Author: kannadanewsnow09

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಕ್ರಿಸ್ಟಿಯಾನೊ ರೊನಾಲ್ಡೊ ಮುಂದಿನ ಮೂರು ವರ್ಷಗಳಲ್ಲಿ ನಿವೃತ್ತಿ ಹೊಂದಲು ಯೋಜಿಸಿದ್ದಾರೆ ಎಂದು ಘೋಷಿಸಿದ್ದಾರೆ. ಆದರೂ ಅವರು ಫುಟ್ಬಾಲ್ನಲ್ಲಿ ಅಪೂರ್ಣ ವ್ಯವಹಾರವನ್ನು ಹೊಂದಿದ್ದಾರೆ ಎಂದು ಅವರು ಭಾವಿಸುತ್ತಾರೆ ಎಂದಿದ್ದಾರೆ. ಪ್ರಸ್ತುತ ಸೌದಿ ಪ್ರೊ ಲೀಗ್ನಲ್ಲಿ ಅಲ್-ನಸ್ಸರ್ ಪರ ಆಡುತ್ತಿರುವ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ನಂತರ ಡಿಸೆಂಬರ್ 2022 ರಲ್ಲಿ ಕ್ಲಬ್ಗೆ ಸೇರಿದರು. 39ರ ಹರೆಯದ ರೊನಾಲ್ಡೊ ಫುಟ್ಬಾಲ್ ದಂತಕಥೆಯಾಗಿದ್ದು, ತಮ್ಮ ವೃತ್ತಿಜೀವನದ ಆರಂಭದಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ಮತ್ತು ರಿಯಲ್ ಮ್ಯಾಡ್ರಿಡ್ನಲ್ಲಿ ತಮ್ಮ ಛಾಪು ಮೂಡಿಸಿದ್ದರು. ರೊನಾಲ್ಡೊ ಯೂರೋ 2024 ನಲ್ಲಿ ಪೋರ್ಚುಗಲ್ ಅನ್ನು ಪ್ರತಿನಿಧಿಸಿದ್ದರು, ಇದು ಯುರೋಪಿಯನ್ ಪಂದ್ಯಾವಳಿಯಲ್ಲಿ ಅವರ ಕೊನೆಯ ಪ್ರದರ್ಶನವಾಗಬಹುದು ಎಂದು ಹಲವರು ಪರಿಗಣಿಸಿದ್ದಾರೆ. ಯುರೋಪ್ಗೆ, ವಿಶೇಷವಾಗಿ ತನ್ನ ಬಾಲ್ಯದ ಕ್ಲಬ್ ಸ್ಪೋರ್ಟಿಂಗ್ ಲಿಸ್ಬನ್ಗೆ ಮರಳುವ ಬಗ್ಗೆ ಊಹಾಪೋಹಗಳ ಹೊರತಾಗಿಯೂ, ರೊನಾಲ್ಡೊ ಅವರು ಅಲ್-ನಸ್ ನಲ್ಲಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಖಚಿತಪಡಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, ರೊನಾಲ್ಡೊ ನಿವೃತ್ತಿಯ ಬಗ್ಗೆ ತಮ್ಮ ಆಲೋಚನೆಗಳನ್ನು…

Read More

ದಾವಣೆಗೆರೆ: ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ ಎಂಬುದಾಗಿ ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿ ನುಡಿಯುವ ಮೂಲಕ, ಮುಂಬರುವ ದಿನಗಳಲ್ಲಿ ನಾಡಿಗೆ ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದಾಗಿ ಹೇಳಿದೆ. ಇಂದು ದಾವಣೆಗೆರೆ ಜಿಲ್ಲೆಯ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ದೇವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂಬುದಾಗಿ ಪೂಜಾರಪ್ಪ ಕಾರ್ಣಿಕ ನುಡಿ ನುಡಿದಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಣಿಕ ನುಡಿಯನ್ನು ಪೂಜಾರಿ ನುಡಿದಿದ್ದು, ಬರುವ ದಿನಗಳಲ್ಲಿ ನಾಡಿಗೆ, ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದು ಇದರ ಸಾರಾಂಶ  ಎಂಬುದಾಗಿ ಜನರು ವಿಶ್ಲೇಷಿಸಿದ್ದಾರೆ. https://kannadanewsnow.com/kannada/breaking-cm-siddaramaiah-may-resign-at-any-moment-b-y-vijayendra/ https://kannadanewsnow.com/kannada/good-news-from-the-central-government-rs-72000-will-be-available-every-year-under-this-scheme-pension/

Read More

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ ಎಂದರು. ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ…

Read More

ಬೆಂಗಳೂರು: ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸೆಪ್ಟೆಂಬರ್ 15 ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ…

