Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಲುವಾಗಿ ನಡೆದ ಮೂಲ ದಾಖಲೆಗಳ ಪರಿಶೀಲನೆ ವೇಳೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ (SCA, SCB, SCC) ಸಂಬಂಧ ದಾಖಲೆ ಸಲ್ಲಿಸದಿರುವ ಅಭ್ಯರ್ಥಿಗಳು ನ.25 ಮತ್ತು 26 ರಂದು ಖುದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಬಂದು ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆ ಪರಿಶೀಲನೆ ವೇಳೆಗೆ ಅನೇಕರು ತಹಶೀಲ್ದಾರ್ ಅವರಿಂದ ಒಳ ಮೀಸಲಾತಿ ಕುರಿತ ಪ್ರಮಾಣ ಪತ್ರಗಳನ್ನು ಪಡೆಯಲು ಆಗಿರಲಿಲ್ಲ ಎಂದು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸಿದ ಕಾರಣಕ್ಕೆ ಈ ಅನುಕೂಲ ಮಾಡಲಾಗಿದೆ. ಯಾರೆಲ್ಲ ದಾಖಲೆಗಳನ್ನು ಪರಿಶೀಲನಾ ಅರ್ಜಿ ಜತೆ ಸಲ್ಲಿಸುತ್ತಾರೊ ಅಂತಹವರನ್ನು ಸದರಿ ಪ್ರವರ್ಗದಡಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/whatever-siddaramaiah-says-it-is-the-same-as-the-scriptures-dcm-d-k-shivakumar/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ ಮತ್ತು ನಿಖರ ಸುದ್ದಿಗಳನ್ನು ಜನರಿಗೆ ತಲುಪಿಸಲು ಸಂಘಟಿತ ನಡೆಸುವ ಮೂಲಕ ವಿಶ್ವಾಸರ್ಹತೆ ಕಾಪಾಡಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುದ್ದಿಯನ್ನು ತಲುಪಿಸುವ ನಿಟ್ಟಿನಲ್ಲಿ ಧಾವಂತ ಬೇಡ. ಸರಿಯಾದ ಸುದ್ದಿಯನ್ನು ಜನರಿಗೆ ತಲುಪಿಸುವುದು ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು. ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ. ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ…
ಬೆಂಗಳೂರು: ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೇ ಆಗಲಿ ಮಾತನಾಡಿಲ್ಲ. ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಾ ಇದ್ದೀರಿ. ನೀವುಗಳೇ ಅನವಶ್ಯಕ ಗೊಂದಲ ಮೂಡಿಸುತ್ತಿದ್ದೀರಿ. ನನಗೂ ಹಾಗೂ ಯಾರಿಗೂ ಗೊಂದಲಗಳಿಲ್ಲ. ಏನಾದರೂ ಇದ್ದರೆ ನಾನು ಹಾಗೂ ಪಕ್ಷದ ಹೈಕಮಾಂಡ್ ಬಗೆಹರಿಸಿಕೊಳ್ಳುತ್ತೇವೆ. ಏನೇ ತೀರ್ಮಾನ ಆಗಿದ್ದರು ಅದು ಒಂದು ಕೊಠಡಿಯ ಆಂತರಿಕ ಚೌಕಟ್ಟಿನ ಒಳಗೆ ಆಗಿರುತ್ತದೆ” ಎಂದರು.…
