಡಿ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಮಹಿಳಾ ಸ್ವಸಹಾಯ ಸಂಘಗಳಿಗೆ ತಲುಪಿಸುವಂತ ಕೆಲಸವನ್ನು ಮಾಡುವುದಕ್ಕೆ ರಚನೆಯಾದಂತ ಒಕ್ಕೂಟ ಇದಾಗಿದೆ. ಪ್ರತಿ ಗ್ರಾಮ ಪಂಚಾಯ್ತಿ…