Read More

ಕೇರಳ: ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ಇವರಲ್ಲದೇ ಎಲ್ಲಾ 17 ಕಾರ್ಯಕಾರಿ ಸಮಿತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅಮ್ಮಾದಲ್ಲಿ ಸಾಮೂಹಿಕ ರಾಜೀನಾಮೆಯನ್ನು ಪದಾಧಿಕಾರಿಗಳು ನೀಡಿದ್ದಾರೆ. ಮಲಯಾಳಂ ಮೂವಿ ಆರ್ಟಿಸ್ಟ್ಸ್ ಅಸೋಸಿಯೇಷನ್ (ಎಎಂಎಂಎ) ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಜಂಟಿ ರಾಜೀನಾಮೆಯನ್ನು ಸಲ್ಲಿಸಿದರು. ಮಹಿಳಾ ವೃತ್ತಿಪರರ ಮೇಲಿನ ಕಿರುಕುಳ ಮತ್ತು ದುರುಪಯೋಗದ ಬಗ್ಗೆ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ಸ್ಫೋಟಕ ಸಂಶೋಧನೆಗಳ ನಂತರ ಮಲಯಾಳಂ ಚಲನಚಿತ್ರ ಜಗತ್ತಿನಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.ಇದು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಇಬ್ಬರು ಉನ್ನತ ಮಟ್ಟದ ರಾಜೀನಾಮೆಗಳಿಗೆ ಕಾರಣವಾಯಿತು. ಚಲನಚಿತ್ರೋದ್ಯಮದಲ್ಲಿ ಪರಭಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು ಮತ್ತು ಮಹಿಳಾ ನಟರು ಎದುರಿಸುತ್ತಿರುವ ದೌರ್ಜನ್ಯಗಳ ಬಗ್ಗೆ…

Read More

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆರೋಪಿ ನಟ ದರ್ಶನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಲ್ಸನ್ ಗಾರ್ಡನ್ ನಾಗ ಜೊತೆಗೆ ದರ್ಶನ್ ಕಾಣಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು. ಜೈಲಲ್ಲಿ ಯಾರು ಇರ್ತಾರೆ? ಜೈಲಲ್ಲಿ ಇರೋದೇ ಕ್ರಿಮಿನಲ್ಸ್ ಅಲ್ವ ಎಂದು ಪ್ರಶ್ನಿಸಿದರು. ಜೈಲಿನಲ್ಲಿ ಓಡಾಡುವುದಕ್ಕೆ ಯಾರು ಸಿಗುತ್ತಾರೆ. ತಪ್ಪು ಮಾಡಿದವರೇ ಅಲ್ಲವೇ ಜೈಲಿಗೆ ಹೋಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ದರ್ಶನ್ ಆರೋಪಿ ಸ್ಥಾನದಲ್ಲಿ ಇದ್ದಾರೆ ಎಂಬುದಾಗಿ ಹೇಳಿದರು. ಈ ಘಟನೆಯ ಬಗ್ಗೆ ಉಳಿದವರನ್ನು ಬಿಟ್ಟು ದರ್ಶನ್ ಹೈಲೈಟ್ ಮಾಡುತ್ತಿದ್ದಾರೆ. ದರ್ಶನ್ ಹಾಗೆ ಕುಳಿತು ಮಾತನಾಡಿದ್ದು ಖಂಡಿತವಾಗಿ ತಪ್ಪೇ, ಆ ತಪ್ಪಿಗೆ ಜೈಲು ಅಧಿಕಾರಿಗಳು ಅಮಾನತು ಮಾಡಿದ್ದಾರೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವುದರ ಬಗ್ಗೆ ಗೊತ್ತಿಲ್ಲ ಎಂದರು. ನಾನು ದರ್ಶನ್ ಅವರನ್ನು ಭೇಟಿ ಆಗುವುದು ವೈಯಕ್ತಿಕ ವಿಚಾರವಾಗಿ…

Read More

ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು. https://kannadanewsnow.com/kannada/another-good-news-for-the-people-from-the-state-government-the-decision-to-open-tram-centres-near-accident-zones/ https://kannadanewsnow.com/kannada/breaking-cm-siddaramaiah-may-resign-at-any-moment-b-y-vijayendra/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿ, ಜನತೆಗೆ ಅನುಕೂಲ ಮಾಡಿಕೊಡಲಾಗಿದೆ. ಈಗ ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಲಯಗಳ ಬಳಿಯಲ್ಲೇ ಟ್ರಾಮ್ ಸೆಂಟರ್ ತೆರೆಯಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು. ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು. ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ…