ಯಾದಗಿರಿ : ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿ ನಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಆದರೆ, ಅದರ ಪೂರೈಕೆಯನ್ನು ಸಮರ್ಪಕಗೊಳಿಸುವುದು ಅವಶ್ಯವಾಗಿದೆ. ಹೀಗಾಗಿ ಪಂಪ್ ಸೆಟ್ ಗಳಿಗಾಗಿ ಹಾಗೂ ಇತರೆ ಅವಶ್ಯಕತೆಗಳು ಮತ್ತು ಕೈಗಾರಿಕೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಳ್ಳತನ ಆಗದಂತೆ ನಿಗಾವಹಿಸಬೇಕು. ಜತೆಗೆ ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗದಂತೆ ನೋಡಿಕೊಳ್ಳಬೇಕು,” ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಈಗಾಗಲೇ ಸ್ಥಾಪಿಸಿರುವ ವಿದ್ಯುತ್ ಉಪ…
ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಚುನಾವಣೆಗೆ ತಡೆಯಾಜ್ಞೆ ತಂದಿರುವುದನ್ನು ತೆರವುಗೊಳಿಸಲು ನಮ್ಮ ಸಮಿತಿ ಪ್ರಯತ್ನಶೀಲವಾಗಿದೆ ಎಂದು ಪ್ರತಿಷ್ಟಾನದ ಉಪಾಧ್ಯಕ್ಷ ಸುಂದರ ಸಿಂಗ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನ.30ಕ್ಕೆ ಚುನಾವಣೆ ನಿಗಧಿಯಾಗಿದ್ದು, ಎಲ್ಲ ಪ್ರಕ್ರಿಯೆ ಮುಗಿದಿರುವ ಸಂದರ್ಭದಲ್ಲಿಯೆ ಕೊರಮ ಸಮಾಜದವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದರು. ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನವು ಜಿಲ್ಲಾ ನ್ಯಾಯಾಲಯದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದೆ. ಜಿಲ್ಲಾ ನ್ಯಾಯಾಲಯವು ದಿನಾಂಕ 11-07-2025ರಂದು 11-10-2025ರೊಳಗೆ ಚುನಾವಣೆ ನಡೆಸಲು ಆದೇಶ ನೀಡಿತ್ತು. ಈಗಾಗಲೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಚುನಾವಣೆಗೆ ಯಾವುದೇ ಅಡೆತಡೆ ಬರಬಾರದು ಎಂದು ನಮ್ಮ ಪ್ರತಿಷ್ಟಾನದ ವತಿಯಿಂದ ಕೆವಿಯಟ್ ಸಹ ತರಲಾಗಿತ್ತು. ಆದರೆ ಕೊರಮ ಸಮಾಜದವರು ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿಲ್ಲ ಎಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ನ್ಯಾಯಾಲಯ…
ಬೆಂಗಳೂರು: ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್.7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಚುನಾವಣಾ ಪ್ರಕ್ರಿಯೆ ಶುರುವಾಗಿ ಕ್ರಿಕೆಟಿಗೆ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರವನ್ನು ಸಲ್ಲಿಸಿದ್ದರು. ಆದರೇ ವಿರೋಧಿ ಬಣದಿಂದ ಅಭ್ಯರ್ಥಿಯಾಗಿ ಶಾಂತಕುಮಾರ್ ಸಲ್ಲಿಸಿದ್ದಂತ ನಾಮಪತ್ರ ತಿರಸ್ಕೃತಗೊಂಡಿದೆ. ಈ ಹಿನ್ನಲೆಯಲ್ಲಿ ಕೆ ಎಸ್ ಸಿ ಎ ( Karnataka State Cricket Association -KSCA) ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/the-power-to-drive-away-evil-lies-in-two-leaves/
