Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ವ್ಯಕ್ತಿಯೊಬ್ಬರನ್ನು ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿ, ಶವವನ್ನು ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದಾರೆ. ಕುಟುಂಬಸ್ಥರು ಕಣ್ಣೀರು ಹಾಕುತ್ತಲೇ ಆಸ್ಪತ್ರೆಯಿಂದ ಊರಿಗೆ ಕರೆದೊಯ್ಯುವಾಗ ಡಾಬಾ ಬಂತು ನೋಡು ಊಟ ಮಾಡ್ತೀಯ ಎಂದಿದ್ದೇ ತಡ ವ್ಯಕ್ತಿ ಊಸಿರಾಡಿದಂತ ವಿಚಿತ್ರ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಬಂಕಾಪುರದಲ್ಲೇ ಇಂತದ್ದೊಂದು ವಿಚಿತ್ರ ಘಟನೆ ನಡೆದಿರೋದು. ಬಂಕಾಪುರದ ಬಿಷ್ಟಪ್ಪ ಗುಡಿಮನಿ(45) ಅವರು ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬಿಳಿ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಟಿಸಿ, ಊರಿಗೆ ಶವ ಕೊಂಡೊಯ್ಯುವಂತೆ ಸೂಚಿಸಿದ್ದರು. ವೈದ್ಯರ ಸೂಚನೆಯಿಂದ ಬಂಕಾಪುರ ಗ್ರಾಮಕ್ಕೆ ಮೃತ ಬಿಷ್ಟಪ್ಪ ಗುಡಿಮನಿಯ ಶವವನ್ನು ಕರೆ ತರುತ್ತಿದ್ದಂತ ವೇಳೆಯಲ್ಲಿ ಕುಟುಂಬಸ್ಥರು ಡಾಬಾ ಬಂತು ನೋಡು, ಊಟ ಮಾಡುತ್ತೀಯಾ ಅಂತ ಕಣ್ಣೀರಿಡುತ್ತಲೇ ಕೇಳಿದ್ದಾರೆ. ಈ ವೇಳೆಯಲ್ಲಿ ಮೃತ ಬಿಷ್ಟಪ್ಪ ಗುಡಿಮನಿ ಉಸಿರಾಡಿದ್ದಾನೆ. ಈ ಘಟನೆಯಿಂದ ಕುಟುಂಬಸ್ಥರೇ ಕಕ್ಕಾಬಿಕ್ಕಿಯಾಗಿದ್ದಾರೆ. ಕೂಡಲೇ…
ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 12.02.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್ ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಸೆಲ್ವೇಪುರ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ…
ಮನೆ, ಕಛೇರಿ ಮತ್ತು ವ್ಯಾಪಾರ ಸ್ಥಳಗಳಲ್ಲಿ ಲಕ್ಷ್ಮಿ ಕಟಾಕ್ಷ ಯಾವಾಗಲೂ ಹೆಚ್ಚುತ್ತಿರುವಂತೆ ಕಾಣಬೇಕು. ಮುಟ್ಟಿದ್ದೆಲ್ಲ ಚಿನ್ನವಾಗಬೇಕು, ಕೆಲಸದಲ್ಲಿ ಪ್ರಗತಿಯಾಗಬೇಕು ಎಂಬುದು ಎಲ್ಲರ ಆಸೆ. ಈ ದೀಪಾವಳಿಯಿಂದ ಲಕ್ಷ್ಮಿ ಕಟಾಕ್ಷವನ್ನು ಹೆಚ್ಚಿಸಲು ಈ ಪವಿತ್ರ ತೀರ್ಥವನ್ನು ಬಳಸಿ ಮತ್ತು ಸಂಪತ್ತು ಅಕ್ಷಯ ಪಾತ್ರೆಯಂತೆ ಸಂಗ್ರಹವಾಗುತ್ತಲೇ ಇರುತ್ತದೆ. ಈ ಪವಿತ್ರ ತೀರ್ಥವನ್ನು ಹೇಗೆ ತಯಾರಿಸುವುದು? ಅಂತಹ ಮಾಹಿತಿಯನ್ನು ಈ ಆಧ್ಯಾತ್ಮಿಕ ಪೋಸ್ಟ್ ಮೂಲಕ ನೋಡುವುದನ್ನು ಮುಂದುವರಿಸೋಣ . ಈ ಪವಿತ್ರ ತೀರ್ಥವನ್ನು ಮಹಾಲಕ್ಷ್ಮಿಯ ಶುಭ ಶುಕ್ರವಾರ ಮತ್ತು ಕುಬೇರನಿಗೆ ಮಂಗಳಕರವಾದ ಗುರುವಾರ ಎರಡೂ ದಿನಗಳಲ್ಲಿ ತಯಾರಿಸಿ ಬಳಸಬೇಕು. ಮಂಗಳವಾರದಂದು ಸಂಜೆ ಐದರಿಂದ ಎಂಟು ಗಂಟೆಯವರೆಗೆ ಪೂಜೆಯನ್ನು ಮಾಡಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳಿಗೆ ಕೊಕ್ ಕೊಡುವ ಕೆಲಸಕ್ಕೆ ಈಗ ಕೈ ಹಾಕಲಿದೆ ಎಂಬುದಾಗಿ ನನಗೆ ಅನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿನ್ನೆ ಕಾಂಗ್ರೆಸ್ ಶಾಸಕ ಹರಿಪ್ರಸಾದ್ ಅವರು ಹೇಳಿಕೆ ನೀಡಿದ್ದಾರೆ. ಈ ಗ್ಯಾರಂಟಿಗಳು ಸಾಕು; ಅಭಿವೃದ್ಧಿ ಕಡೆಗೆ ಗಮನ ಕೊಡಿ ಎಂದಿದ್ದಾರೆ ಎಂದು ಗಮನ ಸೆಳೆದರು. ರಾಜ್ಯದ ಕಾಂಗ್ರೆಸ್ ಸರಕಾರವು ಮೆಟ್ರೋ ದರವನ್ನೂ ಏರಿಸಿದೆ; ಹಾಲಿನ ದರ ಏರಿಕೆ, ಸ್ಟಾಂಪ್ ಡ್ಯೂಟಿ ಹೆಚ್ಚಳ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದು, ದವಸ ಧಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಇಷ್ಟೆಲ್ಲ ಆದರೂ ಯಾವುದಕ್ಕೆ ದರ ಏರಿಸಬೇಕು ಎಂಬುದರಲ್ಲಿ ಸರಕಾರ ಬ್ಯುಸಿ ಇದೆ ಎಂದು ಟೀಕಿಸಿದರು. ಈ ಭಾರವನ್ನು ಬಿಸಾಕಿ ಹೋಗುವ ಪರಿಸ್ಥಿತಿ ಇದೆ ಎಂದು ತಿಳಿಸಿದರು. ಈ ಸರಕಾರ ಎಲ್ಲ ವಿಚಾರದಲ್ಲೂ ಕೈಚೆಲ್ಲಿ ಕುಳಿತಿದೆ. ಇವರಿಗೆ ಗ್ಯಾರಂಟಿ…
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪು ಟ್ರ್ಯಾಕ್ಟರ್ 20 ಅಡಿ ಆಳಕ್ಕೆ ಉರುಳಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವಂತ ಘಟನೆ ಚಿಕ್ಕಮಗಳೂರಿನ ತೀರ್ಥಕೆರೆ ಬಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸಮೀಪದ ತೀರ್ಥಕೆರೆ ಎಸ್ಟೇಟ್ ನಲ್ಲಿ ಅಸ್ಸಾಂ ಮೂಲಕ ಕಾರ್ಮಿಕರು ಕೂಲಿ ಕೆಲಸ ಮಾಡಿಕೊಂಡಿದ್ದರು. ಇಂದು ದಿನಸಿ ಖರೀದಿ ಟ್ರ್ಯಾಕ್ಟರ್ ನಲ್ಲಿ ಹಿಂದಿರುಗುತ್ತಿದ್ದಾಗ ಜಯಪುರದ ಬಳಿಯಲ್ಲಿ ಚಾಲಕನ ನಿಯಂತ್ರ ತಪ್ಪಿ 20 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಯಪುರ ಹಾಗೂ ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/ksrtc-bags-7-national-world-innovation-awards/ https://kannadanewsnow.com/kannada/bengaluru-air-show-to-begin-from-tomorrow-heres-the-big-update-for-motorists/
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಮತ್ತಷ್ಟು ಪ್ರಶಸ್ತಿಗಳ ಸರಮಾಲೆಯೇ ಬಂದಿದೆ. 