Author: kannadanewsnow09

ಉಡುಪಿ: ಜಿಲ್ಲೆಯ ತೊಂಬಟ್ಟುವಿನ ಮತ್ತೋರ್ವ ನಕ್ಸಲ್ ಮಹಿಳೆಯು ಜಿಲ್ಲಾಡಳಿತದ ಮುಂದೆ ಶರಣಾಗುವ ಮುನ್ಸೂಚನೆಯಿದೆ ಎನ್ನಲಾಗುತ್ತಿದೆ. ಆ ಮೂಲಕ ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಮವಾಲ್ಯೆ ಬೈಲಿನ ತೊಂಬಟ್ಟು ಗ್ರಾಮದ ಲಕ್ಷ್ಮೀ ಅವರು ಆಂಧ್ರದಲ್ಲಿ ನಕ್ಸಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2006ರ ಮಾರ್ಚ್.6ರಿಂದ ಲಕ್ಷ್ಮೀ ತೊಂಬಟ್ಟು ನಾಪತ್ತೆಯಾಗಿದ್ದರು. ಕರ್ನಾಟಕದಿಂದ ನಾಪತ್ತೆಯಾಗಿದ್ದಂತ ಲಕ್ಷ್ಮೀ ತೊಂಬಟ್ಟು ಆಂಧ್ರಪ್ರದೇಶದಲ್ಲಿ ನಕ್ಸಲರಾಗಿ ಸಕ್ರೀಯರಾಗಿದ್ದರು. ಅವರು ಮಾಜಿ ನಕ್ಸಲ್ ಸಂಜೀವ್ ಅವರನ್ನು ಮದುವೆಯಾಗಿದ್ದರು. ಆ ಬಳಿಕ ನಕ್ಸಲ್ ತೊರೆದು, ಆಂಧ್ರದಲ್ಲಿ ಸಂಸಾರಿಕ ಜೀವನ ನಡೆಸುತ್ತಿದ್ದರು. ಸದ್ಯ ಸಂಜೀವ್ ಆಲಿಯಾಸ್ ಸಲೀಂ ನಕ್ಸಲ್ ತೊರೆದು, ಮುಖ್ಯವಾಹಿನಿಗೆ ಬಂದಿದ್ದಾರೆ. ಇವರನ್ನು ವಿವಾಹವಾಗಿ ಆಂಧ್ರದಲ್ಲಿ ಜೀವನ ನಡೆಸುತ್ತಿರುವಂತ ಲಕ್ಷ್ಮೀ ಕೂಡ ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/big-shock-to-aap-ahead-of-delhi-polls-8-mlas-join-bjp/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/

Read More

ನವದೆಹಲಿ: ಫೆಬ್ರವರಿ 5ರಂದು ನಡೆಯಲಿರುವ ದಿಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ನಿರ್ಗಮಿಸುತ್ತಿರುವ ಎಂಟು ಎಎಪಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಭ್ರಷ್ಟಾಚಾರ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ತನ್ನ ಸಿದ್ಧಾಂತದಿಂದ ವಿಮುಖವಾಗಿದೆ ಎಂಬ ಕಾರಣಗಳನ್ನು ಉಲ್ಲೇಖಿಸಿ ಎಲ್ಲಾ ಎಂಟು ಶಾಸಕರು ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಲ್ಲಾ ಎಂಟು ಶಾಸಕರಿಗೆ ಎಎಪಿ ಈ ಬಾರಿ ಚುನಾವಣಾ ಟಿಕೆಟ್ ನಿರಾಕರಿಸಿದೆ. ವಂದನಾ ಗೌರ್ (ಪಾಲಂ), ರೋಹಿತ್ ಮೆಹ್ರೌಲಿಯಾ (ತ್ರಿಲೋಕ್ಪುರಿ), ಗಿರೀಶ್ ಸೋನಿ (ಮದಿಪುರ), ಮದನ್ ಲಾಲ್ (ಕಸ್ತೂರ್ಬಾ ನಗರ), ರಾಜೇಶ್ ರಿಷಿ (ಉತ್ತಮ್ ನಗರ), ಬಿ.ಎಸ್.ಜೂನ್ (ಬಿಜ್ವಾಸನ್), ನರೇಶ್ ಯಾದವ್ (ಮೆಹ್ರೌಲಿ) ಮತ್ತು ಪವನ್ ಶರ್ಮಾ (ಆದರ್ಶ್ ನಗರ) ಅವರು ಬಿಜೆಪಿಗೆ ಸೇರ್ಪಡೆಯಾದರು. https://twitter.com/otvnews/status/1885669318366806121 ಎಎಪಿಗೆ ರಾಜೀನಾಮೆ ನೀಡಿದ ನಂತರ, ಅವರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್ ಗೆ ಕಳುಹಿಸಿದ್ದಾರೆ. ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಅವರು…

