Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸೆಪ್ಟೆಂಬರ್ ಮೊದಲ ವಾರದೊಳಗೆ ಕೌನ್ಸಿಲಿಂಗ್ ವರ್ಗಾವಣೆ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸೋಮವಾರ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವರ್ಗದ ನೌಕರರು, ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ನಡೆಯುತ್ತಿದ್ದು, ಶೀಘ್ರಗತಿಯಲ್ಲಿ ಪ್ರಕ್ರೀಯೆ ಪೂರ್ಣಗೊಳಿಸಬೇಕು ಎಂದರು. ಸೆಪ್ಟೆಂಬರ್ ಮೊದಲವಾರದಲ್ಲಿ ವೈದ್ಯಾಧಿಕಾರಿಗಳ ಜೇಷ್ಠತಾ ಪಟ್ಟಿ ತಯಾರಾಗಬೇಕು.. ಹಲವು ವೈದ್ಯರು ಕೌನ್ಸಿಲಿಂಗ್ ಎದುರು ನೋಡುತ್ತಿದ್ದಾರೆ. ಕೌನ್ಸಿಲಿಂಗ್ ಪ್ರಕ್ರೀಯೆಯಲ್ಲಿ ವಿಳಂಭವಾಗಬಾರದು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇನ್ನು ಇಲಾಖೆಯಲ್ಲಿ ಕಾರ್ಯನಿರಗವಹಿಸುವ ಹೊರಗುತ್ತಿಗೆ ನೌಕರರಿಗೆ ಏಕರೂಪ ವೇತನ ಜಾರಿ ಕುರಿತು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಔಷಧಿಗಳ ಪೂರೈಕೆ ಇನ್ನಷ್ಟು ವೇಗ ಪಡೆದುಕೊಳ್ಳಬೇಕು ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಂಡುಬಂದರೆ ಸಹಿಸುವುದಿಲ್ಲ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ಸರಬರಾಜು ನಿಗಮದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಔಷಧಿ ನಿಗಮದಿಂದ ಸರಬರಾಜು…
ಬೆಂಗಳೂರು: ನಿಮ್ಮ ಮನೆಗೆ ತಂದ ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಈ ಬಗ್ಗೆ ನಿಮಗೂ ಆಂತಕವಿದೆಯೇ? ಭಯಪಡದಿರಿ, ಅದು ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಲ್ಲಿ ಮುಳುಗದೆ ತೇಲುತ್ತಿರುವುದನ್ನು ಕಂಡು, ಅದು ಪ್ಲಾಸ್ಟಿಕ್ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗುತ್ತಿರುವುದು ವರದಿಯಾಗುತ್ತಿದೆ. ಆದರೇ ಇದು ಆತಂಕ ಪಡುವ ಸಂಗತಿಯಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆಜಿ ಅಕ್ಕಿಗೆ 10 ಗ್ರಾಂ ನಷ್ಟು ಸಾರವರ್ಧಿತ ಅಕ್ಕಿಯನ್ನು ಬೆರಸಲಾಗುತ್ತದೆ. ಇದು ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವಗಳು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿಣಾಂಶ, ಪೋಲಿಕ್ ಆಮ್ಲ ಮತ್ತು ವಿಟಮಿನ್ ಬಿಯನ್ನು ಒದಗಿಸುತ್ತದೆ ಎಂದು ಮಾಹಿತಿ ಹಂಚಿಕೊಂಡಿದೆ. ಈ ಸಾರವರ್ಧಿತ ಅಕ್ಕಿಯು ನಿಮ್ಮ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ರಕ್ತ ಹೀನತೆ, ಅಪೌಷ್ಟಿಕತೆಯನ್ನು ಹೋಗಲಾಡಿಸುತ್ತದೆ ಎಂದು…
