Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯನಗರ: ಲಾಡ್ಜ್ ಕೊಠಡಿಯೊಂದರಲ್ಲೇ ನೇಣುಬಿಗಿದುಕೊಂಡು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ದಾಕ್ಷಾಯಿಣಿ ಲಾಡ್ಜ್ ನಲ್ಲಿ ಗುತ್ತಿಗೆದಾರನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬದಿದೆ. ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಆನಂದ್ ಉಮೇಶ್ ಹೆಗಡೆ(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆಯಿಂದ ದಾಕ್ಷಾಯಿಣಿ ಲಾಡ್ಜ್ ನ 17ನೇ ರೂಮಿನಲ್ಲಿ ಗುತ್ತಿಗೆದಾರರು ವಾಸವಿದ್ದರು. ಈ ಸಂಬಂಧ ಹೂವಿನಹಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/minister-zameer-ahmed-good-news-for-bengaluru-lawyers-housing-scheme-implemented-for-lawyers-too/ https://kannadanewsnow.com/kannada/public-attention-significant-change-in-aadhaar-card-update-rules-from-november-1/
ಬೆಂಗಳೂರು : ವಸತಿ ಇಲಾಖೆಯ ಗೃಹಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಹಾಗೂ ಹೆಚ್ಚುವರಿ ಅಡ್ವೋಕೇಟ್ ಜನರಲ್ ಇಸ್ಮಾಯಿಲ್ ಜಬೀವುಲ್ಲಾ ಅವರು, ಸಚಿವರನ್ನು ಭೇಟಿ ಮಾಡಿ ವಸತಿ ರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಾಣ ಮಾಡಿಕೊಡುವ ಬಗ್ಗೆ ಮನವಿ ಸಲ್ಲಿಸಿದಾಗ, ವಸತಿ ಸಂಕೀರ್ಣ ನಿರ್ಮಾಣಕ್ಕೆ ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ನಗರದ ಹಲವೆಡೆ 2 ಬಿ ಎಚ್ ಕೆ ವಸತಿ ಸಂಕೀರ್ಣ ನಿರ್ಮಿಸಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಗೃಹಮಂಡಳಿ ಆಯುಕ್ತ ದಯಾನಂದ್,ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಶಿನ್ನಾಳ್ಕರ್, ಪ್ರಧಾನ ವ್ಯವಸ್ಥಾಪಕ ಪರಶುರಾಮ್…
ಮಂಡ್ಯ : ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ರಂಗೇರಿದ್ದು, 8 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರೆ, ಉಳಿದ 8 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಸೋಮವಾದಂದು ಹಲವು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದರಿಂದ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಶಿವಮೂರ್ತಿ ಘೋಷಣೆ ಮಾಡಿದ್ದಾರೆ. ಹೌದು, ಇಡೀ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಹಾಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ, ಹಾಲಿ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಹಾಲಿ ನಿರ್ದೇಶಕ ಪಿ.ಸಂದರ್ಶ್, ಸಿ.ಸಚ್ಚಿನ್, ಬಿ.ಗಿರೀಶ್, ಕೆ.ವಿ.ದಿನೇಶ್, ಹೆಚ್.ಅಶೋಕ್, ಎ.ವಿಜೇಂದ್ರ ಮೂರ್ತಿ ಇವರ ಪ್ರತಿಸ್ಪರ್ಧಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾಗಿದ್ದು, ಚುನಾವಣಾಧಿಕಾರಿ ಕಛೇರಿಗೆ ಆಗಮಿಸಿ ತಮ್ಮ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಇದೇ ವೇಳೆ ತಮ್ಮ ಅಪಾರ ಅಭಿಮಾನಿಗಳು ಡಿಸಿಸಿ ಬ್ಯಾಂಕ್ ಮುಂದೆ ವಿಜಯೋತ್ಸವ ಆಚರಿಸಿದರು. ಇದರೊಂದಿಗೆ ಮಂಡ್ಯ ತಾಲ್ಲೂಕು, ಪಾಂಡವಪುರ ತಾಲೂಕು, ಕೆ.ಆರ್.ಪೇಟೆ ತಾಲೂಕು ಹಾಗೂ…
ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು. ಎಸ್ ಐ ಟಿ ವರದಿ ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು. ವಾಹನ ಸೌಲಭ್ಯ ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ…
ಬೆಂಗಳೂರು: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡವೊಂದರ ಗೋಡೆ ಕುಸಿತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂಬುದಾಗಿ ಕನ್ನಡ ನ್ಯೂಸ್ ನೌನಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಆದರೇ ಶಿವಮೊಗ್ಗ ಜಿಲ್ಲೆಯ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಶ್ರಮಿಕ ವಸತಿ ಸಮುಚ್ಛಯವಿರುವುದು ಸರಿಯಷ್ಟೇ. ಆದರೇ ಶ್ರಮಿಕ ವಸತಿ ಸಮುಚ್ಛಯದ ಯಾವುದೇ ಗೋಡೆ ಕುಸಿದಿರುವುದಿಲ್ಲ. ಪ್ರಸ್ತುತ ಮಂಡಳಿಯಿಂದ ಸದರಿ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರುವುದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌಗೆ ಪತ್ರ ಬರೆದಿರುವಂತ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳು ಶ್ರಮಿಕ ವಸತಿ ಸಮುಚ್ಛಯದ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣದ ಗುತ್ತಿಗೆದಾರರು ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿದ್ದು, ಸದರಿ ಸಮುಚ್ಛಯದ ಕಾಮಗಾರಿ ಸಂಪೂರ್ಣಗೊಂಡ ಹಿನ್ನಲೆಯಲ್ಲಿ ಗುತ್ತಿಗೆದಾರರು ತಾತ್ಕಾಲಿಕ ಶೆಡ್ ಗಳನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಿದಂತೆ ಆಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ :04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ…
ಶಿವಮೊಗ್ಗ: ಬಹುತೇಕರು ಯೂಟ್ಯೂಬ್ ನಲ್ಲಿ ತರಾವರಿ ವೀಡಿಯೋ ನೋಡುತ್ತಾರೆ. ಈ ವೀಡಿಯೋಗಳ ಜೊತೆಗೆ ಜಾಹೀರಾತು ಕೂಡ ಪ್ರಸಾರ ಮಾಡಲಾಗುತ್ತದೆ. ಹೀಗೊಂದು ಯೂಟ್ಯೂಬ್ ನಲ್ಲಿ ಜಾಹೀರಾತು ಕಂಡು ಹೆಚ್ಚಿನ ಲಾಭಾಂಶದ ಆಮಿಷಕ್ಕೆ ಒಳಗಾದಂತ ಮಹಿಳೆಯೊಬ್ಬರು ಬರೋಬ್ಬರಿ 49 ಲಕ್ಷ ಕಳೆದುಕೊಂಡಿದ್ದಾರೆ. ಅದು ಎಲ್ಲಿ ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಹೊಸನಗರದ ಮಹಿಳೆಯೊಬ್ಬರು ಯೂಟ್ಯೂಬ್ ವೀಕ್ಷಿಸುವಂತ ಸಂದರ್ಭದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚು ಲಾಭಾಂಶ ಸಿಗಲಿದೆ ಎನ್ನುವಂತ ಜಾಹೀರಾತು ಗಮನಿಸಿದ್ದಾರೆ. ಅದರಲ್ಲಿ ನೀಡಿದಂತ ವಾಟ್ಸ್ ಆಪ್ ಗುಂಪು ಸೇರುವಂತ ಗ್ರೂಪಿಗೂ ಆಕರ್ಷಿತಳಾಗಿ ಸೇರಿದ್ದಾರೆ. ಮಹಿಳೆ ಸೇರಿದಂತ ವಾಟ್ಸ್ ಆಪ್ ಗ್ರೂಪಿನಲ್ಲಿ ಮತ್ತೊಂದು ಆಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅದರಂತೆ ಅದನ್ನು ಡೌನ್ ಲೋಡ್ ಮಾಡಿಕೊಂಡ ಬಳಿಕ, ತಮ್ಮ ಕಂಪನಿಯ ವ್ಯವಸ್ಥಾಪಕರು ಎಂಬುದಾಗಿ ವ್ಯಕ್ತಿಯೊಬ್ಬ ಪರಿಚಯಿಸಿಕೊಂಡಿದ್ದಾರೆ. ಹೂಡಿಕೆ ಮಾಡೋದಕ್ಕೆ ಬ್ಯಾಂಕ್ ಖಾತೆ ಸಂಖ್ಯೆಗಳನ್ನು ಕಳುಹಿಸಿದ್ದಾರೆ. ಅವರು ನೀಡಿದಂತ ಹೂಡಿಕೆ ಮಾಡುವಂತ ಬ್ಯಾಂಕ್ ಖಾತೆಗೆ ಮಹಿಳೆ ತನ್ನ ಪತಿ ಖಾತೆಯಿಂದ ಹಣವನ್ನು ಸಂದಾಯ…
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಕುಡಿಯಲು ಹಣ ಕೊಡಲಿಲ್ಲ ಎಂಬುದಾಗಿ ತನ್ನ ಸ್ನೇಹಿತ ಮೇಲೆಯೇ ಸ್ನೇಹಿತ ಲಾಂಗ್ ನಿಂದ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಅರಸು ಕಾಲೋನಿಯ ಮಾರಮ್ಮ ದೇಗುಲದ ಬಳಿಯಲ್ಲಿ ಈ ಘಟನೆ ನಡೆದಿದೆ. ಡೆಲಿವರಿ ಬಾಯ್ ಮುನಿಯಪ್ಪ ಮೇಲೆ ಗೌತಮ್, ಸೂರ್ಯ ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಅಕ್ಟೋಬರ್.21ರಂದು ರಾತ್ರಿ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಈಸ್ಟ್ ಎಂಡ್ ಬಾರ್ ಒಂದರಲ್ಲಿ ಮದ್ಯವನ್ನು ಮುನಿಯಪ್ಪ ಸೇವಿಸುತ್ತಿದ್ದರು. ಅಲ್ಲಿಗೆ ಬಂದು ಎಣ್ಣೆ ಕೊಡಿಸು ಎಂಬುದಾಗಿ ಆರೋಪಿಗಳಾದಂತ ಗೌತಮ್, ಸೂರ್ಯ ಕೇಳಿದ್ದಾರೆ. ನನ್ನ ಬಳಿ ಹಣ ಇಲ್ಲ. ನಿನಗೆ ಯಾಕೆ ಎಣ್ಣೆ ಕೊಡಿಸಬೇಕು ಎಂಬುದಾಗಿ ಮುನಿಯಪ್ಪ ತಿಳಿಸಿದ್ದಾರೆ. ಇದೇ ಕಾರಣಕ್ಕೆ ಕೋಪದಲ್ಲಿ ಕಾಲೋನಿ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಕಿರಿಕ್ ಮಾಡಲಾಗಿದೆ. ನಾನು ಜೈಲಿನಿಂದ ಹೊರ ಬಂದು 15 ದಿನ ಆಗಿದೆ ಅಷ್ಟೇ. ನನ್ನನ್ನು ಕಂಡ್ರೆ ಭಯ ಇಲ್ವ ಎಂದು…
ಓಂ ಅಂಜನೇಯಾಯ ವಿದ್ಯಮಹೆ – ಅಂಜನಾದೇವಿಯ ಪುತ್ರನಾದ ಹನುಮಂತನನ್ನು ನಾವು ಧ್ಯಾನಿಸುತ್ತೇವೆ. ವಾಯುಪುತ್ರಾಯ ಧೀಮಹಿ – ವಾಯುದೇವನ ಮಗನಾದ ಹನುಮಂತನಲ್ಲಿ ನಮ್ಮ ಮನಸ್ಸನ್ನು ಕೇಂದ್ರೀಕರಿಸುತ್ತೇವೆ. ತನ್ನೋ ಹನುಮಾನ್ ಪ್ರಚೋದಯಾತ್ – ಆ ಮಹಾ ವೀರ ಹನುಮಂತ ನಮ್ಮ ಬುದ್ಧಿಯನ್ನು, ಶಕ್ತಿ, ಧೈರ್ಯವನ್ನು ಪ್ರೇರೇಪಿಸಲಿ. — ಉಪಯೋಗ ಮತ್ತು ಪ್ರಯೋಜನಗಳು: 1. ಭಯ ನಿವಾರಣೆ – ಭೂತ, ಪ್ರೇತ, ದೆವ್ವ ಅಥವಾ ಅಶುಭ ಶಕ್ತಿಗಳಿಂದ ರಕ್ಷಣೆ ಪಡೆಯಲು ಈ ಮಂತ್ರ ಅತ್ಯಂತ ಪರಿಣಾಮಕಾರಿ. 2. ಶಕ್ತಿ ಮತ್ತು ಧೈರ್ಯ ವೃದ್ಧಿ – ಹನುಮಂತ ಶಕ್ತಿಯ ಸಂಕೇತ. ಈ ಮಂತ್ರ ಜಪ ಮಾಡಿದರೆ ದೈಹಿಕ ಮತ್ತು ಮಾನಸಿಕ ಶಕ್ತಿ ಎರಡೂ ಹೆಚ್ಚಾಗುತ್ತವೆ. 3. ಮನುಷ್ಯನ ಬುದ್ಧಿ, ಸ್ಮರಣೆ ಮತ್ತು ಏಕಾಗ್ರತೆ – ವಿದ್ಯಾರ್ಥಿಗಳು ಮತ್ತು ಪರೀಕ್ಷೆಗೆ ತಯಾರಿ ಮಾಡುವವರು ಈ ಮಂತ್ರವನ್ನು ಪ್ರತಿ ದಿನ 11 ಅಥವಾ 21 ಸಲ ಜಪಿಸಿದರೆ ಏಕಾಗ್ರತೆ ಹೆಚ್ಚಾಗುತ್ತದೆ. 4. ಆತ್ಮವಿಶ್ವಾಸ ಮತ್ತು ಧೈರ್ಯ – ಜೀವನದ ಸಂಕಷ್ಟದಲ್ಲಿ ಆತ್ಮವಿಶ್ವಾಸ ಕಳೆದುಕೊಂಡವರಿಗೆ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ. ಎಲ್ಸಿ 43- ಯಲವಟ್ಟಿ ರಸ್ತೆ ಅ. 28ರ ಬೆ.8 ರಿಂದ ಅ.29 ರ ಸಂಜೆ 6ರವರೆಗೆ ಎಲ್.ಸಿ.46 ಮುಖಾಂತರ -ಹೊಸೊಡಿ ರಸ್ತೆ, ಯಲವಟ್ಟಿ ರಸ್ತೆ ಸಂಪರ್ಕ ಬದಲಿ ಮಾರ್ಗ. ಎಲ್ಸಿ 46- ಚಿತ್ರದುರ್ಗ ರಸ್ತೆ-ಅ.30ರ ಬೆ.8 ರಿಂದ ಅ.31 ರ ಸಂಜೆ 6 ರವರೆಗೆ ಹೊಸದಾಗಿ ನಿರ್ಮಿಸಿದ ಮೇಲ್ಸೇತುವೆ ಚಿತ್ರದುರ್ಗ ಸಂಪರ್ಕ ರಸ್ತೆ ಮಾರ್ಗ. ಎಲ್ಸಿ 47-ಮಲ್ಲೇಶ್ವರ ನಗರ ರಸ್ತೆ -ನ.2 ರ ಬೆ. 8 ರಿಂದ ನ. 3ರ ಸಂಜೆ 6 ರವರೆಗೆ ಮಲ್ಲೇಶ್ವರ ನಗರ ರಸ್ತೆ-ಹೊನ್ನಾಳಿ ರಸ್ತೆ- ಸಂಗೊಳ್ಳಿ ರಾಯಣ್ಣ ಸರ್ಕಲ್ -ಶಂಕರಮಠ ಸಂಪರ್ಕ…