ಲಂಡನ್: ಬ್ರಿಟನ್ನಿನ ದೈತ್ಯ ಕಂಪನಿಗಳಿಂದ ರಾಜ್ಯಕ್ಕೆ ಬಂಡವಾಳ ಆಕರ್ಷಿಸಿ, ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೈಗೊಂಡಿರುವ ಇಂಗ್ಲೆಂಡ್ ಪ್ರವಾಸ ಸೋಮವಾರದಿಂದ ಆರಂಭವಾಗಿದೆ. ಬುಧವಾರ ಕೊನೆಗೊಳ್ಳಲಿರುವ ಈ ಮೂರು ದಿನಗಳ ಪ್ರವಾಸದಲ್ಲಿ ಅವರು 20ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮೊದಲ ದಿನವಾದ ಸೋಮವಾರ ಅವರು ಅಗ್ರಗಣ್ಯ ಉದ್ಯಮ ಸಂಸ್ಥೆಗಳಾಗಿರುವ ಮಾರ್ಟಿನ್ ಬೇಕರ್, ಎಸ್.ಸಿ.ಐ ಸೆಮಿಕಂಡಕ್ಟರ್ಸ್, ಸ್ಯಾಮ್ಕೊ ಹೋಲ್ಡಿಂಗ್ಸ್, ಎ.ಆರ್.ಎಂ, ಲ್ಯಾಟೋಸ್ ಗ್ರೂಪ್, ವಿಯರ್ ಮತ್ತು ಎಡ್ವರ್ಡಿಯನ್ ಹೋಟೆಲ್ ಗ್ರೂಪ್ ಪ್ರಮುಖರನ್ನು ಭೇಟಿ ಮಾಡಿದರು. ಈ ಪ್ರವಾಸ ಕಾರ್ಯಕ್ರಮ ಮೂರು ತಿಂಗಳ ಹಿಂದೆಯೇ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ರಾಜ್ಯದಲ್ಲಿರುವ ಕೈಗಾರಿಕಾ ಕಾರ್ಯ ಪರಿಸರ, ಮೂಲಸೌಕರ್ಯ, ಭೂಮಿಯ ಲಭ್ಯತೆ, ವಿಷನ್ ಗ್ರೂಪ್ ಚಿಂತನೆ, ಇನ್ವೆಸ್ಟ್ ಕರ್ನಾಟಕ ಫೋರಂನ ಉದ್ದೇಶ, ಪ್ರವರ್ಧಮಾನಕ್ಕೆ ಬರುತ್ತಿರುವ ಆಧುನಿಕ ಉದ್ದಿಮೆಗಳು, ರಫ್ತುಕೇಂದ್ರಿತ ಕೈಗಾರಿಕಾ ನೀತಿ, ಕೊಡಲಾಗುವ ರಿಯಾಯಿತಿ/ವಿನಾಯಿತಿ ಮತ್ತು ಪ್ರೋತ್ಸಾಹನಾ ಭತ್ಯೆಗಳನ್ನು ಕುರಿತು ಸಮಗ್ರ ಮಾಹಿತಿ…
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) – ಎಐ ಮತ್ತು ಡೇಟಾ ಸೈನ್ಸ್ ಶಾಖೆಯ ಮೂವರು ವಿದ್ಯಾರ್ಥಿಗಳು ಧಾರವಾಡದ ಐಐಐಟಿ ಮತ್ತು ಐಐಟಿ ಸಂಯುಕ್ತವಾಗಿ ಆಯೋಜಿಸಿದ್ದ ಹ್ಯಾಕಥಾನ್ನಲ್ಲಿ ಟಾಪ್ 5 ತಂಡಗಳಲ್ಲಿ 5ನೇ ಸ್ಥಾನಗಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದ ಅತಿದೊಡ್ಡ ಕೋಡಿಂಗ್ ಸ್ಪರ್ಧೆ ಎಂದು ಗುರುತಿಸಲಾಗಿದ್ದು, ರಾಜ್ಯದ 80 ಕಾಲೇಜುಗಳಿಂದ 125ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಈ ತೀವ್ರ ಸ್ಪರ್ಧೆಯಲ್ಲಿ ಪಿಯೂಷ್, ಅದ್ವಿಕಾ ಮತ್ತು ಪ್ರಜ್ವಲ್ ವಿದ್ಯಾರ್ಥಿಗಳ ತಂಡ ತಮ್ಮ ನೂತನ ಪರಿಹಾರಗಳು ಮತ್ತು ತಾಂತ್ರಿಕ ಪರಿಣತಿಯಿಂದ ಹೊರಹೊಮ್ಮಿದರು. ಅವರ ಸಾಧನೆ ಅವರಿಗೆ ಐಐಐಟಿ ಮತ್ತು ಐಐಟಿ ಧಾರವಾಡದಲ್ಲಿ ಇನ್ಕ್ಯೂಬೇಷನ್ ಅವಕಾಶಗಳನ್ನು ನೀಡಿದ್ದು, ಭವಿಷ್ಯದ ಉದ್ಯಮಶೀಲ ಪ್ರಯತ್ನಗಳಿಗೆ ದಾರಿ ತೆರೆದಿದೆ. ಜೊತೆಗೆ, ತಂಡಕ್ಕೆ ಅಲ್ಗೊರಿದಮ್ 365 ಪ್ರಾಯೋಜಿತ ₹1 ಲಕ್ಷ ಮೌಲ್ಯದ ಫುಲ್ ಸ್ಟಾಕ್ ಡೆವಲಪ್ಮೆಂಟ್ ಕೋರ್ಸ್ ದೊರೆತಿದೆ. ಇದು ಅವರ ಕೌಶಲ್ಯವನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡಲಿದೆ. ವಿದ್ಯಾರ್ಥಿಗಳ ಸಾಧನೆ ಕುರಿತು ಅಧ್ಯಾಪಕರು ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದು, ಅವರ…