ಬೆಂಗಳೂರು: ಇಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳು ಕಡ್ಡಾಯವಾಗಿ ಕೆಲ ನಿಯಮಗಳನ್ನು ಪಾಲಿಸುವಂತೆ ಆಯೋಗವು ಸೂಚಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಪಿಎಸ್ಸಿಯು ಮಾಹಿತಿ ಬಿಡುಗಡೆ ಮಾಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ: 27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್ಸೈಟ್ http://kpsc.kar.nic.inನಿಂದ ಡೌನ್ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಹಾಗೂ ಕಡ್ಡಾಯವಾಗಿ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಈ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ ಎಂದಿದೆ. 1. ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ 8.00 ಗಂಟೆಯೊಳಗೆ ಪರೀಕ್ಷಾ ಉಪಕೇಂದ್ರದ ಬಳಿ ಹಾಜರಿರತಕ್ಕದ್ದು. 2. ಬೆಳಗಿನ ಅಧಿವೇಶನಕ್ಕೆ 9:50ರ ನಂತರ ಮತ್ತು ಮಧ್ಯಾಹ್ನದ ಅಧಿವೇಶನಕ್ಕೆ 1:50 ರ ನಂತರ ಬರುವ ಅಭ್ಯರ್ಥಿಗಳಿಗೆ…
BIG NEWS: ರಾಜ್ಯ ಸರ್ಕಾರದಿಂದ ‘ನಕಲಿ ದಾಖಲೆ’ ಸೃಷ್ಟಿಸಿ ‘ಆಸ್ತಿ ವಂಚನೆ’ಗೆ ಬ್ರೇಕ್: ಇಂದಿನಿಂದ ‘ಆಧಾರ್ ಜೋಡಣೆ’ ಆರಂಭ
ಬೆಂಗಳೂರು : ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್ಟಿಸಿ ಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ. ಇದರಿಂದ ವಂಚನೆಗೊಳಗಾದವರು ಹಲವು ವರ್ಷಗಳಿಂದ ಕೋರ್ಟ್ ಕಚೇರಿಗೆ ಅಲೆಯುವಂತಾಗಿದೆ. ಇಂತಹ ಪ್ರಕರಣಗಳನ್ನು ತಡೆಯುವ ಹಾಗೂ ಜನಸಾಮಾನ್ಯರ ಪಾಲಿಗೆ ಅವರ ಜಮೀನಿನ ಹಕ್ಕನ್ನು ರಕ್ಷಿಸಿ ಅಧಿಕೃತಗೊಳಿಸುವ ಉದ್ದೇಶದಿಂದ ಆಧಾರ್ ಜೋಡಣೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ” ಎಂದರು. ಮುಂದುವರೆದು, “ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ದೋಚುವವರ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಹಲವು ಜನರಿಂದ ಕೇಳಿಬಂದಿತ್ತು. ಇತ್ತೀಚೆಗೆ ಹಲವು ಶಾಸಕರು, ಸಚಿವರು ಹಾಗೂ ಸ್ವತಃ…
ಬೆಂಗಳೂರು: ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಸತ್ಯಕ್ಕೆ ದೂರವಾದಂತ ಆರೋಪಗಳನ್ನು ಲೇಹರ್ ಸಿಂಗ್ ಮಾಡಿದ್ದಾರೆ. ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದಿಂದ ಅವರ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂಬುದಾಗಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ಎಚ್ಚರಿಕೆ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯಸಭಾ ಸದಸ್ಯರಾದ ಲೇಹರ್ ಸಿಂಗ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್ ಸಿಎ ನಿವೇಶನವನ್ನು ಅಕ್ರಮವಾಗಿ ಪಡೆದುಕೊಂಡಿದೆ ಎಂದು ಹೇಳಿಕೆ ನೀಡಿದ್ದಾರೆ. ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಕೆಐಡಿಬಿಯ ಏರೋಸ್ಪೇಸ್ ಪಾರ್ಕ್ ನಲ್ಲಿ ನೀಡಿರುವ ಸಿಎ ಸೈಟ್ ಕುರಿತು ಅವರು ಎತ್ತಿರುವ ತಕರಾರಿಗೆ ಯಾವುದೇ ಆಕ್ಷೇಪಣೆಯಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಗುರಿ ಮಾಡಿರುವ ರೀತಿ ಸಂಪೂರ್ಣ ಭಟ್ಟಂಗಿ ತನದಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ. ರಾಜಸ್ಥಾನದಿಂದ ರಾಜಕೀಯಕ್ಕಾಗಿ ವಲಸೆ ಬಂದ ರಾಜಕಾರಣಿ. ಇಲ್ಲಿಗೆ ಬಂದು ರಾಜಕೀಯವಾಗಿ ಲಾಟರಿ ಹೊಡೆದವರಲ್ಲಿ ಇವರು ಒಬ್ಬರು. ಇವರಿಂದ ಕರ್ನಾಟಕದ…
ಬೆಂಗಳೂರು: ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ. ಈ ಕೇಸಲ್ಲಿ ಎರಡು ಎಫ್ಐಆರ್ ನಲ್ಲಿ ನಟ ದರ್ಶನ್ ಎ.1 ಆರೋಪಿಯಾಗಿ ಪ್ರಕರಣ ದಾಖಲಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯದ ಪೋಟೋ ವೈರಲ್ ಆದ ಬೆನ್ನಲ್ಲೇ, 7 ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೇ ಪ್ರಕರಣ ಸಂಬಂಧ ಕೇಂದ್ರ ಕಾರಾಗೃಹದ ಉಪ ನಿರ್ದೇಶಕ ಸೋಮಶೇಖರ್ ನೀಡಿದಂತ ದೂರು ಆಧರಿಸಿ, ಮೂರು ಎಫ್ಐಆರ್ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ದಾಖಲಾಗಿರುವಂತ ಮೂರು ಕೇಸಲ್ಲಿ ಎರಡು ಪ್ರಕರಣದಲ್ಲಿ ನಟ ದರ್ಶನ್ ಎ1 ಆರೋಪಿಯಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿದೆ. ಮೊದಲ ಪ್ರಕರಣದಲ್ಲಿ ನಟ ದರ್ಶನ್ ಎ1 ಆರೋಪಿಯಾದರೇ, ಎ2 ಆರೋಪಿಯಾಗಿ ನಾಗರಾಜ್ ಎಂಬುವರನ್ನು ಮಾಡಲಾಗಿದೆ. ಎ.3 ವಿಲ್ಸನ್ ಗಾರ್ಡನ್ ನಾಗ, ಎ4 ಕುಳ್ಳ ಸೀನ ಆಗಿದ್ದಾರೆ. ಇನ್ನೂ 2ನೇ ಪ್ರಕರಣದಲ್ಲಿ ನಟ ದರ್ಶನ್ ಎ.1 ಆರೋಪಿಯಾಗಿದ್ರೇ,…
ಬೆಳಗಾವಿ : ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು , ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಸುಳ್ಳು ದಾಖಲೆ ಸೃಷ್ಟಿಸಿ ನಿವೇಶನ ಪಡೆದಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಉತ್ತರಿಸುತ್ತಾ, ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಇಡೀ ದೇಶದಲ್ಲಿ ಮತ್ತೊಬ್ಬರಿಲ್ಲ. ಶ್ರೀ ದೇವರಾಜು ರವರಿಂದ ನನ್ನ ಬಾವಮೈದುನ 2004 ರಲ್ಲಿ ಜಮೀನನ್ನು ಪಡೆದಿದ್ದು, 2005 ರಲ್ಲಿ ಅದನ್ನು ಪರಿವರ್ತಿಸಲಾಗಿ, 2010 ರಲ್ಲಿ ಅವರಿಂದ ನನ್ನ ಪತ್ನಿಗೆ ಆ ಜಮೀನನ್ನು ದಾನವಾಗಿ ಬಂದಿದೆ. ಆದರೆ ಮುಡಾ ದವರು ನನ್ನ ಪತ್ನಿಯ ಗಮನಕ್ಕೆ ತಾರದೇ ಆ ಜಮೀನನ್ನು ನಿವೇಶನವಾಗಿ ಪರಿವರ್ತಿಸಿ ಹಂಚಿಕೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಬಿಜೆಪಿಯವರೇ ಮುಡಾದ ಅಧ್ಯಕ್ಷರಾಗಿದ್ದರು. ಈ ಹಂಚಿಕೆ ಕಾನೂನು ರೀತ್ಯ ಇದೆಯೇ , ಇಲ್ಲವೇ ಎಂದು ಪರಿಶೀಲಿಸುವ ಜವಾಬ್ದಾರಿಯೂ…