7 ರಾಷ್ಟ್ರೀಯ, ವಿಶ್ವ ನಾವೀನ್ಯತೆಯ ಪ್ರಶಸ್ತಿಗಳು ಕೆ ಎಸ್ ಆರ್ ಟಿಸಿಗೆ ಬಂದಿವೆ. ಈ ಬಗ್ಗೆ ನಿಗಮದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆಎಸ್ಆರ್ಟಿಸಿ ಅನುಷ್ಠಾನಗೊಳಿಸಿರುವ ಉಪಕ್ರಮಗಳಿಗೆ ರಾಷ್ಟ್ರೀಯ ಹಾಗೂ ವಿಶ್ವ ನಾವೀನ್ಯತೆ ಪ್ರಶಸ್ತಿಗಳು ಈ ಕೆಳಕಂಡ ವರ್ಗಗಳಲ್ಲಿ ಲಭಿಸಿರುತ್ತದೆ ಎಂದಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ.17, 18 ಮತ್ತು 21, 2025ರಂದು ಮುಂಬೈನಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಹೀಗಿದೆ ಕೆ ಎಸ್ ಆರ್ ಟಿಸಿಗೆ ಬಂದಿರುವಂತ ಪ್ರಶಸ್ತಿಗಳ ಪಟ್ಟಿ 1. ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ 2. ಕನಸುಗಳ ಕಂಪನಿಗಳು – ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ 3. ವರ್ಷದ ವ್ಯವಹಾರ ನಾಯಕ ಪ್ರಶಸ್ತಿ – ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ 4. ವಿಶ್ವ ಆರೈಕೆ ಪ್ರಶಸ್ತಿ – ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ 5. ವಿಶ್ವ ನಾವಿನ್ಯತೆ ಪ್ರಶಸ್ತಿ – ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ…
ಬಾಗಲಕೋಟೆ : ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಮಣ್ಣಿನಲ್ಲಿ ಆಡಲು, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿದರೆ ಮಕ್ಕಳ ಸೃಜನಶೀಲತೆ, ಕ್ರಿಯಾಶೀಲತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ ನೀಡಿದರು. ಹೊಳೆ ಹುಚ್ಚೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಶಾಲೆಗಳ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗಡಿಯಲ್ಲಿ ಸಿಗುವ ಪ್ಲಾಸ್ಟಿಕ್ ಆಟದ ವಸ್ತುಗಳಿಗೆ ಮಕ್ಕಳು ಅಂಟಿಕೊಂಡರೆ ಮಕ್ಕಳಲ್ಲಿ ಸೃಜನಶೀಲತೆ ಸತ್ತು ಹೋಗುತ್ತದೆ. ಮಕ್ಕಳು ತಮ್ಮ ಆಟದ ವಸ್ತುವನ್ನು ತಾವೇ ಸೃಷ್ಟಿಸಿಕೊಳ್ಳುವುದರಿಂದ ಸೃಜನಶೀಲತೆ ಚಿಗುರುತ್ತದೆ ಎಂದರು. ಸಮಾಜದಿಂದ ಬಂದಿದ್ದು ವಾಪಾಸ್ ಸಮಾಜಕ್ಕೆ ಹಂಚುವ ಕನಸು ಕಟ್ಟಿಕೊಂಡು ಹೊಳೆ ಹುಚ್ಚೇಶ್ವರ ಸಂಸ್ಥೆ ಕ್ರಿಯಾಶೀಲವಾಗಿ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಶ್ರಮಿಸುತ್ತಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಪಾರವಾಗಿ ಪ್ರೀತಿಸುವ, ಬೆಂಬಲಿಸುವ ಶರಣರ ಜಿಲ್ಲೆ ಬಾಗಲಕೋಟೆ ಅಂದರೆ ನನಗೆ ಅತೀವ ಪ್ರೀತಿ. ಈ ಜಿಲ್ಲೆಯ ಹೊಳೆ ಹುಚ್ಚೇಶ್ವರ ಸಂಸ್ಥೆ ಅನ್ನ-ಅಕ್ಷರ ದಾಸೋಹದಲ್ಲಿ ಅಪಾರ ಕೆಲಸ ಮಾಡುತ್ತಿದೆ ಎಂದು…
