Author: kannadanewsnow09

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಅನ್ನು ಕೆ.ಪಿ ನಂಜುಂಡಿ ನೀಡಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯ ನಿರ್ಧಾರವನ್ನು ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಕೈಗೊಂಡಿದ್ದರು. ಇದೇ ಕಾರಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದಂತ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಂದಹಾಗೇ ಬಿಜೆಪಿಗೆ ಗುಡ್ ಬೈ ಹೇಳಲಿರುವಂತ ಕೆ.ಪಿ ನಂಜುಂಡಿ, ಕಾಂಗ್ರೆಸ್ ಪಕ್ಷವನ್ನು ಇಂದು ಅಧಿಕೃತವಾಗಿ ಸೇರಲಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿ, ಫೈನಲ್ ಮಾಡಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/retail-inflation-likely-to-fall-to-five-year-low-in-2024-25-cmie-report/ https://kannadanewsnow.com/kannada/bengaluru-karaga-mahotsava-today-traffic-restrictions-on-these-roads-heres-the-alternative-route/

Read More

ನವದೆಹಲಿ: ರಕ್ತದಲ್ಲಿನ ಸಕ್ಕರೆ ಮಟ್ಟವು 320 ಕ್ಕೆ ತಲುಪಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ತಿಹಾರ್ ಜೈಲಿನಲ್ಲಿ ಇನ್ಸುಲಿನ್ ನೀಡಲಾಯಿತು ಎಂದು ಮೂಲಗಳು ತಿಳಿಸಿವೆ. ಪದೇ ಪದೇ ವಿನಂತಿಸಿದರೂ ತಿಹಾರ್ ಜೈಲು ಆಡಳಿತವು ತನಗೆ ಇನ್ಸುಲಿನ್ ಒದಗಿಸಿಲ್ಲ ಎಂದು ಎಎಪಿ ಮುಖ್ಯಸ್ಥರು ನಿನ್ನೆ ಆರೋಪಿಸಿದ್ದಾರೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ನೆಪದಲ್ಲಿ ಜಾಮೀನು ಪಡೆಯೋ ಸಂಬಂಧ ಸಕ್ಕರೆ ಅಂಶವಿರುವಂತ ಹಣ್ಣಿನ ರಸವನ್ನು ಸೇವಿಸುತ್ತಿದ್ದಾರೆ ಎಂಬುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ಆರೋಪಿಸಿದ್ದರು. ಈ ಬೆನ್ನಲ್ಲೇ ಅವರ ಶುಗರ್ ಲೆವೆಲ್ ಹೆಚ್ಚಾಗಿರೋದು ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಕ್ಕರೆ ಮಟ್ಟದ ಏರಿಕೆಯನ್ನು ನಿಯಂತ್ರಿಸೋ ಸಂಬಂಧ ತಿಹಾರ್ ಜೈಲಿನ ವೈದ್ಯರು ಇನ್ಸುಲಿನ್ ನೀಡಿದ್ದಾರೆ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. https://kannadanewsnow.com/kannada/bengalurus-liquor-lovers-liquor-is-not-available-in-these-areas-today/ https://kannadanewsnow.com/kannada/retail-inflation-likely-to-fall-to-five-year-low-in-2024-25-cmie-report/

Read More

ಬೆಂಗಳೂರು: ಇಂದು ಐತಿಹಾಸಿಕ ಕರಗ ಮಹೋತ್ಸವ ಬೆಂಗಳೂರಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ. ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ ಇದೆ. ಹೀಗಾಗಿ ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಈ ಆದೇಶ ಮಾಡಿರೋದಾಗಿ ಹೇಳಿದ್ದಾರೆ. ಅಂದಹಾಗೇ ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಎಸ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐತಿಹಾಸಿಕ ಕರಗ ಮಹೋತ್ಸವದಂದು ಮದ್ಯ ಮಾರಾಟ ನಿಷೇಧ ಮಾಡಿ ಆದೇಶಿಸಿದ್ದಾರೆ. https://kannadanewsnow.com/kannada/after-nehas-murder-another-hindu-girl-attacked-by-muslim-youth-in-hubballi/ https://kannadanewsnow.com/kannada/bengaluru-karaga-mahotsava-today-traffic-restrictions-on-these-roads-heres-the-alternative-route/

