Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿಯಾದಂತ ತಾಲ್ಲೂಕು ಆಡಳಿತ ಸೌಧದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸಾಗರ ಪಟ್ಟದ ಸಮೀಪದ ಸರ್ವೆ ನಂ.12ರ ಸರ್ಕಾರಿ ಭೂಮಿಯನ್ನೇ ಭೂಗಳ್ಳರಿಗೆ ನಕಲಿ ದಾಖಲೆ ಸೃಷ್ಠಿಸಿ ಸಂಬಂಧ ಪಿನ್ ಟು ಪಿನ್ ದಾಖಲೆಗಳನ್ನು ಪರಿಶೀಲಿಸಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸಮೀಪದಲ್ಲೇ ಸರ್ವೇ ನಂ.12ರಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌನಲ್ಲಿ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಸರ್ಕಾರಿ ಭೂಮಿಗೆ ಸರ್ಕಾರಿ ಅಧಿಕಾರಿಗಳೇ ನಕಲಿ ದಾಖಲೆ ಸೃಷ್ಠಿಸಿ ಕಬಳಿಕೆಗೆ ಯತ್ನ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಇದಕ್ಕೂ ಮೊದಲು ಹಿರಿಯ ಪತ್ರಕರ್ತ ಮಹೇಶ್ ಹೆಗಡಿ ಅವರು ಸಂಯುಕ್ತ ಕರ್ನಾಟಕ ಹಾಗೂ ಜನ ಹೋರಾಟ ಪತ್ರಿಕೆಯಲ್ಲಿ ವಿಸ್ತೃತವಾದಂತ ವರದಿಯನ್ನು ಪ್ರಕಟಿಸಿದ್ದರು. ಈ ಸುದ್ದಿಯ ಫಲಶೃತಿ ಎನ್ನುವಂತೆ ಇಂದು ದಿಢೀರ್ ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಸಾಗರ ತಾಲ್ಲೂಕು ಕಚೇರಿಯ ಮೇಲೆ ದಾಳಿಯನ್ನು ನಡೆಸಲಾಗಿದೆ.…

Read More

ತೆಲಂಗಾಣ: ಅಲ್ಲು ಅರ್ಜುನ್ ನಟಿಸಿದ ದಿ ರೂಲ್ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿದೆ. ಈಗ ಚಿತ್ರದ ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದಂತ ಕಾಲ್ತುಳಿತ ಪ್ರಕರಣದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಈಗ ಪುಷ್ಪ-2 ಚಿತ್ರ ತಂಡಕ್ಕೆ ಬಿಗ್ ಶಾಕ್ ಎನ್ನುವಂತೆ  ತೆಲಂಗಾಣ ಹೈಕೋರ್ಟ್ ಗೆ ದಿ ರೂಲ್ಸ್ ಪ್ರಾಫಿಟ್ಸ್ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಲಾಗಿದೆ.  ಚಲನಚಿತ್ರ ಪ್ರೇರಕ ವಿಜ್ಞಾನ ದಾರುಲ ಸಂಘದ ಅಧ್ಯಕ್ಷ ಜಿ.ಎಲ್.ನರಸಿಂಹ ರಾವ್ ಅವರು ತೆಲಂಗಾಣ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಪುಷ್ಪ-2 ನಿಯಮದಿಂದ ಬರುವ ಲಾಭವನ್ನು ಸಣ್ಣ ಬಜೆಟ್ ಚಿತ್ರಗಳ ಕಲ್ಯಾಣ ಮತ್ತು ಸಬ್ಸಿಡಿಗಳಿಗೆ ಹಂಚಿಕೆ ಮಾಡಬೇಕು ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಸುಕುಮಾರ್ ನಿರ್ದೇಶನದ ಚಿತ್ರವು ವಿಶ್ವಾದ್ಯಂತ 1800 ಕೋಟಿ ರೂ.ಗಿಂತ ಹೆಚ್ಚು ಗಳಿಸಿದೆ ಮತ್ತು ಟಿಕೆಟ್ ಬೆಲೆ ಹೆಚ್ಚಳ ಮತ್ತು ಪ್ರಯೋಜನ ಪ್ರದರ್ಶನಗಳಿಂದಾಗಿ ಚಿತ್ರವು ಹೆಚ್ಚಾಗಿ…

