Author: kannadanewsnow09

ಬೆಂಗಳೂರು: ಬಿಬಿಎಂಪಿ ಇ-ಖಾತಾ 22 ಲಕ್ಷ ಆಸ್ತಿಗಳು https://bbmpeaasthi.karnataka.gov.in ನಲ್ಲಿ ಲಭ್ಯವಿದೆ. ಬೆಂಗಳೂರಿನ ಆಸ್ತಿ ಮಾಲೀಕರು ತಪ್ಪದೇ ಇ-ಖಾತಾ ಪಡೆಯುವಂತೆ ಬಿಬಿಎಂಪಿ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ಬಿಬಿಎಂಪಿಯು ಎಲ್ಲಾ ಬೆಂಗಳೂರಿಗರಿಗೆ ತಮ್ಮ ಸ್ವತ್ತುಗಳ ಬಿಬಿಎಂಪಿ ಇ-ಖಾತಾಗಳನ್ನು ನೀಡಲು ಸುಮಾರು 22-ಲಕ್ಷ ಕರಡು ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿರುತ್ತದೆ. ಎಲ್ಲಾ ನಾಗರೀಕರು ತಮ್ಮ ಬಿಬಿಎಂಪಿ ಇ-ಖಾತಾ ಪಡೆಯಲು ವಿನಂತಿಸಲಾಗಿದೆ. ಬಿಬಿಎಂಪಿಯ ಇ-ಖಾತಾ ಈಗ ನಾಗರೀಕರ ನಿಯಂತ್ರಣದಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಬಿಬಿಎಂಪಿಯ ಇ-ಖಾತಾವನ್ನು ಪಾಲಿಕೆ ಜಾಲತಾಣ https://bbmpeaasthi.karnataka.gov.in ರಲ್ಲಿ ಪಡೆಯಲು ಪಾಲಿಕೆಯಲ್ಲಿ ಸಂಪರ್ಕರಹಿತ, ಫೇಸ್‌ಲೆಸ್, ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ನಿಮ್ಮ ಆಸ್ತಿ ಇ-ಖಾತಾ ಆನ್‌ಲೈನ್‌ನಲ್ಲಿದೆ ಮತ್ತು ಅದನ್ನು ಸರಾಗವಾಗಿ ಈ ಕೆಳಗಿನಂತೆ ಪಡೆಯಿರಿ: 1. ನಿಮ್ಮ ಕರಡು ಇ-ಖಾತಾವನ್ನು ವಾರ್ಡ್‌ ವಾರು ಪಟ್ಟಿಯಲ್ಲಿ ಹುಡುಕಿ. (ನಿಮ್ಮ ವಾರ್ಡ್‌ ಅನ್ನು ನಿಮ್ಮ ಆಸ್ತಿ ತೆರಿಗೆ ರಶೀದಿಯಿಂದ ತಿಳಿದುಕೊಳ್ಳಿ) 2.…

Read More

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಎನ್ನುವವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಆರೋಪಿಸಿ ಗುತ್ತಿಗೆದಾರ ಸಚಿನ್ ಎಂಬಾತ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದನು. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಯುವಕ ಸಚಿನ್ ಪಾಂಚಾಳರ ಸಾವು ದುರದೃಷ್ಟಕರವಾದುದು, ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಈ ಪ್ರಕರಣದಲ್ಲಿ ಹೆಸರಿಸಿರುವ ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್ ನೋಟ್ ನಲ್ಲಿ ಇನ್ನೊಂದು ಬಗೆಯ ವಿಷಯಗಳು ಕಂಡು ಬರುತ್ತವೆ. ಈಗಾಗಲೇ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂದಿದ್ದಾರೆ, ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರುವಲ್ಲಿ ತನಿಖಾ ಸಂಸ್ಥೆಗಳು ಪರಿಣಾಮಕಾರಿಯಾಗಿ ತನಿಖೆ…