Read More

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಅಲ್ಲದೇ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಲಾಗಿದೆ. ಈ ಘಟನೆ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಹಿಂದೂ ಯುವತಿಯ ಮೇಲೆ ಪ್ರೀತಿ ನಿರಾಕರಿಸಿದ ಕಾರಣ ಮುಸ್ಲೀಂ ಯುವ ಹಲ್ಲೆ ಮಾಡಿರೋದಾಗಿ ತಿಳಿದು ಬಂದಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನೇಹಾ ಹತ್ಯೆ ಮಾಸೋ ಮುನ್ನವೇ ಅದೇ ಮಾದರಿಯಲ್ಲೇ ಹಿಂದೂ ಯುವತಿ ಮೇಲೆ ಮುಸ್ಲೀಂ ಯುವಕನಿಂದ ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ ಕೇಶ್ವಾಪುರ ಟ್ರಾಫಿಕ್ ಪೊಲೀಸ್ ಠಾಣೆ ಎದುರೇ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಅಫ್ತಾಬ್ ಶಿರಹಟ್ಟಿ ಎಂಬಾತ ಪ್ರೀತಿಸಲು ನಿರಾಕರಸಿದಂತ ಹಿಂದೂ ಯುವತಿಯ ಮೇಲೆ ಹಲ್ಲೆ ಮಾಡಿರೋದಾಗಿ ತಿಳಿದು ಬಂದಿದೆ. ಹಲ್ಲೆ ಮಾಡಿದಂತ ಅಫ್ತಾಬ್ ಶಿರಹಟ್ಟಿಯನ್ನು ಸ್ಥಳೀಯ ಯುವಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಬಂಧಿತ ಆರೋಪಿಗೆ 1 ವಾರ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿದೆ. https://kannadanewsnow.com/kannada/council-member-k-p-nanjundi-quits-bjp-joins-congress/ https://kannadanewsnow.com/kannada/retail-inflation-likely-to-fall-to-five-year-low-in-2024-25-cmie-report/

Read More

ಬೆಂಗಳೂರು: ಬಿಜೆಪಿ ವಿಶ್ವಕರ್ಮ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಅನ್ಯಾಯ ಮಾಡಿದೆ ಎಂಬುದಾಗಿ ಕೋಪಗೊಂಡಿರುವಂತ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು, ಬಿಜೆಪಿ ಪಕ್ಷಕ್ಕೆ ಇಂದು ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆಯೂ ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಮಾತುಕತೆ ನಡೆಸಿದ್ದರು. ಈ ವೇಳೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರೋದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಮಲ ತೊರೆದು, ಅಧಿಕೃತವಾಗಿ ಕೈಯನ್ನು ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಹಿಡಿಯಲಿದ್ದಾರೆ. https://kannadanewsnow.com/kannada/congress-mla-virendra-pappi-assaults-youth-for-asking-for-water-no-water-to-drink/ https://kannadanewsnow.com/kannada/retail-inflation-likely-to-fall-to-five-year-low-in-2024-25-cmie-report/

Read More

ಚಿತ್ರದುರ್ಗ: ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಮುಂಗಾರು ಮಳೆ ಕೈಕೊಟ್ಟ ನಂತ್ರ ನೀರಿಗೆ ಆಹಾಕಾರ ಎದ್ದಿದೆ. ಇಂತದ್ದರ ನಡುವೆ ಕುಡಿಯೋಕೆ ನೀರು ಕೇಳಿದಂತ ಯುವಕನ ಮೇಲೆ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರು ಹಲ್ಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಹೌದು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಸಮಸ್ಯೆಯನ್ನ ಬಗೆಹರಿಸಿ. ಹಲವಾರು ಬಾರಿ ಕೇಳಿದರೂ ಯಾಕೆ ಬಗೆಹರಿಸಿಲ್ಲ ಎಂದು ತಮ್ಮನ್ನು ಪ್ರಶ್ನೆ ಮಾಡಿದ ಯುವಕನೊಬ್ಬನ ಮೇಲೆ ಚಿತ್ರದುರ್ಗದ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಕೈ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಅದರ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಕೂಡ ಆಗಿದೆ. ಚಿತ್ರದುರ್ಗ ತಾಲೂಕಿನ ಜಾನಕೊಂಡ ಗ್ರಾಮದಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಂತ ವೇಳೆಯಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರೋ ವೀಡಿಯೋದಲ್ಲಿ ಗ್ರಾಮಸ್ಥರೊಂದಿಗೆ ಸೌಜನ್ಯದಿಂದ ವರ್ತಿಸಬೇಕಿದ್ದಂತ ಶಾಸಕರೇ, ಏಕ ವಚನದಲ್ಲೇ ಕೂಗಾಡಿರೋದನ್ನು ಕಾಣಬಹುದು.…