Read More

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಬಂಧಿಸಲಾಗಿದೆ. ಸಿಐಡಿ ವಿಭಾಗದ ಡಿವೈಎಸ್ಪಿಯಾಗಿದ್ದಂತ ಕನಕಲಕ್ಷಅಮೀ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಕೀಲೆ ಜೀವಾ ಆತ್ಮಹಬತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಕನಕಲಕ್ಷ್ಮೀ ಅವರ ಪಾತ್ರ ಇರುವ ಬಗ್ಗೆ ತನಿಖೆಯಲ್ಲಿ ಮಾಹಿತಿ ತಿಳಿದು ಬಂದ ಹಿನ್ನಲೆಯಲ್ಲಿ ಈ ಬಂಧನವನ್ನು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಎದುರಿಸಿದ್ದ ವಕೀಲೆ ಎಸ್‌.ಜೀವಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ, ರಾಜ್ಯ ಗೃಹ ರಕ್ಷಕ ದಳದ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಅಕ್ಷಯ್‌ ಮಚೀಂದ್ರ ಹಾಕೆ, ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಅವರನ್ನು ಒಳಗೊಂಡ ತಂಡವನ್ನು ಹೈಕೋರ್ಟ್‌ ರಚಿಸಿತ್ತು. ಈ ವಿಶೇಷ ತನಿಖಾ ತಂಡದಿಂದ ಈಗ ಸಿಐಡಿ ಡಿವೈಎಸ್ಪಿ…

Read More

ಬೆಂಗಳೂರು: ಕಾರ್ಯಕ್ರಮವೊಂದಕ್ಕೆ ತೆರಳಿದ್ದಂತ ನಟಿ ರಾಗಿಣಿ ದ್ವಿವೇದಿ ಈಗ ಸುದ್ದಿಯಲ್ಲಿದ್ದಾರೆ. ಸೆಲ್ಫಿ ಪೋಟೋ ತೆಗೆಸಿಕೊಳ್ಳೋದಕ್ಕೆ ಮುಂದಾದಂತ ಅಭಿಮಾನಿಯ ಕೆನ್ನೆಗೆ ಕಪಾಳ ಮೋಕ್ಷ ಮಾಡುವ ಮೂಲಕವಾಗಿದೆ.  ನಗರದಲ್ಲಿನ ಕಾರ್ಯಕ್ರಮವೊಂದಕ್ಕೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ತೆರಳಿದ್ದರು. ಸೆಲ್ಫಿ ಪೋಟೋ ಕೇಳಿದಂತ ಅಭಿಮಾನಿಯೊಂದಿಗೆ ಪೋಸ್ ಕೊಟ್ಟಿದ್ದರು. ಈ ಸಂದರ್ಭದಲ್ಲಿಯೇ ಅಭಿಮಾನಿಯೊಬ್ಬ ಕೈ ಹಿಡಿದು ಎಳೆದೇ ಬಿಟ್ಟನು. ಅಭಿಮಾನಿಯೊಬ್ಬ ಕೈ ಹಿಡಿದು ಎಳೆಯುತ್ತಿದ್ದಂತೆ ಸಿಟ್ಟಾದಂತ ನಟಿ ರಾಗಿಣಿ ದ್ವಿವೇದಿ ಅವರು ದಿಢೀರ್ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅಭಿಮಾನಿಯ ಕೆನ್ನೆಗೆ ನಟಿ ರಾಗಿಣಿ ದ್ವಿವೇದಿ ಬಾರಿಸಿದಂತ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. https://kannadanewsnow.com/kannada/special-train-services-between-visakhapatnam-and-bengaluru-on-the-occasion-of-holi/ https://kannadanewsnow.com/kannada/attention-public-these-10-blood-tests-must-be-done-at-least-once-a-year/

Read More

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ಕರಾವಳಿ ರೈಲ್ವೆಯು ವಿಶಾಖಪಟ್ಟಣಂ-ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 08549/08550 ವಿಶಾಖಪಟ್ಟಣಂ-ಎಸ್ಎಂವಿಟಿ ಬೆಂಗಳೂರು-ವಿಶಾಖಪಟ್ಟಣಂ ಹೋಳಿ ವಿಶೇಷ ರೈಲು (2 ಟ್ರಿಪ್). ರೈಲು ಸಂಖ್ಯೆ 08549 ಮಾರ್ಚ್ 16 ಮತ್ತು 23, 2025 ರಂದು ಮಧ್ಯಾಹ್ನ 3:30ಕ್ಕೆ ವಿಶಾಖಪಟ್ಟಣಂನಿಂದ ಹೊರಟು, ಮರುದಿನ ಮಧ್ಯಾಹ್ನ 12.45ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಆಗಮಿಸಲಿದೆ. ಹಿಂದಿರುಗುವ ಮಾರ್ಗದಲ್ಲಿ ರೈಲು ಸಂಖ್ಯೆ 08550 ಮಾರ್ಚ್ 17 ಮತ್ತು 24, 2025 ರಂದು ಮಧ್ಯಾಹ್ನ 3.50ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಹೊರಟು, ಮರುದಿನ ಮಧ್ಯಾಹ್ನ 12:30ಕ್ಕೆ ವಿಶಾಖಪಟ್ಟಣಂ ತಲುಪಲಿದೆ. ಮಾರ್ಗಮಧ್ಯೆ, ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ದುವ್ವಾಡ, ಅನಕಪಲ್ಲಿ, ಸಾಮಲ್ಕೊಟ್, ರಾಜಮಂಡ್ರಿ, ಎಲೂರು, ವಿಜಯವಾಡ, ಒಂಗೋಲ್, ನೆಲ್ಲೂರು, ಗುಡೂರು, ಪೆರಂಬೂರ್, ಅರಕ್ಕೋಣಂ, ಕಟಪಾಡಿ, ಜೋಲಾರ್ ಪೆಟ್ಟೈ, ಕುಪ್ಪಂ, ಬಂಗಾರಪೇಟೆ ಮತ್ತು…

