Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ಸ್ಮಾರ್ಟ್‌ ಕಾರ್ಡ್ ಬಸ್ ಪಾಸ್ ಮಾನ್ಯತಾ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್‌ ಕಾರ್ಡ್‌ಗಳ ಮಾನ್ಯತಾ ಅವಧಿಯು ದಿನಾಂಕ: 31.12.2025 ಕ್ಕೆ ಕೊನೆಗೊಳ್ಳಲಿದ್ದು, 2026 ಮತ್ತು 2027ನೇ ಸಾಲಿನ ಮಾನ್ಯತೆ ಪಡೆದ ಪತ್ರಕರ್ತರ ಸ್ಮಾರ್ಟ್‌ ಕಾರ್ಡ್‌ಗಳನ್ನು ಜರೂರಾಗಿ ಮುದ್ರಿಸಿ ನೀಡುವಂತೆ ಕೋರಿರುತ್ತಾರೆ. ಮಾನ್ಯತೆ ಪಡೆದ ಪತ್ರಕರ್ತರ ಬಸ್ ಪಾಸುಗಳನ್ನು ಮುದ್ರಿಸಲು ಕಾಲಾವಕಾಶದ ಅವಶ್ಯಕತೆ ಇರುವುದರಿಂದ, ಕ.ರಾ.ರ.ಸಾ.ನಿಗಮದ ವತಿಯಿಂದ ವಿತರಿಸಲಾಗಿರುವ ಸ್ಮಾರ್ಟ್‌ಕಾರ್ಡ್ ಬಸ್‌ಪಾಸ್‌ಗಳ ಮಾನ್ಯತಾ ಅವಧಿಯನ್ನು ಸೂಕ್ತಾಧಿಕಾರಿಗಳ ಅನುಮೋದನೆಯಂತೆ ದಿನಾಂಕ: 28.02.2026 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನಿಗಮದ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡುವುದು ಮತ್ತು ದಿನಾಂಕ: 31.12.2025 ರವರೆಗೆ ಚಾಲ್ತಿಯಲ್ಲಿರುವ ಸ್ಮಾರ್ಟ್‌ ಕಾರ್ಡ್ ಬಸ್‌ ಸ್ ಪಾಸ್‌ಗಳನ್ನು ಹೊಂದಿರುವ ಪತ್ರಕರ್ತರನ್ನು ದಿನಾಂಕ: 28.02.2026 ರವರೆಗೆ ಕ.ರಾ.ರ.ಸಾ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸುವುದು. ಈ ಬಗ್ಗೆ…

Read More

ನಮ್ಮ ಪರ್ಸ್ ಯಾವಾಗಲೂ ತುಂಬಿರಬೇಕು, ಅದು ಖಾಲಿಯಾಗಬಾರದೆಂದು ಅನೇಕರು ಬಯಸುತ್ತಾರೆ. ಕೆಲವೊಮ್ಮೆ ಹಣದ ಸಮಸ್ಯೆ ಎದುರಾದಾಗ ಪರ್ಸ್ ನಲ್ಲಿ ಹಣ ಖಾಲಿಯಾಗುವ ಸಂಭವವಿರುತ್ತದೆ. ಹೀಗಾಗಿ ನಿಮ್ಮ ಪರ್ಸ್ ಯಾವಾಗಲೂ ತುಂಬಿರಬೇಕೆಂದು ಬಯಸಿದರೆ ಏನು ಮಾಡಬೇಕು ಎಂಬುದನ್ನು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಗುರೂಜೀ ಅವರಿಂದ ತಿಳಿಯೋಣ ಬನ್ನಿ. ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ. ಅಕ್ಕಿ ಕಾಳು: ವಾಸ್ತು ಶಾಸ್ತ್ರದ ಪ್ರಕಾರ, ಅಕ್ಕಿ ಕಾಳುಗಳನ್ನು ಬೆಳವಣಿಗೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಯಾವಾಗಲೂ ನಿಮ್ಮ…

