Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ಬಿಜೆಪಿ ಸರ್ಕಾರ ಜಾರಿಗೆ ತಂದಿರುವಂತ ಅಗ್ನಿವೀರ್ ಯೋಜನೆ ರದ್ದುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಬಳ್ಳಾರಿಯ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದ್ರೆ ಅಗ್ನಿವೀರ್ ಯೋಜನೆ ರದ್ದು ಪಡಿಸುುತ್ತೇವೆ ಎಂದರು. ಸದ್ಯ ಇರುವಂತ ಜಿಎಸ್ಟಿ ಬದಲಿ ಸರಳ ಜಿಎಸ್ಟಿ ಯೋಜನೆ ಜಾರಿಗೆ ತರಲಾಗುತ್ತದೆ. ಸರಳ ಜಿಎಸ್ಟಿಯಿಂದ ರೈತರು, ಬಡವರು, ಕಾರ್ಮಿಕರಿಗೆ ನೆರವಾಗಲಿದೆ ಎಂದರು. ಕರ್ನಾಟಕಕ್ಕೆ ಬರಬೇಕಾಗಿದ್ದಂತ 18000 ಕೋಟಿ ಹಣವನ್ನು ಬಿಜೆಪಿ ಅಲ್ಲ ಭಾರತೀಯ ಚೊಂಬು ಪಾರ್ಟಿ ಕೊಟ್ಟಿಲ್ಲ. ಕರ್ನಾಟಕಕ್ಕೆ 18000 ಕೋಟಿ ಬರ ಪರಿಹಾರ ಕೊಡಬೇಕಾಗಿದೆ. ಆದ್ರೇ ಬಿಜೆಪಿ ಕೊಡದೇ ಚೊಂಬು ಕಟ್ಟಿದೆ ಎಂದರು. ಬಳ್ಳಾರಿ ಜಿಲ್ಲೆಯ ಜನರಿಗೆ ಈ ಹಿಂದೆ ನಾನು ಒಂದು ಭರವೆಸೆ ನೀಡಿದ್ದೆ. ಐದು ಗ್ಯಾರಂಟಿ ಕೊಡುವ ಭರವಸೆ ನೀಡಿದ್ದೆನು. ಅದರಂತೆ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು. https://kannadanewsnow.com/kannada/chamarajanagar-tahsildar-injured-in-clash-between-police-and-villagers-hospitalised/ https://kannadanewsnow.com/kannada/breaking-x-down-across-the-country-including-karnataka/
ಚಾಮರಾಜನಗರ: ಮತದಾನ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನ ವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ದ್ವಂಸ ಮಾಡಿ ಸಿಬ್ಬಂದಿಗಳ ಕೂಡಿ ಹಾಕಿ ಬೆಂಕಿ ಹಚ್ಚಿರೊ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು. ಈ ಗಲಾಟೆಯಲ್ಲಿ ತಹಶೀಲ್ದಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕೊರತೆ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು. ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದರು. ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆ ಗೆ ನುಗ್ಗಿದ ಪ್ರತಿಭಟನಾಕಾರರು ವಿದ್ಯುನ್ಮಾನ…
ಬೆಂಗಳೂರು: ಏಪ್ರಿಲ್ 26ರ ಇಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಿತು. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಿತು. ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಯಿತು. 7.00 ಗಂಟೆಯೊಳಗಾಗಿ ಪೂರ್ಣಗೊಂಡಿತು. ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆ ನಡೆದಂತ ಮತದಾನ ಇದೀಗ ಅಂತ್ಯಗೊಂಡಿದೆ. ಎಲ್ಲಾ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ ಪ್ಯಾಟ್ ಗಳನ್ನು ಮತಗಟ್ಟೆಗಳಿಗೆ ಮತದಾನಕ್ಕೂ ಮುನ್ನಾ ದಿನವೇ ತಲುಪಿಸಲಾಗಿತ್ತು. ಅಣುಕು ಮತದಾನದ ವೇಳೆ ಇವಿಎಂ ನಲ್ಲಿ ಲೋಪದೋಷಗಳು ಕಂಡುಬಂದರೆ ಸೆಕ್ಟರ್ ಅಧಿಕಾರಿ ಮೂಲಕ ಕನಿಷ್ಠ 10 ಮತಗಟ್ಟೆಗಳಿಗೆ ನಿಯೋಜನೆ ಮಾಡಿರುವಂತಹ ಮಾರ್ಗ ಅಧಿಕಾರಿಯು(Route Officer) ಪರ್ಯಾಯ ವ್ಯವಸ್ಥೆ ಮಾಡೋದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಚುನಾವಣಾ ಆಯೋಗದ ಸಕಲ ವ್ಯವಸ್ಥೆಯ ನಡುವೆ, ಇಂದು ಶಾಂತಿಯುತವಾಗಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ಸಂಜೆ 5…