Read More

ನವದೆಹಲಿ: ವಲಸೆ ಮತ್ತು ವಿದೇಶಿಯರಿಗೆ ಅವರ ಪ್ರವೇಶ, ನಿರ್ಗಮನ ಮತ್ತು ದೇಶದಲ್ಲಿ ಉಳಿಯುವುದು ಸೇರಿದಂತೆ ವಿವಿಧ ಸೇವೆಗಳನ್ನು ಸುಗಮಗೊಳಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಪರಿಚಯಿಸಲಾಯಿತು. ವಲಸೆ ಮತ್ತು ವಿದೇಶಿಯರ ಮಸೂದೆ, 2025 ಅನ್ನು ತರಲು ಸಂಸತ್ತಿಗೆ ಶಾಸನಾತ್ಮಕ ಸಾಮರ್ಥ್ಯವಿಲ್ಲ ಎಂಬ ಸಲಹೆಗಳನ್ನು ತಿರಸ್ಕರಿಸಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ಈ ವಿಷಯದ ಬಗ್ಗೆ ಶಾಸನಗಳನ್ನು ತರಲು ಕೇಂದ್ರ ಸರ್ಕಾರದ ಅಡಿಯಲ್ಲಿ ಎಲ್ಲಾ ಹಕ್ಕುಗಳಿವೆ ಎಂದು ಹೇಳಿದರು. ಪ್ರವಾಸಿಗರು ಭಾರತಕ್ಕೆ ಬರಲು ಸ್ವಾಗತವಿದ್ದರೂ, ರಾಷ್ಟ್ರದ ಶಾಂತಿ ಮತ್ತು ಸಾರ್ವಭೌಮತ್ವವು ಹಾಗೇ ಉಳಿಯುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಪ್ರತಿಪಾದಿಸಿದರು. ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಇಂದು ಬೆಳಿಗ್ಗೆ 11 ಗಂಟೆಗೆ ಪುನರಾರಂಭಗೊಂಡಿತು. ಹೊಸ ಮಸೂದೆಗಳು ಮತ್ತು ಮಣಿಪುರ ಬಜೆಟ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಅನುಮೋದನೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಣಿಪುರ ಬಜೆಟ್ ಮಂಡನೆ ಕುರಿತು ಲೋಕಸಭೆಯಲ್ಲಿ…

Read More

ಬೆಂಗಳೂರು : ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು. ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ. ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು. ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ…