Read More

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮ್ಮ ಬಜೆಟ್ ಭಾಷಣದಲ್ಲಿ ತೆಲುಗು ಕವಿ ಮತ್ತು ನಾಟಕಕಾರ ಗುರಜಾಡ ಅಪ್ಪರಾವ್ ಅವರನ್ನು ಉಲ್ಲೇಖಿಸಿ “ದೇಶಮಂತ ಮಟ್ಟಿ ಕಾಡೋಯಿ, ದೇಶಮಂತೆ ಮನುಶುಲೋಯಿ” ಎಂದು ಉಲ್ಲೇಖಿಸಿದ್ದಾರೆ. ಈ ಸಾಲುಗಳು ಸ್ಥೂಲವಾಗಿ “ಒಂದು ದೇಶವು ಕೇವಲ ಅದರ ಮಣ್ಣು ಮಾತ್ರವಲ್ಲ, ಒಂದು ದೇಶವು ಅದರ ಜನರು” ಎಂದು ಅನುವಾದವಾಗಿದೆ. https://twitter.com/TVG_BJP/status/1885573771651932393 ಇದಕ್ಕೆ ಅನುಗುಣವಾಗಿ, ನಮಗೆ ವಿಕ್ಷಿತ್ ಭಾರತ್ ಶೂನ್ಯ ಬಡತನ, ಶೇಕಡಾ 100 ರಷ್ಟು ಗುಣಮಟ್ಟ, ಉತ್ತಮ ಶಾಲಾ ಶಿಕ್ಷಣ, ಉತ್ತಮ ಗುಣಮಟ್ಟದ ಕೈಗೆಟುಕುವ ಮತ್ತು ಸಮಗ್ರ ಆರೋಗ್ಯ ರಕ್ಷಣೆಯ ಲಭ್ಯತೆ, ಅರ್ಥಪೂರ್ಣ ಉದ್ಯೋಗದೊಂದಿಗೆ ಶೇಕಡಾ 100 ರಷ್ಟು ನುರಿತ ಕಾರ್ಮಿಕರು, ಆರ್ಥಿಕ ಚಟುವಟಿಕೆಗಳಲ್ಲಿ ಶೇಕಡಾ 70 ರಷ್ಟು ಮಹಿಳೆಯರು ಮತ್ತು ರೈತರು ನಮ್ಮ ದೇಶವನ್ನು ವಿಶ್ವದ ಆಹಾರ ಬುಟ್ಟಿಯನ್ನಾಗಿ ಮಾಡುವುದನ್ನು ಒಳಗೊಂಡಿದೆ ಎಂದು ಅವರು ಹೇಳಿದರು. ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮತ್ತು ಮೋದಿ 3.0 ಬಜೆಟ್ ಅನ್ನು…

Read More

ಚಿಕ್ಕಮಗಳೂರು: ಇಂದು ಕರ್ನಾಟಕದ ಕೊನೆಯ ನಕ್ಸಲ್ ಎಂದೇ ಕರೆಯಲಾಗಿದ್ದಂತ ರವೀಂದ್ರ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು. ಅವರಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕಿ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರನ್ನು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿದೆ. ಅಂದಹಾಗೇ ನಕ್ಸಲ್ ರವೀಂದ್ರ ಅವರ ವಿರುದ್ಧ ಕರ್ನಾಟಕದಲ್ಲಿ 17 ಪ್ರಕರಣಗಳು ದಾಖಲಾಗಿದ್ದವು. ಇಂತಹ ಅವರು ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು. https://kannadanewsnow.com/kannada/union-budget-2025-new-income-tax-slab-released-heres-all-you-need-to-know/ https://kannadanewsnow.com/kannada/good-news-for-bmtc-employees-govt-signs-mou-for-rs-1-50-crore-accident-insurance-compensation/