Read More

ಬೆಂಗಳೂರು: ರಾಜಕಾರಣದಲ್ಲಿ ಗಟ್ಟಿ ನಿಲುವು ಮತ್ತು ಹೋರಾಟ ಗೊತ್ತಿಲ್ಲದೇ ಅಧಿಕಾರ ಪಡೆದಿರುವ ವಿಜೇಂದ್ರ, ತಮಗೆ ಶಕ್ತಿ ಇದ್ದರೆ ನಾಳಿನ ಹೋರಾಟಕ್ಕೆ ಅವರ ಪಕ್ಷದ ಎಲ್ಲಾ ಶಾಸಕರು ಒಟ್ಟಾಗಿ ಪಾಲ್ಗೊಳ್ಳವಂತೆ ಮಾಡಿದರೆ ಅದೇ ಅವರ ಅತಿ ದೊಡ್ಡ ಸಾಧನೆ ಆಗುತ್ತದೆ! ಬಾಲಭವನದ ಈ ಬಿಜೆಪಿ ಅಧ್ಯಕ್ಷರ ನೋಡಿ ಜಗನ್ನಾಥ ಭವನದ ರಾಜ್ಯ ಬಿಜೆಪಿ ನಾಯಕರು ಬೀದಿ ಬೀದಿಯಲ್ಲಿ ನಗುತ್ತಿದ್ದಾರೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷವು ಶ್ರೀ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧಿವೇಶನದ ಅಧ್ಯಕ್ಷರಾಗಿ ಒಂದು ನೂರು ವರ್ಷ ಆದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಶದಲ್ಲಿ ಗಾಂಧಿ ತತ್ವ ಸಿದ್ದಾಂತಗಳಿಗೆ ಆದರ್ಶ ಗಳಿಗೆ ಎಳ್ಳು ನೀರು ಬಿಟ್ಟು ಕೋಮುವಾದ ದ್ವೇಷ ಬಿತ್ತುತ್ತಿರುವ ಮತೀಯ ಶಕ್ತಿಗಳ ವಿರುದ್ಧ ದೇಶದಲ್ಲಿ ಗಾಂಧೀವಾದ ತತ್ವಗಳ ಬಿತ್ತಲು ಗಾಂಧಿ…