Read More

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ಸಿಎಂ, ಡಿಸಿಎಂ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗಬೇಕಾಗಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಕಡೆ ಸಿಎಂ ಸಿದ್ಧರಾಮಯ್ಯ ಅವರೇನೋ ಹೈಕಮಾಂಡ್ ಬಯಸುವವರೆಗೂ ನಾನೇ ಸಿಎಂ ಎಂದು ಪದೇ ಪದೇ ಪುನರುಚ್ಚಾರ ಮಾಡುತ್ತಿದ್ದಾರೆ ಎಂದಿದ್ದಾರೆ. ಮತ್ತೊಂದು ಕಡೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಬಳಿ ಒಪ್ಪಂದ ಆಗಿದೆ, ಅಧಿಕಾರ ಹಂಚಿಕೆ ದೆಹಲಿಯಲ್ಲಿ 5-6 ನಾಯಕರ ನಡುವೆ ನಡೆದಿರುವ “ಗುಟ್ಟಿನ ವ್ಯಾಪಾರ” ಎಂದು ಹೇಳುತ್ತಾ ತಮ್ಮ ಕನಸು ನೆರವೇರಿಸಿಕೊಳ್ಳಲು ಗುಡಿ ಗೋಪುರ ಸುತ್ತುತ್ತಿದ್ದಾರೆ. ಆದರೆ ಅತ್ತ ಹೈಕಮಾಂಡ್ ನೋಡಿದರೆ, ಇದು ರಾಜ್ಯ ಮಟ್ಟದಲ್ಲಿ ಸೃಷ್ಟಿ ಆಗಿರುವ ಗೊಂದಲ, ನೀವೇ ಬಗೆಹರಿಸಿಕೊಳ್ಳಿ ಎಂದು ಜಾರಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರಿಗೆ ಕರ್ನಾಟಕದ ಕಾಂಗ್ರೆಸ್ ನಲ್ಲಿ ಉದ್ಭವ ಆಗಿರುವ ಸಮಸ್ಯೆ ಬಗೆಹರಿಸುವ ಸಾಮರ್ಥ್ಯ…

Read More

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತುಮಕೂರು ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಭಾದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾದ ಶಂಕರ ಬಿದರಿ ಅವರು ನುಡಿನಮನ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು. 95 ವರ್ಷಗಳ ಸಾರ್ಥಕ ಜೀವನ ನಡೆಸಿದ ಶಾಮನೂರು ಶಿವಶಂಕರಪ್ಪ ಅವರು, ಶಾಸಕರಾಗಿ, ಸಂಸದರಾಗಿ, ಮಂತ್ರಿಗಳಾಗಿ ಈ ನಾಡಿಗೆ ಕೊಡುಗೆ ನೀಡಿದ್ದಾರೆ. ಸಭಾದ…

Read More

ಮಕ್ಕಳ ವಿದ್ಯಾಭಿವೃದ್ಧಿಗಾಗಿ ಕೆಲವೊಂದು ಪರಿಹಾರಗಳು ಶುಕ್ಲಾಂಭರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ |ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ || ಇದು ಗಣಪತಿಯ ಅತ್ಯಂತ ಶಕ್ತಿದಾಯಕ ಮಂತ್ರ… ಈ ಮಂತ್ರವನ್ನು ವಿದ್ಯಾರ್ಥಿಗಳು ಪ್ರತಿದಿನ ಪಠಿಸುವುದರಿಂದ ವಿದ್ಯಾಭ್ಯಾಸವು ಯಾವುದೇ ವಿಘ್ನಗಳಿಲ್ಲದೇ ನಡೆಯುತ್ತದೆ.. Concentration ಹೆಚ್ಚಾಗುತ್ರದೆ…! ವಿದ್ಯೆಯ ಕಡೆ ಹೆಚ್ಚು ಆಸಕ್ತಿ ಬೆಳೆಯುತ್ತದೆ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 “ಗುರುರ್ಬ್ರಹ್ಮ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ | ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಈ ಗುರು ಸ್ತೋತ್ರ ಪಠಿಸುವುದರಿಂದ ಸನ್ಮಾರ್ಗದ ಕಡೆ, ಜ್ಞಾನದ ಕಡೆ ಗಮನ ಹೋಗುತ್ತದೆ.. ಗುರುಗಳ ಆಶೀರ್ವಾದ ಪೂರ್ಣ ದೊರೆತು ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದುವಿರಿ..! *** ಗುರವೇ ಸರ್ವಲೋಕಾನಾಂ ಭಿಷಜೇ ಭವರೋಗೀಣಾಂ ನಿಧಯೇ ಸರ್ವವಿದ್ಯಾನಾಂ ದಕ್ಷಿಣಾಮೂರ್ತಯೇ ನಮಃ || ಶಾರದಾ ಶಾರದಾಂಬೋಜ ವದನ ವದನಾಂಬುಜೆ ಸರ್ವದ ಸರ್ವಧಾಕಾಸ್ಮಂ ಸನ್ನಿಧಿಮ್ಂ ಸನ್ನಿಧಿಮ್ಂ ಕ್ರೀಯಾತ್ ಶೃತಿ ಮೃತಿ ಪುರಾಣಾಮ್ಂ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಬಿ.ಹೆಚ್ ರಸ್ತೆಯ ಹೊಸ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಹೊಸದಾಗಿ “ಹೋಟೆಲ್ ಮಲ್ನಾಡ್ ಭರಣಿ” ಎಂಬುದೊಂದು ಇದೆ. ನಾಟಿ ಸ್ಟೈಲ್ ಊಟವೆಂದೇ ಟ್ಯಾಗ್ ಲೈನ್ ನಿಜಕ್ಕೂ ರುಚಿಯಲ್ಲಿ ಒಪ್ಪುವಂತೆ ಇದೆ. ಅದು ಅಕ್ಷರಶಃ ಸತ್ಯವಾದಂತಿದೆ. ಕಾರಣ ಈ ಹೋಟೆಲ್ ನಾನ್ ವೆಜ್ ಊಟವಂತೂ ಯಾವುದೇ ಸ್ಟಾರ್ ಹೋಟೆಲ್ ಗಿಂತ ಕಡಿಮೆಯಿಲ್ಲ. ಹೌದು.. ಸಾಗರಕ್ಕೆ ಆಗಮಿಸೋ ಪ್ರವಾಸಿಗರೊಮ್ಮೆ ಈ ಹೋಟೆಲ್ ಗೆ ಹೋಗೋದು ಮರೆಯಬೇಡಿ. ಈ ಮೇಲಿನ ಮಾತು ನಿಜವೋ ಸುಳ್ಳೋ ಅನ್ನೋದು ಖಚಿತವಾಗಲಿದೆ. ಒಮ್ಮೆ ಊಟ ಮಾಡಿದ್ರೇ, ಮತ್ತೊಮ್ಮೆ ಊಟ ಮಾಡಬೇಕು ಎನ್ನುವಷ್ಟು ರುಚಿಕರ. ಎಷ್ಟೇ ಬಾರಿ ಊಟ ಮಾಡಿದರೂ ರುಚಿಯಲ್ಲಿ ವ್ಯತ್ಯಾಸವೇ ಇಲ್ಲ. ಮಟನ್ ಹಾಗೂ ಚಿಕನ್ ಎರಡು ಇಲ್ಲಿ ಸಿಗುತ್ತದೆ. ಮುದ್ದೆ, ಚಪಾತಿ ಊಟ ಸವಿದು ನೋಡಿದಾಗಲೇ ಆ ರುಚಿ ಮತ್ತೆ ಮತ್ತೆ ಸವಿಬೇಕು ಅನ್ನುವಷ್ಟು ಇಷ್ಟ ಆಗುತ್ತದೆ. ಮಾಲೀಕೇ ನಾನ್ ವೆಜ್ ಊಟ ತುಂಬಾ ಚೆನ್ನಾಗಿದೆ. ಏನಾದರೂ ಟೆಸ್ಟಿಂಗ್ ಪೌಡರ್ ಮಹಿಮೆ…