Read More

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯುವಂತ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿಗೊಂಡಿದ್ದಂತ ಯೋಜನೆಯನ್ನು ಮಾರ್ಚ್ ನಿಂದ ರಾಜ್ಯಾಧ್ಯಂತ ವಿಸ್ತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಅವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. https://twitter.com/dineshgrao/status/1885628797543940175?s=08 ಏನಿದು ಗೃಹ ಆರೋಗ್ಯ ಯೋಜನೆ? ಗೃಹ ಆರೋಗ್ಯ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ…

Read More

ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ ಹೆಚ್ಚಿಸುವಂತಹ ಯಾವ ಅಂಶವೂ ಬಜೆಟ್ಟಿನಲ್ಲಿ ಇಲ್ಲದಿರುವುದು ಕಳವಳಕಾರಿ ಅಂಶವಾಗಿದೆ. ಬಂಡವಾಳ ವೆಚ್ಚದಲ್ಲಿ ಗಣನೀಯ ಏರಿಕೆ ಮಾಡದೆ ಇರುವುದು ಚಿಂತಿಸುವಂತಹ ವಿಷಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಕೇಂದ್ರ ಸರಕಾರವು ಶನಿವಾರ ಮಂಡಿಸಿದ ಬಜೆಟ್ ಬಗ್ಗೆ ಮಾತನಾಡಿರುವ ಅವರು, `ಮುಖ್ಯವಾಗಿ ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ನಿರಾಳತೆ ತಂದುಕೊಡುತ್ತಿರುವಂತೆ ಈ ಬಜೆಟ್ ಭಾಸವಾಗುತ್ತಿದೆ. ಆದರೆ, ವಾಸ್ತವದಲ್ಲಿ ಹಾಗಿಲ್ಲ. 12 ಲಕ್ಷ ರೂಪಾಯಿ ವರೆಗೆ ತೆರಿಗೆ ವಿನಾಯಿತಿ ಅಂದಿದ್ದಾರೆ. ಆದರೆ ಅದಕ್ಕಿಂತ ಒಂದು ರೂಪಾಯಿ ಹೆಚ್ಚಿನ ಆದಾಯ ಬಂದರೂ ಈ ವಿನಾಯಿತಿ ಸಿಗುವುದಿಲ್ಲ. ಬದಲಿಗೆ ಶೇ.20ಕ್ಕೂ ಹೆಚ್ಚು ತೆರಿಗೆ ವಿಧಿಸುತ್ತಾರೆ. ಇದರ ಬದಲು ತೆರಿಗೆದಾರರಿಗೆ ನೇರವಾಗಿ ಮತ್ತು ಸುಲಭವಾಗಿ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕಾಗಿತ್ತು. ಸಮಾಜದ ಈ ನಿರೀಕ್ಷೆಗೆ…

Read More

ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಕ್ಕಾಗಿ ಪ್ರಾಧಿಕಾರ/ಖಾಸಗಿ ಬಡವಣೆಯಲ್ಲಿ ಮೀಸಲಿರಿಸಿದ ನಾಗರೀಕ ಸೌಲಭ್ಯ ನಿವೇಶನಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1960 ರಡಿಯಲ್ಲಿ ನೋಂದಾಣಿಯಾದ ಸಹಕಾರ ಸಂಘ ಅಥವಾ ಸಂಘಗಳಿಂದ ನೋಂದಾಯಿತ ಶೈಕ್ಷಣಿಕ, ಧಾರ್ಮಿಕ ಚಾರಿಟಬಲ್ ಟ್ರಸ್ಟ್ನವರಿಂದ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮ 1991 ರ ಪ್ರಕಾರ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೀಡುವ ಸಂಬAಧ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೊಂದಾಣಿಗಾಗಿ ಅರ್ಜಿ ನಮೂನೆ-1, ನಿವೇಶ ಮಂಜೂರಾತಿ ಅರ್ಜಿ ನಮೂನೆ-2 ಗಳನ್ನು ಫೆ.2 ರಿಂದ 15 ರ ಮಧ್ಯಾಹ್ನ 3 ಗಂಟೆವರೆಗೆ ಅವಕಾಶವಿದ್ದು, ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ರೂ.500 ಶುಲ್ಕ ಪಾವತಿಸಿ ಪಡೆಯಬೇಕು. ಅರ್ಜಿಯನ್ನು ಮಾ.3 ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿ ಖುದ್ದಾಗಿ ಕಚೇರಿಗೆ ಅಥವಾ ನೋಂದಣಿ ಅಂಚೆಯ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.shivamogga.uda.in ನಲ್ಲಿ ಅಥವಾ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಬಹುದು ಎಂದು ಸೂಡಾ…