Read More

ಬೆಳಗಾವಿ: ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದಂತ ಗರ್ಭಿಣಿ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿದ್ದಳು. ಈ ಬಾಣಂತಿ ಸಾವಿನ ಕುರಿತಂತೆ ಬಿಮ್ಸ್ ಆಸ್ಪತ್ರೆಯ ವೈದ್ಯರಿಂದ ಸ್ಪಷ್ಟನೆ ನೀಡಲಾಗಿದೆ.  ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬಿಮ್ಸ್ ಆಸ್ಪತ್ರೆಯ ವೈದ್ಯರು, ಬೆಳಗಾವಿಯ BIMS ಮೆಡಿಕಲ್ ಕಾಲೇಜಿನಲ್ಲಿ ಪೂಜಾ ಅಡಿವೆಪ್ಪ ಎಂಬುವರು ಹೆರಿಗೆ ಸಂದರ್ಭದಲ್ಲಿ ಸಾವಿಗೀಡಾಗಿದ್ದಾರೆ. 25 ವರ್ಷದ ಪೂಜಾ ಅವರು Dilated cardiomyopathy with aspiration pneumonia with antepartum eclampsia ದಿಂದ ಬಳಲುತ್ತಿದ್ದರು ಎಂದಿದ್ದಾರೆ. 24/12/2024 ರಂದು BIMS ಮೆಡಿಕಲ್ ಕಾಲೇಜಿನಲ್ಲಿ ಅಡ್ಮಿಟ್ ಆಗಿದ್ದ ಪೂಜಾ ಅವರು ಗಂಭೀರ ಸ್ಥಿತಿಯಲ್ಲಿದ್ದರು. ದಾಖಲಾದ ಸಂದರ್ಭದಲ್ಲಿ ರೋಗಿಯ ಮೂಗು ಮತ್ತು ಬಾಯಿಯಲ್ಲಿ ರಕ್ತಸ್ರಾವವಾಗುತ್ತಿತ್ತು.‌ ಇದು ಪೂಜಾ ಅವರ ಐದನೆ ಬಾರಿಯ ಪ್ರಗ್ನೆನ್ಸಿಯಾಗಿತ್ತು ಎಂಬುದಾಗಿ ತಿಳಿಸಿದ್ದಾರೆ. ಹೆರಿಗೆಯ ದಿನಾಂಕ ಇನ್ನೂ ಒಂದು ತಿಂಗಳು ಮುಂದಿದ್ದರಿಂದ, ಗರ್ಭಿಣಿ ಪೂಜಾ ಅವರು ಸ್ಥಿತಿ ಗಂಭೀರವಾಗಿದ್ದರಿಂದ ಮಗುವಿನ ಜೀವ ಉಳಿಸುವ ನಿಟ್ಟಿನಲ್ಲಿ ಕುಟುಂಬದವರ ಒಪ್ಪಿಗೆ ಪಡೆದು ಸಹಜ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಲ್ಕಿಯ ಗುತ್ತಿಗೆದಾರ ಸಚಿನ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ಮಾಡಿಸಬೇಕು. ಸತ್ಯಾಸತ್ಯತೆ ಹೊರಬರಬೇಕಿದೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆಯನ್ನು ಸಿದ್ದರಾಮಯ್ಯನವರು ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನ್ಯಾಯಾಂಗ ತನಿಖೆ, ಸಚಿವರ ರಾಜೀನಾಮೆ ಪಡೆಯದೆ ಇದ್ದರೆ ಬಿಜೆಪಿ ಇದರ ಬಗ್ಗೆ ಪ್ರಬಲ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು. ಇವತ್ತು ಸಚಿನ್ ಎಂಬ ಭಾಲ್ಕಿಯ ಯುವ ಗುತ್ತಿಗೆದಾರ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಕಾರಣರನ್ನೂ ಅವರು ಹೆಸರಿಸಿದ್ದಾರೆ. ಮಾಜಿ ಕಾರ್ಪೊರೇಟರ್ ರಾಜು ಕಪನೂರು ಮತ್ತು ಇತರರ ಹೆಸರನ್ನು ಅವರು ಬರೆದಿಟ್ಟಿದ್ದಾರೆ ಎಂದು ವಿವರ ನೀಡಿದರು. ಎಲ್ಲ ವಿಷಯಕ್ಕೂ ಮೂಗು ತೂರಿಸಿ ಮಾತನಾಡುವ ಹಾಗೂ ನೈತಿಕತೆ ಕುರಿತು ಮಾತನಾಡುವ ಪ್ರಿಯಾಂಕ್ ಖರ್ಗೆಯವರು ಸಚಿನ್ ಸಾವಿನ ಕುರಿತು ಕಾಂಗ್ರೆಸ್ಸಿನ ಮಹಾಧಿವೇಶನದಲ್ಲಿ…

Read More

ಬೆಂಗಳೂರು: ದಿನಾಂಕ: 05.01.2025 ರ ಭಾನುವಾರದಂದು ಆಯೋಜಿಸಿರುವ ಚಿತ್ರಸಂತೆ ಆಯೋಜಿಸಲಾಗಿದೆ. ಬೆಂಗಳೂರಿನ ಚಿತ್ರಸಂತೆಗೆ ತೆರಳೋರಿಗೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರಲ್ಲಿ ಬಿಎಂಟಿಸಿಯಿಂದ ಮೆಟ್ರೋ ಫೀಡರ್ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸುವ ಧ್ಯೇಯದೊಂದಿಗೆ ಪ್ರಯಾಣಿಕರಿಗೆ ದಕ್ಷ, ಉತ್ತಮ ಮತ್ತು ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಮುಂದುವರೆದು, ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ದಿನಾಂಕ: 05.01.2025 ರ ಭಾನುವಾರದಂದು ಆಯೋಜಿಸಿರುವ ಚಿತ್ರಸಂತೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಮಸಾಸಂಸ್ಥೆಯಿಂದ ಬೆಳಗ್ಗೆ 05:00 ಗಂಟೆಯಿಂದ ರಾತ್ರಿ 21:00 ಗಂಟೆಯವರೆಗೆ ರೂ.15.00 ವಿಶೇಷ ದರ (Flat Fare) ಗಳೊಂದಿಗೆ ಮೆಟ್ರೋ ಫೀಡರ್‌ ಸಾರಿಗೆಗಳನ್ನು ಆಚರಣೆಗೊಳಿಸಲು ಉದ್ದೇಶಿಸಿದ್ದು, ವಿವರಗಳು ಕೆಳಕಂಡಂತೆ ಇರುತ್ತವೆ. ಕ್ರ.ಸಂ ಎಲ್ಲಿಂದ-ಎಲ್ಲಿಗೆ ಮಾರ್ಗ ಬಸ್ಸುಗಳ  ಸಂಖ್ಯೆ ಸಮಯ 1 ಕೆಂಪೇಗೌಡ ಬಸ್‌ ನಿಲ್ದಾಣ-ವಿಧಾನಸೌಧ ಆನಂದರಾವ್‌…