ಬೆಂಗಳೂರು: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್- LEAP – Local Economic Accelerator Program ) ಅಡಿಯಲ್ಲಿ ಕಲಬುರಗಿಯಲ್ಲಿ ಹೊಸ ಉದ್ಯಮಶೀಲತಾ ಕೇಂದ್ರ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಲೀಪ್ ₹ 1,000 ಕೋಟಿ ವೆಚ್ಚದ ಐದು ವರ್ಷಗಳ ಉಪಕ್ರಮವಾಗಿದೆ. ಪ್ರಾದೇಶಿಕ ಉದ್ಯಮಶೀಲತೆಗೆ ಚೇತರಿಕೆ ನೀಡಲು, ನಾವೀನ್ಯತೆ ವಿಕೇಂದ್ರೀಕರಿಸಲು ಮತ್ತು ರಾಜ್ಯದ ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಲಸ್ಟರ್ಗಳಲ್ಲಿ ಆರ್ಥಿಕ ಬೆಳವಣಿಗೆ ತ್ವರಿತಗೊಳಿಸಲು ಇದು ನೆರವಾಗಲಿದೆ. ಕಲ್ಯಾಣ ಕರ್ನಾಟಕದಾದ್ಯಂತ ಕೃಷಿ-ತಂತ್ರಜ್ಞಾನ, ಗ್ರಾಮೀಣ ನಾವೀನ್ಯತೆ ಮತ್ತು ಯುವಜನರಲ್ಲಿ ಉದ್ಯಮಶೀಲತೆ ಉತ್ತೇಜಿಸಲು 15,000 ಚದರ ಅಡಿ ವಿಸ್ತೀರ್ಣದ ಹೊಸ ನವೋದ್ಯಮ ಕೇಂದ್ರ ಮತ್ತು ಪ್ರಾಥಮಿಕ ಮಾದರಿ ಪ್ರಯೋಗಾಲಯ ಸ್ಥಾಪನೆಯಾಗಲಿದ್ದು ಮುಂದಿನ ವರ್ಷದ ಜನವರಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಸಚಿವರು ಹೇಳಿದ್ದಾರೆ. ಕೃಷಿಕಲ್ಪ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿರುವ ಉದ್ಯಮಶೀಲತಾ ಕೇಂದ್ರವು, ಕಲ್ಯಾಣ ಕರ್ನಾಟಕ…
ಶಿವಮೊಗ್ಗ : ನಾನು ಯಾವ ಗುಂಪಿನಲ್ಲಯೂ ಇಲ್ಲ. ನನ್ನದು ಕಾಂಗ್ರೇಸ್ ಗುಂಪು. ಪಕ್ಷದ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನು ಅನುಸರಿಸುತ್ತೇನೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನೊಬ್ಬ ಕಾಂಗ್ರೆಸ್ಸಿಗ. ಯಾವ ಬಣದ ಜೊತೆಯೂ ಗುರುತಿಸಿಕೊಳ್ಳುವುದಿಲ್ಲ. ನನಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಕೆಲಸ ಮಾಡಿ ಕೊಡುತ್ತಾರೆ. ಇಂತಹ ಹೊತ್ತಿನಲ್ಲಿ ಬಣದ ಹಿಂದೆ ಹೋಗುವುದಿಲ್ಲ ಎಂದು ಸ್ಟಷ್ಟಪಡಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ನಲ್ಲಿ ನಡೆಯುತ್ತಿರುವ ವಿದ್ಯಮಾನ ಬೇಸರ ತರಿಸಿದೆ. ಕೇಂದ್ರ ನಾಯಕರು ತಕ್ಷಣ ಗೊಂದಲಕ್ಕೆ ಪರಿಹಾರ ಸೂಚಿಸಬೇಕು. ಪಕ್ಷದ ಜೊತೆ ಇದ್ದರೇ, ಹೈಕಮಾಂಡ್ ಮಾತಿಗೆ ಬದ್ದವಿದ್ದರೇ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಹಿಂದಿನಿಂದಲೂ ನಾನು ಹೈಕಮಾಂಡ್ ಮಾತಿಗೆ ಬದ್ದನಾಗಿದ್ದವನು ಎಂದು ಹೇಳಿದರು. ಕೆಲವರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುವುದು ತಪ್ಪಲ್ಲ. ಎಲ್ಲರಿಗೂ ಸಚಿವರಾಗಬೇಕು ಎನ್ನುವ…