ಬೆಂಗಳೂರು: ನಾಳೆಯಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ 2025ರ ಪ್ರದರ್ಶನ ಆರಂಭಗೊಳ್ಳಲಿದೆ. ಬಾನಂಗಳದಲ್ಲಿ ಬಗೆ ಬಗೆಯ ಲೋಹದ ಹಕ್ಕಿಗಳು ತಮ್ಮ ಆಕರ್ಷಕ ಪ್ರದರ್ಶನವನ್ನು ನೀಡಲಿದ್ದಾವೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಾಹನ ಸವಾರರಿಗೆ ಸಂಚಾರ ಪೊಲೀಸರು ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಯಲಹಂಕ ವಾಯುಸೇನಾ ನೆಲೆಯಲ್ಲಿ ದಿನಾಂಕ: 10-02-2025 ರಿಂದ ದಿನಾಂಕ:14-02-2025 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ- 2025 ವೈಮಾನಿಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ. ದಿನಾಂಕ:10-02-2025 ರ ಬೆಳಿಗ್ಗೆ ಸದರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ನಡೆಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯು ಬೆಂಗಳೂರು-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-44 (ಅಂತರಾಷ್ಟ್ರೀಯ ಏರ್ಮೊರ್ಟ್ ರಸ್ತೆ)…
ಹಾವೇರಿ : ಸಂಘರ್ಷದಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರಕಾರದ ಜತೆ ಸಂಘರ್ಷ ನಡೆಸುವುದರಿಂದ ರಾಜ್ಯದ ಯಾವುದೇ ಸಮಸ್ಯೆ, ವಿವಾದ ಬಗೆಹರಿಯುವುದೂ ಇಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ಕರ್ನಾಟಕ ವೈಭವ ವೈಚಾರಿಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಭಾಷಣ ಮಾಡಿದರು. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದೆ. ನಾನು ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯ ಎಲ್ಲಾ ಸಚಿವರು ಕೆಲಸ ಮಾಡಲು ತಯಾರಿದ್ದಾರೆ. ಆದರೆ, ದಿನಕ್ಕೊಂದು ತಂಟೆ ತಕರಾರು ಮಾಡಿಕೊಂಡು ರಾಜ್ಯ ಸರಕಾರ ಅಮೂಲ್ಯ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ರಾಷ್ಟ್ರಕವಿ ಕುವೆಂಪು ಅವರು ‘ಜಯಭಾರತ ಜನನಿಯ ತನುಜಾತೆ’ ಎಂದು ಬರೆದಿದ್ದಾರೆ. ಕುವೆಂಪು ಅವರು ಭಾರತವನ್ನು ತಾಯಿಯಾಗಿ ಮತ್ತು ಕರ್ನಾಟಕವನ್ನು ಆಕೆಯ ಮಗಳಂತೆ ಭಾವಿಸಿದ್ದಾರೆ. ಇಂತಹ ಮಹೋನ್ನತ ವಿಶಾಲ ದೃಷ್ಟಿಕೋನ ಅವರದ್ದು ಎಂಬುದನ್ನು ಈ ಒಂದು ಸಾಲಿನ ಮೂಲಕ ಅರ್ಥ ಮಾಡಿಕೊಳ್ಳಬಹುದು. ಆದರೆ, ರಾಜ್ಯ ಸರಕಾರ…
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಹೇಳಿದ್ದಾರೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ. ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ: ಮೊದಲ ದಿನ. ಫೆಬ್ರುವರಿ 12: * ಬೆಳಿಗ್ಗೆ 10:35 – 11:05 | ಸಭಾಂಗಣ…