Read More

ಬೆಂಗಳೂರು: ರಾಜ್ಯದಲ್ಲಿ ತೀವ್ರ ಶೀತಗಾಳಿ ಬಿಸುತ್ತಿದೆ. ಅಲ್ಲಲ್ಲಿ ಚಳಿಯು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕೆಲ ಸಲಹೆಗಳನ್ನು ನೀಡಿದೆ. ಅವುಗಳನ್ನು ಚಳಿಯ ಈ ಸಮಯದಲ್ಲಿ ತಪ್ಪದೇ ಪಾಲಿಸುವಂತೆ ಸೂಚಿಸಿದೆ.  ಈ ಕುರಿತಂತೆ ಸರ್ಕಾರವು ರಾಜ್ಯಾದ್ಯಂತ ಪ್ರಸ್ತುತ ಬೀಸುತ್ತಿರುವ ತೀವ್ರ ಶೀತಗಾಳಿಯು ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದೆ. ಆದ್ದರಿಂದ ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕರು ರಾಜ್ಯ/ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಈ ಕೆಳಗಿನಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲು ತಿಳಿಸಿದೆ. ಈ ಸಲಹೆಗಳನ್ನು ತಪ್ಪದೇ ಪಾಲಿಸಿ ಬೆಚ್ಚಗಿರಿ ದಪ್ಪನಾದ ಒಂದೇ ಬಟ್ಟೆಯ ಬದಲಿಗೆ, ಹಲವು ಪದರಗಳ ಸಡಿಲವಾದ, ಹಗುರವಾದ, ಉಣ್ಣೆಯ ಬಟ್ಟೆಗಳನ್ನು ಧರಿಸಿ. ಕೈಕಾಲುಗಳನ್ನು ಸಂಪೂರ್ಣವಾಗಿ ಮುಚ್ಚಿ: ಟೋಪಿ/ಮಫ್ಲರ್ (ದೇಹದ ಮುಖ್ಯ ಶಾಖ ತಲೆಯ ಮೂಲಕ ನಷ್ಟವಾಗುತ್ತದೆ), ಬೆಚ್ಚಗಿನ ಕಾಲುಚೀಲಗಳು ಮತ್ತು ಜಲನಿರೋಧಕ (waterproof) ಶೂಗಳನ್ನು ಬಳಸಿ. ಆಹಾರ ಮತ್ತು…