ಬೆಂಗಳೂರು: ನಾನು ದೇಶದ ಬದಲಾವಣೆಗಾಗಿ ಮತದಾನ ಮಾಡಿದ್ದೇನೆ. ದ್ವೇಷದ ವಿರುದ್ಧ ತ ಹಾಕಿರುವೆ. ನೀವು ತಪ್ಪದೇ ಮತದಾನ ಮಾಡಿ ಎಂಬುದಾಗಿ ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಈ ವೇಳೆಯಲ್ಲಿ ನಟ ಪ್ರಕಾಶ್ ರಾಜ್ ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಳಿಕ ವೀಡಿಯೋ ಶೇರ್ ಮಾಡಿರುವಂತ ಅವರು, ದೇಶದ ಬದಲಾವಣೆಗಾಗಿ ಮತದಾನ ಮಾಡಿರುವೆ, ದ್ವೇಷದ ವಿರುದ್ಧ ಮತ ಹಾಕಿರುವೆ. ಸಂಸತ್ ನಲ್ಲಿ ನನ್ನ ಪರವಾಗಿ ಧ್ವನಿ ಕೇಳಲಿ ಎಂದು ವೋಟು ಮಾಡಿದ್ದೇನೆ. ದಯಮಾಡಿ ವೋಡು ಮಾಡಿ, ಬದಲಾವಣೆಗೆ ಮತ ಹಾಕಿ ಎಂದಿದ್ದಾರೆ. https://twitter.com/prakashraaj/status/1783681379848327529? ನಟ ಪ್ರಕಾಶ್ ರಾಜ್ ಅವರ ಈ ವೀಡಿಯೋ ಈಗ ವೈರಲ್ ಆಗಿದೆ. ಇಂದು ಬೆಳಿಗ್ಗೆ 7.45ಕ್ಕೆ ಮತಚಲಾಯಿಸಿದ ನಂತ್ರ ವೀಡಿಯೋ ಪೋಸ್ಟ್ ಮಾಡಿದ್ದಾರೆ. ಆ ಬಳಿಕ ಈವರೆಗೆ 536ಕೆ ವೀಕ್ಷಕರು ನಟ ಪ್ರಕಾಶ್ ರಾಜ್ ಪೋಸ್ಟ್ ಮಾಡಿರುವಂತ ವೀಡಿಯೋ ವೀಕ್ಷಿಸಿದ್ದಾರೆ. ಅಲ್ಲದೇ 1.8ಕೆ ನೋಡುಗರು ಕಾಮೆಂಟ್…
BREAKING: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯ: ಮಂಡ್ಯದಲ್ಲಿ ಅತಿಹೆಚ್ಚು, ಬೆಂಗಳೂರಲ್ಲಿ ಕಡಿಮೆ ಮತದಾನ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಇಂದು ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದಂತ ಮತದಾನವು ಸಂಜೆ 6 ಗಂಟೆಯವರೆಗೆ ಯಶಸ್ವಿಯಾಗಿ ನಡೆದು ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಆದ್ರೇ ಮತದಾನ ಕೇಂದ್ರದ ಒಳಗಡೆ ಇರುವವರಿಗೆ ಎಲ್ಲಾ ಮತದಾರರು ಮುಗಿಯೋವರೆಗೆ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ. ಇಂದು ನಡೆದಂತ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನದಲ್ಲಿ ಮಂಡ್ಯದಲ್ಲಿ ಅತೀಹೆಚ್ಚು ಮತದಾನವಾಗಿದ್ದರೇ, ಬೆಂಗಳೂರಲ್ಲಿ ಅತೀ ಕಡಿಮೆ ಮತದಾನವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಬಹುತೇಕ ಶಾಂತಿಯುತವಾಗಿ ಎಲ್ಲಾ ಕಡೆಯಲ್ಲಿ ಮತದಾನ ನಡೆದಿದೆ. ಸಂಜೆ 5 ಗಂಟೆಯವರೆಗೆ ಕೇಂದ್ರ ಚುನಾವಣಾ ಆಯೋಗ ನೀಡಿದಂತ ಮಾಹಿತಿಯ ಅನುಸಾರವಾಗಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮಾತ್ರ ಮತದಾನವಾಗಿದೆ. ಇಲ್ಲಿದೆ 14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಉಡುಪಿ-ಚಿಕ್ಕಮಗಳೂರು – ಶೇ.72.13 ಹಾಸನ- ಶೇ.72.13 ದಕ್ಷಿಣ ಕನ್ನಡ- ಶೇ.71.83 ಚಿತ್ರದುರ್ಗ- ಶೇ.67 ತುಮಕೂರು – ಶೇ.72.10 ಮಂಡ್ಯ- ಶೇ.74.87 ಮೈಸೂರು- ಶೇ.65.85 ಚಾಮರಾಜನಗರ- ಶೇ.69.60…
ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇನ್ನೇನು 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಒಂದು ಗಂಟೆ ಮಾತ್ರವೇ ಬಾಕಿ ಇದೇ. ಇದರ ನಡುವೆ 5 ಗಂಟೆಯವರೆಗೆ ಶೇ.63.90ರಷ್ಟು ಮತದಾನವಾಗಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. ಇಲ್ಲಿದೆ 14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಉಡುಪಿ-ಚಿಕ್ಕಮಗಳೂರು – ಶೇ.72.13 