Read More

ಎಲೆಕ್ಟ್ರಿಕಲ್ ಕಂಬಗಳ ಉದ್ಯಮದ 27 ವರ್ಷದ ಉದ್ಯಮಿಯೊಬ್ಬರು ಅರೆಕಾಲಿಕ ಉದ್ಯೋಗ ಹಗರಣದಲ್ಲಿ 57.75 ಲಕ್ಷ ರೂ.ಗಳನ್ನು ವಂಚಿಸಿದ್ದಾರೆ. ಕನಿಷ್ಠ ಕೆಲಸಕ್ಕೆ ಸುಲಭ ಹಣದ ಭರವಸೆಗಳಿಂದ ಆಕರ್ಷಿತನಾದ ಆ ವ್ಯಕ್ತಿ, ತಾನು ಮೋಸ ಹೋಗಿದ್ದೇನೆ ಎಂದು ಅರಿತುಕೊಳ್ಳುವ ಮೊದಲು ಸ್ವಲ್ಪ ಸಮಯದವರೆಗೆ ದೊಡ್ಡ ಮೊತ್ತವನ್ನು ವರ್ಗಾಯಿಸಿದನು. ಈ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಸೈಬರ್ ಕ್ರೈಂ ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ 14 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆಗಸ್ಟ್ .16 ರಂದು ಸಂತ್ರಸ್ತೆಗೆ ಅನುಸೂಯಾ ಎಂಬ ಮಹಿಳೆಯಿಂದ ಟೆಲಿಗ್ರಾಮ್ ಸಂದೇಶ ಬಂದಾಗ ಹಗರಣ ಪ್ರಾರಂಭವಾಯಿತು. ಅವಳು ಅವನನ್ನು ಅರೆಕಾಲಿಕ ಕೆಲಸಕ್ಕೆ ಪರಿಚಯಿಸಿದಳು. ಅದು ಪ್ರತಿದಿನ ಕೇವಲ ಮೂರು ಗಂಟೆಗಳ ಆನ್ಲೈನ್ ಕೆಲಸಕ್ಕೆ 4,650 ರೂ.ಗಳ ಗಳಿಕೆಯ ಭರವಸೆ ನೀಡಿತು. ಎರಡು ದಿನಗಳ ನಂತರ, ಅಭಿನಯ ಎಂಬ ಇನ್ನೊಬ್ಬ ಮಹಿಳೆ ಅವನನ್ನು ಸಂಪರ್ಕಿಸಿ ‘ಮ್ಯಾಂಗೊ ಫ್ಯಾಷನ್’ ಎಂಬ ಕಂಪನಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡಳು. ಕಂಪನಿಯ ಪ್ಲಾಟ್ಫಾರ್ಮ್ನಲ್ಲಿ ನೋಂದಾಯಿಸಲು ಅವರು ಉದ್ಯಮಿಗೆ…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರ ಸಿಕಂದರ್ ನ ಮೊದಲ ಪೋಸ್ಟರ್ ಅನ್ನು ಗುರುವಾರ ಅವರ ಹುಟ್ಟುಹಬ್ಬಕ್ಕೆ ಮುಂಚಿತವಾಗಿ ಅನಾವರಣಗೊಳಿಸಲಾಯಿತು. ಅವರ ಹುಟ್ಟುಹಬ್ಬದಂದು ಬೆಳಿಗ್ಗೆ 11.07 ಕ್ಕೆ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಎ.ಆರ್.ಮುರುಗದಾಸ್ ನಿರ್ದೇಶನದ ಈ ಚಿತ್ರವು ಈದ್ 2025ರ ಸಮಯದಲ್ಲಿ ಬಿಡುಗಡೆಯಾಗಲಿದೆ. 2023 ರಲ್ಲಿ ಟೈಗರ್ 3 ನಂತರ ಸಿಕಂದರ್ ಸಲ್ಮಾನ್ ಖಾನ್ ಅವರ ಮುಂದಿನ ಚಿತ್ರವಾಗಿದೆ. ತಮಾಷೆಗಿಂತ ಕಡಿಮೆಯಿಲ್ಲದ ಪೋಸ್ಟರ್ನಲ್ಲಿ, ಸೂಕ್ತವಾದ ಸಲ್ಮಾನ್ ಈಟಿಯನ್ನು ಹಿಡಿದು, ರಹಸ್ಯದಿಂದ ಮುಚ್ಚಿದ ಪ್ರದೇಶದಲ್ಲಿ ಎತ್ತರವಾಗಿ ನಿಂತಿರುವುದನ್ನು ಕಾಣಬಹುದು. https://kannadanewsnow.com/kannada/congress-politics-of-appeasement-from-the-past-leader-of-opposition-in-council-chalavadi-narayanasamy/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/