ಬೆಳಗಾವಿ : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. ಕೈ ಮೇಲಾಗ್ಲಿ-ದೇಶ ಆಳು ದೊರೆಯೇ ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು. ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು. ನಿಮ್ಮ ಆಶೀರ್ವಾದ ಹೀಗೇ ಇರಲಿ ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ.…
ನವದೆಹಲಿ: ದೇಶೀಯ ಮಟ್ಟದಲ್ಲಿ ಎಲ್ಲಾ ಮಹಿಳಾ ಕ್ರಿಕೆಟ್ನಲ್ಲಿ ಪಂದ್ಯಶ್ರೇಷ್ಠ ಮತ್ತು ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಗಳನ್ನು ಬಿಸಿಸಿಐ ಘೋಷಿಸಿದೆ. ವಿಜಯ್ ಹಜಾರೆ ಮತ್ತು ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಗಳಲ್ಲಿ ಪುರುಷರ ಕ್ರಿಕೆಟ್ನಲ್ಲಿನ ಪಂದ್ಯಶ್ರೇಷ್ಠ ಆಟಗಾರರಿಗೆ ಬಹುಮಾನದ ಮೊತ್ತವನ್ನು ನೀಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ನಮ್ಮ ದೇಶೀಯ ಕ್ರಿಕೆಟ್ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಮಹಿಳಾ ಮತ್ತು ಜೂನಿಯರ್ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಪಂದ್ಯಶ್ರೇಷ್ಠ ಮತ್ತು ಪಂದ್ಯಾವಳಿಯ ಆಟಗಾರನಿಗೆ ಬಹುಮಾನದ ಮೊತ್ತವನ್ನು ಪರಿಚಯಿಸುತ್ತಿದ್ದೇವೆ. ಇದಲ್ಲದೆ, ವಿಜಯ್ ಹಜಾರೆ ಮತ್ತು ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಬಹುಮಾನದ ಮೊತ್ತವನ್ನು ನೀಡಲಾಗುವುದು ಎಂದು ಶಾ ಟ್ವೀಟ್ ಮಾಡಿದ್ದಾರೆ. ಈ ಉಪಕ್ರಮವು ದೇಶೀಯ ಸರ್ಕ್ಯೂಟ್ನಲ್ಲಿ ಅತ್ಯುತ್ತಮ ಪ್ರದರ್ಶನಗಳನ್ನು ಗುರುತಿಸುವ ಮತ್ತು ಬಹುಮಾನ ನೀಡುವ ಗುರಿಯನ್ನು ಹೊಂದಿದೆ. ಈ ಪ್ರಯತ್ನದಲ್ಲಿ ಅಚಲ ಬೆಂಬಲ ನೀಡಿದ ಅಪೆಕ್ಸ್ ಕೌನ್ಸಿಲ್ ಗೆ ಹೃತ್ಪೂರ್ವಕ ಧನ್ಯವಾದಗಳು. ಒಟ್ಟಾಗಿ, ನಾವು ನಮ್ಮ ಕ್ರಿಕೆಟಿಗರಿಗೆ ಹೆಚ್ಚು ಲಾಭದಾಯಕ ವಾತಾವರಣವನ್ನು…
ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಡೆಂಗ್ಯೂ ನಿಯಂತ್ರಣಕ್ಕೆ ವಿಶೇಷ ಕ್ರಮವನ್ನು ಬಿಬಿಎಂಪಿ ಕೈಗೊಂಡಿದೆ. ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಅಳವಡಿಕೆ ಮಾಡಲಾಗಿದೆ. ಡೆಂಘಿ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ. ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್ ಸಾಧನಗಳನ್ನು ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಚಾಲನೆ ನೀಡಿದ್ದಾರೆ. ಪ್ರಾಯೋಗಿಕವಾಗಿ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುತ್ತದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈಡಿಸ್ ಸೊಳ್ಳೆಗಳನ್ನು ನಾಶಪಡಿಸುವ ಬಯೋ ಸಾಧನಗಳನ್ನು ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಸಾಧ್ಯವಾದರೆ ಡೆಂಘಿ, ಮಲೇರಿಯಾ, ಝೀಕಾದಂತಹ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣಕ್ಕೆ ತರಬಹುದು.…