ಹಾಸನ- ಶೇ.72.13 ದಕ್ಷಿಣ ಕನ್ನಡ- ಶೇ.71.83 ಚಿತ್ರದುರ್ಗ- ಶೇ.67 ತುಮಕೂರು – ಶೇ.72.10 ಮಂಡ್ಯ- ಶೇ.74.87 ಮೈಸೂರು- ಶೇ.65.85 ಚಾಮರಾಜನಗರ- ಶೇ.69.60 ಬೆಂಗಳೂರು ಗ್ರಾಮಾಂತರ – ಶೇ.61.78 ಬೆಂಗಳೂರು ಉತ್ತರ- ಶೇ.50.84 ಬೆಂಗಳೂರು ಕೇಂದ್ರ – ಶೇ.48.61 ಬೆಂಗಳೂರು ದಕ್ಷಿಣ- ಶೇ.49.37 ಚಿಕ್ಕಬಳ್ಳಾಪುರ – ಶೇ.70.97 ಕೋಲಾರ- ಶೇ.71.26 https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/
ಚಿತ್ರದುರ್ಗ/ತುಮಕೂರು/ಮಂಡ್ಯ: ಲೋಕಸಭಾ ಚುನಾವಣೆಗೆ ಇಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ವೋಟ್ ಮಾಡಿ ಬಂದಂತ ಮೂವರು ದಾರುಣವಾಗಿ ಸಾವನ್ನಪ್ಪಿದಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ 55 ವರ್ಷದ ಶಾಲಾ ಶಿಕ್ಷಕಿ ಯಶೋಧಮ್ಮ ಎಂಬುವರನ್ನು ಎಆರ್ ಓ ಆಗಿ ನೇಮಕ ಮಾಡಲಾಗಿತ್ತು. ಚುನಾವಣಾ ಕರ್ತವ್ಯ ನಿರತರಾಗಿದ್ದಂತ ಸಂದರ್ಭದಲ್ಲೇ ಲೋ ಬಿಪಿಯಾಗಿ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸೋ ಮಾರ್ಗ ಮದ್ಯದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ತುಮಕೂರು ನಗರದ ಎಸ್ ಎಸ್ ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಂತ ರಮೇಶ್ ಎಂಬುವರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ರಮೇಶ್ ಅವರು ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ಇಂದು ಬೆಳಿಗ್ಗೆ ಎಸ್ ಎಸ್ ಪುರಂ ಮತಗಟ್ಟೆಗೆ ತೆರಳಿ, ಪತ್ನಿಯೊಂದಿಗೆ ಮತಚಲಾಯಿಸಿ ಮನೆಗೆ ಬಂದಿದ್ದರು. ಈ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಮಂಡ್ಯದಲ್ಲಿ ಮತದಾನ ಮಾಡಿ ಬಂದು ವೃದ್ದ ಸಾವನ್ನಪ್ಪಿದ್ದಾರೆ. ಮದ್ದೂರು ತಾಲೂಕಿನ ಚನ್ನೇಗೌಡನ ದೊಡ್ಡಿ…
ನವದೆಹಲಿ: ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಪ್ರಿಯಾಂಕಾ ರಜಪೂತ್ ಅವರು ಮೇ 7 ರಂದು ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವ ಆದೇಶವನ್ನು ಪ್ರಕಟಿಸಲಿದ್ದಾರೆ. ಡಬ್ಲ್ಯುಎಫ್ಐ ಕಚೇರಿಯಲ್ಲಿ ತನಗೆ ಕಿರುಕುಳ ನೀಡಲಾಗಿದೆ ಎಂದು ದೂರುದಾರರೊಬ್ಬರು ಆರೋಪಿಸಿರುವ ಘಟನೆ ನಡೆದ ದಿನಾಂಕದಂದು ತಾನು ಭಾರತದಲ್ಲಿರಲಿಲ್ಲ ಎಂದು ಸಿಂಗ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ದೂರುದಾರರೊಂದಿಗೆ ಬಂದಿದ್ದ ತರಬೇತುದಾರನ ಕರೆ ವಿವರ ದಾಖಲೆಗಳನ್ನು (ಸಿಡಿಆರ್) ದೆಹಲಿ ಪೊಲೀಸರು ಅವಲಂಬಿಸಿದ್ದಾರೆ ಮತ್ತು ಅವರು ಸೆಪ್ಟೆಂಬರ್ 7, 2022 ರಂದು ಡಬ್ಲ್ಯೂಎಫ್ಐಗೆ ಹೋಗಿದ್ದರು. ಅಲ್ಲಿ ಅವರು ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಸಿಂಗ್ ಅವರ ವಕೀಲರು ಹೇಳಿದ್ದಾರೆ. https://kannadanewsnow.com/kannada/pm-wont-discuss-price-rise-unemployment-farmers-organisations-siddaramaiah/ https://kannadanewsnow.com/kannada/breaking-x-down-across-the-country-including-karnataka/
ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ. ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು ಧೃವೀಕರಣ ಮಾಡುವ ಪ್ರಯತ್ನ ಸಂವಿಧಾನದ 15…