Read More

ಶಿವಮೊಗ್ಗ: ಜಿಲ್ಲೆಯ ಜೋಗದ ಜಲಪಾತ ವೀಕ್ಷಣೆಗೆ ಈ ಮೊದಲು ಯಾವುದೇ ಸಮಯ ಇರಲಿಲ್ಲ. ಎಷ್ಟು ಹೊತ್ತಾದರೂ ಜೋಗದ ಜಲಪಾತದ ಸೊಬಗನ್ನು ಸವಿಯಬಹುದಾಗಿತ್ತು. ಆದರೇ ಇನ್ಮುಂದೆ ಇದಕ್ಕೆ ಅವಕಾಶವಿಲ್ಲ. ಕೇವಲ 2 ಗಂಟೆ ಮಾತ್ರವೇ ನೋಡಲು ಸಮಯ ನಿಗದಿ ಮಾಡಲಾಗಿದೆ. ಅಲ್ಲದೇ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಿ, ಪ್ರವಾಸಿಗರಿಗೆ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಜೋಗ ನಿರ್ವಹಣಾ ಪ್ರಾಧಿಕಾರವು ಆದೇಶ ಹೊರಡಿಸಿದ್ದು, ಜೋಗದ ಜಲಪಾತವನ್ನು 2 ಗಂಟೆಯ ಒಳಗಾಗಿ ನೋಡಿಕೊಂಡು ವಾಪಾಸ್ಸು ಪ್ರವಾಸಿಗರು ಬರಬೇಕು. ಇದಕ್ಕಿಂತ ಹೆಚ್ಚು ಹೊತ್ತು ಇರುವಂತಿಲ್ಲ ಎಂಬುದಾಗಿ ತಿಳಿಸಿದೆ. ಇದಲ್ಲದೇ ಜೋಗದ ಜಲಪಾತ ವೀಕ್ಷಣೆಗೆ ತೆರಳುವಂತ ಬಸ್ ಗಳಿಗೆ 150 ರೂ ಇದ್ದಂತ ಶುಲ್ಕವನ್ನು 200 ರೂ.ಗೆ ಏರಿಕೆ ಮಾಡಲಾಗಿದೆ. ಕಾರಿಗೆ ರೂ.50 ಇದ್ದಂತ ಶುಲ್ಕವನ್ನು ರೂ.80ಕ್ಕೆ ಏರಿಸಲಾಗಿದೆ. ಪ್ರವಾಸಿಗರಿಗೆ 10 ರೂ ಇದ್ದಂತ ಪ್ರವೇಶ ಶುಲ್ಕವನ್ನು 20 ರೂ.ಗೆ ಹೆಚ್ಚಳ ಮಾಡಿ ಬಿಗ್ ಶಾಕ್ ನೀಡಲಾಗಿದೆ. ಜೋಗ ಅಭಿವೃದ್ಧಿ ಪ್ರಾಧಿಕಾರದಿಂದ ಪಾರ್ಕಿಂಗ್ ಶುಲ್ಕ, ಪ್ರವೇಶ ಶುಲ್ಕವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ದಾಸ್ತಾವೇಜಿನ ನೋಂದಣಿಯಲ್ಲಿ ಆಧಾರ್ ದೃಢೀಕರಣಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಈ ಸಂಬಂಧ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಯಲ್ಲಿ ಆಧಾರ್ ದೃಢೀಕರಣ ಪಡೆಯಲು ಸರ್ಕಾರದ ಅಧಿಸೂಚನೆ ಸಂಖ್ಯೆ DPAR 24 PRJ 2021, ದಿನಾಂಕ:22-02-2023 Aadhaar Authentication for Good Governance (Social Welfare, Innovation Knowledge) Rules, 2020 ರ ನಿಯಮ-5 ಹಾಗೂ Aadhar Act, 2016 ರ ಕಲಂ 4(4)(b)(ii) ರಡಿಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಅನುಮತಿ ನೀಡಲಾಗಿರುತ್ತದೆ. ಮುಂದುವರೆದು ಸರ್ಕಾರದ ಅಧಿಸೂಚನೆ ಸಂಖ್ಯೆ: RD 34 MNMU 2023 ದಿನಾಂಕ: 11/03/2024 ರಲ್ಲಿ ಕರ್ನಾಟಕ ನೋಂದಣಿ ನಿಯಮಗಳು 1965ರಲ್ಲಿ ಈ ಸಂಬಂಧ ಸೂಕ್ತ ತಿದ್ದುಪಡಿಗಳನ್ನು ತರಲಾಗಿರುತ್ತದೆ ಎಂದಿದ್ದಾರೆ. ಕಾವೇರಿ-2,0 ತಂತ್ರಾಂಶದಲ್ಲಿ ಸ್ಥಿರಾಸ್ತಿಗಳ ನೋಂದಣಿಯಲ್ಲಿ ಆಧಾರ್ ದೃಢೀಕರಣವನ್ನು ಅನುಷ್ಠಾನಗೊಳಿಸುತ್ತಿರುವುದರಿಂದ ಸಾರ್ವಜನಿಕರು, ಉಪನೋಂದಣಾಧಿಕಾರಿಗಳು ಹಾಗೂ ಗಣಕಯಂತ್ರ ನಿರ್ವಾಹಕರು ಅನುಸರಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ವಿವರಿಸಲಾಗಿದೆ.…

Read More