Read More

ತೈವಾನ್: ತೈವಾನ್ನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆ 80 ಕ್ಕೂ ಹೆಚ್ಚು ಭೂಕಂಪಗಳು ಸಂಭವಿಸಿವೆ ಮತ್ತು ಕೆಲವು ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನಡುಗಿಸಲು ಕಾರಣವಾಗಿವೆ ಎಂದು ದ್ವೀಪದ ಹವಾಮಾನ ಆಡಳಿತ ತಿಳಿಸಿದೆ. ಹೆಚ್ಚಾಗಿ ಗ್ರಾಮೀಣ ಮತ್ತು ವಿರಳ ಜನಸಂಖ್ಯೆಯ ಹುವಾಲಿಯನ್ ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದಿಂದ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪನಗಳು ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್ನ ಹೆಚ್ಚಿನ ಭಾಗಗಳಲ್ಲಿ ಕಟ್ಟಡಗಳು ರಾತ್ರಿಯಿಡೀ ಅಲುಗಾಡುತ್ತಿದ್ದು, 6.3 ತೀವ್ರತೆಯ ಅತಿದೊಡ್ಡ ಭೂಕಂಪ ಸಂಭವಿಸಿದೆ. ತೈವಾನ್ನ ಕೇಂದ್ರ ಹವಾಮಾನ ಇಲಾಖೆಯು ಏಪ್ರಿಲ್.22ರ ಸೋಮವಾರ ಮಧ್ಯಾಹ್ನದಿಂದ ಸುಮಾರು 180 ರಷ್ಟು ಭೂಕಂಪನಗಳು ಸಂಭವಿಸಿವೆ ಎಂದು ಹೇಳಿದೆ. ಏಪ್ರಿಲ್ 3 ರಂದು ಹಾನಿಗೊಳಗಾದ ನಂತರ ಈಗಾಗಲೇ ಜನವಸತಿ ಇಲ್ಲದ ಎರಡು ಕಟ್ಟಡಗಳು ಮತ್ತಷ್ಟು ಹಾನಿಗೊಳಗಾಗಿವೆ ಮತ್ತು ವಾಲುತ್ತಿವೆ ಎಂದು ಹುವಾಲಿಯನ್ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಯಾವುದೇ ಸಾವುನೋವುಗಳ ಬಗ್ಗೆ…

Read More

ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಅಲ್ಲದೇ ಪರ್ಯಾಯ ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 23.04.2024 ರಿಂದ ದಿನಾಂಕ: 24.04.2024 ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ದ ಶ್ರೀ ಧರ್ಮರಾಯಸ್ವಾಮಿ ಬೆಂಗಳೂರು ಕರಗದ ಉತ್ಸವದ ನಡೆಯುತ್ತಿದ್ದು, ಈ ಬೆಂಗಳೂರು ಕರಗದ ಉತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ. ಮೆರವಣಿಗೆಯು ಸಾಗುವ ಮಾರ್ಗ ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಣ್ ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ,…

Read More

ಬೆಂಗಳೂರು: ಕಿಯೋನಿಕ್ಸ್, ಎಂ ಎಸ್ ಐ ಎಲ್ ಸೇರಿದಂತೆ ಆರು ನಿಗಮ-ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆವಾರು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ನಿಗಮ ಮಂಡಳಿಯ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಆಧಾರದಲ್ಲಿ 725 ಹುದ್ದೆವಾರು ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 41 ಹುದ್ದೆ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ 386 ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ 186 ಹುದ್ದೆ, ಎಂಎಸ್ಐಎಲ್ 72 ಹುದ್ದೆ, ಕಿಯೋನಿಕ್ಸ್ 26 ಹುದ್ದೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಹುದ್ದೆ ಸೇರಿದಂತೆ ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ…

Read More

ಬೆಂಗಳೂರು: ನಗರದ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ ನಗದು ಹಣ ಬಿಜೆಪಿಗೆ ಸೇರಿರುವುದು ಖಚಿತವಾಗಿದೆ. ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಚುನಾವಣಾ ಆಯೋಗ ಬಿಗ್ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಚುನಾವಮಾ ಆಯೋಗವು ತಪಾಸಣಾ ಕೇಂದ್ರ ತೆರೆದಿತ್ತು. ಏಪ್ರಿಲ್.20ರಂದು ಸಂಜೆ ಸುಮಾರು 4 ಗಂಟೆಗೆ ಆ ಮಾರ್ಗದಲ್ಲಿ ಬರುತ್ತಿದ್ದ ಕಾರೊಂದನ್ನು ಸ್ಥಿರ ಕಣ್ಗಾವಲು ತಂಡ ಹಾಗೂ ಪೊಲೀಸರು ತಪಾಸಣೆ ನಡೆಸಿದಾಗ 2 ಕೋಟಿ ನಗದು ಹಣವಿದ್ದ ಎರಡು ಬ್ಯಾಗ್ ಗಳು ಪತ್ತೆಯಾಗಿದ್ದವು. ಕಾರಿನಲ್ಲಿ ಪತ್ತೆಯಾದಂತ ಹಣದ ಬ್ಯಾಗ್ ಬಗ್ಗೆ ಕಾರಿನ ಚಾಲಕನನ್ನು ವಿಚಾರಣೆ ಮಾಡಿದಾಗ, ಹಣವನ್ನು ಮೈಸೂರಿಗೆ ಸಾಗಿಸುತ್ತಿರುವುದಾಗಿ ಹೇಳಿ, ಬಿಜೆಪಿ ಪತ್ರವನ್ನು ಹಾಜರುಪಡಿಸಿದ್ದರು.…

Read More