Read More

ಚಿತ್ರದುರ್ಗ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ ಮುಖಾಂತರ ಹಣ ಪಾವತಿಸಲಾಗುತ್ತಿರುತ್ತದೆ. ಫೆಬ್ರವರಿ-2025ರ ಮಾಹೆಯಿಂದ ಪ್ರತಿ ಸದಸ್ಯರಿಗೆ ರೂ.170/-ರ ಡಿಬಿಟಿ ಹಣ ಬದಲಾಗಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿರುತ್ತದೆ. ಮಾರ್ಚ್-2025ರ ಮಾಹೆಯ ಆಹಾರಧಾನ್ಯ ಬಿಡುಗಡೆಯಾಗಿದ್ದು ಹಾಗೂ ಫೆಬ್ರವರಿ-2025ರ ಮಾಹೆಯ ಆಹಾರಧಾನ್ಯ ಸೇರಿ ಮಾರ್ಚ್-2025ರ ಮಾಹೆಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 15 ಕೆ.ಜಿ.ಅಕ್ಕಿ ಹಾಗೂ ಅಂತ್ಯೋದಯ ಎಎವೈ ಪಡಿತರ ಚೀಟಿದಾರರಿಗೆ 01 ರಿಂದ 03 ಸದಸ್ಯರಿಗೆ 35 ಕೆ.ಜಿ.ಅಕ್ಕಿ, 04 ಸದಸ್ಯರಿಗೆ 45 ಕೆ.ಜಿ.ಅಕ್ಕಿ, 05 ಸದಸ್ಯರಿಗೆ 65 ಕೆ.ಜಿ.ಅಕ್ಕಿ, 06 ಸದಸ್ಯರಿಗೆ 85 ಕೆ.ಜಿ.ಅಕ್ಕಿ, 07 ಸದಸ್ಯರಿಗೆ 105 ಕೆ.ಜಿ.ಅಕ್ಕಿ, 08 ಸದಸ್ಯರಿಗೆ 125 ಕೆ.ಜಿ.ಅಕ್ಕಿ, 09 ಸದಸ್ಯರಿಗೆ 145 ಕೆ.ಜಿ.ಅಕ್ಕಿ ಹಾಗೂ 10 ಸದಸ್ಯರಿಗೆ 165 ಕೆ.ಜಿ ಅಕ್ಕಿ ಮುಂದುವರೆದು 10ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ,…

Read More

ನವದೆಹಲಿ:  ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ X ಇಂದು ಮೂರನೇ ಬಾರಿಗೆ ಜಾಗತಿಕವಾಗಿ ಭಾರಿ ಅಡಚಣೆಯನ್ನು ಅನುಭವಿಸಿದೆ. ಇದರಿಂದಾಗಿ ಸಾವಿರಾರು ಬಳಕೆದಾರರು ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಔಟೇಜ್-ಟ್ರ್ಯಾಕಿಂಗ್ ಪ್ಲಾಟ್‌ಫಾರ್ಮ್ ಡೌನ್‌ಡೆಕ್ಟರ್ ಪ್ರಕಾರ, ಮೊದಲ ಅಡಚಣೆ IST ಮಧ್ಯಾಹ್ನ 3:30 ರ ಸುಮಾರಿಗೆ ದಾಖಲಾಗಿದೆ, ನಂತರ ಸಂಜೆ 7:00 IST ಕ್ಕೆ ಮತ್ತೊಂದು ಅಡಚಣೆ ಮತ್ತು ರಾತ್ರಿ 8:44 IST ಕ್ಕೆ ಮೂರನೇ ಏರಿಕೆ ಕಂಡುಬಂದಿದೆ. ಈ ಸ್ಥಗಿತವು ಯುನೈಟೆಡ್ ಸ್ಟೇಟ್ಸ್, ಭಾರತ, ಯುನೈಟೆಡ್ ಕಿಂಗ್‌ಡಮ್, ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಅನೇಕ ದೇಶಗಳಲ್ಲಿ ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಡೌನ್‌ಡೆಕ್ಟರ್ ಡೇಟಾವು ಶೇಕಡಾ 52 ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿಯೇ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಶೇಕಡಾ 40 ರಷ್ಟು ಜನರು ವೆಬ್‌ಸೈಟ್‌ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಶೇಕಡಾ 7 ರಷ್ಟು ಜನರು ಸರ್ವರ್ ಸಂಪರ್ಕ ವೈಫಲ್ಯಗಳನ್ನು ವರದಿ ಮಾಡಿದ್ದಾರೆ ಎಂದು ತೋರಿಸುತ್ತದೆ. https://kannadanewsnow.com/kannada/it-is-mandatory-for-doctors-to-perform-duties-in-government-hospitals-from-9-am-to-4-pm-minister-dr-sharanprakash-patil/ https://kannadanewsnow.com/kannada/breaking-over-15-passengers-injured-as-bus-overturns-due-to-brake-failure-in-belagavi/

Read More

ಕೋಲಾರ: ಶಾಸಕ ಕೊತ್ತನೂರು ಮಂಜುನಾಥ್ ಆಪ್ತ, ಮುಳುಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದಂತ ಶಾಸಕ ಕೊತ್ತನೂರು ಮಂಜುನಾಥ್ ಆಪ್ತ ಹಾಗೂ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಹಿಂದೆ ಮುಳಬಾಗಿಲು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿಯೂ ಆಡಳಿತ ನಡೆಸಿದ್ದರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಮುಳುಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಂತ ನೀಲಕಂಠೇಗೌಡ ಅವರು, ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ. https://kannadanewsnow.com/kannada/hd-deve-gowda-discusses-railways-amendment-bill-in-rajya-sabha/ https://kannadanewsnow.com/kannada/xdown-across-the-world-including-india-for-the-2nd-time/

Read More