Read More

ನವದೆಹಲಿ: ಭಾರತೀಯ ರೈಲ್ವೆಯು ಡಿಸೆಂಬರ್ 21, 2025 ರ ಭಾನುವಾರದಂದು ಪ್ರಯಾಣಿಕರ ದರಗಳಲ್ಲಿ ಅಲ್ಪ ಹೆಚ್ಚಳವನ್ನು ಘೋಷಿಸಿತು. ಇದು ರಾಷ್ಟ್ರೀಯ ಸಾರಿಗೆದಾರರ ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಪರಿಷ್ಕೃತ ಸುಂಕ ರಚನೆಯು ಡಿಸೆಂಬರ್ 26, 2025 ರಿಂದ ಕಾರ್ಯರೂಪಕ್ಕೆ ಬರಲಿದೆ, ಇದು ಜುಲೈನಲ್ಲಿ ಹಿಂದಿನ ದರ ಹೆಚ್ಚಳದ ನಂತರ ಪ್ರಸ್ತುತ ಹಣಕಾಸು ವರ್ಷದಲ್ಲಿ ಎರಡನೇ ದರ ಪರಿಷ್ಕರಣೆಯನ್ನು ಸೂಚಿಸುತ್ತದೆ. ಹೊಸ ದರ ರಚನೆಯ ಒಂದು ನೋಟ ಈ ಹೆಚ್ಚಳವು “ಸೀಮಿತ” ಮತ್ತು ದೈನಂದಿನ ಪ್ರಯಾಣಿಕರು ಮತ್ತು ಕಡಿಮೆ ದೂರದ ಪ್ರಯಾಣಿಕರನ್ನು ರಕ್ಷಿಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ವರ್ಗ-     ಪರಿಷ್ಕೃತ ದರ-      ದೂರ ಮಿತಿ ಉಪನಗರ (ಸ್ಥಳೀಯ) ರೈಲುಗಳು- ಯಾವುದೇ ಹೆಚ್ಚಳವಿಲ್ಲ- ಎಲ್ಲಾ ದೂರಗಳು ಮಾಸಿಕ ಸೀಸನ್ ಟಿಕೆಟ್‌ಗಳು (MST)- ಯಾವುದೇ ಹೆಚ್ಚಳವಿಲ್ಲ- ಎಲ್ಲಾ ದೂರಗಳು ಸಾಮಾನ್ಯ ವರ್ಗ (ಕಡಿಮೆ ದೂರ)- ಯಾವುದೇ ಹೆಚ್ಚಳವಿಲ್ಲ- 215 ಕಿ.ಮೀ ವರೆಗೆ ಸಾಮಾನ್ಯ ವರ್ಗ (ದೀರ್ಘ…

Read More

ಬೆಂಗಳೂರು: ಇಂದಿನಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಸರ್ಕಾರ ಆರಂಭಿಸಿತ್ತು. ಮೊದಲ ದಿನವೇ ಬರೋಬ್ಬರಿ 60.16 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಡಿ.21ರ ಇಂದು 62.40 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕೋದಕ್ಕೆ ಗುರಿಯನ್ನು ಹೊಂದಲಾಗಿತ್ತು. ಆದರೇ 60.16 ಲಕ್ಷ ಮಕ್ಕಳಿಗೆ ಹಾಕಲು ಸಾಧ್ಯವಾಗಿದೆ ಎಂದಿದೆ. 62,40,114 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿಯಲ್ಲಿ 60,16,322 ಲಕ್ಷ ಮಕ್ಕಳಿಗೆ ಪೋಲಿಯೋ ಹನಿಯನ್ನು ಹಾಕಲಾಗಿದೆ. ಮೊದಲ ದಿನವೇ ಶೇ.96ರಷ್ಟು ಗುರಿಯನ್ನು ಸಾಧಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದೆ. ಅಂದಹಾಗೇ ಬಾಗಲಕೋಟೆಯಲ್ಲಿ 2,14,962 ಮಕ್ಕಳಿಗೆ, ಬಳ್ಳಾರಿಯಲ್ಲಿ 1,91,995, ಬೆಂಗಳೂರು ಗ್ರಾಮಾಂತರದಲ್ಲಿ 1,01,358, ಬಿಬಿಎಂಪಿ ವ್ಯಾಪ್ತಿಯಲ್ಲಿ 10,77,134, ಶಿವಮೊಗ್ಗ ಜಿಲ್ಲೆಯಲ್ಲಿ 1,32,196 ಮಕ್ಕಳು ಸೇರಿದಂತೆ ರಾಜ್ಯಾಧ್ಯಂತ 60,16,322 ಮಂದಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿರುವುದಾಗಿ ತಿಳಿಸಿದೆ. ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು..…

Read More