Read More

ಶಿವಮೊಗ್ಗ : 2024-25 ನೇ ಸಾಲಿನ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ದಿ: 05-02-2025 ರಿಂದ 11-02-2025 ರವರೆಗೆ 5800 ಕ್ಯೂಸೆಕ್ಸ್ ನೀರನ್ನು ಹರಿಸಲು ಆದೇಶಿಸಲಾಗಿರುತ್ತದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ ದಿ: 05-02-2025 ರ ರಾತ್ರಿ 100 ಕ್ಯೂಸೆಕ್ಸ್ ಮತ್ತು ದಿ: 06-02-2025 ರಿಂದ 11-02-2025 ರವರೆಗೆ ಪ್ರತಿದಿನ 800 ಕ್ಯೂಸೆಕ್ಸ್ನಂತೆ ಒಟ್ಟು 5800 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು. ಮೇಲೆ ತಿಳಿಸಿದ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕನೀನಿನಿ ಭದ್ರಾ ಯೋಜನಾ ವೃತ್ತದ…

Read More

ಬೆಂಗಳೂರು: ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ  ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ ಬಜೆಟ್, ಭಾರತೀಯ ಆರ್ಥಿಕತೆಗೆ ಆದ್ಯತೆ ನೀಡಿದ ಬಜೆಟ್ ಮತ್ತು ಮಾನ್ಯ ಪ್ರಧಾನ ಮಂತ್ರಿಗಳ ವಿಕ್ಸಿತ್ ಭಾರತ್ ಕನಸನ್ನು ಸಾಕಾರ ಮಾಡುವ ಬಜೆಟ್ ಎಂದು ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಬಣ್ಣಸಿದ್ದಾರೆ. ಭಾರತ ಕೃಷಿಕರ ದೇಶ, ಕೃಷಿಕರ ಎಳಿಗೆಗೆ ಪ್ರಧಾನ ಮಂತ್ರಿ ಧನಧ್ಯಾನ್ಯ ಕೃಷಿ ಯೋಜನೆಯನ್ನು 2025-26ರ ಬಜೆಟ್‌ನಲ್ಲಿ ಘೋಷಿಸಿದ್ದು, ಪ್ರಥಮವಾಗಿ ದೇಶದ 100 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುದು. ಕಡಿಮೆ ಇಳುವರಿ ತಡೆಗಟ್ಟಲು ಈ ಯೋಜನೆ ಜಾರಿಗೊಳಿಸಲಾಗಿದೆ.  ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ. ಕೃಷಿಕರಿಗೆ ಉತ್ತಮ ಗುಣ ಮಟ್ಟದ ಬೀಜ, ರಸಗೊಬ್ಬರ ಖರೀದಿ ಮತ್ತು ತಂತ್ರಜ್ಷಾನ ಅಳವಡಿಕೆಗೆ ಈ ಯೋಜನೆ ಸಹಕಾರಿಯಾಗಲಿದೆ.  ರಸಗೊಬ್ಬರದ ಉತ್ಪಾದನೆಯಲ್ಲಿ ಸ್ವಾವಲಂಭಿತ್ವ ಸಾಧಿಸಲು ಯೋಜನೆ ಸಿದ್ದಪಡಿಸಲಾಗಿದೆ. ಆಸ್ಸಾಂನಲ್ಲಿ 12.7 ಎಲ್.ಎಮ್.ಟಿ ಸಾಮರ್ಥ್ಯದ…

Read More