Read More

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬರುತ್ತಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರರನ್ನು ತುಚ್ಛವಾಗಿ ನೋಡಿದ್ದ ಕಾಂಗ್ರೆಸ್ ಪಕ್ಷವು 370ನೇ ವಿಧಿ ಮೂಲಕ ಅವತ್ತೇ ಓಲೈಕೆ ರಾಜಕಾರಣ ಮಾಡಿತ್ತು ಎಂದು ಟೀಕಿಸಿದರು. ಇದನ್ನು ಯೇ ದೇಶ್ ಮೇ ದೋ ಸಂವಿಧಾನ್, ದೋ ನಿಶಾನ್ ನಹಿ ಚಲೇಗಾ ಎಂದು ಆಗಲೇ ಶ್ಯಾಮಪ್ರಸಾದ ಮುಖರ್ಜಿ ಅವರು ಖಂಡಿಸಿದ್ದರು ಎಂದು ವಿವರಿಸಿದರು. ಆಗ ಕಾಂಗ್ರೆಸ್ಸಿನ ತಪ್ಪು ನೀತಿ, ಓಲೈಕೆ ರಾಜಕೀಯದ ವಿರುದ್ಧ ಜನಸಂಘ ಪ್ರಾರಂಭವಾಗಿತ್ತು ಎಂದ ಅವರು, 370ನೇ ವಿಧಿ ತೆಗೆದಿದ್ದು ಯಾರು ಎಂದು ಪ್ರಶ್ನಿಸಿದರು. ಬಿಜೆಪಿ ಹುಟ್ಟಿದ್ದೇ ಅಂಬೇಡ್ಕರರ ಸಿದ್ಧಾಂತಗಳನ್ನು ಬೆಂಬಲಿಸುವ ಉದ್ದೇಶದಿಂದ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ…

Read More

ಕೇಳಿದರೂ ಕಂಡರಿಯದ ತಿಳಿದುಕೊಳ್ಳುವ ಉಪಯುಕ್ತ ಮಾಹಿತಿಗಳು ರಾಶೀಗಳು (12) ಮೇಷ, ವೃಷಭ, ಮಿಥುನ, ಕರ್ಕಾಟಕ ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ. ******* ಋತುಗಳು (6) ಮತ್ತು ಮಾಸ (12) ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) , ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿಜ-ಕಾರ್ತಿಕ), ಹೇಮಂತ (ಮಾರ್ಗಶಿರ-ಪುಷ್ಯ), ಶಿಶಿರ (ಮಾಘ-ಫಾಲ್ಗುಣ). ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…

Read More